• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ್ರಧಾನಿ ನರೇಂದ್ರ ಮೋದಿ ಭಾರತೀಯ ನಾಗರಿಕರೇ?

by
January 17, 2020
in ದೇಶ
0
ಪ್ರಧಾನಿ ನರೇಂದ್ರ ಮೋದಿ ಭಾರತೀಯ ನಾಗರಿಕರೇ?
Share on WhatsAppShare on FacebookShare on Telegram

ದೇಶಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದಾಗ್ಯೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬಲವಂತವಾಗಿ ಪೌರತ್ವ ತಿದ್ದುಪಡಿ ಕಾನೂನನ್ನು ಜಾರಿಗೆ ತರಲು ತುದಿಗಾಲ ಮೇಲೆ ನಿಂತಿದೆ. ಕೆಲವು ರಾಜ್ಯಗಳಲ್ಲಿ ಈ ಸಂಬಂಧ ಪೂರ್ವ ತಯಾರಿಯನ್ನೂ ನಡೆಸಿದೆ.

ADVERTISEMENT

ಆದರೆ, ಬಿಜೆಪಿ ನೇತೃತ್ವದ ಸರ್ಕಾರವಿರುವ ರಾಜ್ಯಗಳನ್ನು ಹೊರತುಪಡಿಸಿ ಬಹುತೇಕ ಎಲ್ಲಾ ರಾಜ್ಯಗಳು ಈ ವಿವಾದಿತ ಸಿಎಎ ವಿರುದ್ಧ ಬಂಡೆದ್ದಿವೆ. ಹೀಗಾಗಿ ದೇಶದ ಬಹುತೇಕ ರಾಜ್ಯಗಳಲ್ಲಿ ಪ್ರತಿಭಟನೆಗಳ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಮೂಲಕ ರಾಜ್ಯ ಸರ್ಕಾರಗಳು ಕೇಂದ್ರದೊಂದಿಗೆ ಅಸಹಕಾರ ಆಂದೋಲನವನ್ನೇ ನಡೆಸುತ್ತಿವೆ.

ಸಿಎಎ ಮೂಲಕ ಬಲವಂತವಾಗಿ ದೇಶದ ನಾಗರಿಕರ ಪೌರತ್ವವನ್ನು ಪರೀಕ್ಷಿಸುವುದು ಮತ್ತು ಅವರ ದಾಖಲೆಗಳನ್ನು ಪಡೆಯಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿಯೇ ಕೇರಳದ ಆರ್ ಟಿಐ ಕಾರ್ಯಕರ್ತರೊಬ್ಬರು ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಪೌರತ್ವದ ಕುರಿತಾದ ದಾಖಲೆ ಮತ್ತು ಸಾಕ್ಷಿಯನ್ನು ಕೇಳಿದ್ದಾರೆ.

ಕೇರಳದ ತ್ರಿಶೂರಿನ ಚಲಕ್ಕುಡಿ ಪಟ್ಟಣದ ನಿವಾಸಿ ಜೋಶಿ ಕಲ್ಲುವೀಟ್ಟಿಲ್ ಎಂಬುವರು ಅಲ್ಲಿನ ಮಾಹಿತಿ ಹಕ್ಕು ಇಲಾಖೆಗೆ ಅರ್ಜಿ ಸಲ್ಲಿಸಿ ಪ್ರಧಾನಿ ನರೇಂದ್ರ ಮೋದಿಯವರ ಪೌರತ್ವಕ್ಕೆ ಸಂಬಂಧಿಸಿದ ದಾಖಲೆ ನೀಡುವಂತೆ ಮನವಿ ಮಾಡಿದ್ದಾರೆ. ಜನವರಿ 13 ರಂದು ಅವರು ಈ ಅರ್ಜಿಯನ್ನು ಸಲ್ಲಿಸುವ ಮೂಲಕ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದಾರೆ.

ದೇಶದ ನಾಗರಿಕರಿಗೆ ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿಯನ್ನು ಪಡೆಯುವ ಹಕ್ಕನ್ನು ನೀಡಲಾಗಿದೆ. ದೇಶದ ಭದ್ರತೆ ಸೇರಿದಂತೆ ಕೆಲವೊಂದು ಅತ್ಯಂತ ಸೂಕ್ಷ್ಮ ವಿಚಾರಗಳನ್ನು ಹೊರತುಪಡಿಸಿ ಯಾವುದೇ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆಯಲು ಪ್ರತಿಯೊಬ್ಬ ನಾಗರಿಕನಿಗೂ ಸ್ವಾತಂತ್ರ್ಯವಿದೆ.

ಈ ಕಾಯ್ದೆಯನ್ವಯ ಜೋಶಿ ಅರ್ಜಿ ಹಾಕಿದ್ದಾರೆ. ದೇಶದ ಪ್ರಧಾನಮಂತ್ರಿಯಾಗಿರುವ ನರೇಂದ್ರ ಮೋದಿಯವರು ದೇಶದ ನಾಗರಿಕರೋ ಅಲ್ಲವೋ ಎಂಬುದನ್ನು ದೇಶದ ಪ್ರಜೆಯಾಗಿರುವ ನಾನು ತಿಳಿದುಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅವರು ಭಾರತೀಯ ನಾಗರಿಕರಾಗಿದ್ದರೆ ಆ ಬಗ್ಗೆ ಇರುವ ಸಾಕ್ಷಿಯನ್ನು ಒದಗಿಸಬೇಕೆಂದು ಕೋರಿದ್ದಾರೆ.

ಈ ಅರ್ಜಿಯನ್ನು ಸ್ಥಳೀಯ ಮುನ್ಸಿಪಾಲಿಟಿಯ ಮಾಹಿತಿ ಹಕ್ಕು ವಿಭಾಗಕ್ಕೆ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿರುವ ಅಧಿಕಾರಿಗಳು ಮುಂದಿನ ಕ್ರಮಕ್ಕಾಗಿ ಅರ್ಜಿಯನ್ನು ಹೊಸ ದೆಹಲಿಯಲ್ಲಿರುವ ಕೇಂದ್ರೀಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ರವಾನಿಸಿದ್ದಾರೆ.

ಜೋಶಿಯವರು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಾಗಿದ್ದು, ಆರಂಭದಲ್ಲಿ ಅರ್ಜಿಯನ್ನು ಸ್ವೀಕರಿಸಲು ಸ್ಥಳೀಯ ಅಧಿಕಾರಿಗಳು ನಿರಾಕರಿಸಿದ್ದಾರೆ ಮತ್ತು ಈ ಬಗ್ಗೆ ಅಪಹಾಸ್ಯ ಮಾಡಿದ್ದಾರೆ.

ಆದರೆ, ಜೋಶಿ ಅವರು, ನಾನು ಸಾರ್ವಜನಿಕ ಹಿತದೃಷ್ಟಿಯಿಂದ ಈ ಮಾಹಿತಿಯನ್ನು ಕೇಳಿದ್ದೇನೆ. ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನರಲ್ಲಿರುವ ಆತಂಕವನ್ನು ತೊಡೆದುಹಾಕುವ ನಿಟ್ಟಿನಲ್ಲಿ ನಾನು ಅರ್ಜಿ ಸಲ್ಲಿಸಿದ್ದೇನೆ. ಪೌರತ್ವ ಸಾಬೀತುಪಡಿಸಲು ಪಾಸ್ ಪೋರ್ಟ್ ಅಥವಾ ಆಧಾರ್ ಕಾರ್ಡ್ ಸಾಕಾಗುವುದಿಲ್ಲ ಎಂಬ ಆತಂಕ ಜನಸಾಮಾನ್ಯರಲ್ಲಿ ಮನೆ ಮಾಡಿದೆ. ದೇಶದ ಪ್ರಧಾನಮಂತ್ರಿಯಾಗಿರುವವರು ಪೌರತ್ವ ಸಾಬೀತುಪಡಿಸಲು ಬೇರೆ ಯಾವುದೇ ವಿನೂತನವಾದ ದಾಖಲೆಯನ್ನು ಹೊಂದಿದ್ದಾರೆಯೇ? ಎಂಬುದರ ಬಗ್ಗೆ ನನಗೆ ಕುತೂಹಲವಿದೆ. ಇದೆಲ್ಲಕ್ಕಿಂತ ಮುಖ್ಯವಾಗಿ ಪೌರತ್ವ ಕಾಯ್ದೆ ಬಗ್ಗೆ ಜನರಲ್ಲಿರುವ ಗೊಂದಲ ನಿವಾರಣೆ ಮಾಡುವುದು ನನ್ನ ಕರ್ತವ್ಯವಾಗಿದೆ ಎಂದಿದ್ದಾರೆ.

ಜನರು ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಜನ್ಮ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಇದನ್ನು ಕಡ್ಡಾಯ ಮಾಡಲಾಗಿದೆ. ಆದರೆ, 1970 ಕ್ಕಿಂತ ಮೊದಲು ಹುಟ್ಟಿದವರು ಜನ್ಮ ಪ್ರಮಾಣ ಪತ್ರವನ್ನು ಸಲ್ಲಿಸುವುದು ಕಷ್ಟಕರವಾಗಲಿದ್ದು, ಅವರು ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಆದ್ದರಿಂದ ಇಂತಹ ಗೊಂದಲಗಳನ್ನು ಸರ್ಕಾರ ನಿವಾರಣೆ ಮಾಡಬೇಕಿದೆ ಎಂದು ಜೋಶಿ ಅಭಿಪ್ರಾಯಪಟ್ಟಿದ್ದಾರೆ.

Tags: Central Public Information OfficerIndian citizenJoshy KalluveettilNew DelhiofficialpetitionPM Modiಅಧಿಕಾರಿಅರ್ಜಿಕೇಂದ್ರೀಯ ಸಾರ್ವಜನಿಕ ಮಾಹಿತಿ ಅಧಿಕಾರಿಜೋಶಿ ಕಲ್ಲುವೀಟ್ಟಿಲ್ಪ್ರಧಾನಿ ಮೋದಿಭಾರತೀಯ ನಾಗರಿಕಹೊಸ ದೆಹಲಿ
Previous Post

ಕೋಮು ದ್ವೇಷ,  ಕ್ರೌರ್ಯವನ್ನು ಸಾಮಾನ್ಯವಾಗಿಸುತ್ತಿರುವ ಬಿಜೆಪಿಗರು!     

Next Post

CAA ಬಗ್ಗೆ  ಜನರಿಗೆ ವಿವರ ನೀಡುವಷ್ಟು ಮಾಹಿತಿ ರಾಜ್ಯ ಕಾಂಗ್ರೆಸ್ಸಿಗರಿಗಿಲ್ಲ!

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
ಶೋಬಾ ಕರಂದ್ಲಾಜೆ ಕಾರು ಡಿಕ್ಕಿಯಾಗಿ ವ್ಯಕ್ತಿ ಬಲಿಯಾಗಿರುವ ಘಟನೆ

ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

March 30, 2026
Next Post
CAA ಬಗ್ಗೆ  ಜನರಿಗೆ ವಿವರ ನೀಡುವಷ್ಟು ಮಾಹಿತಿ ರಾಜ್ಯ ಕಾಂಗ್ರೆಸ್ಸಿಗರಿಗಿಲ್ಲ!

CAA ಬಗ್ಗೆ  ಜನರಿಗೆ ವಿವರ ನೀಡುವಷ್ಟು ಮಾಹಿತಿ ರಾಜ್ಯ ಕಾಂಗ್ರೆಸ್ಸಿಗರಿಗಿಲ್ಲ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada