Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ನಿರ್ಭಯಾ ಅಪರಾಧಿಯಿಂದ ಚುನಾವಣಾ ಆಯೋಗಕ್ಕೆ ಮನವಿ 

ನಿರ್ಭಯಾ ಅಪರಾಧಿಯಿಂದ ಚುನಾವಣಾ ಆಯೋಗಕ್ಕೆ ಮನವಿ
ನಿರ್ಭಯಾ ಅಪರಾಧಿಯಿಂದ ಚುನಾವಣಾ ಆಯೋಗಕ್ಕೆ ಮನವಿ 

February 21, 2020
Share on FacebookShare on Twitter

ಮೂರು ಬಾರಿ ನೇಣು ಕುಣಿಕೆಯಿಂದ ಪಾರಾಗಿದ್ದ ನಿರ್ಭಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗ ಅಪರಾಧಿಗಳು ಈಗ ಮತ್ತೊಂದು ಬಾರಿ ನೀಡಲಾಗಿರುವ ಡೆತ್‌ ವಾರೆಂಟ್‌ ಅನ್ನು ತಳ್ಳಿ ಹಾಕಲು ಚುನಾವಣಾ ಆಯೋಗದ ಮೊರೆ ಹೋಗಿದ್ದಾರೆ. ಅಪರಾಧಿಗಳಲ್ಲಿ ಒಬ್ಬನಾದ ವಿನಯ್‌ ಶರ್ಮಾ, ಈಗ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದು, ತನ್ನ ದಯಾ ಅರ್ಜಿಯನ್ನು ರದ್ದುಗೊಳಿಸಲು ದೆಹಲಿ ಉಪ ಮುಖ್ಯಮಂತ್ರಿಗಳಿಗೆ ಅರ್ಹತೆಯೇ ಇರಲಿಲ್ಲ ಎಂದು ಮನವಿಯಲ್ಲಿ ಹೇಳಿದ್ದಾನೆ.

ಹೆಚ್ಚು ಓದಿದ ಸ್ಟೋರಿಗಳು

ಮೋದಿ ಹಿರಿಯಣ್ಣ, ಅವರೊಂದಿಗೆ ಕೆಲಸ ಮಾಡಲು ಬಯಸುತ್ತೇನೆ: ಕೇಜ್ರಿವಾಲ್‌

ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಅಪಘಾತ : ಶಸ್ತ್ರಚಿಕಿತ್ಸೆ ಮುಗಿಸಿ ಆ್ಯಂಬುಲೆನ್ಸ್​ನಲ್ಲೇ ಪರೀಕ್ಷೆ ಬರೆದ ಸಾಹಸಿ

ಅಭಿವೃದ್ಧಿಯ ಮಾರ್ಗವೂ ಕಾರ್ಪೋರೇಟ್ ಬಂಡವಾಳವೂ ಸಮಾಜದ ಮೇಲ್ವರ್ಗಕ್ಕೆ ಮಾತ್ರವೇ ನಿಲುಕುವ ಅಭಿವೃದ್ಧಿ ಮಾದರಿಗಳೇ ನವಉದಾರವಾದದ ಜೀವಾಳ

ವಿನಯ್‌ ಶರ್ಮಾನ ದಯಾ ಅರ್ಜಿಯನ್ನು ವಜಾಗೊಳಿಸುವ ಸಂದರ್ಭ ದೆಹಲಿಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿತ್ತು. ಆ ಕಾರಣಕ್ಕಾಗಿ, ದೆಹಲಿಯ ಉಪ ಮುಖ್ಯಮಂತ್ರಿಗಳಾದ ಮನೀಷ್‌ ಸಿಸೋಡಿಯಾ ಅವರಿಗೆ ಅರ್ಜಿಯನ್ನು ವಜಾಗೊಳಿಸಲು ಅನರ್ಹರಾಗಿದ್ದರು. ಫೆಬ್ರುವರಿ 8ರಂದು ನಡೆದ ಚುನಾವಣೆಗಾಗಿ ಮನೀಷ್‌ ಸಿಸೋಡಿಯಾ ಪ್ರಚಾರ ಕಾರ್ಯ ಕೈಗೊಳ್ಳುವ ಸಂದರ್ಭದಲ್ಲಿ ದಯಾ ಅರ್ಜಿಯನ್ನು ತಿರಸ್ಕರಿಸಿದ್ದಾರೆ, ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನು, ಅರ್ಜಿಯನ್ನು ತಿರಸ್ಕರಿಸುವ ಸಂದರ್ಭದಲ್ಲಿ ಮನೀಷ್‌ ಸಿಸೋಡಿಯಾ ಅವರ ಡಿಜಿಟಲ್‌ ಸಹಿಯ ಅಗತ್ಯವಿತ್ತು. ಆದರೆ, ಅವರು ಕೇವಲ ವಾಟ್ಸಾಪ್‌ ಸ್ಕ್ರೀನ್‌ಶಾಟ್‌ ಕಳುಹಿಸಿದ್ದಾರೆ. ಹಾಗಾಗಿ ದಯಾ ಅರ್ಜಿಯನ್ನು ತಿರಸ್ಕರಿಸಿದ್ದ ಊರ್ಜಿತವಾಗುವುದಿಲ್ಲ ಎಂಬ ಅಂಶವನ್ನು ಇಲ್ಲಿ ಒತ್ತಿ ಹೇಳಲಾಗಿದೆ.

ಇತ್ತೀಚಿಗೆ ಜೈಲಿನ ಗೋಡೆಗೆ ತನ್ನ ಹಣೆಯನ್ನು ಜಜ್ಜಿ ಗಾಯಗೊಳಿಸಿ ಆ ನೆಪದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುವ ಅಗತ್ಯವಿದೆ ಎಂದು ವಿನಯ್‌ ಶರ್ಮಾ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ತಲೆಗೆ ತೀವ್ರವಾದ ಗಾಯವಾಗಿದೆ, ಬಲ ಭುಜದ ಮೂಳೆ ಮುರಿದು ಹೋಗಿದೆ, ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದೇನೆ ಹಾಗೂ ಸ್ಕಿಜೋಫ್ರೇನಿಯಾ (ಮಾನಸಿಕ ರೋಗ) ದಿಂದ ಬಳಲುತ್ತಾ ಇದ್ದೇನೆ ಎಂದು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇನ್ನು, ತಲೆಗೆ ಏಟಾಗಿರುವುದರಿಂದ ತನಗೆ ತನ್ನ ಸ್ವಂತ ತಾಯಿಯನ್ನು ಕೂಡಾ ಗುರುತು ಹಿಡಿಯಲಾಗುತ್ತಿಲ್ಲ, ನನ್ನ ವಕೀಲರು ಯಾರೆಂಬುದು ಕೂಡ ಗುರುತು ಹಿಡಿಯಲಾಗುತ್ತಿಲ್ಲ, ಎಂದು ಹೇಳಿದ್ದಾನೆ.

ಜೈಲಿನ ಹಿರಿಯ ಪೊಲೀಸ್‌ ಅಧಿಕಾರಿಗಳು ಹೇಳುವ ಪ್ರಕಾರ ವಿನಯ್‌ ಶರ್ಮಾ ಖುದ್ದು ತನ್ನ ತಲೆ ಹಾಗೂ ಭುಜವನ್ನು ಗೋಡೆಗೆ ಹೊಡೆದುಕೊಂಡು ಗಾಯ ಮಾಡಿಕೊಂಡಿದ್ದಾನೆ.

ಇನ್ನುಳಿದ ಮೂವರು ಅಪರಾಧಿಗಳಾದ ಅಕ್ಷಯ್‌ ಠಾಕೂರ್‌, ಮುಖೇಶ್‌ ಸಿಂಗ್‌ ಹಾಗೂ ಪವನ್‌ ಗುಪ್ತಾ ಅವರಿಗೆ ಮಾರ್ಚ್‌ 3ರಂದು ಬೆಳಿಗ್ಗಿನ ಜಾವ 6 ಗಂಟೆಗೆ ಸರಿಯಾಗಿ ನೇಣಿಗೆ ಏರಿಸಬೇಕೆಂದು ಡೆತ್‌ ವಾರೆಂಟ್‌ ಹೊರಡಿಸಲಾಗಿದೆ. ಮೂರು ಬಾರಿ ಡೆತ್‌ ವಾರೆಂಟ್‌ ಹೊರಡಿಸಿದ್ದರೂ, ಕಾನೂನಿನಲ್ಲಿರುವ ದೋಷಗಳನ್ನು ಅರಿತು ನೇಣು ಕುಣಿಕೆಯಿಂದ ಪಾರಾಗುತ್ತಿದ್ದ ಅಪರಾಧಿಗಳದ್ದು ಹೊಸ ವರಸೆ ಆರಂಭವಾಗಿದೆ. ಈ ಬಾರಿಯಾದರೂ, ಅವರು ಮಾಡಿರುವ ಪಾಪಕ್ಕೆ ಶಿಕ್ಷೆಯಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

SIDDARAMAIAH VS DK SHIVAKUMAR | ಇನ್ನೂ ಮುಗಿಯದ ಸಿದ್ದರಾಮಯ್ಯ ಕ್ಷೇತ್ರ ಗೊಂದಲ #PRATIDHVANI
ಇದೀಗ

SIDDARAMAIAH VS DK SHIVAKUMAR | ಇನ್ನೂ ಮುಗಿಯದ ಸಿದ್ದರಾಮಯ್ಯ ಕ್ಷೇತ್ರ ಗೊಂದಲ #PRATIDHVANI

by ಪ್ರತಿಧ್ವನಿ
March 23, 2023
ಸುಳ್ಳಿನ ಉರಿಗೌಡ, ನಂಜೇಗೌಡ ಮಾತು ಹಾಗಿರಲಿ ;  ಜೀವಂತ ಬೇಯುತ್ತಿರುವ ಉರಿಗೌಡ, ನಂಜೇಗೌಡರ ಪಾಡೇನು?
Top Story

ಸುಳ್ಳಿನ ಉರಿಗೌಡ, ನಂಜೇಗೌಡ ಮಾತು ಹಾಗಿರಲಿ ; ಜೀವಂತ ಬೇಯುತ್ತಿರುವ ಉರಿಗೌಡ, ನಂಜೇಗೌಡರ ಪಾಡೇನು?

by ಮಂಜುನಾಥ ಬಿ
March 18, 2023
ಕಾಂಗ್ರೆಸ್ ಗ್ಯಾರಂಟಿ ನಂಬರ್ 4 : ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ..! : Congress guarantee number 4
Top Story

ಕಾಂಗ್ರೆಸ್ ಗ್ಯಾರಂಟಿ ನಂಬರ್ 4 : ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ..! : Congress guarantee number 4

by ಪ್ರತಿಧ್ವನಿ
March 20, 2023
ಇದೀಗ

Night Party in Shivamogga: ಶಿವಮೊಗ್ಗದಲ್ಲಿ ಮಹಿಳೆಯರ ನೈಟ್ ಪಾರ್ಟಿ ಮೇಲೆ‌ ಬಜರಂಗ ದಳ ಕಾರ್ಯಕರ್ತರ ದಾಳಿ..

by ಪ್ರತಿಧ್ವನಿ
March 18, 2023
MINIRATNA | ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್​ ಹಾಕಿದ ನಿರ್ಮಲಾನಂದನಾಥ ಶ್ರೀಗಳು #PRATIDHVANI
ಇದೀಗ

MINIRATNA | ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್​ ಹಾಕಿದ ನಿರ್ಮಲಾನಂದನಾಥ ಶ್ರೀಗಳು #PRATIDHVANI

by ಪ್ರತಿಧ್ವನಿ
March 20, 2023
Next Post
ಅಮೂಲ್ಯ ಕಲಿಸಿದ ʼಅಮೂಲ್ಯʼವಾದ ಪಾಠ

ಅಮೂಲ್ಯ ಕಲಿಸಿದ ʼಅಮೂಲ್ಯʼವಾದ ಪಾಠ

ಕನ್ಹಯ್ಯ ಕುಮಾರ್ to ಅಮೂಲ್ಯ; ದೇಶದ್ರೋಹ ಪ್ರಕರಣ ಮತ್ತು ಭಾರತೀಯ ದಂಡ ಸಂಹಿತೆ!

ಕನ್ಹಯ್ಯ ಕುಮಾರ್ to ಅಮೂಲ್ಯ; ದೇಶದ್ರೋಹ ಪ್ರಕರಣ ಮತ್ತು ಭಾರತೀಯ ದಂಡ ಸಂಹಿತೆ!

1947ರ ಆ ಬ್ರೆಕ್ಸಿಟ್‌ಗೂ

1947ರ ಆ ಬ್ರೆಕ್ಸಿಟ್‌ಗೂ, 2020ರ ಈ ಬ್ರೆಕ್ಸಿಟ್‌ಗೂ, ಗೋಚರಿಸುತ್ತಿದೆಯೇ ಕಾಲ ಚಕ್ರದ ಮಹಿಮೆ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist