• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪೌರತ್ವ ವಿರುದ್ಧದ ಪ್ರತಿಭಟನೆ ಸುದ್ದಿ ಹಾಕದಂತೆ ಕೇಂದ್ರ ತಾಕೀತು!

by
December 12, 2019
in ದೇಶ
0
ಪೌರತ್ವ ವಿರುದ್ಧದ ಪ್ರತಿಭಟನೆ ಸುದ್ದಿ ಹಾಕದಂತೆ ಕೇಂದ್ರ ತಾಕೀತು!
Share on WhatsAppShare on FacebookShare on Telegram

ದೇಶದ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ಸುದ್ದಿಗಳನ್ನು ಬಿತ್ತರ ಮಾಡಿದರೆ ಹುಷಾರ್ ಎಂಬ ಅರ್ಥದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ವಾರ್ತಾ ಮತ್ತು ಪ್ರಸಾರ ಇಲಾಖೆ ಮೂಲಕ ಮಾಧ್ಯಮ ಸಂಸ್ಥೆಗಳು ಅದರಲ್ಲೂ ದೃಶ್ಯ ಮಾಧ್ಯಮ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರ ಮಾಧ್ಯಮಗಳ ಹಕ್ಕನ್ನು ಕಸಿಯುವ ಯತ್ನ ನಡೆಸುತ್ತಿದೆ.

ADVERTISEMENT

ನೆರೆಯ ಮುಸ್ಲಿಂ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದು ಭಾರತದಲ್ಲಿ ನೆಲೆಸಿರುವ ಹಿಂದೂಗಳು, ಪಾರ್ಸಿಗಳು, ಬೌದ್ಧರು, ಜೈನರು, ಕ್ರಿಶ್ಚಿಯನ್ನರು ಮತ್ತು ಸಿಖ್ಖರಿಗೆ ಭಾರತೀಯ ಪೌರತ್ವವನ್ನು ಕಲ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ 2019 ನ್ನು ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕರಿಸಿಕೊಂಡಿದೆ.

ಇದನ್ನು ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ಹಿಂಸಾಚಾರ ಭುಗಿಲೆದ್ದಿದೆ. ಪ್ರತಿಭಟನೆ ನಡೆಯುತ್ತಿರುವ ಸುದ್ದಿಗಳನ್ನು ದೃಶ್ಯ ಮಾಧ್ಯಮಗಳು ಬಿತ್ತರ ಮಾಡುವ ಮೂಲಕ ಮಸೂದೆ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ ಮಾಡುತ್ತಿವೆ. ಆದರೆ, ಸುದ್ದಿಯನ್ನೇ ಬಿತ್ತರ ಮಾಡಬಾರದು ಎಂದು ಸರ್ಕಾರ ಖಾಸಗಿ ದೃಶ್ಯ ಮಾಧ್ಯಮಗಳ ಮೇಲೆ ಸವಾರಿ ಮಾಡಲು ಹೊರಟಿದೆ.

ಇಂತಹ ಪ್ರತಿಭಟನೆಗಳನ್ನು ಕೇಂದ್ರ ಸರ್ಕಾರ ದೇಶದ್ರೋಹದ ವರ್ತನೆ ಎಂದು ಜರಿದಿದ್ದು, ಈ ಬಗ್ಗೆ ಖಾಸಗಿ ಮಾಧ್ಯಮಗಳಿಗೆ ನೊಟೀಸ್ ಅನ್ನು ಕಳುಹಿಸಿರುವ ವಾರ್ತಾ ಮತ್ತು ಪ್ರಚಾರ ಇಲಾಖೆ ಎಚ್ಚರಿಕೆಯನ್ನೂ ನೀಡಿದೆ. ದೇಶದ್ರೋಹದ ವರ್ತನೆಯನ್ನು ತೋರುವ ಅಥವಾ ಅದಕ್ಕೆ ಕುಮ್ಮಕ್ಕು ನೀಡುವಂತಹ ಸುದ್ದಿಗಳನ್ನು ಪ್ರಕಟಿಸಬಾರದು ಅಥವಾ ಬಿತ್ತರಿಸಬಾರದು ಎಂದು ತಾಕೀತು ಮಾಡಿದೆ.

ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಯಾವುದೇ ಹಿಂಸಾಚಾರದಂತಹ ಪ್ರಕರಣಗಳನ್ನು ಟಿವಿಗಳಲ್ಲಿ ತೋರಿಸಬಾರದು. ಈ ನೊಟೀಸ್ ಅನ್ನು ಪ್ರಮುಖವಾಗಿ ಅಸ್ಸಾಂನ ಖಾಸಗಿ ಸುದ್ದಿವಾಹಿನಿಗಳಿಗೆ ನೀಡಲಾಗಿದ್ದು, ಪೌರತ್ವ ತಿದ್ದುಪಡಿ ಕಾಯ್ದೆಗೆ ರಾಜ್ಯ ವಿರೋಧಿಸುತ್ತಿದೆ ಎಂಬ ಸುದ್ದಿಗಳನ್ನು ಬಿತ್ತರ ಮಾಡಬಾರದು ಎಂದು ವಾರ್ತಾ ಇಲಾಖೆ ತಿಳಿಸಿದೆ.

ವಾರ್ತಾ ಮತ್ತು ಪ್ರಸಾರ ಇಲಾಖೆ `ದೇಶದ್ರೋಹ’ವೆಂಬ ಬೆದರುಬೊಂಬೆಯನ್ನು ತೋರಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಪುಲ್ವಾಮ ದಾಳಿ ಮತ್ತು ಅಯೋಧ್ಯೆ ಕುರಿತು ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ನಂತರ ಪ್ರತಿಭಟನೆಗಳ ವರದಿಯನ್ನು ಪ್ರಸಾರ ಮಾಡಬಾರದು. ಇವುಗಳು ದೇಶದ್ರೋಹದ ವರ್ತನೆಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದರು.

ನಾಗರಿಕರು ಹಿಂಸಾಚಾರದಂತಹ ದೃಶ್ಯಗಳನ್ನು ನೋಡಲು ಬಯಸುವುದಿಲ್ಲ. ಈ ಕಾರಣದಿಂದ ಹಿಂಸಾಚಾರದ ದೃಶ್ಯಗಳನ್ನು ಪ್ರಸಾರ ಮಾಡಬಾರದು ಎಂದು ಎಚ್ಚರಿಕೆ ನೀಡಿದೆ.

ಇದಲ್ಲದೇ, ಹಿಂಸಾಚಾರದಂತಹ ದೃಶ್ಯಗಳನ್ನು ಪ್ರಸಾರ ಮಾಡಿದರೆ ಹಿಂಸಾಚಾರಕ್ಕೆ ಪ್ರಚೋದನೆ ಉಂಟು ಮಾಡಿದಂತಾಗಿ ಕಾನೂನು ಸುವ್ಯವಸ್ಥೆ ಹದಗೆಡಲು ಕಾರಣವಾಗುತ್ತದೆ ಎಂದು ನೊಟೀಸ್ ನಲ್ಲಿ ತಿಳಿಸಲಾಗಿದೆ.

ಬಾಂಗ್ಲಾ ವಿದೇಶಾಂಗ ಮಂತ್ರಿ ಪ್ರವಾಸ ಕ್ಯಾನ್ಸೆಲ್

ಇನ್ನೊಂದೆಡೆ, ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರವಾಗುತ್ತಿದ್ದಂತೆಯೇ ಬಾಂಗ್ಲಾದೇಶದ ವಿದೇಶಾಂಗ ಮಂತ್ರಿ ಎ.ಕೆ.ಅಬ್ದುಲ್ ಮೊಮೆನ್ ಭಾರತ ಭೇಟಿಯನ್ನು ರದ್ದು ಮಾಡಿದ್ದಾರೆ. ಅವರು ಗುರುವಾರ ಪೂರ್ವನಿಯೋಜಿತ ಕಾರ್ಯಕ್ರಮದಂತೆ ಭಾರತಕ್ಕೆ ಬರಬೇಕಿತ್ತು.

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎಂಬ ಗೃಹ ಮಂತ್ರಿ ಅಮಿತ್ ಶಾ ಅವರ ಆರೋಪಗಳನ್ನು ತಳ್ಳಿ ಹಾಕಿರುವ ಮೊಮೆನ್, ಇದೊಂದು ಶುದ್ಧ ಸುಳ್ಳು ಆರೋಪ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಿಗೆ ಯಾವುದೇ ರೀತಿಯ ದೌರ್ಜನ್ಯಗಳು ನಡೆಯುತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Tags: Amendment Bill PassAmit ShahBangladeshCitizenship Amendment BillHinduLokSabhaNarendra ModiRajyasabhaTelevision Mediaಅಮಿತ್ ಶಾತಿದ್ದಪಡಿ ಮಸೂದೆ ಕಾಯ್ದೆ ಅಂಗೀಕಾರದೃಶ್ಯ ಮಾಧ್ಯಮನರೇಂದ್ರ ಮೋದಿಪೌರತ್ವ ಕಾಯ್ದೆ ತಿದ್ದುಪಡಿ ಮಸೂದೆಬಾಂಗ್ಲಾದೇಶರಾಜ್ಯಸಭೆಲೋಕಸಭೆಹಿಂದೂಗಳು
Previous Post

ಮಲ್ಟಿಪ್ಲೆಕ್ಸ್ ನಲ್ಲಿ ಆಹಾರ ನಿಷೇಧದ ಕಾನೂನೇ ಇಲ್ಲ!

Next Post

ಸಿಎಲ್‌ಪಿ ಬೇಡ, ಕೆಪಿಸಿಸಿ ಇರಲಿ ಎನ್ನುತ್ತಿದ್ದಾರೆ ಕಾಂಗ್ರೆಸ್ ನಾಯಕರು

Related Posts

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
0

ಪಶ್ಚಿಮ ಬಂಗಾಳ: ಭಾರತೀಯ ರೈಲ್ವೆ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ಇಂದು ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತದ...

Read moreDetails
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

January 16, 2026
Next Post
ಸಿಎಲ್‌ಪಿ ಬೇಡ

ಸಿಎಲ್‌ಪಿ ಬೇಡ, ಕೆಪಿಸಿಸಿ ಇರಲಿ ಎನ್ನುತ್ತಿದ್ದಾರೆ ಕಾಂಗ್ರೆಸ್ ನಾಯಕರು

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada