• Home
  • About Us
  • ಕರ್ನಾಟಕ
Wednesday, January 21, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪೌರತ್ವ ವಿರುದ್ಧದ ಪ್ರತಿಭಟನೆ ಸುದ್ದಿ ಹಾಕದಂತೆ ಕೇಂದ್ರ ತಾಕೀತು!

by
December 12, 2019
in ದೇಶ
0
ಪೌರತ್ವ ವಿರುದ್ಧದ ಪ್ರತಿಭಟನೆ ಸುದ್ದಿ ಹಾಕದಂತೆ ಕೇಂದ್ರ ತಾಕೀತು!
Share on WhatsAppShare on FacebookShare on Telegram

ದೇಶದ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ಸುದ್ದಿಗಳನ್ನು ಬಿತ್ತರ ಮಾಡಿದರೆ ಹುಷಾರ್ ಎಂಬ ಅರ್ಥದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ವಾರ್ತಾ ಮತ್ತು ಪ್ರಸಾರ ಇಲಾಖೆ ಮೂಲಕ ಮಾಧ್ಯಮ ಸಂಸ್ಥೆಗಳು ಅದರಲ್ಲೂ ದೃಶ್ಯ ಮಾಧ್ಯಮ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರ ಮಾಧ್ಯಮಗಳ ಹಕ್ಕನ್ನು ಕಸಿಯುವ ಯತ್ನ ನಡೆಸುತ್ತಿದೆ.

ADVERTISEMENT

ನೆರೆಯ ಮುಸ್ಲಿಂ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದು ಭಾರತದಲ್ಲಿ ನೆಲೆಸಿರುವ ಹಿಂದೂಗಳು, ಪಾರ್ಸಿಗಳು, ಬೌದ್ಧರು, ಜೈನರು, ಕ್ರಿಶ್ಚಿಯನ್ನರು ಮತ್ತು ಸಿಖ್ಖರಿಗೆ ಭಾರತೀಯ ಪೌರತ್ವವನ್ನು ಕಲ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ 2019 ನ್ನು ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕರಿಸಿಕೊಂಡಿದೆ.

ಇದನ್ನು ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ಹಿಂಸಾಚಾರ ಭುಗಿಲೆದ್ದಿದೆ. ಪ್ರತಿಭಟನೆ ನಡೆಯುತ್ತಿರುವ ಸುದ್ದಿಗಳನ್ನು ದೃಶ್ಯ ಮಾಧ್ಯಮಗಳು ಬಿತ್ತರ ಮಾಡುವ ಮೂಲಕ ಮಸೂದೆ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ ಮಾಡುತ್ತಿವೆ. ಆದರೆ, ಸುದ್ದಿಯನ್ನೇ ಬಿತ್ತರ ಮಾಡಬಾರದು ಎಂದು ಸರ್ಕಾರ ಖಾಸಗಿ ದೃಶ್ಯ ಮಾಧ್ಯಮಗಳ ಮೇಲೆ ಸವಾರಿ ಮಾಡಲು ಹೊರಟಿದೆ.

ಇಂತಹ ಪ್ರತಿಭಟನೆಗಳನ್ನು ಕೇಂದ್ರ ಸರ್ಕಾರ ದೇಶದ್ರೋಹದ ವರ್ತನೆ ಎಂದು ಜರಿದಿದ್ದು, ಈ ಬಗ್ಗೆ ಖಾಸಗಿ ಮಾಧ್ಯಮಗಳಿಗೆ ನೊಟೀಸ್ ಅನ್ನು ಕಳುಹಿಸಿರುವ ವಾರ್ತಾ ಮತ್ತು ಪ್ರಚಾರ ಇಲಾಖೆ ಎಚ್ಚರಿಕೆಯನ್ನೂ ನೀಡಿದೆ. ದೇಶದ್ರೋಹದ ವರ್ತನೆಯನ್ನು ತೋರುವ ಅಥವಾ ಅದಕ್ಕೆ ಕುಮ್ಮಕ್ಕು ನೀಡುವಂತಹ ಸುದ್ದಿಗಳನ್ನು ಪ್ರಕಟಿಸಬಾರದು ಅಥವಾ ಬಿತ್ತರಿಸಬಾರದು ಎಂದು ತಾಕೀತು ಮಾಡಿದೆ.

ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಯಾವುದೇ ಹಿಂಸಾಚಾರದಂತಹ ಪ್ರಕರಣಗಳನ್ನು ಟಿವಿಗಳಲ್ಲಿ ತೋರಿಸಬಾರದು. ಈ ನೊಟೀಸ್ ಅನ್ನು ಪ್ರಮುಖವಾಗಿ ಅಸ್ಸಾಂನ ಖಾಸಗಿ ಸುದ್ದಿವಾಹಿನಿಗಳಿಗೆ ನೀಡಲಾಗಿದ್ದು, ಪೌರತ್ವ ತಿದ್ದುಪಡಿ ಕಾಯ್ದೆಗೆ ರಾಜ್ಯ ವಿರೋಧಿಸುತ್ತಿದೆ ಎಂಬ ಸುದ್ದಿಗಳನ್ನು ಬಿತ್ತರ ಮಾಡಬಾರದು ಎಂದು ವಾರ್ತಾ ಇಲಾಖೆ ತಿಳಿಸಿದೆ.

ವಾರ್ತಾ ಮತ್ತು ಪ್ರಸಾರ ಇಲಾಖೆ `ದೇಶದ್ರೋಹ’ವೆಂಬ ಬೆದರುಬೊಂಬೆಯನ್ನು ತೋರಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಪುಲ್ವಾಮ ದಾಳಿ ಮತ್ತು ಅಯೋಧ್ಯೆ ಕುರಿತು ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ನಂತರ ಪ್ರತಿಭಟನೆಗಳ ವರದಿಯನ್ನು ಪ್ರಸಾರ ಮಾಡಬಾರದು. ಇವುಗಳು ದೇಶದ್ರೋಹದ ವರ್ತನೆಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದರು.

ನಾಗರಿಕರು ಹಿಂಸಾಚಾರದಂತಹ ದೃಶ್ಯಗಳನ್ನು ನೋಡಲು ಬಯಸುವುದಿಲ್ಲ. ಈ ಕಾರಣದಿಂದ ಹಿಂಸಾಚಾರದ ದೃಶ್ಯಗಳನ್ನು ಪ್ರಸಾರ ಮಾಡಬಾರದು ಎಂದು ಎಚ್ಚರಿಕೆ ನೀಡಿದೆ.

ಇದಲ್ಲದೇ, ಹಿಂಸಾಚಾರದಂತಹ ದೃಶ್ಯಗಳನ್ನು ಪ್ರಸಾರ ಮಾಡಿದರೆ ಹಿಂಸಾಚಾರಕ್ಕೆ ಪ್ರಚೋದನೆ ಉಂಟು ಮಾಡಿದಂತಾಗಿ ಕಾನೂನು ಸುವ್ಯವಸ್ಥೆ ಹದಗೆಡಲು ಕಾರಣವಾಗುತ್ತದೆ ಎಂದು ನೊಟೀಸ್ ನಲ್ಲಿ ತಿಳಿಸಲಾಗಿದೆ.

ಬಾಂಗ್ಲಾ ವಿದೇಶಾಂಗ ಮಂತ್ರಿ ಪ್ರವಾಸ ಕ್ಯಾನ್ಸೆಲ್

ಇನ್ನೊಂದೆಡೆ, ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರವಾಗುತ್ತಿದ್ದಂತೆಯೇ ಬಾಂಗ್ಲಾದೇಶದ ವಿದೇಶಾಂಗ ಮಂತ್ರಿ ಎ.ಕೆ.ಅಬ್ದುಲ್ ಮೊಮೆನ್ ಭಾರತ ಭೇಟಿಯನ್ನು ರದ್ದು ಮಾಡಿದ್ದಾರೆ. ಅವರು ಗುರುವಾರ ಪೂರ್ವನಿಯೋಜಿತ ಕಾರ್ಯಕ್ರಮದಂತೆ ಭಾರತಕ್ಕೆ ಬರಬೇಕಿತ್ತು.

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎಂಬ ಗೃಹ ಮಂತ್ರಿ ಅಮಿತ್ ಶಾ ಅವರ ಆರೋಪಗಳನ್ನು ತಳ್ಳಿ ಹಾಕಿರುವ ಮೊಮೆನ್, ಇದೊಂದು ಶುದ್ಧ ಸುಳ್ಳು ಆರೋಪ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಿಗೆ ಯಾವುದೇ ರೀತಿಯ ದೌರ್ಜನ್ಯಗಳು ನಡೆಯುತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Tags: Amendment Bill PassAmit ShahBangladeshCitizenship Amendment BillHinduLokSabhaNarendra ModiRajyasabhaTelevision Mediaಅಮಿತ್ ಶಾತಿದ್ದಪಡಿ ಮಸೂದೆ ಕಾಯ್ದೆ ಅಂಗೀಕಾರದೃಶ್ಯ ಮಾಧ್ಯಮನರೇಂದ್ರ ಮೋದಿಪೌರತ್ವ ಕಾಯ್ದೆ ತಿದ್ದುಪಡಿ ಮಸೂದೆಬಾಂಗ್ಲಾದೇಶರಾಜ್ಯಸಭೆಲೋಕಸಭೆಹಿಂದೂಗಳು
Previous Post

ಮಲ್ಟಿಪ್ಲೆಕ್ಸ್ ನಲ್ಲಿ ಆಹಾರ ನಿಷೇಧದ ಕಾನೂನೇ ಇಲ್ಲ!

Next Post

ಸಿಎಲ್‌ಪಿ ಬೇಡ, ಕೆಪಿಸಿಸಿ ಇರಲಿ ಎನ್ನುತ್ತಿದ್ದಾರೆ ಕಾಂಗ್ರೆಸ್ ನಾಯಕರು

Related Posts

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!
ಇದೀಗ

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

by ಪ್ರತಿಧ್ವನಿ
January 20, 2026
0

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿಂದು ನಡೆದ ಮಹಾಸಭಾದ ಕಾರ್ಯಕಾರಿಣಿ ಸಭೆಯಲ್ಲಿ...

Read moreDetails

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
Viral Video: ವ್ಯಕ್ತಿಯ ಜೀವ ಬಲಿ ಪಡೆದ 26 ಸೆಕೆಂಡ್‌ಗಳ ರೀಲ್ಸ್‌: ಅಸಲಿಗೆ ಆಗಿದ್ದೇನು..?

Viral Video: ವ್ಯಕ್ತಿಯ ಜೀವ ಬಲಿ ಪಡೆದ 26 ಸೆಕೆಂಡ್‌ಗಳ ರೀಲ್ಸ್‌: ಅಸಲಿಗೆ ಆಗಿದ್ದೇನು..?

January 20, 2026
“ರಾಯರನ್ನು ಅಪಮಾನ ಮಾಡಿದವರು ಯಾರು ಉದ್ಧಾರ ಆದ ಇತಿಹಾಸವಿಲ್ಲಾ!”

“ರಾಯರನ್ನು ಅಪಮಾನ ಮಾಡಿದವರು ಯಾರು ಉದ್ಧಾರ ಆದ ಇತಿಹಾಸವಿಲ್ಲಾ!”

January 20, 2026
Next Post
ಸಿಎಲ್‌ಪಿ ಬೇಡ

ಸಿಎಲ್‌ಪಿ ಬೇಡ, ಕೆಪಿಸಿಸಿ ಇರಲಿ ಎನ್ನುತ್ತಿದ್ದಾರೆ ಕಾಂಗ್ರೆಸ್ ನಾಯಕರು

Please login to join discussion

Recent News

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
January 21, 2026
Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

January 21, 2026
ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada