• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನೆರೆ ಪರಿಹಾರಕ್ಕೆ ಕನ್ನ: ಆರು ಸರ್ಕಾರಿ ಅಧಿಕಾರಿಗಳು ಅಮಾನತು 

by
February 29, 2020
in ಕರ್ನಾಟಕ
0
ನೆರೆ ಪರಿಹಾರಕ್ಕೆ ಕನ್ನ: ಆರು ಸರ್ಕಾರಿ ಅಧಿಕಾರಿಗಳು ಅಮಾನತು 
Share on WhatsAppShare on FacebookShare on Telegram

ಹಾವೇರಿಯಲ್ಲಿ ನೆರೆಯಲ್ಲಿ ಕೊಚ್ಚಿ ಹೋಗಿದ್ದ ಬೆಳೆಗಳಿಗೆ ಪರಿಹಾರ ವಿತರಿಸುವ ಸಂದರ್ಭದಲ್ಲಿ ಭಾರೀ ಅವ್ಯವಹಾರ ಎಸಗಿದ್ದ ಅಧಿಕಾರಿಗಳ ವಿರುದ್ದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗಿದೆ. ನೆರೆಯಿಂದ ನೊಂದ ರೈತರ ಸಂಕಷ್ಟಗಳನ್ನು ಪರಿಹರಿಸಬೇಕಿದ್ದ ಸರ್ಕಾರಿ ಅಧಿಕಾರಿಗಳು, ರೈತರ ನೋವಿನ ಮೇಲೆ ಬರೆ ಎಳೆದಂತೆ, ನೆರೆ ಪರಿಹಾರದ ಹಣವನ್ನು ಲಪಟಾಯಿಸಿದ ಕುರಿತು ಪ್ರತಿಧ್ವನಿ ವಿಸ್ತೃತವಾದ ವರದಿ ದಾಖಲಿಸಿತ್ತು.

ADVERTISEMENT

ಈಗ ಅವ್ಯವಹಾರ ಎಸಗಿರುವ ಆರೋಪದ ಮೇಲೆ ಆರು ಜನ ಗ್ರಾಮ ಲೆಕ್ಕಾಧಿಕಾರಿಗಳನ್ನು ಸೇವೆಯಿಂದ ವಜಾ ಮಾಡಲಾಗಿದೆ. ಈ ಕುರಿತಾಗಿ ಪ್ರತಿಧ್ವನಿಗೆ ಮಾಹಿತಿ ನೀಡಿರುವ ಹಾವೇರಿ ಜಿಲ್ಲೆಯ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ತಂತ್ರಾಂಶದಲ್ಲಿನ ಲೋಪದೋಷಗಳನ್ನು ಅರಿತು ಬೇಕಾಬಿಟ್ಟಿಯಾಗಿ ಹಣ ವರ್ಗಾವಣೆ ಮಾಡಿರುವವರ ವಿರುದ್ದ ಕ್ರಿಮಿನಲ್‌ ಕೇಸು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಹಾವೇರಿ ತಾಲೂಕಿನ ದೇವಗಿರಿ ಗ್ರಾಮ ಪಂಚಾಯತ್‌ ಗ್ರಾಮ ಲೆಕ್ಕಾಧಿಕಾರಿ ಆನಂದ ದೇಸಾಯಿ, ಕರ್ಜಗಿ ಗ್ರಾಮ ಲೆಕ್ಕಾಧಿಕಾರಿ ಎಸ್‌ ಎ ಲಿಂಗದಹಳ್ಳಿ, ಶಿಗ್ಗಾಂವ್‌ ತಾಲೂಕಿನ ಅತ್ತಿಗೆರೆ ಗ್ರಾಮ ಪಂಚಾಯತ್‌ನ ಗ್ರಾಮ ಲೆಕ್ಕಾಧಿಕಾರಿ ಅಕ್ಷಯ್‌ ಪಾಟೀಲ್‌, ಆಂಡಳಗಿ ಗ್ರಾಮ ಲೆಕ್ಕಾಧಿಕಾರಿ ಸಿ ಡಿ ಮಳಲಿ, ಕಬ್ಬನೂರು ಗ್ರಾಮ ಲೆಕ್ಕಾಧಿಕಾರಿ ಸಿದ್ದರಾಮ್‌ ಇಂದೂರು ಹಾಗೂ ಬನ್ನೂರು ಗ್ರಾಮ ಲೆಕ್ಕಾಧಿಕಾರಿ ಎಚರೇಶ್‌ ಹಿರೇಸಕ್ರಿಗೌಡ ಅಮಾನತುಗೊಂಡ ಅಧಿಕಾರಿಗಳು. ಇವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ.

ಇನ್ನು ಈ ಅವ್ಯವಹಾರದ ಕುರಿತು ತನಿಖೆಯನ್ನು ಕೈಗೊಳ್ಳಲು ಪ್ರತೀ ತಾಲೂಕಿಗೆ ವಿಚಾರಣಾಧಿಕಾರಿಯನ್ನು ನೇಮಿಸಲಾಗಿದೆ. ಅವರಿಗೆ ಪರಿಹಾರ ವಿತರಿಸುವ ತಂತ್ರಾಂಶದ ಕುರಿತು ತರಭೇತಿಯನ್ನು ನೀಡಲಾಗುತ್ತಿದ್ದು, ಈ ಅವ್ಯವಹಾರದ ಕುರಿತ ಸಮಗ್ರ ತನಿಖೆಯನ್ನು ಅವರು ನಡೆಸಿ ವರದಿ ನೀಡಲಿದ್ದಾರೆ, ಎಂದು ಕೃಷ್ಣ ತಿಳಿಸಿದರು.

“ಉನ್ನತ ಶಿಕ್ಷಣ ಪಡೆದು ಸರ್ಕಾರಿ ಅಧಿಕಾರಿಗಳಾಗಿ ನೇಮಕಗೊಳ್ಳುವವರು, ತಂತ್ರಾಂಶದಲ್ಲಿನ ಲೋಪದೋಷಗಳ ಕುರಿತು ಚೆನ್ನಾಗಿ ಅರಿತಿರುತ್ತಾರೆ. ಅಂಥಹವರಿಂದ ಈ ರೀತಿಯ White Collar Crime ನಡೆದಿದೆ,” ಎಂದು ಕೃಷ್ಣ ಬಾಜಪೇಯಿ ಅಭಿಪ್ರಾಯಪಟ್ಟಿದ್ದಾರೆ.

ಈ ಅವ್ಯವಹಾರದ ಕುರಿತು ಇನ್ನಷ್ಟು ಮಾಹಿತಿಗಳು ತಿಳಿದು ಬಂದಿದ್ದು, ಭೂಮಿಯ ಮೂಲ ದಾಖಲೆ ಹೊಂದಿರುವ ವ್ಯಕ್ತಿ ಮೃತಪಟ್ಟಲ್ಲಿ, ಅವರ ಮಗ ಅಥವಾ ಮಗಳಿಗೆ ಸೇರಬೇಕಾದ ಹಣವನ್ನು ಕೂಡಾ ಈ ಅಧುಕಾರಿಗಳು ಲಪಟಾಯಿಸಿದ್ದಾರೆ. ಇನ್ನು ಈ ಅವ್ಯವಹಾರದಲ್ಲಿ ಹಲವು ಬ್ರೋಕರ್‌ಗಳು ಕೂಡಾ ಪಾಲು ಹೊಂದಿದ್ದು, ರೈತರ ಹೆಸರಿನಲ್ಲಿ ಹಣ ಪಡೆದು ನಂತರ ಹಣವನ್ನು ತಮ್ಮ ಖಾತೆಗೆ ನೇರವಾಗಿ ವರ್ಗಾಯಿಸಿದ್ದಾರೆ. ಈಗಾಗಲೇ ಲಕ್ಷಗಟ್ಟಲೆ ಹಣವನ್ನು ನುಂಗಿ ನೀರು ಕುಡಿದಿರುವ ಅಧಿಕಾರಿಗಳಿಂದ ಸುಮಾರು 60 ಲಕ್ಷದಷ್ಟು ಹಣವನ್ನು ವಾಪಸು ಪಡೆಯಲಾಗಿದ್ದು, ತಂತ್ರಾಂಶದಲ್ಲಿನ ಅಂಕಿ ಸಂಖ್ಯೆಗಳನ್ನು ಕೂಲಂಕುಶವಾಗಿ ಪರಿಶೀಲಿಸಿದ ಬಳಿಕ ಲಪಟಾಯಿಸಲಾದ ಮೊತ್ತದ ನಿಖರ ಮಾಹಿತಿ ತಿಳಿಯಲಿದೆ.

ಏನೇ ಆದರೂ, ಬಡ ರೈತರ ಸಂಕಷ್ಟಕ್ಕೆ ಸರ್ಕಾರ ನೀಡಿದ ಹಣವನ್ನು ಈ ರೀತಿ ನುಂಗಿ ನೀರು ಕುಡಿದ ಅಧಿಕಾರಿಗಳಿಗೆ ಕಠಿಣ ಸಜೆಯಾಗಬೇಕು. ಇವರ ಮೇಲೆ ಜರುಗಿಸುವ ಕ್ರಮ ಉಳಿದ ಅಧಿಕಾರಿಗಳಿಗೆ ಒಂದು ಉದಾಹರಣೆಯಾಗಿರಬೇಕು. ರೈತರ ಹೆಸರಿನಲ್ಲಿ ರಾಜಕೀಯ ಮಾಡುವುದು ಮಾತ್ರವಲ್ಲದೇ, ರೈತರ ಕಷ್ಟಗಳಿಗೆ ರಾಜಕಾರಣಿಗಳು ನೆರವಾಗಬೇಕಿದೆ.

Tags: DC Krishna BajapaiFlood ComepnsationHaveri DistrictVillage accountantನೆರೆ ಪರಿಹಾರಸರ್ಕಾರಿ ಅಧಿಕಾರಿಹಾವೇರಿ
Previous Post

ಮಹಿಳಾ ಕ್ರಿಕೆಟ್ ಮನ್ವಂತರಕ್ಕೆ ಕಾರಣವಾಗಲಿ ನಾರೀಮಣಿಯರ ಪ್ರದರ್ಶನ

Next Post

ದೆಹಲಿಯಲ್ಲಿ ಮನುಷ್ಯತ್ವ ಮರೆತು ದಾನವರಾದ ಮತಾಂಧರು

Related Posts

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು
ಇದೀಗ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

by ಪ್ರತಿಧ್ವನಿ
December 11, 2025
0

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್‌ ನೀಡಿದೆ. ಇಂದು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ...

Read moreDetails
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

December 11, 2025
Next Post
ದೆಹಲಿಯಲ್ಲಿ ಮನುಷ್ಯತ್ವ ಮರೆತು ದಾನವರಾದ ಮತಾಂಧರು

ದೆಹಲಿಯಲ್ಲಿ ಮನುಷ್ಯತ್ವ ಮರೆತು ದಾನವರಾದ ಮತಾಂಧರು

Please login to join discussion

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada