Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಪ್ರಧಾನಿ ನರೇಂದ್ರ ಮೋದಿ ಭಾರತೀಯ ನಾಗರಿಕರೇ?

ಪ್ರಧಾನಿ ನರೇಂದ್ರ ಮೋದಿ ಭಾರತೀಯ ನಾಗರಿಕರೇ?
ಪ್ರಧಾನಿ ನರೇಂದ್ರ ಮೋದಿ ಭಾರತೀಯ ನಾಗರಿಕರೇ?

January 17, 2020
Share on FacebookShare on Twitter

ದೇಶಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದಾಗ್ಯೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬಲವಂತವಾಗಿ ಪೌರತ್ವ ತಿದ್ದುಪಡಿ ಕಾನೂನನ್ನು ಜಾರಿಗೆ ತರಲು ತುದಿಗಾಲ ಮೇಲೆ ನಿಂತಿದೆ. ಕೆಲವು ರಾಜ್ಯಗಳಲ್ಲಿ ಈ ಸಂಬಂಧ ಪೂರ್ವ ತಯಾರಿಯನ್ನೂ ನಡೆಸಿದೆ.

ಹೆಚ್ಚು ಓದಿದ ಸ್ಟೋರಿಗಳು

ನಿಸರ್ಗದೊಡನೆ ಒಡನಾಟವಿರಲಿ ಚೆಲ್ಲಾಟ ಬೇಕಿಲ್ಲ : ನಾ ದಿವಾಕರ ಅವರ ಬರಹ ಭಾಗ – 1

ಉತ್ತರಖಾಂಡ್‌ನ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ 41 ಕಾರ್ಮಿಕರ ರಕ್ಷಣೆ ಯಶಸ್ವಿ

ಪಾಕ್ ಕಲಾವಿದರನ್ನು ನಿಷೇಧಿಸುವಷ್ಟು ಸಂಕುಚಿತ ಮನೋಭಾವ ಬೇಡ : ಅರ್ಜಿ ತಿರಸ್ಕರಿಸಿದ ಸುಪ್ರೀಂ

ಆದರೆ, ಬಿಜೆಪಿ ನೇತೃತ್ವದ ಸರ್ಕಾರವಿರುವ ರಾಜ್ಯಗಳನ್ನು ಹೊರತುಪಡಿಸಿ ಬಹುತೇಕ ಎಲ್ಲಾ ರಾಜ್ಯಗಳು ಈ ವಿವಾದಿತ ಸಿಎಎ ವಿರುದ್ಧ ಬಂಡೆದ್ದಿವೆ. ಹೀಗಾಗಿ ದೇಶದ ಬಹುತೇಕ ರಾಜ್ಯಗಳಲ್ಲಿ ಪ್ರತಿಭಟನೆಗಳ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಮೂಲಕ ರಾಜ್ಯ ಸರ್ಕಾರಗಳು ಕೇಂದ್ರದೊಂದಿಗೆ ಅಸಹಕಾರ ಆಂದೋಲನವನ್ನೇ ನಡೆಸುತ್ತಿವೆ.

ಸಿಎಎ ಮೂಲಕ ಬಲವಂತವಾಗಿ ದೇಶದ ನಾಗರಿಕರ ಪೌರತ್ವವನ್ನು ಪರೀಕ್ಷಿಸುವುದು ಮತ್ತು ಅವರ ದಾಖಲೆಗಳನ್ನು ಪಡೆಯಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿಯೇ ಕೇರಳದ ಆರ್ ಟಿಐ ಕಾರ್ಯಕರ್ತರೊಬ್ಬರು ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಪೌರತ್ವದ ಕುರಿತಾದ ದಾಖಲೆ ಮತ್ತು ಸಾಕ್ಷಿಯನ್ನು ಕೇಳಿದ್ದಾರೆ.

ಕೇರಳದ ತ್ರಿಶೂರಿನ ಚಲಕ್ಕುಡಿ ಪಟ್ಟಣದ ನಿವಾಸಿ ಜೋಶಿ ಕಲ್ಲುವೀಟ್ಟಿಲ್ ಎಂಬುವರು ಅಲ್ಲಿನ ಮಾಹಿತಿ ಹಕ್ಕು ಇಲಾಖೆಗೆ ಅರ್ಜಿ ಸಲ್ಲಿಸಿ ಪ್ರಧಾನಿ ನರೇಂದ್ರ ಮೋದಿಯವರ ಪೌರತ್ವಕ್ಕೆ ಸಂಬಂಧಿಸಿದ ದಾಖಲೆ ನೀಡುವಂತೆ ಮನವಿ ಮಾಡಿದ್ದಾರೆ. ಜನವರಿ 13 ರಂದು ಅವರು ಈ ಅರ್ಜಿಯನ್ನು ಸಲ್ಲಿಸುವ ಮೂಲಕ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದಾರೆ.

ದೇಶದ ನಾಗರಿಕರಿಗೆ ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿಯನ್ನು ಪಡೆಯುವ ಹಕ್ಕನ್ನು ನೀಡಲಾಗಿದೆ. ದೇಶದ ಭದ್ರತೆ ಸೇರಿದಂತೆ ಕೆಲವೊಂದು ಅತ್ಯಂತ ಸೂಕ್ಷ್ಮ ವಿಚಾರಗಳನ್ನು ಹೊರತುಪಡಿಸಿ ಯಾವುದೇ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆಯಲು ಪ್ರತಿಯೊಬ್ಬ ನಾಗರಿಕನಿಗೂ ಸ್ವಾತಂತ್ರ್ಯವಿದೆ.

ಈ ಕಾಯ್ದೆಯನ್ವಯ ಜೋಶಿ ಅರ್ಜಿ ಹಾಕಿದ್ದಾರೆ. ದೇಶದ ಪ್ರಧಾನಮಂತ್ರಿಯಾಗಿರುವ ನರೇಂದ್ರ ಮೋದಿಯವರು ದೇಶದ ನಾಗರಿಕರೋ ಅಲ್ಲವೋ ಎಂಬುದನ್ನು ದೇಶದ ಪ್ರಜೆಯಾಗಿರುವ ನಾನು ತಿಳಿದುಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅವರು ಭಾರತೀಯ ನಾಗರಿಕರಾಗಿದ್ದರೆ ಆ ಬಗ್ಗೆ ಇರುವ ಸಾಕ್ಷಿಯನ್ನು ಒದಗಿಸಬೇಕೆಂದು ಕೋರಿದ್ದಾರೆ.

ಈ ಅರ್ಜಿಯನ್ನು ಸ್ಥಳೀಯ ಮುನ್ಸಿಪಾಲಿಟಿಯ ಮಾಹಿತಿ ಹಕ್ಕು ವಿಭಾಗಕ್ಕೆ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿರುವ ಅಧಿಕಾರಿಗಳು ಮುಂದಿನ ಕ್ರಮಕ್ಕಾಗಿ ಅರ್ಜಿಯನ್ನು ಹೊಸ ದೆಹಲಿಯಲ್ಲಿರುವ ಕೇಂದ್ರೀಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ರವಾನಿಸಿದ್ದಾರೆ.

ಜೋಶಿಯವರು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಾಗಿದ್ದು, ಆರಂಭದಲ್ಲಿ ಅರ್ಜಿಯನ್ನು ಸ್ವೀಕರಿಸಲು ಸ್ಥಳೀಯ ಅಧಿಕಾರಿಗಳು ನಿರಾಕರಿಸಿದ್ದಾರೆ ಮತ್ತು ಈ ಬಗ್ಗೆ ಅಪಹಾಸ್ಯ ಮಾಡಿದ್ದಾರೆ.

ಆದರೆ, ಜೋಶಿ ಅವರು, ನಾನು ಸಾರ್ವಜನಿಕ ಹಿತದೃಷ್ಟಿಯಿಂದ ಈ ಮಾಹಿತಿಯನ್ನು ಕೇಳಿದ್ದೇನೆ. ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನರಲ್ಲಿರುವ ಆತಂಕವನ್ನು ತೊಡೆದುಹಾಕುವ ನಿಟ್ಟಿನಲ್ಲಿ ನಾನು ಅರ್ಜಿ ಸಲ್ಲಿಸಿದ್ದೇನೆ. ಪೌರತ್ವ ಸಾಬೀತುಪಡಿಸಲು ಪಾಸ್ ಪೋರ್ಟ್ ಅಥವಾ ಆಧಾರ್ ಕಾರ್ಡ್ ಸಾಕಾಗುವುದಿಲ್ಲ ಎಂಬ ಆತಂಕ ಜನಸಾಮಾನ್ಯರಲ್ಲಿ ಮನೆ ಮಾಡಿದೆ. ದೇಶದ ಪ್ರಧಾನಮಂತ್ರಿಯಾಗಿರುವವರು ಪೌರತ್ವ ಸಾಬೀತುಪಡಿಸಲು ಬೇರೆ ಯಾವುದೇ ವಿನೂತನವಾದ ದಾಖಲೆಯನ್ನು ಹೊಂದಿದ್ದಾರೆಯೇ? ಎಂಬುದರ ಬಗ್ಗೆ ನನಗೆ ಕುತೂಹಲವಿದೆ. ಇದೆಲ್ಲಕ್ಕಿಂತ ಮುಖ್ಯವಾಗಿ ಪೌರತ್ವ ಕಾಯ್ದೆ ಬಗ್ಗೆ ಜನರಲ್ಲಿರುವ ಗೊಂದಲ ನಿವಾರಣೆ ಮಾಡುವುದು ನನ್ನ ಕರ್ತವ್ಯವಾಗಿದೆ ಎಂದಿದ್ದಾರೆ.

ಜನರು ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಜನ್ಮ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಇದನ್ನು ಕಡ್ಡಾಯ ಮಾಡಲಾಗಿದೆ. ಆದರೆ, 1970 ಕ್ಕಿಂತ ಮೊದಲು ಹುಟ್ಟಿದವರು ಜನ್ಮ ಪ್ರಮಾಣ ಪತ್ರವನ್ನು ಸಲ್ಲಿಸುವುದು ಕಷ್ಟಕರವಾಗಲಿದ್ದು, ಅವರು ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಆದ್ದರಿಂದ ಇಂತಹ ಗೊಂದಲಗಳನ್ನು ಸರ್ಕಾರ ನಿವಾರಣೆ ಮಾಡಬೇಕಿದೆ ಎಂದು ಜೋಶಿ ಅಭಿಪ್ರಾಯಪಟ್ಟಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
6192
Next
»
loading
play
Siddaramaiah: ಗ್ಯಾರಂಟಿಗಳನ್ನ ವಿರೋಧಿಸೋ ಮಿಸ್ಟರ್ ಮೋದಿನೇ ಫ್ರೀ ಕೊಡ್ತಿನಿ ಅಂತಿಲ್ವಾ?
play
Siddaramaiah: ಗ್ಯಾರಂಟಿಗಳನ್ನ ವಿರೋಧಿಸೋ ಮಿಸ್ಟರ್ ಮೋದಿನೇ ಫ್ರೀ ಕೊಡ್ತಿನಿ ಅಂತಿಲ್ವಾ?
«
Prev
1
/
6192
Next
»
loading

don't miss it !

ವಲಸಿಗರಿಂದ ಬಿಜೆಪಿಯಲ್ಲಿ ಅಶಿಸ್ತು ಇದೆ ಎಂದು ನಾನು ಹೇಳಿಲ್ಲ; ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ
ಕರ್ನಾಟಕ

ಕಳ್ಳ ಎಂದಿಗೂ ಕಳ್ಳನೇ : ಡಿಕೆಶಿ ವಿರುದ್ಧದ ಸಿಬಿಐ ಕೇಸ್ ವಾಪಸ್ ಕುರಿತು ಈಶ್ವರಪ್ಪ ಕಿಡಿ

by Prathidhvani
November 24, 2023
ಮಹಿಷ ದಸರಾ ದಿನವೇ ಚಲೋ ಚಾಮುಂಡಿ ಕಾರ್ಯಕ್ರಮ ನಡೆಯಲಿ:ಪ್ರತಾಪ್ ಸಿಂಹ
ಕರ್ನಾಟಕ

ಲೋಕಸಭಾ ಚುನಾವಣೆ ಎಫೆಕ್ಟ್ : ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಾಯಿಸಿಕೊಂಡ ಪ್ರತಾಪ್ ಸಿಂಹ

by Prathidhvani
November 26, 2023
ಸಂವಿಧಾನ ಸಮರ್ಪಣೆಯೂ ಆಡಳಿತ ಜವಾಬ್ದಾರಿಯೂ – ನಾ ದಿವಾಕರ ಅವರ ಬರಹ
ಅಂಕಣ

ಸಂವಿಧಾನ ಸಮರ್ಪಣೆಯೂ ಆಡಳಿತ ಜವಾಬ್ದಾರಿಯೂ – ನಾ ದಿವಾಕರ ಅವರ ಬರಹ

by Prathidhvani
November 27, 2023
28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುತ್ತೇವೆ : ಹೆಚ್.ಡಿ.ಕೆ ಮತ್ತು ವಿಜಯೇಂದ್ರ
ಕರ್ನಾಟಕ

28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುತ್ತೇವೆ : ಹೆಚ್.ಡಿ.ಕೆ ಮತ್ತು ವಿಜಯೇಂದ್ರ

by Prathidhvani
November 26, 2023
ಬಿಜೆಪಿ ಪಕ್ಷ ಬಿಡೋದಕ್ಕೆ ಯತ್ನಾಳ್​​ ಮಾನಸಿಕವಾಗಿ ಸಿದ್ಧ ಆಗಿದ್ದಾರಾ..? 
ಕರ್ನಾಟಕ

ಬಿವೈ ವಿಜಯೇಂದ್ರಗೆ ನನ್ನ ಮನೆಗೆ ಬರಬೇಡ ಅಂತ ಹೇಳಿದ್ದೇನೆ : ಬಿಜೆಪಿ ಶಾಸಕ ಯತ್ನಾಳ್‌

by Prathidhvani
November 24, 2023
Next Post
CAA ಬಗ್ಗೆ  ಜನರಿಗೆ ವಿವರ ನೀಡುವಷ್ಟು ಮಾಹಿತಿ ರಾಜ್ಯ ಕಾಂಗ್ರೆಸ್ಸಿಗರಿಗಿಲ್ಲ!

CAA ಬಗ್ಗೆ  ಜನರಿಗೆ ವಿವರ ನೀಡುವಷ್ಟು ಮಾಹಿತಿ ರಾಜ್ಯ ಕಾಂಗ್ರೆಸ್ಸಿಗರಿಗಿಲ್ಲ!

ಅಸ್ಸಾಂನಲ್ಲಿ ಬಡ ಕುಟುಂಬವನ್ನು ಬಲಿಪಡೆದ ಎನ್‌ಆರ್‌ಸಿ

ಅಸ್ಸಾಂನಲ್ಲಿ ಬಡ ಕುಟುಂಬವನ್ನು ಬಲಿಪಡೆದ ಎನ್‌ಆರ್‌ಸಿ

CAA ಪರ ಅಭಿಯಾನದಲ್ಲಿ ಬಿಜೆಪಿಯ ಪಾಕಿಸ್ತಾನ ಜಪ

CAA ಪರ ಅಭಿಯಾನದಲ್ಲಿ ಬಿಜೆಪಿಯ ಪಾಕಿಸ್ತಾನ ಜಪ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist