• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪಶ್ಚಿಮ ಬಂಗಾಳ: ಬಿಜೆಪಿಯಿಂದ ಪೊಲೀಸ್‌ ಠಾಣೆಗಳಿಗೆ ಘೆರಾವ್‌

by
November 2, 2020
in ದೇಶ
0
ಪಶ್ಚಿಮ ಬಂಗಾಳ: ಬಿಜೆಪಿಯಿಂದ ಪೊಲೀಸ್‌ ಠಾಣೆಗಳಿಗೆ ಘೆರಾವ್‌
Share on WhatsAppShare on FacebookShare on Telegram

ಪಶ್ಚಿಮ ಬಂಗಾಳದಲ್ಲಿ ನಡೆದ ʼರಾಜಕೀಯʼ ಕೊಲೆಯನ್ನು ಖಂಡಿಸಿ ಬಿಜೆಪಿಯಿಂದ ಪೋಲಿಸ್‌ ಠಾಣೆಗೆ ಮುತ್ತಿಗೆ ಹಾಕುವ ಆಂದೋಲನ ಆಯೋಜಿಸಲಾಗಿತ್ತು. ನವೆಂಬರ್‌ 1ರಂದು ಸಾವಿಗೀಡಾದ ಬಿಜೋಯ್‌ ಸಿಲ್‌ ಎಂಬ ವ್ಯಕ್ತಿ ಬಿಜೆಪಿ ಕಾರ್ಯಕರ್ತನಾಗಿದ್ದು, ಅವನನ್ನು ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರು ಕೊಂದುಹಾಕಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ADVERTISEMENT

ಈ ಸಾವಿನ ಪ್ರಕರಣ ಹೊರಬೀಳುತ್ತಿದ್ದಂತೆಯೇ, ಟಿಎಂಸಿ ಪಕ್ಷದ ವಿರುದ್ದ ಕಿಡಿಕಾರಿರುವ ಬಿಜೆಪಿ ನಾಯಕರು, ಆಡಳಿತದಲ್ಲಿರುವ ತೃಣಮೂಲ ಕಾಂಗ್ರೆಸ್‌ ಅನ್ನು ಬಿಟ್ಟು ಬಿಜೆಪಿ ಸೇರಿದ ಕಾರಣಕ್ಕೆ ಈ ರೀತಿ ಹತ್ಯೆಗೈಯಲಾಗಿದೆ ಎಂದು ಹೇಳಿದ್ದಾರೆ. ನವೆಂಬರ್‌ 2ರಂದು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ 12 ಗಂಟೆಗಳ ಬಂದ್‌ಗೂ ಬಿಜೆಪಿ ಕರೆ ನೀಡಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಿಜೆಪಿಯ ಎಲ್ಲಾ ಆರೋಪಗಳನ್ನು ಟಿಎಂಸಿ ನಾಯಕರು ತಿರಸ್ಕರಿಸಿದ್ದರು. ಸಾವನ್ನಪ್ಪಿರುವ ವ್ಯಕ್ತಿಗೂ ಅವನ ಕುಟುಂಬಕ್ಕೂ ಯಾವುದೇ ರಾಜಕೀಯ ಹಿನ್ನೆಲೆ ಇರಲಿಲ್ಲ. ಈ ವಿಚಾರವನ್ನು ಬಿಜೋಯ್‌ ಕುಟುಂಬವೇ ದೃಢಪಡಿಸಿದೆ, ಎಂದು ಟಿಎಂಸಿ ಅಧಿಕೃತ ಹೇಳಿಕೆ ನೀಡಿದೆ.

ಈ ಸಮಜಾಯಿಷಿಯನ್ನು ಕೇಳಲು ಒಪ್ಪದ ಬಿಜೆಪಿ ಕಾರ್ಯಕರ್ತರು, ಸೋಮವಾರದಂದು, ಸೋನಾರ್‌ಪುರ್‌, ಅಸಾಂಸೋಲ್‌, ಹಬ್ರಾ, ಹೌರಾ, ಬಿಡ್ಡಾ ನಗರ್‌ ಮುಂತಾದ ಕಡೆಗಳಲ್ಲಿ ಪೊಲೀಸ್‌ ಠಾಣೆಗಳಿಗೆ ಮುತ್ತಿಗೆ ಹಾಕಿದ್ದಾರೆ. ಹೌರಾದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಜೆಪಿಯ ಸೌಮಿತ್ರಾ ಖಾನ್‌ ದುರ್ಗಾ ಪೂಜೆಯ ನಂತರ ಬಿಜೆಪಿಯ ಆರು ಜನ ಕಾರ್ಯಕರ್ತರು ಕೊಲೆಗೀಡಾಗಿದ್ದಾರೆ. ಈ ಎಲ್ಲಾ ಸಾವುಗಳು ರಾಜಕೀಯ ಪ್ರೇರಿತ ಕೊಲೆಗಳು ಎಂದು ಆರೋಪಿಸಿದ್ದಾರೆ.

ನವೆಂಬರ್‌ 5 ಮತ್ತು 6ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ರಾಜಕೀಯ ಕೊಲೆಗಳನ್ನು ಪ್ರಚಾರದ ಪ್ರಮುಖ ಅಸ್ತ್ರವಾಗಿ ಬಳಸಿಕೊಳ್ಳಲು ಬಿಜೆಪಿಯು ವೇದಿಕೆ ಸಿದ್ದಪಡಿಸುತ್ತಿದೆ.

ಬಿಜೆಪಿ ಕಾರ್ಯಕರ್ತರು ಪೊಲೀಸ್‌ ಠಾಣೆಗಳಿಗೆ ಘೆರಾವ್‌ ಹಾಕುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ 2020ರ ಜುಲೈ 15ರಂದು ಹೇಮತಾಬಾದ್‌ನಲ್ಲಿ ಬಿಜೆಪಿ ಶಾಸಕ ದೇಬೇಂದ್ರ ನಾಥ್‌ ರಾಯ್‌ ಹತ್ಯೆಯಾದಾಗ ಸುಮಾರು 50 ಪೊಲೀಸ್‌ ಠಾಣೆಗಳಿಗೆ ಮುತ್ತಿಗೆ ಹಾಕಲಾಗಿತ್ತು.

Tags: BJPWest Bengal
Previous Post

ಮಾಸ್ಕ್‌ ಬಳಕೆಗೆ ಕಾನೂನು ರೂಪಿಸಿದ ರಾಜಸ್ಥಾನ

Next Post

ಕರೋನಾ ಸಂಕಷ್ಟ: ಅಂಬಾನಿಗೆ 5 ಶತಕೋಟಿ ಡಾಲರ್‌ ನಷ್ಟ

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ಕರೋನಾ ಸಂಕಷ್ಟ: ಅಂಬಾನಿಗೆ 5 ಶತಕೋಟಿ ಡಾಲರ್‌ ನಷ್ಟ

ಕರೋನಾ ಸಂಕಷ್ಟ: ಅಂಬಾನಿಗೆ 5 ಶತಕೋಟಿ ಡಾಲರ್‌ ನಷ್ಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada