Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಪ್ರಧಾನಿ ಮೋದಿಗೆ ಮತ್ತೆ ಕಂಟಕವಾಗಲಿದೆಯೇ ಗೋದ್ರಾ ವಿಚಾರಣೆ

ಪ್ರಧಾನಿ ಮೋದಿಗೆ ಮತ್ತೆ ಕಂಟಕವಾಗಲಿದೆಯೇ ಗೋದ್ರಾ ವಿಚಾರಣೆ
ಪ್ರಧಾನಿ ಮೋದಿಗೆ ಮತ್ತೆ ಕಂಟಕವಾಗಲಿದೆಯೇ ಗೋದ್ರಾ ವಿಚಾರಣೆ

February 5, 2020
Share on FacebookShare on Twitter

2002ರಲ್ಲಿ ನಡೆದ ಗೋದ್ರಾ ಹತ್ಯಾಕಾಂಡ ಕುರಿತಾದ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಗೋದ್ರಾ ಹತ್ಯಾಕಾಂಡದ ಸಮಯದಲ್ಲಿ ಸಾವನ್ನಪ್ಪಿದ್ದ ಸಂಸದ ಎಹ್ಸಾನ್‌ ಜಾಫ್ರಿ ಅವರ ಪತ್ನಿ ಝಾಕಿಯಾ ಜಾಫ್ರಿ ಅವರ ಅರ್ಜಿಯ ವಿಚಾರಣೆಯನ್ನು ಸುಪ್ರಿಂ ಕೋರ್ಟ್‌ ಏಪ್ರಿಲ್‌ 14ರಂದು ಕಾಯ್ದಿರಿಸಿದೆ.

ಹೆಚ್ಚು ಓದಿದ ಸ್ಟೋರಿಗಳು

ಭಯೋತ್ಪಾದಕ ಕೃತ್ಯದಲ್ಲಿ ನಿಜ್ಜರ್‌ ಕೈವಾಡ: ಕೆನಡಾದಲ್ಲಿ ಹತ್ಯೆಯಾದ ಖಲಿಸ್ತಾನಿ ವಿರುದ್ಧ ಭಾರತ ಆರೋಪ

ಮಂಡ್ಯ ಬಂದ್​ ಬಗ್ಗೆಯೂ ಕೊಂಕು ಮಾತು.. ರೈತರ ಬಗ್ಗೆ ಯಾಕೀ ಕೋಪ..?

ತಮಿಳುನಾಡಿನ ಮೇಲೆ ಹೆಚ್ಚಾಗ್ತಿದೆ ಕನ್ನಡಿಗರ ಆಕ್ರೋಶ: ಬಂದ್, ಪ್ರತಿಭಟನೆ ವೇಳೆ ಹೈಅಲರ್ಟ್​!

ಗೋದ್ರಾ ಹತ್ಯಾಕಾಂಡ ಪ್ರಕರಣದಲ್ಲಿ ನರೇಂದ್ರ ಮೋದಿಯವರ ಕೈವಾಡ ಇಲ್ಲ ಹಾಗೂ ಅವರನ್ನು ದೋಷಿ ಎಂದು ನಿರೂಪಿಸಲು ಯಾವುದೇ ಆಧಾರಗಳಿಲ್ಲ ಎಂದು ಹತ್ಯಾಕಾಂಡ ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ವಿಶೇಷ ತನಿಖಾ ದಳವು (ಎಸ್‌ಐಟಿ) 2012ರಲ್ಲಿ ಮೋದಿಯವರಿಗೆ ಕ್ಲೀನ್‌ ಚಿಟ್‌ ನೀಡಿತ್ತು.

ಒಂದು ವಿಷಯವನ್ನು ಪ್ರತೀ ಬಾರಿಯೂ ಮುಂದೂಡಲಾಗುವುದಿಲ್ಲ. ಒಂದಲ್ಲ ಒಂದು ದಿನ ಅದು ಚರ್ಚೆಗೆ ಬರಲೇ ಬೇಕು. ಒಂದು ದಿನಾಂಕವನ್ನು ನಿಗದಿ ಪಡಿಸಿ ಆ ದಿನ ಎಲ್ಲರೂ ಹಾಜರಿರುವಂತೆ ನೋಡಿಕೊಳ್ಳಿ, ಎಂದು ವಿಚಾರಣೆ ಕೈಗೆತ್ತಿಕೊಂಡ ಎ ಎಮ್‌ ಖಾನ್‌ವಿಲ್ಕರ್‌ ಹಾಗೂ ದಿನೇಶ್‌ ಮಹೇಶ್ವರಿ ಅವರನ್ನು ಒಳಗೊಂಡ ನ್ಯಾಯಪೀಠವು ಹೇಳಿದೆ. ಹೀಗಾಗಿ, ಏಪ್ರಿಲ್‌ 14ರಂದು ಈ ಕುರಿತಾದ ವಿಚಾರಣೆ ನಡೆಯಲಿದ್ದು, ನರೇಂದ್ರ ಮೋದಿಯವರ ಕುತ್ತಿಗೆಗೆ ಮತ್ತೊಮ್ಮೆ ಗೋದ್ರಾ ಕುಣಿಕೆ ಸುತ್ತಿಕೊಳ್ಳಲಿದೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ.

ವಿಶೇಷ ತನಿಖಾ ದಳವು ಮೋದಿಯವರಿಗೆ ಕ್ಲೀನ್‌ ಚಿಟ್‌ ನೀಡಿದ್ದನ್ನು ಪ್ರಶ್ನಿಸಿ ಝಾಕಿಯಾ ಗುಜರಾತ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ಗುಜರಾತ್‌ ಹೈಕೋರ್ಟ್‌ ಅವರ ಅರ್ಜಿಯನ್ನು ಪುರಸ್ಕರಿಸದೇ, ಎಸ್‌ಐಟಿಯ ವರದಿಯನ್ನು ಪುನರ್‌ ಪರಿಶೀಲಿಸಲು ನಿರಾಕರಿಸಿತು. ಸುಪ್ರಿಂ ಕೋರ್ಟ್‌ ಮೆಟ್ಟಿಲೇರಿರುವ ಝಾಕಿಯಾ ನ್ಯಾಯಕ್ಕಾಗಿ ಅಲೆದಾಡುತ್ತಿದ್ದಾರೆ. ಇವರ ವಾದದ ಪ್ರಕಾರ ಗೋದ್ರಾ ಹತ್ಯಾಕಾಂಡ ನಡೆದ ಹಿಂದೆ ದೊಡ್ಡ ಪಿತೂರಿಯಿದೆ. ಈ ಪಿತೂರಿಯನ್ನು ಬಯಲಿಗೆಳೆಯಲು ಹೆಚ್ಚಿನ ವಿಚಾರಣೆ ನಡೆಸಬೇಕು. ಇದಕ್ಕಾಗಿ ಸಂಬಂದಪಟ್ಟ ಎಲ್ಲರಿಗೂ ನೋಟಿಸ್‌ ಜಾರಿ ಮಾಡಬೇಕೆಂದು ಹೇಳಿದ್ದರು.

ವಿಶೇಷ ತನಿಖಾ ದಳವು 2012ರಲ್ಲಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 63 ಜನರಿಗೆ ಕ್ಲೀನ್‌ ಚಿಟ್‌ ನೀಡಿತ್ತು. ಗುಜರಾತ್‌ನ ಗುಲ್ಬರ್ಬ್‌ ಸೊಸೈಟಿಯಲ್ಲಿ ಫೆಬ್ರುವರಿ 28ರಂದು ನಡೆದ ಈ ಗಲಭೆಯಲ್ಲಿ 68 ಜನರು ಮೃತಪಟ್ಟಿದ್ದರು. ಅಂದು ಎಹ್ಸಾನ್‌ ಜಾಫ್ರಿಯವರ ಹತ್ಯೆಯೂ ನಡೆದಿತ್ತು. ಈ ಕುರಿತಾಗಿ ಅವರ ಪತ್ನಿ ದಾಖಲಿಸಿದ್ದ ಪ್ರಕರಣದ ವಿಚಾರಣೆ ಬರೋಬ್ಬರಿ ಹತ್ತು ವರ್ಷಗಳ ಕಾಲ ನಡೆಯಿತು. ತಮ್ಮ ದೂರಿನಲ್ಲಿ ನರೇಂದ್ರ ಮೋದಿ ಸೇರಿದಂತೆ ಇತರೆ 58 ವ್ಯಕ್ತಿಗಳು ತಮ್ಮ ಪತಿಯ ಕೊಲೆಗೆ ಕಾರಣ ಎಂದು ಝಾಕಿಯಾ ದೋಷಾರೋಪಣೆ ಮಾಡಿದ್ದರು. ಕೊನೆಗೆ ಎಸ್‌ಐಟಿ ತಂಡ ಗುಜರಾತ್‌ನ ಹಿರಿಯ ಅಧಿಕಾರಿಗಳು ಸೇರಿದಂತೆ 63 ಜನರನ್ನು ಕೇಸಿನಿಂದ ಖುಲಾಸೆ ಗೊಳಿಸಿತ್ತು. ಹಿರಿಯ ಅಧಿಕಾರಿಗಳ ವಿರುದ್ದ ಹಾಗೂ ಆಗಿನ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರ ವಿರುದ್ದ ಅಪರಾಧ ಸಾಬೀತು ಪಡಿಸಲು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲು ವಿಫಲವಾಗಿತ್ತು.

ಈ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೂ ಹೋರಾಟವನ್ನು ಕೈಬಿಡುವುದಿಲ್ಲ ಎಂಬ ಧೃಡ ನಿರ್ಧಾರ ಝಾಕಿಯಾ ಅವರು ತಳೆದ ಹಾಗಿದೆ. ತಮ್ಮ ಪತಿಯ ಕೊಲೆಗೆ ಪ್ರಧಾನಿ ನರೇಂದ್ರ ಮೋದಿ ನೇರ ಕಾರಣ ಎಂಬ ಆರೋಪವನ್ನು ಸಾಬೀತು ಪಡಿಸಲು ದೇಶದ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇನ್ನು ಈ ಪ್ರಕರಣ ಯಾವ ತಿರುವ ಪಡೆಯಲಿದೆ ಎಂಬುದು ಎಪ್ರಿಲ್‌ 14ರಂದು ನಡೆಯಲಿರುವ ವಿಚಾರಣೆಯ ನಂತರ ತಿಳಿದು ಬರಲಿದೆ.

RS 500
RS 1500

SCAN HERE

Pratidhvani Youtube

«
Prev
1
/
5477
Next
»
loading
play
H. D. Kumaraswamy | ಕಾವೇರಿ ಹೋರಾಟಕ್ಕೆ ಮತ್ತಷ್ಟು ಬಲ ತುಂಬಲು ಮಾಜಿ ಸಿಎಂ ಹೆಚ್‌.ಡಿ.ಕೆ ಸಜ್ಜು..!
play
Kaveri | ಕಾವೇರಿ ಯಾರಿಗೆ ಸೇರಿದ್ದು..? ಯಾರ್ಯಾರ ರಾಜಕೀಯ ಏನು..? | HD Kumaraswamy | @PratidhvaniNews
«
Prev
1
/
5477
Next
»
loading

don't miss it !

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ: ಸಂತೋಷ್ ಲಾಡ್
Top Story

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ: ಸಂತೋಷ್ ಲಾಡ್

by ಪ್ರತಿಧ್ವನಿ
September 20, 2023
ಕರವೇ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬಿಜೆಪಿ ಮುಖಂಡರು ಸಾಥ್
Top Story

ಕರವೇ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬಿಜೆಪಿ ಮುಖಂಡರು ಸಾಥ್

by ಪ್ರತಿಧ್ವನಿ
September 23, 2023
ಕರ್ನಾಟಕಕ್ಕೆ ಶಾಕ್: ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ
Top Story

ಕರ್ನಾಟಕಕ್ಕೆ ಶಾಕ್: ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ

by ಪ್ರತಿಧ್ವನಿ
September 21, 2023
ಚೈತ್ರಾ ಕುಂದಾಪುರ ಪ್ರಕರಣ | ನನ್ನ ಹೆಸರು ಬಂದಿರುವು ನನಗೆ ಬೇಸರ ತಂದಿದೆ : ವಜ್ರದೇಹಿ ಸ್ವಾಮೀಜಿ
Top Story

ಚೈತ್ರಾ ಕುಂದಾಪುರ ಪ್ರಕರಣ | ನನ್ನ ಹೆಸರು ಬಂದಿರುವು ನನಗೆ ಬೇಸರ ತಂದಿದೆ : ವಜ್ರದೇಹಿ ಸ್ವಾಮೀಜಿ

by ಪ್ರತಿಧ್ವನಿ
September 18, 2023
I Don’t Believe in Exit Polls : ನನಗೆ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ; ನನ್ನ ಪ್ರಕಾರ  141 ಸ್ಥಾನ ಗೆಲ್ಲುತ್ತೇವೆ! : ಡಿ.ಕೆ.ಶಿವಕುಮಾರ್
Top Story

ರಾಜ್ಯದ ಜನರ ಹಿತ ಕಾಯಲು ಸುಪ್ರೀಂ ಕೋರ್ಟಿಗೆ ಹೋಗುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
September 18, 2023
Next Post
ದೆಹಲಿಯಲ್ಲಿ ಬಿಜೆಪಿಗಿಲ್ಲ ಆಧಿಕಾರ? ಗುಂಡು ಹಾರಿಸಿದ್ದು ಎಎಪಿ ಬೆಂಬಲಿಗನೇ? 

ದೆಹಲಿಯಲ್ಲಿ ಬಿಜೆಪಿಗಿಲ್ಲ ಆಧಿಕಾರ? ಗುಂಡು ಹಾರಿಸಿದ್ದು ಎಎಪಿ ಬೆಂಬಲಿಗನೇ? 

ಸೋಶಿಯಲ್ ಮೀಡಿಯಾ ಮತ್ತು ನಾವು!

ಸೋಶಿಯಲ್ ಮೀಡಿಯಾ ಮತ್ತು ನಾವು!

ಮನೀಶ್ ಪಾಂಡೆ ಕಡೆಗಣನೆ; ಟೀಮ್‌ ಇಂಡಿಯಾ ಸೆಲೆಕ್ಷನ್‌ ಬಗ್ಗೆ ಅಭಿಮಾನಿಗಳು ಗರಂ 

ಮನೀಶ್ ಪಾಂಡೆ ಕಡೆಗಣನೆ; ಟೀಮ್‌ ಇಂಡಿಯಾ ಸೆಲೆಕ್ಷನ್‌ ಬಗ್ಗೆ ಅಭಿಮಾನಿಗಳು ಗರಂ 

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist