Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ನೀರಿಗಾಗಿ ಬರುವ ಒಂಟೆಗಳ ಹತ್ಯೆಗೆ ಆದೇಶ!

ನೀರಿಗಾಗಿ ಬರುವ ಒಂಟೆಗಳ ಹತ್ಯೆಗೆ ಆದೇಶ!
ನೀರಿಗಾಗಿ ಬರುವ ಒಂಟೆಗಳ ಹತ್ಯೆಗೆ ಆದೇಶ!

January 8, 2020
Share on FacebookShare on Twitter

ವಿಶ್ವದ ಸಿರಿವಂತ ದೇಶಗಳಲ್ಲಿ ಒಂದಾಗಿರುವ ಆಸ್ಟ್ರೇಲಿಯಾದ ಕೆಲವು ಭಾಗಗಳಲ್ಲಿ ತೀವ್ರ ಬರಗಾಲ ತಲೆದೋರಿದ್ದು, ಕುಡಿಯುವ ಒಂದು ಹನಿ ನೀರಿಗೂ ತತ್ವಾರ ಎದ್ದಿದೆ. ಪ್ರಾಣಿಗಳು ಕುಡಿಯುವ ನೀರಿಲ್ಲದೇ ಎಸಿ ಡಕ್ಟ್ ಗಳಿಂದ ತೊಟ್ಟಿಕ್ಕುವ ನೀರಿನ ಹನಿಯನ್ನೇ ಕುಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಮೋದಿ ಹಿರಿಯಣ್ಣ, ಅವರೊಂದಿಗೆ ಕೆಲಸ ಮಾಡಲು ಬಯಸುತ್ತೇನೆ: ಕೇಜ್ರಿವಾಲ್‌

ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಅಪಘಾತ : ಶಸ್ತ್ರಚಿಕಿತ್ಸೆ ಮುಗಿಸಿ ಆ್ಯಂಬುಲೆನ್ಸ್​ನಲ್ಲೇ ಪರೀಕ್ಷೆ ಬರೆದ ಸಾಹಸಿ

ಅಭಿವೃದ್ಧಿಯ ಮಾರ್ಗವೂ ಕಾರ್ಪೋರೇಟ್ ಬಂಡವಾಳವೂ ಸಮಾಜದ ಮೇಲ್ವರ್ಗಕ್ಕೆ ಮಾತ್ರವೇ ನಿಲುಕುವ ಅಭಿವೃದ್ಧಿ ಮಾದರಿಗಳೇ ನವಉದಾರವಾದದ ಜೀವಾಳ

ಇದರ ಪರಿಣಾಮ 10,000 ಕ್ಕೂ ಅಧಿಕ ಒಂಟೆಗಳನ್ನು ಗುಂಡಿಟ್ಟು ಕೊಲ್ಲುವಂತೆ ಆದೇಶ ನೀಡಲಾಗಿದೆ. ಒಂದು ಕಡೆ ಬಿಸಿ ಹವೆ, ಮತ್ತೊಂದು ಕಡೆ ಬರಗಾಲದಿಂದ ಕುಡಿಯುವ ನೀರಿಲ್ಲದಿರುವುದು ಈ ಬಡಪಾಯಿ ಒಂಟೆಗಳನ್ನು ಪರಿತಪಿಸುವಂತೆ ಮಾಡಿದೆ. ಒಂದು ಹನಿ ನೀರೂ ಸಿಗದ ಪರಿಣಾಮ ಒಂಟೆಗಳು ಮನೆಗಳಲ್ಲಿ ಹಾಕಲಾಗಿರುವ ಎಸಿ ಡಕ್ಟ್ ನಿಂದ ತೊಟ್ಟಿಕ್ಕುವ ನೀರನ್ನು ಕುಡಿಯಲು ಯತ್ನಿಸಿ ಆ ಹವಾನಿಯಂತ್ರಕ ಯಂತ್ರಗಳನ್ನು ಹಾಳು ಮಾಡುತ್ತಿವೆ. ಈ ಬಗ್ಗೆ ಸಾರ್ವಜನಿಕರು ದೂರು ನೀಡಿರುವ ಹಿನ್ನೆಲೆಯಲ್ಲಿ ಒಂಟೆಗಳನ್ನು ಕೊಲ್ಲುವಂತೆ ಸ್ಥಳೀಯ ಆಡಳಿತವೊಂದು ಆದೇಶ ನೀಡಿದೆ.

ಈ ವಿಚಿತ್ರ ಆದೇಶಕ್ಕೆ ಆಸ್ಟ್ರೇಲಿಯಾದ ಅನಂಗು ಪಿಟ್ಜಂತ್ಜತ್ಜಾರ ಯಂಕುಂನೈಟ್ಜಟ್ಜಾರ ಪ್ರದೇಶ ಸಾಕ್ಷಿಯಾಗಿದೆ. ದಕ್ಷಿಣ ಆಸ್ಟ್ರೇಲಿಯಾದ ವಾಯುವ್ಯ ಪ್ರಾಂತ್ಯದಲ್ಲಿರುವ ಈ ಪ್ರದೇಶದಲ್ಲಿ ಬರಗಾಲ ಕಿತ್ತು ತಿನ್ನುತ್ತಿದೆ. ಕಳೆದ ವರ್ಷದಂತೆ ಈ ವರ್ಷವೂ ಬಿಸಿಗಾಳಿ ಬಲವಾಗಿ ಬೀಸುತ್ತಿದೆ. ಇಲ್ಲಿ 42 ಡಿಗ್ರಿ ಸೆಲ್ಸಿಯಸ್ ಗಿಂತ ಅಧಿಕ ತಾಪಮಾನ ದಾಖಲಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಲು ಜನರು ಮನೆಗಳಿಗೆ ಹಾಕಿಸಿಕೊಂಡಿರುವ ಎಸಿಯನ್ನೇ ಅವಲಂಬಿಸಿದ್ದಾರೆ.

ಆದರೆ, ಕುಡಿಯಲು ನೀರಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಒಂಟೆಗಳು ನೀರಿಗಾಗಿ ಅಲೆದಾಡುವಂತಹ ಪರಿಸ್ಥಿತಿ ಎದುರಾಗಿದೆ. ಒಂಟೆಗಳು ಮನೆಗಳ ಕಾಂಪೌಂಡ್ ನೊಳಗೆ ನುಗ್ಗಿ ಪ್ರವೇಶ ದ್ವಾರಗಳನ್ನು ಹಾನಿಗೊಳಿಸಿ ನೇರವಾಗಿ ಮನೆಯ ಕಿಟಕಿಗಳಲ್ಲಿ ಕಾಣಿಸುವ ಎಸಿ ಡಕ್ಟ್ ಗಳನ್ನು ನೀರಿನ ಸೆಲೆಯಾಗಿ ಕಂಡುಕೊಂಡಿವೆ. ಇವುಗಳಲ್ಲಿ ತೊಟ್ಟಿಕ್ಕುವ ಹನಿ ನೀರನ್ನೇ ಹೀರಿಕೊಂಡು ದಾಹ ತಣಿಸಿಕೊಳ್ಳುವ ಪ್ರಯತ್ನ ಮಾಡುತ್ತಿವೆ. ಹೀಗೆ ಮಾಡುವಾಗ ಹಲವಾರು ಡಕ್ಟ್ ಗಳೂ ಸಹ ಹಾನಿಗೊಂಡಿವೆ.

ಇದಿಷ್ಟೇ ಅಲ್ಲ, ಅಲ್ಲಲ್ಲಿ ಬೆಳೆದು ನಿಂತಿರುವ ಹಸಿರು ಪೈರು, ಹಣ್ಣು ತರಕಾರಿ ಗಿಡಗಳನ್ನೂ ತಿಂದ ದಾಹ ತೀರಿಸಿಕೊಳ್ಳುತ್ತಿವೆ. ಇದರಿಂದ ನಷ್ಟ ಅನುಭವಿಸುತ್ತಿರುವ ಇಲ್ಲಿನ ನಿವಾಸಿಗಳು ಸ್ಥಳೀಯ ಆಡಳಿತಕ್ಕೆ ದೂರು ನೀಡಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಿರುವ ಸ್ಥಳೀಯ ಆಡಳಿತ ಸಾವಿರಾರು ಸಂಖ್ಯೆಯಲ್ಲಿರುವ ಒಂಟೆಗಳಿಗೆ ನೀರುಣಿಸುವುದು ಕಷ್ಟಸಾಧ್ಯದ ಕೆಲಸ ಎಂದು ಭಾವಿಸಿ ಅವುಗಳನ್ನು ಗುಂಡಿಕ್ಕಿ ಕೊಲ್ಲುವಂತೆ ಆದೇಶ ನೀಡಿದೆ.

ಕಳೆದ ವರ್ಷದಂತೆಯೇ ಈ ಬಾರಿಯೂ ಆಸ್ಟ್ರೇಲಿಯಾದಲ್ಲಿ ಬಿಸಿಗಾಳಿ ಬೀಸುತ್ತಿದೆ. ಅಲ್ಲದೇ, ಹಲವು ದಶಕಗಳ ನಂತರ ಇದೇ ಮೊದಲ ಬಾರಿಗೆ ಭಾರೀ ಕಾಡ್ಗಿಚ್ಚನ್ನು ಎದುರಿಸಿದೆ. ವಿಶೇಷವಾಗಿ ನ್ಯೂ ಸೌತ್ ವೇಲ್ಸ್ ಮತ್ತು ದಕ್ಷಿಣ ಆಸ್ಟ್ರೇಲಿಯಾ ಭಾಗದಲ್ಲಿ ಬಿಸಿಗಾಳಿಯ ಹೊಡೆತ ಜನರನ್ನು ಮತ್ತು ಪ್ರಾಣಿಗಳನ್ನು ಜರ್ಝರಿತರನ್ನಾಗಿ ಮಾಡಿದೆ.

ಕಾಡ್ಗಿಚ್ಚಿನಿಂದ ಉಂಟಾಗಿರುವ ಹೊಗೆ ನಿಲ್ಲುವ ಪರಿಸ್ಥಿತಿಯಲ್ಲಿಲ್ಲ. ಇದರ ಪರಿಣಾಮ ಇಲ್ಲಿನ ನಗರಗಳಲ್ಲಿ ಸ್ಥಳೀಯ ಹವಾಮಾನದ ಭಾರೀ ಪ್ರಮಾಣದಲ್ಲಿ ವ್ಯತ್ಯಾಸವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಹಲವಾರು ರೋಗಗಳಿಗೆ ದಾರಿ ಮಾಡಿಕೊಡುತ್ತಿದೆ ಎಂದೂ ಎಚ್ಚರಿಕೆ ನೀಡಿದೆ.

ಇನ್ನು ಒಂಟೆಗಳ ವಿಚಾರದಲ್ಲಿ ಸ್ಥಳೀಯ ಆಡಳಿತ ಕಠೋರ ನಿಲುವನ್ನು ತೆಗೆದುಕೊಂಡಿದೆ. ನೀರನ್ನು ಅರಸಿ ಬರುವ ಒಂಟೆಗಳ ಉಪಟಳಕ್ಕೆ ಜನ ಬೇಸತ್ತು ಹೋಗಿದ್ದಾರೆ. ತರಕಾರಿ, ಆಸ್ತಿಪಾಸ್ತಿಯನ್ನು ಹಾನಿಗೊಳಿಸುತ್ತಿರುವ 10 ಸಾವಿರ ಒಂಟೆಗಳನ್ನು ಹತ್ಯೆ ಮಾಡುವಂತೆ ಆದೇಶ ನೀಡಲಾಗಿದೆ. ಈ ಕಾರ್ಯ ಬುಧವಾರ ಆರಂಭವಾಗಿದ್ದು, ಹೆಲಿಕಾಪ್ಟರ್ ನಲ್ಲಿ ಬರುವ ಅಗ್ನಿಶಾಮಕ ದಳದ ತಜ್ಞರು ಒಂಟೆಗಳನ್ನು ಗುರುತಿಸಿ ಅವುಗಳಿಗೆ ಗುಂಡಿಟ್ಟು ಕೊಲ್ಲುವ ಕಾರ್ಯವನ್ನು ಆರಂಭಿಸಿದ್ದಾರೆ. ಮುಂದಿನ ಐದು ದಿನಗಳವರೆಗೆ ಈ ಮಾರಣಹೋಮ ಪ್ರಕ್ರಿಯೆ ನಡೆಯಲಿದ್ದು, ಗುಂಡೇಟು ತಿಂದು ಸಾವನ್ನಪ್ಪುವ ಒಂಟೆಗಳನ್ನು ಸುಟ್ಟು ಹಾಕಲು ಅಗ್ನಿಶಾಮಕ ಇಲಾಖೆಗೆ ಸೂಚಿಸಲಾಗಿದೆ.

ಕೃಪೆ: ದಿ ವೈರ್

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ಆಟೋ ಬಂದ್ : ಅನಧೀಕೃತ ಬೈಕ್ ಟ್ಯಾಕ್ಸಿ ಸೇವೆ ನಿಲ್ಲಿಸುವಂತೆ ಒತ್ತಾಯ #PRATIDHVANI
ಇದೀಗ

ಆಟೋ ಬಂದ್ : ಅನಧೀಕೃತ ಬೈಕ್ ಟ್ಯಾಕ್ಸಿ ಸೇವೆ ನಿಲ್ಲಿಸುವಂತೆ ಒತ್ತಾಯ #PRATIDHVANI

by ಪ್ರತಿಧ್ವನಿ
March 20, 2023
ಸ್ವಾಮೀಜಿಗಳು ಮಾತಾಡಿದ್ರು ಸಾಧಕಿಗೆ ಅವಕಾಶ ಇಲ್ಲ: ಉಡುತಡಿ ಸಂರಕ್ಷಕಿ ಲೀಲಾದೇವಿ ಗದ್ಗದಿತ : Uduthadi Sansakshi Leeladevi
ಇದೀಗ

ಸ್ವಾಮೀಜಿಗಳು ಮಾತಾಡಿದ್ರು ಸಾಧಕಿಗೆ ಅವಕಾಶ ಇಲ್ಲ: ಉಡುತಡಿ ಸಂರಕ್ಷಕಿ ಲೀಲಾದೇವಿ ಗದ್ಗದಿತ : Uduthadi Sansakshi Leeladevi

by ಪ್ರತಿಧ್ವನಿ
March 18, 2023
HD KUMARASWAMY | ಸಿದ್ದರಾಮಯ್ಯ ಅವರ ಶಕ್ತಿ ಕುಂದಿದೆ ಎಂಬುದಕ್ಕೆ ಅವರು ಕ್ಷೇತ್ರ ಹುಟುಕಾಟವೆ ಸಾಕ್ಷಿ..!
ಇದೀಗ

HD KUMARASWAMY | ಸಿದ್ದರಾಮಯ್ಯ ಅವರ ಶಕ್ತಿ ಕುಂದಿದೆ ಎಂಬುದಕ್ಕೆ ಅವರು ಕ್ಷೇತ್ರ ಹುಟುಕಾಟವೆ ಸಾಕ್ಷಿ..!

by ಪ್ರತಿಧ್ವನಿ
March 18, 2023
ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ : ಸಿದ್ದರಾಮಯ್ಯ
Top Story

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ : ಸಿದ್ದರಾಮಯ್ಯ

by ಪ್ರತಿಧ್ವನಿ
March 23, 2023
₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು : Bidar police seized 14 bikes worth ₹7.20 lakh
Top Story

₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು : Bidar police seized 14 bikes worth ₹7.20 lakh

by ಪ್ರತಿಧ್ವನಿ
March 20, 2023
Next Post
ಜೀವ ವೈವಿಧ್ಯತೆಗೆ ಮಾರಕವಾದ ಕೃತಕ ಅರಣ್ಯದ ಅಗತ್ಯವಿದೆಯೇ?

ಜೀವ ವೈವಿಧ್ಯತೆಗೆ ಮಾರಕವಾದ ಕೃತಕ ಅರಣ್ಯದ ಅಗತ್ಯವಿದೆಯೇ?

ಕೇಸರಿ vs ಕೆಂಪು: ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಪೊಲೀಸ್ ಅನುಮತಿ ನಿರಾಕರಣೆ

ಕೇಸರಿ vs ಕೆಂಪು: ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಪೊಲೀಸ್ ಅನುಮತಿ ನಿರಾಕರಣೆ

ಬಿಜೆಪಿ ಸರ್ಕಾರ ಇದ್ದರೂ ಅಸ್ಸಾಂ ಭೇಟಿಗೆ ಮೋದಿ‌ ಬೆದರುತ್ತಿರುವುದೇಕೆ?

ಬಿಜೆಪಿ ಸರ್ಕಾರ ಇದ್ದರೂ ಅಸ್ಸಾಂ ಭೇಟಿಗೆ ಮೋದಿ‌ ಬೆದರುತ್ತಿರುವುದೇಕೆ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist