• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನಿರ್ಮಲಾ ಸೀತಾರಾಮನ್‌ರಂಥ ಹಣಕಾಸು ಸಚಿವರಿರುವುದು ಆ್ಯಕ್ಟ್ ಆಫ್ ಗಾಡ್ ಅಲ್ಲದೆ ಬೇರೇನೂ ಅಲ್ಲ!

by
September 2, 2020
in ದೇಶ
0
ನಿರ್ಮಲಾ ಸೀತಾರಾಮನ್‌ರಂಥ ಹಣಕಾಸು ಸಚಿವರಿರುವುದು ಆ್ಯಕ್ಟ್ ಆಫ್ ಗಾಡ್ ಅಲ್ಲದೆ ಬೇರೇನೂ ಅಲ್ಲ!
Share on WhatsAppShare on FacebookShare on Telegram

ಕಳೆದವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಮೀಟಿಂಗ್‌ನಲ್ಲಿ ಎಲ್ಲಾ ರಾಜ್ಯಗಳು ಈ ಬಾರಿ ರಾಜ್ಯದ ಪಾಲಿನ ಜಿಎಸ್‌ಟಿ (GST) ಪರಿಹಾರದ ಪ್ರಮಾಣವನ್ನು ಹೆಚ್ಚಿಸಿ ಎಂದು ಒಕ್ಕೊರಲ ಮನವಿ ಮಾಡಿದ್ದವು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಂದೇ ಏಟಿಗೆ ಕೇಂದ್ರದ ಬಳಿ ಹಣ ಇಲ್ಲ, ಕೊಡಲಾಗುವುದಿಲ್ಲ ಎಂದು ನಿವಾಳಿಸಿ ಬಿಸಾಕಿದ್ದರು. ಆರ್ಥಿಕ ವಹಿವಾಟು ನೆಟ್ಟಗೆ ನಡೆದರೆ ತಾನೇ ಸರಕು ಸೇವಾ ತೆರಿಗೆ ಸಂಗ್ರಹವಾಗುವುದು. ತೆರಿಗೆ ಸಂಗ್ರಹ ಆಗದೇ ಇರುವುದಕ್ಕೆ ಆರ್ಥಿಕ ವ್ಯವಹಾರ ನಡೆದಿಲ್ಲ ಎನ್ನುವುದು ಒಂದೇ ಕಾರಣವಾದರೆ. ಆರ್ಥಿಕ ವ್ಯವಹಾರ ನಡೆಯದೇ ಇರುವುದಕ್ಕೆ ಕರೋನಾ ಅಥವಾ ಲಾಕ್‌ಡೌನ್ ಒಂದೇ ಕಾರಣವಲ್ಲ. ನೋಟ್ ಬ್ಯಾನ್‌ನಿಂದ ಹಿಡಿದು, ಸಮರ್ಪಕವಲ್ಲದ ಜಿಎಸ್‌ಟಿ ಜಾರಿಯೂ ಸೇರಿದಂತೆ ನರೇಂದ್ರ ಮೋದಿ ಸರ್ಕಾರದ ಹತ್ತಾರು ಆರ್ಥಿಕ ನೀತಿಗಳು ಕಾರಣ. ಆದರೆ ನಿರ್ಮಲಾ ಸೀತಾರಾಮನ್ ಆರ್ಥಿಕ ಇಲಾಖೆ ನಿಭಾಯಿಸಲಾರದ ತಮ್ಮ ಅಸಮರ್ಥತೆಯನ್ನು, ತಮ್ಮ ಪ್ರಧಾನ ಮಂತ್ರಿಗಳ ದೂರದೃಷ್ಟಿ ಕೊರತೆಯನ್ನು ಬದಿಗೆ ಸರಿಸಿ ‘ಕರೋನಾದಿಂದಲೇ ಈ ಪರಿಸ್ಥಿತಿ ನಿರ್ಮಣವಾಗಿದೆ’ ಎಂಬ ಅರ್ಥ ಬರುವಂತೆ ‘Act of God’ (ದೇವರ ಆಟ) ಎಂದು ದೇವರ ಮೇಲೆಯೇ ಆರೋಪ ಹೊರಿಸಿಬಿಟ್ಟರು.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನಿರ್ಮಲಾ ಸೀತಾರಾಮನ್ ಅವರು ಬಡಪಾಯಿ ದೇವರ ಮೇಲೆ ಮಾಡಬಾರದ ಆರೋಪ ಮಾಡಿದ್ದೇಕೆಂದು ಮೊನ್ನೆ (ಆ. 31) ದೇಶವಾಸಿಗಳಿಗೆ ಅರ್ಥವಾಯಿತು. ಇದೇ ನರೇಂದ್ರ ಮೋದಿ ಮತ್ತು ನಿರ್ಮಲಾ ಸೀತಾರಾಮನ್ ಜೋಡಿಯ ಕೃಪೆಯಿಂದ ದೇಶದ ಜಿಡಿಪಿ ಕಳೆದ 40 ವರ್ಷಗಳ ಬಳಿಕ -23.9ರಷ್ಟು ಕೆಳಗಿಳಿದಿದೆ. ಮರುದಿನ (ಸೆಪ್ಟೆಂಬರ್ 1) ಆಗಸ್ಟ್ ತಿಂಗಳ ಜಿಎಸ್‌ಟಿ ಸಂಗ್ರಹದ ವಿವರಗಳು ಹೊರಬಿದ್ದಿವೆ. ಆಗಸ್ಟ್ ತಿಂಗಳಲ್ಲಿ 86,449 ಕೋಟಿ ರೂಪಾಯಿ ಸಂಗ್ರಹವಾಗಿದೆ. ಈ ಪೈಕಿ 15,906 ಕೇಂದ್ರದ ಜಿಎಸ್‌ಟಿ. 21,064 ಕೋಟಿ ರೂಪಾಯಿ ರಾಜ್ಯದ ಜಿಎಸ್‌ಟಿ. ಸಂಯೋಜಿತ ಸರಕು ಸೇವಾ ತೆರಿಗೆ ರೂಪದಲ್ಲಿ ಬಂದಿರುವುದು 42,264 ಕೋಟಿ ರೂಪಾಯಿ. ಇದಲ್ಲದೆ 19,179 ಕೋಟಿ ರೂಪಾಯಿ ಆಮದು ಶುಲ್ಕ ಬಂದಿದೆ. ಆಮದು ಸೆಸ್ 673 ಕೋಟಿ ರೂಪಾಯಿ ಬಂದಿದೆ ಮತ್ತು ಇತರೆ ಸೆಸ್‌ಗಳಿಂದ 7,215 ಕೋಟಿ ರೂಪಾಯಿ ಬಂದಿದೆ. ಇಷ್ಟಾದರೂ ಕಳೆದ ಬಾರಿಗಿಂತ ಕಡಿಮೆ ಜಿಎಸ್‌ಟಿ ಸಂಗ್ರಹವಾಗಿದೆ. 2019ರ ಆಗಸ್ಟ್ ತಿಂಗಳಲ್ಲಿ 98,202 ಕೋಟಿ ರೂಪಾಯಿ ಸಂಗ್ರಹವಾಗಿತ್ತು. ಅಂದರೆ ಕಳೆದ ವರ್ಷಕ್ಕೂ ಈ ವರ್ಷಕ್ಕೂ ಶೇಕಡಾ 12ರಷ್ಟು ಕಡಿಮೆಯಾಗಿದೆ. ಕಳೆದ ಜುಲೈ ತಿಂಗಳಿಗೆ ಹೋಲಿಸಿಕೊಂಡರೆ ಶೇಕಡಾ 1 ರಷ್ಟು ಮಾತ್ರ ಕಡಿಮೆಯಾಗಿದೆ.

2020ರ ಆಗಸ್ಟ್ ತಿಂಗಳಲ್ಲಿ 86,449 ಕೋಟಿ ಸಂಗ್ರಹವಾಗಿದೆ, 2019ರ ಆಗಸ್ಟ್ನಲ್ಲಿ 98,202 ಕೋಟಿ ಸಂಗ್ರಹವಾಗಿತ್ತು ಎನ್ನುವುದಾದರೆ ವ್ಯತ್ಯಾಸ ಇರುವುದು 11,753 ಕೋಟಿ ರೂಪಾಯಿ ಮಾತ್ರ. ಇಲ್ಲಿ ಇನ್ನೊಂದು ಸಂಗತಿಯನ್ನು ಗಮನಿಸಬೇಕು. 86,449 ಕೋಟಿ ರೂಪಾಯಿಗಳಲ್ಲಿ ರಾಜ್ಯದ ಪಾಲು 21,064 ಕೋಟಿ ರೂಪಾಯಿ ಬಿಟ್ಟರೆ ಉಳಿದ 65,385 ಕೋಟಿ ರೂಪಾಯಿಗಳು ಇಡಿಯಾಗಿ ಕೇಂದ್ರ ಸರ್ಕಾರದ ತಿಜೋರಿಗೆ ಸೇರಿಕೊಳ್ಳುತ್ತವೆ. ಆ 65,385 ಕೋಟಿ ರೂಪಾಯಿಗಳಲ್ಲಿ ಈ ತಿಂಗಳಲ್ಲಿ ಕಡಿಮೆಯಾಗಿರುವ 11,753 ಕೋಟಿ ರೂಪಾಯಿಯನ್ನು ಕಳೆದರೆ ಕೇಂದ್ರ ಸರ್ಕಾರಕ್ಕೆ ಆಗಸ್ಟ್ ತಿಂಗಳಲ್ಲಿ 53,632 ಕೋಟಿ ರೂಪಾಯಿ ಉಳಿಯುತ್ತದೆ. ಆದರೂ ನಿರ್ಮಲಾ ಸೀತಾರಾಮನ್ ಅವರು ‘ಕೇಂದ್ರ ಸರ್ಕಾರದ ಬಳಿ ದುಡ್ಡಿಲ್ಲ, ಇದು ದೇವರ ಆಟ’ ಎನ್ನುತ್ತಾರೆ. ನಿಜ, ಕೇಂದ್ರ ಸರ್ಕಾರದ ಬಳಿ ದುಡ್ಡಿದ್ದು, ರಾಜ್ಯಗಳಿಗೆ ದರ್ದು ಇದ್ದು ನಮ್ಮದು ಒಕ್ಕೂಟ ವ್ಯವಸ್ಥೆ ಎಂಬುದನ್ನು ಮರೆತು ಅವರು ದುಡ್ಡು ಕೊಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳುತ್ತಾರೆ ಎಂದರೆ ರಾಜ್ಯಗಳನ್ನು ಮತ್ತು ರಾಜ್ಯದ ಜನರನ್ನು ದೇವರೇ ಕಾಪಾಡಬೇಕು.

ಮೇಲೆ ನೀಡಲಾಗಿರುವ ಟೇಬಲ್‌ನಲ್ಲಿ ಅಂಕಿ ಅಂಶಗಳನ್ನು ಗಮನಿಸಿದರೆ ಇನ್ನೊಂದು ವಿಷಯವೂ ಸ್ಪಷ್ಟವಾಗುತ್ತದೆ. ಏಪ್ರಿಲ್ ಮತ್ತು ಮೇ ತಿಂಗಳನ್ನು ಹೊರತುಪಡಸಿದರೆ ಉಳಿದ ತಿಂಗಳ ಸರಕು ಮತ್ತು ಸೇವಾ ತೆರಿಗೆ ಸಂಗ್ರಹ ಹೀನಾಯ ಸ್ಥಿತಿಯನ್ನೇನೂ ತಲುಪಿಲ್ಲ. 2019-20ನೇ ಆರ್ಥಿಕ ವರ್ಷಕ್ಕೆ ಹೋಲಿಸಿಕೊಂಡರೆ 2020-21ನೇ ಆರ್ಥಿಕ ವರ್ಷದಲ್ಲಿ ಕರೋನಾ ಮತ್ತು ಲಾಕ್‌ಡೌನ್ ನಡುವೆಯೂ ಸಂಗ್ರಹವಾಗಿರುವ ಸರಕು ಮತ್ತು ಸೇವಾ ತೆರಿಗೆ ತೀರಾ ನಿರಾಶಾದಾಯಕವಾದುದಲ್ಲ. ಕಳೆದ ವರ್ಷಕ್ಕೂ ಈ ವರ್ಷಕ್ಕೂ ಜೂನ್‌ನಲ್ಲಿ 9,022 ಕೋಟಿ ರೂಪಾಯಿ ವ್ಯತ್ಯಾಸವಿದೆ. ಜುಲೈ ತಿಂಗಳಲ್ಲಿ 14,661 ಕೋಟಿ ರೂಪಾಯಿ ವ್ಯತ್ಯಾಸವಿದೆ. 20 ಲಕ್ಷ ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ನೀಡುತ್ತಿದ್ದೇವೆ ಎಂದು ವಾರಗಟ್ಟಲೆ ಸುದ್ದಿಗೋಷ್ಠಿ ನಡೆಸಿದ ನಿರ್ಮಲಾ ಸೀತಾರಾಮನ್ ಅವರಿಗೆ ಮತ್ತು ಅದರ ಪ್ರೇರಕ ಶಕ್ತಿ ಪ್ರಧಾನಿ ನರೇಂದ್ರ ಮೋದಿಗೆ ‘ಇಷ್ಟು ಮಾತ್ರದ ಖೋತಾವನ್ನು’ ಭರಿಸಲು ಸಾಧ್ಯವಾಗುತ್ತಿರಲಿಲ್ಲವೇ?

ಪ್ರತಿಬಾರಿ ರಾಜ್ಯವಾರು ಅನುದಾನ ಹಂಚಿಕೆ ವಿಚಾರ ಬಂದಾಗಲೆಲ್ಲಾ ಕರ್ನಾಟಕಕ್ಕೆ ಅನ್ಯಾಯವಾಗುತ್ತಲೇ ಇದೆ. ಈಗಲೂ ರಾಷ್ಟ್ರೀಯವಾಗಿ ಆಗಸ್ಟ್ ತಿಂಗಳಲ್ಲಿ ಶೇಕಡಾ 12ರಷ್ಟು ಜಿಡಿಪಿ ಕುಸಿತವಾಗಿದ್ದರೆ ಕರ್ನಾಟಕದಲ್ಲಿ ಶೇಕಡಾ 11ರಷ್ಟು ಕುಸಿತವಾಗಿದೆ. ಅಂದರೆ ರಾಷ್ಟ್ರೀಯ ಕುಸಿತಕ್ಕಿಂತ ರಾಜ್ಯದ ಕುಸಿತ ಕಡಿಮೆ. ಆದರೂ ರಾಜ್ಯಕ್ಕೆ ಜಿಎಸ್‌ಟಿ ಪರಿಹಾರವಿರಲಿ, ಇನ್ನಿತರೆ ನೆರೆ-ಬರಕ್ಕೆ ನೀಡುವ ಪರಿಹಾರವಾಗಲಿ ಕಮ್ಮಿ ಮತ್ತು ಅದನ್ನೂ ಕಾಡಿಬೇಡಿ ಪಡೆಯಬೇಕು. ಆಗಸ್ಟ್ ತಿಂಗಳಲ್ಲಿ ಕರ್ನಾಟಕದಿಂದ 5,502 ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿದೆ. ಕಳೆದ ವರ್ಷದ ಆಗಸ್ಟ್‌ನಲ್ಲಿ 6,201 ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗಿತ್ತು. ದೇಶದಲ್ಲಿ ಅತಿಹೆಚ್ಚು ಜಿಎಸ್‌ಟಿ ಸಂಗ್ರಹವಾಗಿರುವುದು ಮಹಾರಾಷ್ಟದಿಂದ; 11,602 ಕೋಟಿ ರೂಪಾಯಿ. ನಂತರದ ಸರದಿ ಗುಜರಾತ್; 6,030 ಕೋಟಿ ರೂಪಾಯಿ. ಬಳಿಕ ಮೂರನೇ ಸ್ಥಾನದಲ್ಲಿರುವುದೇ ಕರ್ನಾಟಕ; 5,502 ಕೋಟಿ ರೂಪಾಯಿ. ಹೀಗೆ ತೆರಿಗೆ ತೆತ್ತುವುದರಲ್ಲಿ ಎತ್ತರದಲ್ಲಿದ್ದರೂ ವಾಪಸ್ ಅನುದಾನ ಪಡೆಯುವಾಗ ಮಾತ್ರ ಕೆಳಗೆ ನಿಂತು ಅಂಗಲಾಚಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಹೆಚ್ಚು ತೆರಿಗೆ ನೀಡುತ್ತಿದ್ದರೂ, ನಮ್ಮವರೇ ಕೇಂದ್ರದ ಹಣಕಾಸು ಸಚಿವರಾಗಿದ್ದರೂ (ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದಲೇ ರಾಜ್ಯಸಭೆಗೆ ಹೋಗಿರುವುದು) ನಾವು ಕೇಂದ್ರ ಸರ್ಕಾರದ ಮುಂದೆ ಕೈಕಟ್ಟಿ ನಿಲ್ಲಬೇಕಾಗಿರುವುದು ನಿಜಕ್ಕೂ ‘ಆ್ಯಕ್ಟ್ ಆಫ್ ಗಾಡ್’ ಅರ್ಥಾತ್ ದೇವರ ಆಟವಲ್ಲದೆ ಬೇರೇನೂ ಆಗಿರಲು ಸಾಧ್ಯವಿಲ್ಲ.

Tags: GDPGSTNirmala Seetaramanನಿರ್ಮಲಾ ಸೀತರಾಮನ್
Previous Post

ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಉರುಳು; ಉತ್ತರವಾಗಬೇಕಿದೆ ಪುರಾವೆಗಳು

Next Post

ಜಾನುವಾರು ಬಳಕೆಗೆ ಸೂಕ್ತವಾದ ಅಕ್ಕಿಯನ್ನು ಬುಡಕಟ್ಟು ಜನರಿಗೆ ವಿತರಿಸಿದ ಮ.ಪ್ರ ಸರ್ಕಾರ

Related Posts

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್
ಇದೀಗ

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

by ಪ್ರತಿಧ್ವನಿ
January 18, 2026
0

ಬೆಂಗಳೂರು : ರಾಜ್ಯದ ಅಬಕಾರಿ ಇಲಾಖೆಯಲ್ಲಿ ಕೇಳಿ ಬಂದಿರುವ ಲಂಚ ಹಗರಣದಲ್ಲಿ ಬೆಂಗಳೂರು ನಗರ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು...

Read moreDetails
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Next Post
ಜಾನುವಾರು ಬಳಕೆಗೆ ಸೂಕ್ತವಾದ ಅಕ್ಕಿಯನ್ನು ಬುಡಕಟ್ಟು ಜನರಿಗೆ ವಿತರಿಸಿದ ಮ.ಪ್ರ ಸರ್ಕಾರ

ಜಾನುವಾರು ಬಳಕೆಗೆ ಸೂಕ್ತವಾದ ಅಕ್ಕಿಯನ್ನು ಬುಡಕಟ್ಟು ಜನರಿಗೆ ವಿತರಿಸಿದ ಮ.ಪ್ರ ಸರ್ಕಾರ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada