• Home
  • About Us
  • ಕರ್ನಾಟಕ
Saturday, June 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನೀರಿಗಾಗಿ ಬರುವ ಒಂಟೆಗಳ ಹತ್ಯೆಗೆ ಆದೇಶ!

by
January 8, 2020
in ದೇಶ
0
ನೀರಿಗಾಗಿ ಬರುವ ಒಂಟೆಗಳ ಹತ್ಯೆಗೆ ಆದೇಶ!
Share on WhatsAppShare on FacebookShare on Telegram

ವಿಶ್ವದ ಸಿರಿವಂತ ದೇಶಗಳಲ್ಲಿ ಒಂದಾಗಿರುವ ಆಸ್ಟ್ರೇಲಿಯಾದ ಕೆಲವು ಭಾಗಗಳಲ್ಲಿ ತೀವ್ರ ಬರಗಾಲ ತಲೆದೋರಿದ್ದು, ಕುಡಿಯುವ ಒಂದು ಹನಿ ನೀರಿಗೂ ತತ್ವಾರ ಎದ್ದಿದೆ. ಪ್ರಾಣಿಗಳು ಕುಡಿಯುವ ನೀರಿಲ್ಲದೇ ಎಸಿ ಡಕ್ಟ್ ಗಳಿಂದ ತೊಟ್ಟಿಕ್ಕುವ ನೀರಿನ ಹನಿಯನ್ನೇ ಕುಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ADVERTISEMENT

ಇದರ ಪರಿಣಾಮ 10,000 ಕ್ಕೂ ಅಧಿಕ ಒಂಟೆಗಳನ್ನು ಗುಂಡಿಟ್ಟು ಕೊಲ್ಲುವಂತೆ ಆದೇಶ ನೀಡಲಾಗಿದೆ. ಒಂದು ಕಡೆ ಬಿಸಿ ಹವೆ, ಮತ್ತೊಂದು ಕಡೆ ಬರಗಾಲದಿಂದ ಕುಡಿಯುವ ನೀರಿಲ್ಲದಿರುವುದು ಈ ಬಡಪಾಯಿ ಒಂಟೆಗಳನ್ನು ಪರಿತಪಿಸುವಂತೆ ಮಾಡಿದೆ. ಒಂದು ಹನಿ ನೀರೂ ಸಿಗದ ಪರಿಣಾಮ ಒಂಟೆಗಳು ಮನೆಗಳಲ್ಲಿ ಹಾಕಲಾಗಿರುವ ಎಸಿ ಡಕ್ಟ್ ನಿಂದ ತೊಟ್ಟಿಕ್ಕುವ ನೀರನ್ನು ಕುಡಿಯಲು ಯತ್ನಿಸಿ ಆ ಹವಾನಿಯಂತ್ರಕ ಯಂತ್ರಗಳನ್ನು ಹಾಳು ಮಾಡುತ್ತಿವೆ. ಈ ಬಗ್ಗೆ ಸಾರ್ವಜನಿಕರು ದೂರು ನೀಡಿರುವ ಹಿನ್ನೆಲೆಯಲ್ಲಿ ಒಂಟೆಗಳನ್ನು ಕೊಲ್ಲುವಂತೆ ಸ್ಥಳೀಯ ಆಡಳಿತವೊಂದು ಆದೇಶ ನೀಡಿದೆ.

ಈ ವಿಚಿತ್ರ ಆದೇಶಕ್ಕೆ ಆಸ್ಟ್ರೇಲಿಯಾದ ಅನಂಗು ಪಿಟ್ಜಂತ್ಜತ್ಜಾರ ಯಂಕುಂನೈಟ್ಜಟ್ಜಾರ ಪ್ರದೇಶ ಸಾಕ್ಷಿಯಾಗಿದೆ. ದಕ್ಷಿಣ ಆಸ್ಟ್ರೇಲಿಯಾದ ವಾಯುವ್ಯ ಪ್ರಾಂತ್ಯದಲ್ಲಿರುವ ಈ ಪ್ರದೇಶದಲ್ಲಿ ಬರಗಾಲ ಕಿತ್ತು ತಿನ್ನುತ್ತಿದೆ. ಕಳೆದ ವರ್ಷದಂತೆ ಈ ವರ್ಷವೂ ಬಿಸಿಗಾಳಿ ಬಲವಾಗಿ ಬೀಸುತ್ತಿದೆ. ಇಲ್ಲಿ 42 ಡಿಗ್ರಿ ಸೆಲ್ಸಿಯಸ್ ಗಿಂತ ಅಧಿಕ ತಾಪಮಾನ ದಾಖಲಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಲು ಜನರು ಮನೆಗಳಿಗೆ ಹಾಕಿಸಿಕೊಂಡಿರುವ ಎಸಿಯನ್ನೇ ಅವಲಂಬಿಸಿದ್ದಾರೆ.

ಆದರೆ, ಕುಡಿಯಲು ನೀರಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಒಂಟೆಗಳು ನೀರಿಗಾಗಿ ಅಲೆದಾಡುವಂತಹ ಪರಿಸ್ಥಿತಿ ಎದುರಾಗಿದೆ. ಒಂಟೆಗಳು ಮನೆಗಳ ಕಾಂಪೌಂಡ್ ನೊಳಗೆ ನುಗ್ಗಿ ಪ್ರವೇಶ ದ್ವಾರಗಳನ್ನು ಹಾನಿಗೊಳಿಸಿ ನೇರವಾಗಿ ಮನೆಯ ಕಿಟಕಿಗಳಲ್ಲಿ ಕಾಣಿಸುವ ಎಸಿ ಡಕ್ಟ್ ಗಳನ್ನು ನೀರಿನ ಸೆಲೆಯಾಗಿ ಕಂಡುಕೊಂಡಿವೆ. ಇವುಗಳಲ್ಲಿ ತೊಟ್ಟಿಕ್ಕುವ ಹನಿ ನೀರನ್ನೇ ಹೀರಿಕೊಂಡು ದಾಹ ತಣಿಸಿಕೊಳ್ಳುವ ಪ್ರಯತ್ನ ಮಾಡುತ್ತಿವೆ. ಹೀಗೆ ಮಾಡುವಾಗ ಹಲವಾರು ಡಕ್ಟ್ ಗಳೂ ಸಹ ಹಾನಿಗೊಂಡಿವೆ.

ಇದಿಷ್ಟೇ ಅಲ್ಲ, ಅಲ್ಲಲ್ಲಿ ಬೆಳೆದು ನಿಂತಿರುವ ಹಸಿರು ಪೈರು, ಹಣ್ಣು ತರಕಾರಿ ಗಿಡಗಳನ್ನೂ ತಿಂದ ದಾಹ ತೀರಿಸಿಕೊಳ್ಳುತ್ತಿವೆ. ಇದರಿಂದ ನಷ್ಟ ಅನುಭವಿಸುತ್ತಿರುವ ಇಲ್ಲಿನ ನಿವಾಸಿಗಳು ಸ್ಥಳೀಯ ಆಡಳಿತಕ್ಕೆ ದೂರು ನೀಡಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಿರುವ ಸ್ಥಳೀಯ ಆಡಳಿತ ಸಾವಿರಾರು ಸಂಖ್ಯೆಯಲ್ಲಿರುವ ಒಂಟೆಗಳಿಗೆ ನೀರುಣಿಸುವುದು ಕಷ್ಟಸಾಧ್ಯದ ಕೆಲಸ ಎಂದು ಭಾವಿಸಿ ಅವುಗಳನ್ನು ಗುಂಡಿಕ್ಕಿ ಕೊಲ್ಲುವಂತೆ ಆದೇಶ ನೀಡಿದೆ.

ಕಳೆದ ವರ್ಷದಂತೆಯೇ ಈ ಬಾರಿಯೂ ಆಸ್ಟ್ರೇಲಿಯಾದಲ್ಲಿ ಬಿಸಿಗಾಳಿ ಬೀಸುತ್ತಿದೆ. ಅಲ್ಲದೇ, ಹಲವು ದಶಕಗಳ ನಂತರ ಇದೇ ಮೊದಲ ಬಾರಿಗೆ ಭಾರೀ ಕಾಡ್ಗಿಚ್ಚನ್ನು ಎದುರಿಸಿದೆ. ವಿಶೇಷವಾಗಿ ನ್ಯೂ ಸೌತ್ ವೇಲ್ಸ್ ಮತ್ತು ದಕ್ಷಿಣ ಆಸ್ಟ್ರೇಲಿಯಾ ಭಾಗದಲ್ಲಿ ಬಿಸಿಗಾಳಿಯ ಹೊಡೆತ ಜನರನ್ನು ಮತ್ತು ಪ್ರಾಣಿಗಳನ್ನು ಜರ್ಝರಿತರನ್ನಾಗಿ ಮಾಡಿದೆ.

ಕಾಡ್ಗಿಚ್ಚಿನಿಂದ ಉಂಟಾಗಿರುವ ಹೊಗೆ ನಿಲ್ಲುವ ಪರಿಸ್ಥಿತಿಯಲ್ಲಿಲ್ಲ. ಇದರ ಪರಿಣಾಮ ಇಲ್ಲಿನ ನಗರಗಳಲ್ಲಿ ಸ್ಥಳೀಯ ಹವಾಮಾನದ ಭಾರೀ ಪ್ರಮಾಣದಲ್ಲಿ ವ್ಯತ್ಯಾಸವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಹಲವಾರು ರೋಗಗಳಿಗೆ ದಾರಿ ಮಾಡಿಕೊಡುತ್ತಿದೆ ಎಂದೂ ಎಚ್ಚರಿಕೆ ನೀಡಿದೆ.

ಇನ್ನು ಒಂಟೆಗಳ ವಿಚಾರದಲ್ಲಿ ಸ್ಥಳೀಯ ಆಡಳಿತ ಕಠೋರ ನಿಲುವನ್ನು ತೆಗೆದುಕೊಂಡಿದೆ. ನೀರನ್ನು ಅರಸಿ ಬರುವ ಒಂಟೆಗಳ ಉಪಟಳಕ್ಕೆ ಜನ ಬೇಸತ್ತು ಹೋಗಿದ್ದಾರೆ. ತರಕಾರಿ, ಆಸ್ತಿಪಾಸ್ತಿಯನ್ನು ಹಾನಿಗೊಳಿಸುತ್ತಿರುವ 10 ಸಾವಿರ ಒಂಟೆಗಳನ್ನು ಹತ್ಯೆ ಮಾಡುವಂತೆ ಆದೇಶ ನೀಡಲಾಗಿದೆ. ಈ ಕಾರ್ಯ ಬುಧವಾರ ಆರಂಭವಾಗಿದ್ದು, ಹೆಲಿಕಾಪ್ಟರ್ ನಲ್ಲಿ ಬರುವ ಅಗ್ನಿಶಾಮಕ ದಳದ ತಜ್ಞರು ಒಂಟೆಗಳನ್ನು ಗುರುತಿಸಿ ಅವುಗಳಿಗೆ ಗುಂಡಿಟ್ಟು ಕೊಲ್ಲುವ ಕಾರ್ಯವನ್ನು ಆರಂಭಿಸಿದ್ದಾರೆ. ಮುಂದಿನ ಐದು ದಿನಗಳವರೆಗೆ ಈ ಮಾರಣಹೋಮ ಪ್ರಕ್ರಿಯೆ ನಡೆಯಲಿದ್ದು, ಗುಂಡೇಟು ತಿಂದು ಸಾವನ್ನಪ್ಪುವ ಒಂಟೆಗಳನ್ನು ಸುಟ್ಟು ಹಾಕಲು ಅಗ್ನಿಶಾಮಕ ಇಲಾಖೆಗೆ ಸೂಚಿಸಲಾಗಿದೆ.

ಕೃಪೆ: ದಿ ವೈರ್

Tags: Australiacamelcontroldamagekillvegetableswaterಆಸ್ಟ್ರೇಲಿಯಾಒಂಟೆತರಕಾರಿನಿಯಂತ್ರಿಸುನೀರುಹತ್ಯೆಹಾನಿ
Previous Post

HDD ಗೆ ರಾಜ್ಯಸಭೆ ಸೀಟ್ : ಕಾಂಗ್ರೆಸ್ ಜತೆ ಮೈತ್ರಿಗೆ ಜೆಡಿಎಸ್ ಯತ್ನ?     

Next Post

ಜೀವ ವೈವಿಧ್ಯತೆಗೆ ಮಾರಕವಾದ ಕೃತಕ ಅರಣ್ಯದ ಅಗತ್ಯವಿದೆಯೇ?

Related Posts

Top Story

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

by ಪ್ರತಿಧ್ವನಿ
June 13, 2025
0

ಅತಿವೃಷ್ಟಿಯಿಂದ ಹಾನಿಗೊಳಗಾದ ಕುಂದಗೋಳ ತಾಲೂಕಿನ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ, ಪರಿಶೀಲನೆ, ಜಿಲ್ಲೆಯ 130 ಮನೆಗಳಿಗೆ ಭಾಗಶಃ ಹಾನಿ, ಜಿಲ್ಲಾಡಳಿತದಿಂದ ತ್ವರಿತ ಪರಿಹಾರ...

Read moreDetails

M B Patil: ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ

June 13, 2025

16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

June 13, 2025

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ..

June 13, 2025

ಕರ್ನಾಟಕದ AI-ಸಿದ್ಧ ಭವಿಷ್ಯವನ್ನು ಎತ್ತಿ ತೋರಿಸಿದ ಪ್ರಿಯಾಂಕ್ ಖರ್ಗೆ

June 13, 2025
Next Post
ಜೀವ ವೈವಿಧ್ಯತೆಗೆ ಮಾರಕವಾದ ಕೃತಕ ಅರಣ್ಯದ ಅಗತ್ಯವಿದೆಯೇ?

ಜೀವ ವೈವಿಧ್ಯತೆಗೆ ಮಾರಕವಾದ ಕೃತಕ ಅರಣ್ಯದ ಅಗತ್ಯವಿದೆಯೇ?

Please login to join discussion

Recent News

ಆಧುನಿಕ ನಾಗರಿಕತೆಯ ಕರಾಳ ಚಹರೆಯ ಅನಾವರಣ
Top Story

ಆಧುನಿಕ ನಾಗರಿಕತೆಯ ಕರಾಳ ಚಹರೆಯ ಅನಾವರಣ

by ನಾ ದಿವಾಕರ
June 14, 2025
Top Story

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

by ಪ್ರತಿಧ್ವನಿ
June 13, 2025
Top Story

M B Patil: ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ

by ಪ್ರತಿಧ್ವನಿ
June 13, 2025
Top Story

16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

by ಪ್ರತಿಧ್ವನಿ
June 13, 2025
Top Story

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ..

by ಪ್ರತಿಧ್ವನಿ
June 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಆಧುನಿಕ ನಾಗರಿಕತೆಯ ಕರಾಳ ಚಹರೆಯ ಅನಾವರಣ

ಆಧುನಿಕ ನಾಗರಿಕತೆಯ ಕರಾಳ ಚಹರೆಯ ಅನಾವರಣ

June 14, 2025

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

June 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada