• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನಾಲ್ಕು ಗೋಡೆಯ ನಡುವೆ ನಡೆಯುವುದು ಜಾತಿ ನಿಂದನೆ ಅಲ್ಲ: ಸುಪ್ರೀಂ ಕೋರ್ಟ್

by
November 7, 2020
in ದೇಶ
0
ನಾಲ್ಕು ಗೋಡೆಯ ನಡುವೆ ನಡೆಯುವುದು ಜಾತಿ ನಿಂದನೆ ಅಲ್ಲ: ಸುಪ್ರೀಂ ಕೋರ್ಟ್
Share on WhatsAppShare on FacebookShare on Telegram

ಎರಡು ವರ್ಷಗಳ ಹಿಂದೆ ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ತಡೆ ಕಾಯ್ದೆ ಮೂಲ ಆಶಯವನ್ನು ದುರ್ಬಲಗೊಳಿಸಿದೆ ಎಂಬ ಆಕ್ರೋಶಕ್ಕೆ ಕಾರಣವಾಗಿದ್ದ ವಿವಾದಾತ್ಮಕ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಇದೀಗ ಮತ್ತೊಂದು ಅಂತಹದ್ದೇ ತೀರ್ಪು ನೀಡಿದ್ದು, ನಾಲ್ಕು ಗೋಡೆಯ ನಡುವೆ ಎಸ್ಸಿ/ಎಸ್ಟಿ ಸಮುದಾಯದ ವ್ಯಕ್ತಿಗೆ ಮಾಡುವ ನಿಂದನೆ ಅಥವಾ ಅವಮಾನವನ್ನು ದೌರ್ಜನ್ಯ ತಡೆ ಕಾಯ್ದೆ ವ್ಯಾಪ್ತಿಯಲ್ಲಿ ಅಪರಾಧ ಎನ್ನಲಾಗದು ಎಂದಿದೆ.

ADVERTISEMENT

ಪರಿಶಿಷ್ಟ ಸಮುದಾಯಕ್ಕೆ ಸೇರಿದ ಮಹಿಳೆಯೊಬ್ಬರಿಗೆ ಆಕೆಯ ಮನೆಯ ಒಳಗೆ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಈ ತೀರ್ಪು ನೀಡಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪರಿಶಿಷ್ಟ ಸಮುದಾಯಗಳಿಗೆ ಸೇರಿದ ವ್ಯಕ್ತಿಗಳ ವಿರುದ್ಧದ ಎಲ್ಲಾ ಬಗೆಯ ಬೆದರಿಕೆ, ದೌರ್ಜನ್ಯ, ಅವಮಾನ ಮತ್ತು ನಿಂದನೆಗಳೆಲ್ಲವನ್ನೂ ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ತಡೆ ಕಾಯ್ದೆ(ಜಾತಿ ನಿಂದನೆ) ವ್ಯಾಪ್ತಿಯ ಅಪರಾಧಗಳೆಂದು ಪರಿಗಣಿಸಲಾಗದು. ಕೇವಲ ಸಂತ್ರಸ್ತರು ಪರಿಶಿಷ್ಟ ಸಮುದಾಯಕ್ಕೆ ಸೇರಿದ್ದಾರೆ ಎಂಬುದರ ಮೇಲೆ ಅವರ ವಿರುದ್ಧದ ಎಲ್ಲಾ ಬಗೆಯ ಅಪರಾಧಗಳನ್ನೂ ಈ ಕಾಯ್ದೆಯಡಿ ನೋಡಲಾಗದು. ಪರಿಶಿಷ್ಟ ಸಮುದಾಯಗಳಿಗೆ ಸೇರಿದ ವ್ಯಕ್ತಿಯ ವಿರುದ್ಧದ ಅಪರಾಧವನ್ನು ಅವರ ಜಾತಿಯ ಕಾರಣಕ್ಕೆ ಅವರನ್ನು ಅವಮಾನಗೊಳಿಸುವ, ನಿಂದಿಸುವ, ಘನತೆಗೆ ಧಕ್ಕೆ ತರುವ, ಕಿರುಕುಳ ಅಥವಾ ದೌರ್ಜನ್ಯಕ್ಕೆ ಒಳಪಡಿಸುವ ಉದ್ದೇಶದಿಂದಲೇ ನಡೆಸಿದ್ದರೆ ಮಾತ್ರ ಅದನ್ನು ಈ ಕಾಯ್ದೆಯಡಿ ಪರಿಗಣಿಸಬಹುದು ಎಂದು ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್, ಹೇಮಂತ್ ಗುಪ್ತಾ ಮತ್ತು ಅಜಯ್ ರಸ್ತೋಗಿ ಅವರನ್ನೊಳಗೊಂಡ ಪೀಠ ಈ ತೀರ್ಪು ನೀಡಿದೆ. ಸಾರ್ವಜನಿಕವಾಗಿ, ಸಾಕ್ಷ್ಯಗಳ ಎದುರಲ್ಲಿ ನಡೆಸಿದ ನಿಂದನೆ ಮತ್ತು ದೌರ್ಜನ್ಯಗಳನ್ನು ಮಾತ್ರ ಜಾತಿ ನಿಂದನೆ ಪ್ರಕರಣವೆಂದು ಪರಿಗಣಿಸಬಹುದು. 2008ರ ತನ್ನದೇ ತೀರ್ಪಿನ ಹಿನ್ನೆಲೆಯಲ್ಲಿ ಈ ‘ಸಾರ್ವಜನಿಕ ಸ್ಥಳ’ ಅಥವಾ ‘ಸಾರ್ವಜನಿಕ ಗಮನದ ಯಾವುದೇ ಸ್ಥಳ’ ಎಂಬುದನ್ನು ಅರ್ಥೈಸಲಾಗಿದೆ ಎಂಬುದನ್ನೂ ಪೀಠ ಸ್ಪಷ್ಟಪಡಿಸಿದೆ.

ಮನೆಯ ಹೊರಗೆ, ಮನೆಯ ಅಂಗಳದಲ್ಲಿ ಸಾರ್ವಜನಿಕರಿಗೆ, ದಾರಿಹೋಕರಿಗೆ ಕಾಣಿಸುವ ರೀತಿಯಲ್ಲಿ ಘಟನೆ ನಡೆದಿದ್ದರೆ ಖಂಡಿತವಾಗಿಯೂ ಅದು ಜಾತಿ ನಿಂದನೆ ಕಾಯ್ದೆಯ ವ್ಯಾಪ್ತಿಯೊಳಗೆ ಬರುತ್ತದೆ. ಆದರೆ, ಒಂದು ವೇಳೆ ಅಂತಹ ನಿಂದನೆ ಮತ್ತು ದೌರ್ಜನ್ಯದ ಘಟನೆ ಮನೆಯ ನಾಲ್ಕು ಗೋಡೆಗಳ ನಡುವೆ, ಸಾರ್ವಜನಿಕರ ಅವಗಾಹನೆಗೆ ಬರದ ರೀತಿಯಲ್ಲಿ ನಡೆದಿದ್ದರೆ, ಅದನ್ನು ಇತರೆ ಕಾನೂನುಗಳಡಿ ಸಾಮಾನ್ಯ ಅಪರಾಧವೆಂದು ಪರಿಗಣಿಸಬಹುದೇ ವಿನಃ, ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪರಿಗಣಿಸಲಾಗದು ಎಂಬುದನ್ನು ಪೀಠ ಹೇಳಿದೆ.

ಈ ನಿರ್ದಿಷ್ಟ ಪ್ರಕರಣದಲ್ಲಿ ಮಹಿಳೆಯ ಮನೆಯ ನಾಲ್ಕು ಗೋಡೆಯ ನಡುವೆ ಆರೋಪಿ ನಿಂದಿಸಿರುವುದಾಗಿ ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ. ಹಾಗಾಗಿ ಜಾತಿ ನಿಂದನೆ ಕಾಯ್ದೆಯ ವ್ಯಾಪ್ತಿಯಲ್ಲಿ ಇದನ್ನು ಅಪರಾಧ ಎಂದು ಪರಿಗಣಿಸಲಾಗದು. ಉಳಿದಂತೆ ಆ ವ್ಯಕ್ತಿಯ ವಿರುದ್ಧದ ಆರೋಪಗಳನ್ನು ಸಾಮಾನ್ಯ ಕಾನೂನುಗಳಡಿ ಪರಿಗಣಿಸಿ, ಪ್ರತ್ಯೇಕ ಪ್ರಕರಣದ ದಾಖಲಿಸಿಕೊಂಡು ವಿಚಾರಣೆ ನಡೆಸಬಹುದು ಎಂದು ನಿರ್ದೇಶನ ನೀಡಿದ ಪೀಠ, ಜಾತಿ ನಿಂದನೆ ಕಾಯ್ದೆಯಡಿ ಸಲ್ಲಿಸಲಾಗಿದ್ದ ಪ್ರಕರಣವನ್ನು ವಜಾಗೊಳಿಸಿದೆ.

ಜಾತಿ ನಿಂದನೆ ಕಾಯ್ದೆಯ ಮೂಲ ಆಶಯ, ಯಾವುದೇ ಪರಿಶಿಷ್ಟ ಜಾತಿ/ ಪಂಗಡದ ವ್ಯಕ್ತಿಗಳಿಗೆ ಅವರ ಜಾತಿಯ ಕಾರಣಕ್ಕಾಗಿ ಮಾಡುವ ಅವಮಾನ, ನಿಂದನೆ, ದೌರ್ಜನ್ಯಗಳನ್ನು ತಡೆಯುವುದು ಮತ್ತು ಅಂತಹ ಉದ್ದೇಶಿತ ಕೃತ್ಯಗಳನ್ನು ಎಸಗುವ ಅಪರಾಧಿಗಳಿಗೆ ಶಿಕ್ಷೆ ವಿಧಿಸುವುದಾಗಿದೆ. ಸಮಾಜದ ದುರ್ಬಲ ಸಮುದಾಯಗಳ ವಿರುದ್ಧ ಮೇಲ್ಜಾತಿಯ ಜನ ನಡೆಸುವ ದಬ್ಭಾಳಿಕೆಯನ್ನು ತಡೆಯುವುದು ಜಾತಿ ನಿಂದನೆ ಕಾಯ್ದೆಯ ಉದ್ದೇಶ. ಆದರೆ, ಅಂತಹ ಸಮುದಾಯಗಳ ಜನರ ವಿರುದ್ಧ ನಡೆಯುವ ಎಲ್ಲಾ ಅಪರಾಧಗಳನ್ನೂ ಈ ಕಾಯ್ದೆಯಡಿ ಜಾತಿ ಉದ್ದೇಶಿತ ಅಪರಾಧಗಳು ಎಂದು ಪರಿಗಣಿಸಲಾಗದು ಎಂಬುದು ತೀರ್ಪಿನ ಸಾರಾಂಶ.

Tags: SCs/STssupreme courtಜಾತಿ ನಿಂದನೆಸುಪ್ರೀಂ ಕೋರ್ಟ್
Previous Post

ಸರ್ಕಾರಿ ನೌಕರರ ಕುಟುಂಬ ಸದಸ್ಯರನ್ನು ನಿಯಂತ್ರಿಸುವುದು ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ – ಸಿದ್ದರಾಮಯ್ಯ

Next Post

ಕರ್ನಾಟಕ: 2258 ಹೊಸ ಕರೋನಾ ಪ್ರಕರಣಗಳು ಪತ್ತೆ

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
ಕರ್ನಾಟಕ: 2258 ಹೊಸ ಕರೋನಾ ಪ್ರಕರಣಗಳು ಪತ್ತೆ

ಕರ್ನಾಟಕ: 2258 ಹೊಸ ಕರೋನಾ ಪ್ರಕರಣಗಳು ಪತ್ತೆ

Please login to join discussion

Recent News

Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada