Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಪೌರತ್ವ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಟಿಎಂಸಿ

ಪೌರತ್ವ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಟಿಎಂಸಿ
ಪೌರತ್ವ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಟಿಎಂಸಿ

December 13, 2019
Share on FacebookShare on Twitter

ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಅವರು ಸುಪ್ರೀಂ ಕೋರ್ಟಿಗೆ ಹೋಗಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಬಿರುಗಾಳಿಯಾಗಿರುವ ರಾಹುಲ್ ಗಾಂಧಿ ಸುನಾಮಿ ಆಗುಬಲ್ಲರೆ?

ಯಾರಾದರೂ ಒಳಗೆ ಬಂದರೆ ಅಟ್ಟಾಡಿಸಿ ಹೊಡಿರಿ, ಮಿಕ್ಕಿದ್ದು ನಾನು ನೋಡಿಕೊಳ್ಳುತ್ತೇನೆ’ : ಸಚಿವ ಮುನಿರತ್ನ ವಿವಾದಾತ್ಮಕ ಹೇಳಿಕೆ

ನಂದಿನಿ ಮೊಸರು ಪ್ಯಾಕೆಟ್‌ ಮೇಲೆ ‘ದಹಿ’ ಮುದ್ರಣ ಆದೇಶ ಹಿಂಪಡೆದ FSSAI.. ಕನ್ನಡಿಗರು ಟೀಕೆ ಬೆನ್ನಲ್ಲೇ ನಿರ್ಧಾರ..!

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದಿರುವ ಮುಸ್ಲಿಂಯೇತರ ಸಮುದಾಯಕ್ಕೆ ಪೌರತ್ವ ನೀಡುವ ದುರುದ್ದೇಶದಿಂದ ಈ ಕಾಯ್ದೆಯನ್ನು ತಿದ್ದುಪಡಿ ಮಾಡಿ ಜಾರಿಗೆ ತರಲು ಹೊರಟಿದೆ ಎಂದು ಅವರು ದೂರಿದ್ದಾರೆ.

ಶುಕ್ರವಾರ ಈ ಸಂಬಂಧ ಅರ್ಜಿ ಸಲ್ಲಿಸಿರುವ ಮಹುವಾ ಮೊಯಿತ್ರಾ ಪರ ವಕೀಲರು ತುರ್ತಾಗಿ ಈ ಅರ್ಜಿಯ ವಿಚಾರಣೆ ನಡೆಸಬೇಕೆಂದು ಮುಖ್ಯನ್ಯಾಯಾಧೀಶ ಎಸ್.ಎ.ಬೋಬ್ಡೆ ನೇತೃತ್ವದ ಪೀಠಕ್ಕೆ ಮನವಿ ಮಾಡಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗುತ್ತಿದ್ದಂತೆಯೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಿದ್ದುಪಡಿ ಮಸೂದೆಗೆ ಅಂಕಿತ ಹಾಕಿದ್ದಾರೆ. 2014 ರ ಡಿಸೆಂಬರ್ 31 ಕ್ಕೆ ಮುನ್ನ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದ ಹಿಂದೂಗಳು, ಬೌದ್ಧರು, ಸಿಖ್ಖರು, ಪಾರ್ಸಿಗಳು, ಜೈನರು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವ ಕೊಟ್ಟು ಅವರಿಗೆ ಭಾರತೀಯರಿಗೆ ಸಿಗುತ್ತಿರುವ ಸವಲತ್ತುಗಳನ್ನು ನೀಡಲು ಈ ಕಾಯ್ದೆ ಅವಕಾಶ ಕಲ್ಪಿಸಿಕೊಡುತ್ತದೆ. ಈ ಪೌರತ್ವ ಸಿಕ್ಕ ತಕ್ಷಣ ಇವರಿಗೆ ಅಕ್ರಮ ವಲಸಿಗರು ಎಂಬ ಹಣೆಪಟ್ಟಿ ಅಳಿಸಿ ಹೋಗಲಿದೆ.

ಮತ್ತೊಂದೆಡೆ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಕೇಂದ್ರ ಸರ್ಕಾರ ಈ ಪೌರತ್ವ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಸಂವಿಧಾನ ನೀಡಿರುವ ಸಮಾನತೆಯ ಮೂಲಭೂತ ಹಕ್ಕನ್ನು ಉಲ್ಲಂಘಿಸಿದಂತಾಗಿದೆ. ಅಲ್ಲದೇ ಧರ್ಮದ ಆಧಾರದಲ್ಲಿ ಅಕ್ರಮ ವಲಸಿಗರಿಗೆ ಶಾಶ್ವತ ಪೌರತ್ವ ಕೊಡುವ ಮೂಲಕ ಕೆಲವೇ ಕೆಲವು ವರ್ಗಕ್ಕೆ ಅನುಕೂಲ ಮಾಡಿಕೊಡಲು ಹೊರಟಿದೆ ಎಂದು ಆರೋಪಿಸಿ ನ್ಯಾಯಾಲಯದ ಮೆಟ್ಟಿಲೇರಿದೆ.

ದೇಶದಲ್ಲಿ ಕೇವಲ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಮಾತ್ರ ಪೌರತ್ವ ನೀಡಿ ಮುಸ್ಲಿಂ ಸಮುದಾಯವನ್ನು ಕಡೆಗಣಿಸಲಾಗಿದೆ. ಈ ಮೂಲಕ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ತಳೆದಿದೆ ಎಂದು ಐಯುಎಂಎಲ್ ಸಲ್ಲಿಸಿರುವ ಅರ್ಜಿಯಲ್ಲಿ ಆರೋಪಿಸಿದೆ.

ವಲಸಿಗರಿಗೆ ಪೌರತ್ವ ನೀಡುವ ವಿಚಾರದಲ್ಲಿ ನಮ್ಮದೇನೂ ತಕರಾರಿಲ್ಲ. ಆದರೆ, ಸರ್ಕಾರ ಧರ್ಮದ ಆಧಾರದಲ್ಲಿ ಸಮುದಾಯಗಳನ್ನು ಒಡೆಯುತ್ತಿರುವ ಮತ್ತು ತಾರತಮ್ಯ ಮಾಡುತ್ತಿರುವ ಕ್ರಮ ಸರಿಯಿಲ್ಲ ಎಂಬ ಆಕ್ಷೇಪ ನಮ್ಮದಾಗಿದೆ ಎಂದು ಅರ್ಜಿಯಲ್ಲಿ ಅಲವತ್ತುಕೊಳ್ಳಲಾಗಿದೆ.

ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದಿಂದ ಹಲವಾರು ದಶಕಗಳ ಹಿಂದೆಯೇ ವಲಸೆ ಬಂದು ಭಾರತದ ಅಂಗದಂತಿರುವ ಅಹ್ಮದೀಯರು, ಶಿಯಾಗಳು ಮತ್ತು ಹಜಾರಾಗಳನ್ನು ಈ ತಿದ್ದುಪಡಿ ಕಾಯ್ದೆಯಿಂದ ಹೊರಗಿಟ್ಟಿರುವ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಸ್ಪಷ್ಟನೆ ನೀಡಿಲ್ಲ. ನೆರೆ ರಾಷ್ಟ್ರಗಳಿಂದ ವಲಸೆ ಬಂದಿರುವವರನ್ನು ಆಯ್ಕೆ ಮಾಡುವ ವಿಚಾರದಲ್ಲಿ ಸರ್ಕಾರ ಯಾವುದೇ ನೀತಿ–ತತ್ತ್ವಗಳನ್ನು ಪಾಲಿಸುತ್ತಿಲ್ಲ. ಶ್ರೀಲಂಕಾ, ಮ್ಯಾನ್ಮಾರ್, ನೇಪಾಳ ಮತ್ತು ಭೂತಾನ್ ದೇಶಗಳಿಂದಲೂ ವಲಸೆ ಬಂದಿರುವ ಧಾರ್ಮಿಕ ಅಲ್ಪಸಂಖ್ಯಾತರಿಗೆ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆಯೂ ಯಾವುದೇ ಪ್ರಸ್ತಾಪ ಮಾಡಿಲ್ಲ. ಇದು ಸರ್ಕಾರ ಧಾರ್ಮಿಕ ತಾರತಮ್ಯ ಮಾಡುತ್ತಿರುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ ಎಂಬುದು ಐಯುಎಂಎಲ್ ನ ಆರೋಪ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಮತ್ತೊಂದು ಆಘಾತ : ಎ.ಬಿ ಮಾಲಕರೆಡ್ಡಿ ಇಂದು ಕಾಂಗ್ರೆಸ್​ ಸೇರ್ಪಡೆ
Top Story

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಮತ್ತೊಂದು ಆಘಾತ : ಎ.ಬಿ ಮಾಲಕರೆಡ್ಡಿ ಇಂದು ಕಾಂಗ್ರೆಸ್​ ಸೇರ್ಪಡೆ

by ಮಂಜುನಾಥ ಬಿ
April 1, 2023
IPL ಉದ್ಘಾಟನಾ ಸಮಾರಂಭದಲ್ಲಿ ಸ್ಟಾರ್‌ ನಟಿಯರ ಭರ್ಜರಿ ಡ್ಯಾನ್ಸ್..!‌
ಸಿನಿಮಾ

IPL ಉದ್ಘಾಟನಾ ಸಮಾರಂಭದಲ್ಲಿ ಸ್ಟಾರ್‌ ನಟಿಯರ ಭರ್ಜರಿ ಡ್ಯಾನ್ಸ್..!‌

by ಪ್ರತಿಧ್ವನಿ
April 1, 2023
ಲಕ್ಷ್ಮೀ ಪೆಂಡೆಂಟ್‌ ನೆಕ್ಲೆಸ್‌ ಧರಿಸಿದ್ದ ಬಾಲಿವುಡ್‌ ನಟಿ ಮೇಲೆ ಎಫ್‌ಐಆರ್‌..!
ಸಿನಿಮಾ

ಲಕ್ಷ್ಮೀ ಪೆಂಡೆಂಟ್‌ ನೆಕ್ಲೆಸ್‌ ಧರಿಸಿದ್ದ ಬಾಲಿವುಡ್‌ ನಟಿ ಮೇಲೆ ಎಫ್‌ಐಆರ್‌..!

by ಪ್ರತಿಧ್ವನಿ
March 29, 2023
ಮಾರ್ಚ್‌ 30ಕ್ಕೆ ʻಗುರುದೇವ್‌ ಹೊಯ್ಸಳʼ ಅದ್ಧೂರಿ ಬಿಡುಗಡೆ
ಸಿನಿಮಾ

ಮಾರ್ಚ್‌ 30ಕ್ಕೆ ʻಗುರುದೇವ್‌ ಹೊಯ್ಸಳʼ ಅದ್ಧೂರಿ ಬಿಡುಗಡೆ

by Prathidhvani
March 27, 2023
YADIYURAPPA ; ವರುಣ ಯಿಂದ ವಿಜಯೇಂದ್ರ ಕಣಕ್ಕೆ | ಯಡಿಯೂರಪ್ಪ ಬಾಯಿಂದ ಬಂದ ಸತ್ಯ | VARUNA | VIJAYENDRA | SIDDU
ಇದೀಗ

YADIYURAPPA ; ವರುಣ ಯಿಂದ ವಿಜಯೇಂದ್ರ ಕಣಕ್ಕೆ | ಯಡಿಯೂರಪ್ಪ ಬಾಯಿಂದ ಬಂದ ಸತ್ಯ | VARUNA | VIJAYENDRA | SIDDU

by ಪ್ರತಿಧ್ವನಿ
March 31, 2023
Next Post
ಮಹಿಳಾ ರಕ್ಷಣೆಯಲ್ಲಿ ನ್ಯಾಯ ವ್ಯವಸ್ಥೆ ಜಾಗೃತಿ ಅಗತ್ಯ

ಮಹಿಳಾ ರಕ್ಷಣೆಯಲ್ಲಿ ನ್ಯಾಯ ವ್ಯವಸ್ಥೆ ಜಾಗೃತಿ ಅಗತ್ಯ

ಚಿಲ್ಲರೆ ಹಣದುಬ್ಬರ ಗರಿಷ್ಠ ಮಟ್ಟಕ್ಕೆ ಜಿಗಿತ; ಕೈಗಾರಿಕಾ ಉತ್ಪನ್ನ ಕುಸಿತ

ಚಿಲ್ಲರೆ ಹಣದುಬ್ಬರ ಗರಿಷ್ಠ ಮಟ್ಟಕ್ಕೆ ಜಿಗಿತ; ಕೈಗಾರಿಕಾ ಉತ್ಪನ್ನ ಕುಸಿತ

ಉಜ್ವಲಾ ಎಲ್.ಪಿ.ಜಿ ಸಂಪರ್ಕದಲ್ಲಿ ಭಾರೀ ಅವ್ಯವಹಾರ!

ಉಜ್ವಲಾ ಎಲ್.ಪಿ.ಜಿ ಸಂಪರ್ಕದಲ್ಲಿ ಭಾರೀ ಅವ್ಯವಹಾರ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist