• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪಶ್ಚಿಮ ಬಂಗಾಳ: ಆದಿವಾಸಿಗಳನ್ನು ಓಲೈಸಲು ಹೋಗಿ ಮುಜುಗರಕ್ಕೀಡಾದ ಅಮಿತ್ ಶಾ

by
November 8, 2020
in ದೇಶ
0
ಪಶ್ಚಿಮ ಬಂಗಾಳ: ಆದಿವಾಸಿಗಳನ್ನು ಓಲೈಸಲು ಹೋಗಿ ಮುಜುಗರಕ್ಕೀಡಾದ ಅಮಿತ್ ಶಾ
Share on WhatsAppShare on FacebookShare on Telegram

ಕೆಲವೇ ತಿಂಗಳಲ್ಲಿ ಚುನಾವಣೆ ಎದುರು ನೋಡುತ್ತಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ಬಲವನ್ನು ವೃದ್ದಿಸಲು ಹರಸಾಹಸ ಪಡುತ್ತಿದೆ. ಒಂದರ ಮೇಲೋಂದರಂತೆ ರ್ಯಾಲಿಗಳನ್ನು ನಡೆಸುತ್ತಾ ಪಕ್ಷದ ಬಲವರ್ಧನೆಗೆ ಬಿಜೆಪಿ ನಾಯಕರು ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚಿಸುವತ್ತ ತಮ್ಮ ದೃಷ್ಟಿ ನೆಟ್ಟಿದ್ದಾರೆ.

ಕೇಂದ್ರ ಗೃಹ ಮಂತ್ರಿ ಅಮಿತ್‌ ಶಾ ಕೂಡ ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸ ಕೈಗೊಂಡು, ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಪ್ರಯತ್ನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬುಡಕಟ್ಟು ಜನಾಂಗದವರನ್ನು ಓಲೈಸುವ ಭರದಲ್ಲಿ ತಪ್ಪಾದ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುಜುಗರಕ್ಕೀಡಾಗಿದ್ದಾರೆ. ಇದರೊಂದಿಗೆ ಬುಡಕಟ್ಟು ಜನಾಂಗದವರ ಕೆಂಗಣ್ಣಿಗೂ ಗುರಿಯಾಗಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಅಷ್ಟಕ್ಕೂ ಆಗಿದ್ದೇನೆಂದರೆ, ಪಶ್ಚಿಮ ಬಂಗಾಳದ ಬಂಕುರ ಜಿಲ್ಲೆಯಲ್ಲಿರುವ ಆದಿವಾಸಿಗಳ ನಾಯಕ ಭಗವಾನ್‌ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಅಮಿತ್‌ ಶಾ ಅವರು ಮಾಲಾರ್ಪಣೆ ಮಾಡಿದ್ದಾರೆ. ಮಾಲಾರ್ಪಣೆ ಮಾಡಿದ ನಂತರ ತಿಳಿದು ಬಂದದ್ದೇನೆಂದರೆ, ಅದು ಬಿರ್ಸಾ ಮುಂಡಾ ಅವರ ಪ್ರತಿಮೆಯಲ್ಲ ಬದಲಾಗಿ, ಒಬ್ಬ ಬುಡಕಟ್ಟು ಬೇಡೆಗಾರನನ್ನು ಹೋಲುವ ಪ್ರತಿಮೆ ಎಂದು. ಈ ಪ್ರಮಾದವನ್ನು ಮರೆಮಾಚಲು ಬಿಜೆಪಿಯ ಸ್ಥಳಿಯ ನಾಯಕರು, ಕೂಡಲೇ ಪ್ರತಿಮೆಯ ಕೆಳಗೆ ಬಿರ್ಸಾ ಮುಂಡಾ ಅವರ ಭಾವಚಿತ್ರವನ್ನು ತಂದು ಇಟ್ಟಿದ್ದಾರೆ.

Paid floral tributes to legendary tribal leader Bhagwan Birsa Munda ji in Bankura, West Bengal today.

Birsa Munda ji’s life was dedicated towards the rights and upliftment of our tribal sisters & brothers. His courage, struggles and sacrifices continue to inspire all of us. pic.twitter.com/1PYgKiyDuY

— Amit Shah (@AmitShah) November 5, 2020


ಇದರಿಂದ ಕುಪಿತರಾದ ಬುಡಕಟ್ಟು ಜನಾಂಗದ ಸದಸ್ಯರು, ಇದು ಬಿರ್ಸಾ ಮುಂಡಾ ಅವರಿಗೆ ಮಾಡಿರುವ ಅವಮಾನ ಎಂದು ಜರೆದಿದ್ದಾರೆ. ಆದಿವಾಸಿ ಜನಾಂಗದ ಪ್ರಮುಖ ಸಂಘಟನೆ ಭಾರತ್‌ ಜಕಾತ್‌ ಮಾಝಿ ಪರ್ಗಣಾ ಮಹಲ್‌ ಈ ಘಟನೆಯ ಕುರಿತಾಗಿ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದೆ.

ಅಮಿತ್‌ ಶಾ ಅವರು ತಪ್ಪಾದ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಗವಾನ್‌ ಬಿರ್ಸಾ ಮುಂಡಾ ಅವರಿಗೆ ಪುಷ್ಪಾರ್ಚನೆ ಮಾಡಿರುವುದಾಗಿ ತಮ್ಮ ಟ್ವಿಟರ್‌ ಖಾತೆಯಲ್ಲಿಯೂ ಬರೆದುಕೊಂಡಿದ್ದರು. ಈ ವಿಚಾರವನ್ನು ತೃಣಮೂಲ ಕಾಂಗ್ರೆಸ್‌ ತನ್ನ ಪ್ರಚಾರಕ್ಕೆ ಬಳಸಿಕೊಂಡಿದೆ.

'Bohiragato' are at it again!

Union Home Minister @AmitShah is so ignorant of Bengal's culture that he insulted Bhagwan Birsa Munda by garlanding a wrong idol & placed his photo at someone else's foot. Will he ever respect Bengal?#BengalAsksAmitShahhttps://t.co/045lw50TV2

— All India Trinamool Congress (@AITCofficial) November 6, 2020


ADVERTISEMENT

ಅಮಿತ್‌ ಶಾ ನಮ್ಮವರಲ್ಲ ಹೊರಗಿನವರು, ಎಂದು ತನ್ನ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದೆ. “Bohiragato (ಹೊರಗಿನವರು)… ಮತ್ತೆ ಬಂದಿದ್ದಾರೆ. ಯಾರದೋ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಯಾರದೋ ಕಾಲ ಕೆಳಗಡೆ ಭಗವಾನ್‌ ಬಿರ್ಸಾ ಮುಂಡಾ ಅವರ ಫೋಟೋ ಇಟ್ಟು ಅಪಮಾನಿಸಿರುವ ವ್ಯಕ್ತಿ, ಬಂಗಾಳಕ್ಕೆ ಗೌರವ ಕೊಡುವರೇ?” ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ, ಅಮಿತ್‌ ಶಾ ಅವರ ಬುಡಕಟ್ಟು ಜನಾಂಗದವರನ್ನು ಓಲೈಸಲು ಹೋಗಿ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಈ ನಡುವೆ ಬಿಜೆಪಿಯನ್ನು ಪ್ರತೀ ಹೆಜ್ಜೆಗೂ ಗಮನಿಸುತ್ತಿರುವ ತೃಣಮೂಲ ಕಾಂಗ್ರೆಸ್‌ ಬಿಜೆಪಿ ನಾಯಕರ ಯಾವುದೇ ತಪ್ಪನ್ನು ಕೂಡಾ ತಮ್ಮ ಪ್ರಚಾರಕ್ಕೆ ಬಳಸಿಕೊಳ್ಳುವುದನ್ನು ಬಿಟ್ಟು ಕೊಡುತ್ತಿಲ್ಲ.

Tags: Amit Shahಅಮಿತ್ ಶಾಪಶ್ಚಿಮ ಬಂಗಾಳ
Previous Post

ಕಾಂಗ್ರೆಸ್ ಸೇರಲಿರುವ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್

Next Post

ಕೇರಳ: ಖೈದಿಗಳ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ರೂ. 20 ಲಕ್ಷ ಮೀಸಲು

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ಕೇರಳ: ಖೈದಿಗಳ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ರೂ. 20 ಲಕ್ಷ ಮೀಸಲು

ಕೇರಳ: ಖೈದಿಗಳ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ರೂ. 20 ಲಕ್ಷ ಮೀಸಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada