Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಪೌರತ್ವ ವಿಚಾರದಲ್ಲಿ ಸರ್ಕಾರಕ್ಕೆ ಮುಖಭಂಗ! ವಿಪಕ್ಷಗಳಿಗೆ ಸಿಕ್ಕಿದೆ ಬ್ರಹ್ಮಾಸ್ತ್ರ!

ಪೌರತ್ವ ವಿಚಾರದಲ್ಲಿ ಸರ್ಕಾರಕ್ಕೆ ಮುಖಭಂಗ! ವಿಪಕ್ಷಗಳಿಗೆ ಸಿಕ್ಕಿದೆ ಬ್ರಹ್ಮಾಸ್ತ್ರ!
ಪೌರತ್ವ ವಿಚಾರದಲ್ಲಿ ಸರ್ಕಾರಕ್ಕೆ ಮುಖಭಂಗ! ವಿಪಕ್ಷಗಳಿಗೆ ಸಿಕ್ಕಿದೆ ಬ್ರಹ್ಮಾಸ್ತ್ರ!

February 20, 2020
Share on FacebookShare on Twitter

ದೇಶದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಾಪಸ್‌ ಪಡೆಯಬೇಕು ಎಂಬ ಬಗ್ಗೆ ಆಗ್ರಹ ಕೇಳಿಬಂದಿದೆ. ಪ್ರಧಾನಿ ನರೇಂದ್ರ ಮೋದಿ ಮಾತ್ರ ಪೌರತ್ವ ತಿದ್ದುಪಡಿ ಕಾಯ್ದೆ ವಾಪಸ್‌ ಪಡೆಯುವ ಮಾತೇ ಇಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. ಈ ನಡುವೆ ಪ್ರತಿಭಟನಾಕಾರರ ವಿರುದ್ಧ ಸರ್ಕಾರ ಕೈಗೊಂಡಿರುವ ಕೆಲಸಗಳ ಬಗ್ಗೆ ಕೋರ್ಟ್‌ನಲ್ಲಿ ಸರ್ಕಾರಗಳಿಗೆ ಹಿನ್ನಡೆ ಆಗುತ್ತಿದೆ. ಕರ್ನಾಟಕದಲ್ಲೂ ಬಿಜೆಪಿ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ಪರೋಕ್ಷ ಚಾಟಿ ಬೀಸಿದೆ. ಮಂಗಳೂರು ಗಲಭೆ ಪ್ರಕರಣದಲ್ಲಿ ಬಂಧನವಾಗಿದ್ದವರಿಗೆ ಜಾಮೀನು ಮಂಜೂರಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಕನ್ನಡಿಗರ ಆದ್ಯತೆಗಳೂ ಕರ್ನಾಟಕದ ಮುನ್ನಡೆಯೂ.. 2023ರ ಚುನಾವಣೆಗಳು ಸಮೀಪಿಸುತ್ತಿರುವಂತೆ ಭರವಸೆಗಳ ಮಹಾಪೂರವೇ ಹರಿದುಬರುತ್ತಿದೆ..!

ಜೆಡಿಎಸ್ ಪರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪ್ರಚಾರ..!

ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02

ಜನವರಿ 19ರಂದು ಪ್ರತಿಭಟನೆಗೆ ಮುಂದಾಗುತ್ತಿದ್ದ ಹಾಗೆ ರಾಜ್ಯಾದ್ಯಂರ ೧೪೪ ಸೆಕ್ಷನ್ ಜಾರಿ ಮಾಡಿದ್ದು ತಪ್ಪು ಎಂದು ಈ ಹಿಂದೆ ಹೈಕೋರ್ಟ್‌ ಆದೇಶ ಮಾಡಿತ್ತು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧ ಮಾಡಿದ ಕಾರಣಕ್ಕೆ ದೇಶದ್ರೋಹಿಗಳು ಎಂದು ಪಟ್ಟ ಕಟ್ಟುವುದು ಸರಿಯಲ್ಲ ಎಂದು ಬಾಂಬೆ ಹೈಕೋರ್ಟ್‌ ಆದೇಶ ಮಾಡಿತ್ತು. ದೆಹಲಿಯ ಶಾಹಿನ್‌ಭಾಗ್‌ನಲ್ಲಿ ಹೋರಾಟಗಾರರು ಪ್ರತಿಭಟನೆ ಮಾಡುವುದನ್ನು ತಡೆಯುವುದು ಸರಿಯಲ್ಲ. ಹೋರಾಟ ಜನರ ಮೂಲಭೂತ ಹಕ್ಕು. ಬೇಕಿದ್ದರೆ ಬೇರೆ ಸ್ಥಳವನ್ನು ಗುರುತು ಮಾಡಿ ಎಂದು ದೆಹಲಿ ಹಾಗು ಕೇಂದ್ರ ಸರ್ಕಾರಕ್ಕೆ ದೆಹಲಿ ಕೋರ್ಟ್‌ ಸೂಚನೆ ಕೊಟ್ಟಿತ್ತು. ಇದೀಗ ಮಂಗಳೂರಲ್ಲಿ ಬಂಧನಕ್ಕೆ ಒಳಗಾಗಿದ್ದ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದು ವಿರೋಧ ಪಕ್ಷಗಳಿಗೆ ಬ್ರಹ್ಮಾಸ್ತ್ರ ಸಿಕ್ಕಂತಾಗಿದೆ.

ಹೈಕೋರ್ಟ್‌ ಆದೇಶದಲ್ಲಿ ಉಲ್ಲೇಖ ಮಾಡಿರುವ ಅಂಶಗಳು ಸರ್ಕಾರಕ್ಕೆ ಮುಜುಗರ ಆಗುವಂತೆ ಮಾಡಿದೆ. ಸ್ಪೆಷಲ್‌ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಸಲ್ಲಿಕೆ ಮಾಡಿರುವ ಫೋಟೋಗಳಲ್ಲಿ ಯಾರೊಬ್ಬರೂ ಕಲ್ಲು ತೂರಾಟ ಮಾಡಿರುವುದು ಪತ್ತೆಯಾಗಿಲ್ಲ. ಓರ್ವ ವ್ಯಕ್ತಿ ಮಾತ್ರ ಬಾಟೆಲ್‌ ಹಿಡಿದು ನಿಂತಿದ್ದಾರೆ. ಅದರಲ್ಲೂ ಪೊಲೀಸ್‌ ಠಾಣೆ ಸುತ್ತಮುತ್ತಲ ಪ್ರದೇಶದಲ್ಲಿ ಕಲ್ಲು ತೂರಾಟ ಅಥವಾ ಶಸ್ತ್ರಾಸ್ತ್ರ ಹಿಡಿದಿರುವುದು ಪತ್ತೆಯಾಗಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದೆ. ಜೊತೆಗೆ ಅರ್ಜಿದಾರರು ಸಲ್ಲಿಕೆ ಮಾಡಿರುವ ಫೋಟೋಗಳಲ್ಲಿ ಪೊಲೀಸರೇ ಕಲ್ಲು ತೂರಾಟ ಮಾಡುತ್ತಿರುವುದು ಪತ್ತೆಯಾಗಿದೆ. ತನಿಖೆಯಲ್ಲಿ ಮೇಲ್ನೋಟಕ್ಕೆ ಪಕ್ಷಪಾತ ಆಗಿರುವುದು ಕಾಣಿಸುತ್ತಿದೆ ಎಂದಿರುವ ಹೈಕೋರ್ಟ್‌, ಮಂಗಳೂರು ಪೊಲೀಸರು ಬಂಧಿಸಿದ್ದ 22 ಮಂದಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಹೈಕೋರ್ಟ್‌ ವ್ಯಕ್ತಪಡಿಸಿರುವ ಅಂಶಗಳು ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ ಸಿಕ್ಕಂತಾಗಿದೆ. ಸರ್ಕಾರದ ವಿರುದ್ಧ ಗುಡುಗಿರುವ ವಿರೋಧ ಪಕ್ಷಗಳು, ಪೊಲೀಸ್ ಆಯುಕ್ತರು ಯಾರ ಅನುಮತಿ ಮೇಲೆ 144 ಸೆಕ್ಷನ್‌ ಆದೇಶ ಮಾಡಿದ್ರು ಹೈಕೋರ್ಟ್‌ ಪ್ರತಿಭಟನಾಕಾರರ ಬಳಿ ಏನೂ ಇಲ್ಲ ಎಂದಿದೆ. ಹಾಗಾದರೆ ಅವರು ಅಮಾಯಕರಲ್ಲವೇ..? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕೋರ್ಟ್ ಆದೇಶದಲ್ಲಿ ಬಹಳ ಸ್ಪಷ್ಟವಾಗಿ ತಿಳಿಸಿದೆ. ಪ್ರತಿಭಟನಾಕಾರರ ಬಳಿ ಯಾವುದೇ ಆರ್ಮ್ ವೆಪನ್ಸ್ ಇರಲಿಲ್ಲ. ಅವರ ಬಳಿ ಕಲ್ಲುಗಳೂ ಇರಲಿಲ್ಲ, ಯಾರೋ ಒಬ್ಬನ ಬಳಿ ಬಾಟೆಲ್ ಇತ್ತು, ಪೊಲೀಸರೇ ಕಲ್ಲನ್ನ ಎಸೆಯುತ್ತಿದ್ದರು ಎಂದು ಸ್ಪಷ್ಟಪಡಿಸಿದೆ.

ಸಮರ್ಥನೆ ಮಾಡಿಕೊಳ್ಳಲು ಪರದಾಡಿದ ಕಾನೂನು ಸಚಿವ ಮಾಧುಸ್ವಾಮಿ, ಎಫ್‌ಐಆರ್ ಮೇಲೆ ಹೈಕೋರ್ಟ್ ಆದೇಶ ಮಾಡಿದೆ. ನಾವಿನ್ನೂ ಚಾರ್ಜ್ ಶೀಟ್ ಹಾಕಿಲ್ಲ. ಈಗಲೇ ಕೋರ್ಟ್ ಹೇಳಿದೆ ಅಂತ ಚರ್ಚಿಸೋಕೆ ಆಗಲ್ಲ ಎಂದು ಪಲಾಯನ ಮಾಡಿದ್ದಾರೆ. ಆಗಿದ್ದರೆ ಹೈಕೋರ್ಟ್ ಆದೇಶದಲ್ಲೇ ಲೋಪ ಎನ್ನುತ್ತೀರಾ ಎಂದು ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿ ನಿಮ್ಮ ಅಡ್ವೋಕೇಟ್ ಸರಿಯಾಗಿ ವಾದ ಮಾಡಿಲ್ಲ. ಕಾನೂನು ಇಲಾಖೆ ವೈಫಲ್ಯ ಎನ್ನುತ್ತೀರಾ..? ಎಂದು ಕಿಚಾಯಿಸಿದ್ದಾರೆ. ಒಟ್ಟಾರೆ ಬುಧವಾರದ ಅಧಿವೇಶನದಲ್ಲಿ ಮತ್ತಷ್ಟು ಗಲಭೆ ಗದ್ದಲ ನಡೆಯುವುದು ಬಾಕಿ ಇದೆ. ಸರ್ಕಾರ ತೆಗೆದುಕೊಂಡ ನಿರ್ಧಾರ ತಪ್ಪು, ಪಕ್ಷಪಾತ ಮಾಡಿದ್ದಾರೆ ಎನಿಸುತ್ತಿದೆ ಎಂದಿರುವ ಹೈಕೋರ್ಟ್‌ ಹೇಳಿಕೆ ಸರ್ಕಾರವನ್ನು ಮುಜುಗರಕ್ಕೆ ಈಡು ಮಾಡಿರೋದಂತು ಸತ್ಯ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಶಿವಮೊಗ್ಗದಿಂದ ವಿಮಾನದಲ್ಲಿ ಪ್ರಯಾಣಿಸುವವರಿಗೆ ಸರ್ಕಾರದಿಂದ ಸಿಗಲಿದೆ ಸಬ್ಸಿಡಿ
Top Story

ಶಿವಮೊಗ್ಗದಿಂದ ವಿಮಾನದಲ್ಲಿ ಪ್ರಯಾಣಿಸುವವರಿಗೆ ಸರ್ಕಾರದಿಂದ ಸಿಗಲಿದೆ ಸಬ್ಸಿಡಿ

by ಮಂಜುನಾಥ ಬಿ
March 24, 2023
ಕಾಂಗ್ರೆಸ್​ ನಾಯಕಿಗೆ ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ : ಮಾನನಷ್ಟ ಮೊಕದ್ದಮೆ ಹೂಡುತ್ತೇನೆಂದ ರೇಣುಕಾ ಚೌಧರಿ
Top Story

ಕಾಂಗ್ರೆಸ್​ ನಾಯಕಿಗೆ ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ : ಮಾನನಷ್ಟ ಮೊಕದ್ದಮೆ ಹೂಡುತ್ತೇನೆಂದ ರೇಣುಕಾ ಚೌಧರಿ

by ಮಂಜುನಾಥ ಬಿ
March 24, 2023
ಕಲೆ-ಸಾಹಿತ್ಯ-ಮನುಜ ಸಂವೇದನೆ ಮತ್ತು ಪ್ರಜಾಪ್ರಭುತ್ವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಪೋಷಿಸಿ ಬೆಳೆಸಬೇಕಾದ ಜವಾಬ್ದಾರಿ ಸಾಹಿತ್ಯಕ-ಸಾಂಸ್ಕೃತಿಕ ಸಂಸ್ಥೆಗಳ ಮೇಲಿದೆ
Top Story

ಕಲೆ-ಸಾಹಿತ್ಯ-ಮನುಜ ಸಂವೇದನೆ ಮತ್ತು ಪ್ರಜಾಪ್ರಭುತ್ವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಪೋಷಿಸಿ ಬೆಳೆಸಬೇಕಾದ ಜವಾಬ್ದಾರಿ ಸಾಹಿತ್ಯಕ-ಸಾಂಸ್ಕೃತಿಕ ಸಂಸ್ಥೆಗಳ ಮೇಲಿದೆ

by ನಾ ದಿವಾಕರ
March 23, 2023
ಹಿಂದುತ್ವ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ನಟ ಚೇತನ್​ ಅಂಹಿಸಾ ಬಂಧನ
ಇದೀಗ

ಹಿಂದುತ್ವ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ನಟ ಚೇತನ್​ ಅಂಹಿಸಾ ಬಂಧನ

by ಮಂಜುನಾಥ ಬಿ
March 21, 2023
ಕರ್ನಾಟಕದ ಬಿಜೆಪಿಯಲ್ಲಿ ಬ್ರಾಹ್ಮಣರ ಆಟಾಟೋಪ : ಮೂಲೆಗುಂಪಾದ ಲಿಂಗಾಯತರು : B.S.YEDIYURAPPA v/s B.L SANTHOSH
ಇದೀಗ

ಕರ್ನಾಟಕದ ಬಿಜೆಪಿಯಲ್ಲಿ ಬ್ರಾಹ್ಮಣರ ಆಟಾಟೋಪ : ಮೂಲೆಗುಂಪಾದ ಲಿಂಗಾಯತರು : B.S.YEDIYURAPPA v/s B.L SANTHOSH

by ಪ್ರತಿಧ್ವನಿ
March 18, 2023
Next Post
ಮೂರು ಗಂಟೆಗೆ ನೂರು ಕೋಟಿ

ಮೂರು ಗಂಟೆಗೆ ನೂರು ಕೋಟಿ, ಟ್ರಂಪ್‌ಗೆ ಅಹಮದಾಬಾದ್‌ನಲ್ಲಿ ದುಬಾರಿ ಸ್ವಾಗತ

ಜಾಮಿಯ ಲಾಠಿ ಚಾರ್ಜ್‌ನಲ್ಲಿ  ಕಣ್ಣು ಕಳೆದುಕೊಂಡ ವಿದ್ಯಾರ್ಥಿ ಸಿದ್ದ ಪಡಿಸಿದ ಪ್ರಬಂಧಕ್ಕೆ ಅವಾರ್ಡ್‌

ಜಾಮಿಯ ಲಾಠಿ ಚಾರ್ಜ್‌ನಲ್ಲಿ  ಕಣ್ಣು ಕಳೆದುಕೊಂಡ ವಿದ್ಯಾರ್ಥಿ ಸಿದ್ದ ಪಡಿಸಿದ ಪ್ರಬಂಧಕ್ಕೆ ಅವಾರ್ಡ್‌

ದಿನೇಶ್ ಗುಂಡೂರಾವ್-ಸೋನಿಯಾ ಗಾಂಧಿ ಭೇಟಿ ಹಿಂದಿನ ಮರ್ಮವೇನು?

ದಿನೇಶ್ ಗುಂಡೂರಾವ್-ಸೋನಿಯಾ ಗಾಂಧಿ ಭೇಟಿ ಹಿಂದಿನ ಮರ್ಮವೇನು?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist