• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನಿರ್ಭಯಾ ಅತ್ಯಾಚಾರಿಗಳಿಗೆ 3ನೇ ಬಾರಿ ಗಲ್ಲು!  ಇಲ್ಲಿ ನಿಜವಾದ ಶಿಕ್ಷೆ ಯಾರಿಗೆ?

by
February 18, 2020
in ದೇಶ
0
ನಿರ್ಭಯಾ ಅತ್ಯಾಚಾರಿಗಳಿಗೆ 3ನೇ ಬಾರಿ ಗಲ್ಲು!  ಇಲ್ಲಿ ನಿಜವಾದ ಶಿಕ್ಷೆ ಯಾರಿಗೆ?
Share on WhatsAppShare on FacebookShare on Telegram

2012ರ ಡಿಸೆಂಬರ್‌ 16ರಂದು ದೆಹಲಿಯಲ್ಲಿ ನಡೆದ ನಿರ್ಭಯ ಅತ್ಯಾಚಾರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶದ ಗಮನ ಸೆಳೆದಿತ್ತು. ಆರು ಮಂದಿ ಅತ್ಯಾಚಾರಿಗಳ ಪೈಕಿ ಓರ್ವ ಆರೋಪಿ ಆತ್ಮಹತ್ಯೆಗೆ ಶರಣಾದ. ಮತ್ತೋರ್ವನನ್ನು ಬಾಲಾಪರಾಧಿ ನ್ಯಾಯಮಂಡಳಿ ಬಿಡುಗಡೆ ಮಾಡಿದೆ. ಇನ್ನುಳಿದ ನಾಲ್ವರು ಆರೋಪಿಗಳಿಗೆ ತ್ವರಿತಗತಿ ನ್ಯಾಯಾಲಯ ಮರಣದಂಡನೆ ವಿಧಿಸಿದ್ದು, ಸುಪ್ರೀಂಕೋರ್ಟ್‌ ಕೂಡ ಶಿಕ್ಷೆಯನ್ನು ಎತ್ತಿ ಹಿಡಿದಿದೆ. ರಾಷ್ಟ್ರಪತಿಗಳು ಕ್ಮಾಧಾನ ಅರ್ಜಿಯನ್ನು ವಜಾ ಮಾಡಿದೆ. ರಾಷ್ಟ್ರಪತಿ ನಿರ್ಧಾವನ್ನೇ ಪ್ರಶ್ನಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾ ಮಾಡಿದೆ. ಇದೀಗ ಎಲ್ಲರಿಗೂ ಗಲ್ಲು ಶಿಕ್ಷೆ ನೀಡಲು ದೆಹಲಿಯ ಸೆಷನ್ಸ್‌ ಕೋರ್ಟ್‌ ಜಡ್ಜ್‌ ಆದೇಶ ಮಾಡಿದ್ದಾರೆ.

ADVERTISEMENT

ನಾಲ್ವರು ಅಪರಾಧಿಗಳಿಗೆ ಮಾರ್ಚ್‌ 3ರಂದು ಬೆಳಗ್ಗೆ 6 ಗಂಟೆಗೆ ಗಲ್ಲು ಶಿಕ್ಷೆ ಜಾರಿ ಮಾಡಲು ಹೊಸದಾಗಿ ಡೆತ್‌ ವಾರೆಂಟ್‌ ಹೊರಡಿಸಲಾಗಿದೆ. ಇದೇ ರೀತಿ ಈ ಹಿಂದೆ ಕೂಡ ಎರಡು ಬಾರಿ ಡೆತ್‌ ವಾರೆಂಟ್‌ ಹೊರಡಿಸಲಾಗಿತ್ತು. ಇದೀಗ ಮೂರನೇ ಬಾರಿಗೆ ದೆಹಲಿಯ ಅಡಿಷನಲ್‌ ಸೆಷನ್‌ ನ್ಯಾಯಾಧೀಶ ಧರ್ಮೇಂದರ್‌ ರಾಣಾ ಆದೇಶ ಹೊರಡಿಸಿದ್ದಾರೆ. 32 ವರ್ಷದ ಮುಖೇಶ್‌ ಸಿಂಗ್‌, 25 ವರ್ಷದ ಪವನ್‌ ಗುಪ್ತ, 26 ವರ್ಷದ ಪವನ್‌ ಕುಮಾರ್‌ ಶರ್ಮಾ ಹಾಗು 31 ವರ್ಷದ ಅಕ್ಷಯ್‌ ಕುಮಾರ್‌ ಜೀವನ ಮಾರ್ಚ್‌ 3ರಂದು ಬೆಳಗ್ಗೆ 6 ಗಂಟೆಗೆ ಅಂತ್ಯವಾಗಲಿದೆ. ಮೂರನೇ ಬಾರಿಯಾದರೂ ಶಿಕ್ಷೆಯಾಗುತ್ತೆ ಎನ್ನುವ ನೆಮ್ಮದಿಯ ನಿಟ್ಟುಸಿರುವ ನಿರ್ಭಯಾ ಪೋಷಕರದ್ದಾಗಿದೆ.

ಈ ಮೊದಲು ಜನವರಿ 22ರಂದು ಗಲ್ಲು ಶಿಕ್ಷೆ ಜಾರಿಗೆ ಆದೇಶ ಮಾಡಲಾಗಿತ್ತು. ಆ ಬಳಿಕ ಜನವರಿ 17ರಂದು ಫೆಬ್ರವರಿ 1ಕ್ಕೆ ಮುಂದೂಡಿಕೆ ಮಾಡಿ ಕೋರ್ಟ್‌ ಆದೇಶ ಮಾಡಿತ್ತು. ಮತ್ತೆ ಜನವರಿ 31ಕ್ಕೆ ಆದೇಶ ಮಾಡಿದ ಸೆಷನ್ಸ್‌ ಕೋರ್ಟ್‌, ಫೆಬ್ರವರಿ 1ರಂದು ಜಾರಿಯಾಗಬೇಕಿದ್ದ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡ ಮುಂದಿನ ಆದೇಶದ ತನಕ ಶಿಕ್ಷೆ ಜಾರಿ ಮಾಡದಂತೆ ಆದೇಶ ಹೊರಡಿಸಿತ್ತು. ಅದಾದ ಬಳಿಕ ಸೋಮವಾರ ಫಬ್ರವರಿ 17ರಂದು 3ನೇ ಬಾರಿಗೆ ದೆಹಲಿಯ ಅಡಿಷನಲ್‌ ಕೋರ್ಟ್‌ ಮಾರ್ಚ್‌ 3ರಂದು ಗಲ್ಲು ಶಿಕ್ಷೆ ಜಾರಿ ಮಾಡಲು ಆದೇಶ ಹೊರಡಿಸಿದೆ. ಈ ಆದೇಶಕ್ಕೆ ಸಂತಸ ವ್ಯಕ್ತಪಡಿಸಿರುವ ನಿರ್ಭಯಾ ತಾಯಿ ಆಶಾದೇವಿ, ಇದು ಅಂತಿಮ ದಿನಾಂಕ ಎಂದು ನಂಬಿದ್ದೇನೆ. ಈ ಆದೇಶ ನನಗೆ ತೃಪ್ತಿ ಕೊಟ್ಟಿದೆ. ಈ ದಿನಾಂಕದಲ್ಲಿ ಆದರೂ ಆರೋಪಿಗಳಿಗೆ ಗಲ್ಲು ಶಿಕ್ಷೆ ಜಾರಿಯಾಗಲಿ ಎಂದಿದ್ದಾರೆ.

ದೆಹಲಿಯ ತಿಹಾರ್‌ ಜೈಲಿನಲ್ಲಿ ನಾಲ್ವರು ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಎಲ್ಲಾ ತಯಾರಿ ಮಾಡಿಕೊಳ್ಳಲಾಗ್ತಿದೆ. ಆದರೆ ಗಲ್ಲು ಶಿಕ್ಷೆಯನ್ನು ಕೊಡಬಾರದು ಎನ್ನುವ ಮಾನವೀಯತೆಯ ಕೂಗು ಸಹ ಕೇಳಿಸುತ್ತಿದೆ. ಆದರೆ‌ ವಿಶೇಷ ಎಂದರೆ, ಈ ಅಪರಾಧಿಗಳು ನಿಸ್ಸಾಹಕ ಹೆಣ್ಣು ಮಗಳ ಮೇಲೆ ಮೃಗೀಯವಾಗಿ ಅತ್ಯಾಚಾರ ನಡೆಸಿದ್ದು ಮಾತ್ರವಲ್ಲದೆ ಗುಪ್ತಾಂಗಕ್ಕೆ ಕಬ್ಬಿಣದ ಸಲಾಕೆ ಹಾಕಿ ತಮ್ಮ ವಿಕೃತಿ ಮೆರೆದಿದ್ದರು. ಈ ನಾಲ್ವರು ಆಪರಾಧಿಗಳಿಗೆ ಗಲ್ಲು ಶಿಕ್ಷೆಯೂ ಕಡಿಮೆಯೆ ಎನ್ನುವುದರಲ್ಲಿ ಅನ್ಯ ಮಾತಿಲ್ಲ. ಆದರೆ ಸಾಯುವ ಮೊದಲು ಉಳಿದವರನ್ನು ಸಾಯಿಸಿ, ಇಡಿ ಕುಟುಂಬದವರ ನೆಮ್ಮದಿ ಹಾಳು ಮಾಡುತ್ತಿದ್ದಾರೆ. ಇಡೀ ಕುಟುಂಬದ ಸದಸ್ಯರು ಮರಣದಂಡನೆ ದಿನವನ್ನು ಕಾಯುವಂತಾಗಿದೆ.

ಅಪರಾಧ ಮಾಡಿದ್ದಾರೆ ಎನ್ನುವುದು ಗೊತ್ತಿದ್ದರೂ ಅವರಿಗೆ ಹೆತ್ತ ಕರುಳು ಕರುಣೆಯನ್ನು ಹುಟ್ಟಿಸುತ್ತದೆ. ಒಮ್ಮೆ ಮರಣದಂಡನೆ ಆದರೆ ಸತ್ತನೆಂದು ಕಣ್ಣೀರನ್ನು ವರೆಸಿ ಬದುಕು ಮುಂದುವರಿಸಬಹುದು. ಆದರೆ ತಿಂಗಳಿಗೊಮ್ಮೆ ದಿನಾಂಕ ಬದಲಾಗುತ್ತಾ ಹೋದರೆ ಅತ್ಯಾಚಾರ ಮಾಡಿದ ಅಪರಾಧಿಗಳು ಸಾಯುವ ಬದಲು ಕುಟುಂಬದ ಸಾಕಷ್ಟು ಜನರನ್ನು ಸಾವಿನ ನೋವಿನಲ್ಲಿ ಸಿಲುಕಿ ಒದ್ದಾಡುವಂತೆ ಮಾಡಿದ್ದಾರೆ. ನಿಜವಾಗಲು ಇಡೀ ಅತ್ಯಾಚಾರ ಅಪರಾಧಿಗಳ ಕುಟುಂಬಸ್ಥರು ಜೀವನ ಪೂರ್ತಿ ಶಿಕ್ಷೆ ಅನುಭವಿಸುವಂತಾಗಿದೆ. ಒಟ್ಟಾರೆ, ಸತ್ತು ಇವರ ನೆನಪು ಮಾಸಿದರೆ ಸಾಕು ನಾವು ಹೊಸ ಬದುಕು ಕಟ್ಟಿಕೊಳ್ಳುವ ತವಕದಲ್ಲಿ ಈ ಕುಟುಂಬಗಳಿವೆ.

Tags: Nirbhaya Caseಗಲ್ಲುನಿರ್ಭಯಾನಿರ್ಭಯಾ ಅತ್ಯಾಚಾರಿ
Previous Post

ಏನಿದು ಕಲಂ 370? ಇದರ ಹಿನ್ನೆಲೆ, ಇತಿಹಾಸವೇನು? ಭವಿಷ್ಯದ ಮೇಲಾಗುವ ಪರಿಣಾಮಗಳೇನು? ಇಲ್ಲಿದೆ ಮಾಹಿತಿ

Next Post

ವಿಶ್ವದ ಗಮನ ಸೆಳೆದ ಕಂಬಳ ಕ್ರೀಡೆ ಮತ್ತು ಕ್ರೀಡಾ ಪ್ರತಿಭಾನ್ವೇಷಣೆ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ವಿಶ್ವದ ಗಮನ ಸೆಳೆದ ಕಂಬಳ ಕ್ರೀಡೆ ಮತ್ತು ಕ್ರೀಡಾ ಪ್ರತಿಭಾನ್ವೇಷಣೆ

ವಿಶ್ವದ ಗಮನ ಸೆಳೆದ ಕಂಬಳ ಕ್ರೀಡೆ ಮತ್ತು ಕ್ರೀಡಾ ಪ್ರತಿಭಾನ್ವೇಷಣೆ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada