Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ನೀರಿಗಾಗಿ ಬರುವ ಒಂಟೆಗಳ ಹತ್ಯೆಗೆ ಆದೇಶ!

ನೀರಿಗಾಗಿ ಬರುವ ಒಂಟೆಗಳ ಹತ್ಯೆಗೆ ಆದೇಶ!
ನೀರಿಗಾಗಿ ಬರುವ ಒಂಟೆಗಳ ಹತ್ಯೆಗೆ ಆದೇಶ!

January 8, 2020
Share on FacebookShare on Twitter

ವಿಶ್ವದ ಸಿರಿವಂತ ದೇಶಗಳಲ್ಲಿ ಒಂದಾಗಿರುವ ಆಸ್ಟ್ರೇಲಿಯಾದ ಕೆಲವು ಭಾಗಗಳಲ್ಲಿ ತೀವ್ರ ಬರಗಾಲ ತಲೆದೋರಿದ್ದು, ಕುಡಿಯುವ ಒಂದು ಹನಿ ನೀರಿಗೂ ತತ್ವಾರ ಎದ್ದಿದೆ. ಪ್ರಾಣಿಗಳು ಕುಡಿಯುವ ನೀರಿಲ್ಲದೇ ಎಸಿ ಡಕ್ಟ್ ಗಳಿಂದ ತೊಟ್ಟಿಕ್ಕುವ ನೀರಿನ ಹನಿಯನ್ನೇ ಕುಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಉದ್ಯಮಿ ಗೌತಮ್ ಅದಾನಿಗೆ Z ಶ್ರೇಣಿ ಭದ್ರತೆ

ರಾಜಕೀಯ ಪಕ್ಷಗಳು ನೀಡುವ ಭರವಸೆಗಳನ್ನು ತಡೆಯಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಜಮ್ಮು-ಕಾಶ್ಮೀರ; ಕಾಶ್ಮೀರಿ ಪಂಡಿತರ ಹಂತಕರನ್ನು ಗುರುತಿಸಿದ ಪೊಲೀಸರು

ಇದರ ಪರಿಣಾಮ 10,000 ಕ್ಕೂ ಅಧಿಕ ಒಂಟೆಗಳನ್ನು ಗುಂಡಿಟ್ಟು ಕೊಲ್ಲುವಂತೆ ಆದೇಶ ನೀಡಲಾಗಿದೆ. ಒಂದು ಕಡೆ ಬಿಸಿ ಹವೆ, ಮತ್ತೊಂದು ಕಡೆ ಬರಗಾಲದಿಂದ ಕುಡಿಯುವ ನೀರಿಲ್ಲದಿರುವುದು ಈ ಬಡಪಾಯಿ ಒಂಟೆಗಳನ್ನು ಪರಿತಪಿಸುವಂತೆ ಮಾಡಿದೆ. ಒಂದು ಹನಿ ನೀರೂ ಸಿಗದ ಪರಿಣಾಮ ಒಂಟೆಗಳು ಮನೆಗಳಲ್ಲಿ ಹಾಕಲಾಗಿರುವ ಎಸಿ ಡಕ್ಟ್ ನಿಂದ ತೊಟ್ಟಿಕ್ಕುವ ನೀರನ್ನು ಕುಡಿಯಲು ಯತ್ನಿಸಿ ಆ ಹವಾನಿಯಂತ್ರಕ ಯಂತ್ರಗಳನ್ನು ಹಾಳು ಮಾಡುತ್ತಿವೆ. ಈ ಬಗ್ಗೆ ಸಾರ್ವಜನಿಕರು ದೂರು ನೀಡಿರುವ ಹಿನ್ನೆಲೆಯಲ್ಲಿ ಒಂಟೆಗಳನ್ನು ಕೊಲ್ಲುವಂತೆ ಸ್ಥಳೀಯ ಆಡಳಿತವೊಂದು ಆದೇಶ ನೀಡಿದೆ.

ಈ ವಿಚಿತ್ರ ಆದೇಶಕ್ಕೆ ಆಸ್ಟ್ರೇಲಿಯಾದ ಅನಂಗು ಪಿಟ್ಜಂತ್ಜತ್ಜಾರ ಯಂಕುಂನೈಟ್ಜಟ್ಜಾರ ಪ್ರದೇಶ ಸಾಕ್ಷಿಯಾಗಿದೆ. ದಕ್ಷಿಣ ಆಸ್ಟ್ರೇಲಿಯಾದ ವಾಯುವ್ಯ ಪ್ರಾಂತ್ಯದಲ್ಲಿರುವ ಈ ಪ್ರದೇಶದಲ್ಲಿ ಬರಗಾಲ ಕಿತ್ತು ತಿನ್ನುತ್ತಿದೆ. ಕಳೆದ ವರ್ಷದಂತೆ ಈ ವರ್ಷವೂ ಬಿಸಿಗಾಳಿ ಬಲವಾಗಿ ಬೀಸುತ್ತಿದೆ. ಇಲ್ಲಿ 42 ಡಿಗ್ರಿ ಸೆಲ್ಸಿಯಸ್ ಗಿಂತ ಅಧಿಕ ತಾಪಮಾನ ದಾಖಲಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಲು ಜನರು ಮನೆಗಳಿಗೆ ಹಾಕಿಸಿಕೊಂಡಿರುವ ಎಸಿಯನ್ನೇ ಅವಲಂಬಿಸಿದ್ದಾರೆ.

ಆದರೆ, ಕುಡಿಯಲು ನೀರಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಒಂಟೆಗಳು ನೀರಿಗಾಗಿ ಅಲೆದಾಡುವಂತಹ ಪರಿಸ್ಥಿತಿ ಎದುರಾಗಿದೆ. ಒಂಟೆಗಳು ಮನೆಗಳ ಕಾಂಪೌಂಡ್ ನೊಳಗೆ ನುಗ್ಗಿ ಪ್ರವೇಶ ದ್ವಾರಗಳನ್ನು ಹಾನಿಗೊಳಿಸಿ ನೇರವಾಗಿ ಮನೆಯ ಕಿಟಕಿಗಳಲ್ಲಿ ಕಾಣಿಸುವ ಎಸಿ ಡಕ್ಟ್ ಗಳನ್ನು ನೀರಿನ ಸೆಲೆಯಾಗಿ ಕಂಡುಕೊಂಡಿವೆ. ಇವುಗಳಲ್ಲಿ ತೊಟ್ಟಿಕ್ಕುವ ಹನಿ ನೀರನ್ನೇ ಹೀರಿಕೊಂಡು ದಾಹ ತಣಿಸಿಕೊಳ್ಳುವ ಪ್ರಯತ್ನ ಮಾಡುತ್ತಿವೆ. ಹೀಗೆ ಮಾಡುವಾಗ ಹಲವಾರು ಡಕ್ಟ್ ಗಳೂ ಸಹ ಹಾನಿಗೊಂಡಿವೆ.

ಇದಿಷ್ಟೇ ಅಲ್ಲ, ಅಲ್ಲಲ್ಲಿ ಬೆಳೆದು ನಿಂತಿರುವ ಹಸಿರು ಪೈರು, ಹಣ್ಣು ತರಕಾರಿ ಗಿಡಗಳನ್ನೂ ತಿಂದ ದಾಹ ತೀರಿಸಿಕೊಳ್ಳುತ್ತಿವೆ. ಇದರಿಂದ ನಷ್ಟ ಅನುಭವಿಸುತ್ತಿರುವ ಇಲ್ಲಿನ ನಿವಾಸಿಗಳು ಸ್ಥಳೀಯ ಆಡಳಿತಕ್ಕೆ ದೂರು ನೀಡಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಿರುವ ಸ್ಥಳೀಯ ಆಡಳಿತ ಸಾವಿರಾರು ಸಂಖ್ಯೆಯಲ್ಲಿರುವ ಒಂಟೆಗಳಿಗೆ ನೀರುಣಿಸುವುದು ಕಷ್ಟಸಾಧ್ಯದ ಕೆಲಸ ಎಂದು ಭಾವಿಸಿ ಅವುಗಳನ್ನು ಗುಂಡಿಕ್ಕಿ ಕೊಲ್ಲುವಂತೆ ಆದೇಶ ನೀಡಿದೆ.

ಕಳೆದ ವರ್ಷದಂತೆಯೇ ಈ ಬಾರಿಯೂ ಆಸ್ಟ್ರೇಲಿಯಾದಲ್ಲಿ ಬಿಸಿಗಾಳಿ ಬೀಸುತ್ತಿದೆ. ಅಲ್ಲದೇ, ಹಲವು ದಶಕಗಳ ನಂತರ ಇದೇ ಮೊದಲ ಬಾರಿಗೆ ಭಾರೀ ಕಾಡ್ಗಿಚ್ಚನ್ನು ಎದುರಿಸಿದೆ. ವಿಶೇಷವಾಗಿ ನ್ಯೂ ಸೌತ್ ವೇಲ್ಸ್ ಮತ್ತು ದಕ್ಷಿಣ ಆಸ್ಟ್ರೇಲಿಯಾ ಭಾಗದಲ್ಲಿ ಬಿಸಿಗಾಳಿಯ ಹೊಡೆತ ಜನರನ್ನು ಮತ್ತು ಪ್ರಾಣಿಗಳನ್ನು ಜರ್ಝರಿತರನ್ನಾಗಿ ಮಾಡಿದೆ.

ಕಾಡ್ಗಿಚ್ಚಿನಿಂದ ಉಂಟಾಗಿರುವ ಹೊಗೆ ನಿಲ್ಲುವ ಪರಿಸ್ಥಿತಿಯಲ್ಲಿಲ್ಲ. ಇದರ ಪರಿಣಾಮ ಇಲ್ಲಿನ ನಗರಗಳಲ್ಲಿ ಸ್ಥಳೀಯ ಹವಾಮಾನದ ಭಾರೀ ಪ್ರಮಾಣದಲ್ಲಿ ವ್ಯತ್ಯಾಸವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಹಲವಾರು ರೋಗಗಳಿಗೆ ದಾರಿ ಮಾಡಿಕೊಡುತ್ತಿದೆ ಎಂದೂ ಎಚ್ಚರಿಕೆ ನೀಡಿದೆ.

ಇನ್ನು ಒಂಟೆಗಳ ವಿಚಾರದಲ್ಲಿ ಸ್ಥಳೀಯ ಆಡಳಿತ ಕಠೋರ ನಿಲುವನ್ನು ತೆಗೆದುಕೊಂಡಿದೆ. ನೀರನ್ನು ಅರಸಿ ಬರುವ ಒಂಟೆಗಳ ಉಪಟಳಕ್ಕೆ ಜನ ಬೇಸತ್ತು ಹೋಗಿದ್ದಾರೆ. ತರಕಾರಿ, ಆಸ್ತಿಪಾಸ್ತಿಯನ್ನು ಹಾನಿಗೊಳಿಸುತ್ತಿರುವ 10 ಸಾವಿರ ಒಂಟೆಗಳನ್ನು ಹತ್ಯೆ ಮಾಡುವಂತೆ ಆದೇಶ ನೀಡಲಾಗಿದೆ. ಈ ಕಾರ್ಯ ಬುಧವಾರ ಆರಂಭವಾಗಿದ್ದು, ಹೆಲಿಕಾಪ್ಟರ್ ನಲ್ಲಿ ಬರುವ ಅಗ್ನಿಶಾಮಕ ದಳದ ತಜ್ಞರು ಒಂಟೆಗಳನ್ನು ಗುರುತಿಸಿ ಅವುಗಳಿಗೆ ಗುಂಡಿಟ್ಟು ಕೊಲ್ಲುವ ಕಾರ್ಯವನ್ನು ಆರಂಭಿಸಿದ್ದಾರೆ. ಮುಂದಿನ ಐದು ದಿನಗಳವರೆಗೆ ಈ ಮಾರಣಹೋಮ ಪ್ರಕ್ರಿಯೆ ನಡೆಯಲಿದ್ದು, ಗುಂಡೇಟು ತಿಂದು ಸಾವನ್ನಪ್ಪುವ ಒಂಟೆಗಳನ್ನು ಸುಟ್ಟು ಹಾಕಲು ಅಗ್ನಿಶಾಮಕ ಇಲಾಖೆಗೆ ಸೂಚಿಸಲಾಗಿದೆ.

ಕೃಪೆ: ದಿ ವೈರ್

RS 500
RS 1500

SCAN HERE

[elfsight_youtube_gallery id="4"]

don't miss it !

ದೂದ್ ಪೇಡಾಗೆ ಜೊತೆಯಾದ ಧನು ಹರ್ಷ
ಸಿನಿಮಾ

ದೂದ್ ಪೇಡಾಗೆ ಜೊತೆಯಾದ ಧನು ಹರ್ಷ

by ಪ್ರತಿಧ್ವನಿ
August 13, 2022
ಮ್ಯಾಂಚೆಸ್ಟರ್ ಯುನೈಟೆಡ್ ಫುಟ್‌ಬಾಲ್‌ ಕ್ಲಬ್ ಖರೀದಿಸ್ತಾರಂತೆ ಎಲಾನ್ ಮಸ್ಕ್!
ಕ್ರೀಡೆ

ಮ್ಯಾಂಚೆಸ್ಟರ್ ಯುನೈಟೆಡ್ ಫುಟ್‌ಬಾಲ್‌ ಕ್ಲಬ್ ಖರೀದಿಸ್ತಾರಂತೆ ಎಲಾನ್ ಮಸ್ಕ್!

by ಪ್ರತಿಧ್ವನಿ
August 17, 2022
ಮಾಧುಸ್ವಾಮಿ ಅವರು ತಮ್ಮನ್ನು ತಾವೇ ಮೇಧಾವಿ ಎಂದುಕೊಂಡಿದ್ದಾರೆ : ಸಚಿವ ಎಸ್‌.ಟಿ. ಸೋಮಶೇಖರ್‌
ಕರ್ನಾಟಕ

ಮಾಧುಸ್ವಾಮಿ ಅವರು ತಮ್ಮನ್ನು ತಾವೇ ಮೇಧಾವಿ ಎಂದುಕೊಂಡಿದ್ದಾರೆ : ಸಚಿವ ಎಸ್‌.ಟಿ. ಸೋಮಶೇಖರ್‌

by ಪ್ರತಿಧ್ವನಿ
August 15, 2022
75 ಹೆಜ್ಜೆಗಳ ನಂತರ ನವ ಭಾರತ ಎತ್ತ ಸಾಗಲಿದೆ ?
ಅಭಿಮತ

75 ಹೆಜ್ಜೆಗಳ ನಂತರ ನವ ಭಾರತ ಎತ್ತ ಸಾಗಲಿದೆ ?

by ನಾ ದಿವಾಕರ
August 14, 2022
ವಿಡಿಯೋ

ದೊಡ್ಡ ಮನೆಯ ಕುವರ ಚಿತ್ರದ ಬಗ್ಗೆ ಹೇಳಿದ್ದೇನು?

by ಪ್ರತಿಧ್ವನಿ
August 12, 2022
Next Post
ಜೀವ ವೈವಿಧ್ಯತೆಗೆ ಮಾರಕವಾದ ಕೃತಕ ಅರಣ್ಯದ ಅಗತ್ಯವಿದೆಯೇ?

ಜೀವ ವೈವಿಧ್ಯತೆಗೆ ಮಾರಕವಾದ ಕೃತಕ ಅರಣ್ಯದ ಅಗತ್ಯವಿದೆಯೇ?

ಕೇಸರಿ vs ಕೆಂಪು: ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಪೊಲೀಸ್ ಅನುಮತಿ ನಿರಾಕರಣೆ

ಕೇಸರಿ vs ಕೆಂಪು: ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಪೊಲೀಸ್ ಅನುಮತಿ ನಿರಾಕರಣೆ

ಬಿಜೆಪಿ ಸರ್ಕಾರ ಇದ್ದರೂ ಅಸ್ಸಾಂ ಭೇಟಿಗೆ ಮೋದಿ‌ ಬೆದರುತ್ತಿರುವುದೇಕೆ?

ಬಿಜೆಪಿ ಸರ್ಕಾರ ಇದ್ದರೂ ಅಸ್ಸಾಂ ಭೇಟಿಗೆ ಮೋದಿ‌ ಬೆದರುತ್ತಿರುವುದೇಕೆ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist