• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಜೆಟ್ 2020: ಯುವಜನರ ಹಾಗೂ ಕೃಷಿಕರ ಆದ್ಯತೆಗಳೇನು?

by
January 31, 2020
in ದೇಶ
0
ಬಜೆಟ್ 2020: ಯುವಜನರ ಹಾಗೂ ಕೃಷಿಕರ ಆದ್ಯತೆಗಳೇನು?
Share on WhatsAppShare on FacebookShare on Telegram

ಫೆಬ್ರವರಿ 1 ರಂದು ಕೇಂದ್ರ ಆಯವ್ಯಯ ಪಟ್ಟಿ ಮಂಡನೆಯ ಸಲುವಾಗಿ ದೇಶದ ಜನ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಸದ್ಯ ದೇಶದ ಆರ್ಥಿಕ ಸ್ಥಿತಿಗತಿ ಅಷ್ಟೇನೂ ಚೆನ್ನಾಗಿಲ್ಲದ್ದರಿಂದ ಆರ್ಥಿಕತೆಯನ್ನು ಸರಿಯಾದ ದಾರಿಗೆ ತರುವುದು ಮೋದಿ ಸರಕಾರದ ಮುಂದಿರುವ ದೊಡ್ಡ ಸವಾಲಾಗಿದೆ. ಕೇಂದ್ರ ಮಧ್ಯಂತರ ಬಜೆಟ್‌ನಲ್ಲಿ ಹೊಸತನವೇನಿರಲಿಲ್ಲ, ಹಾಗಾಗಿ ಈ ಬಾರಿಯಾದರೂ ದೇಶದ ಸಾಮಾನ್ಯ ವರ್ಗಕ್ಕೆ ಮುಂಬರುವ ಬಜೆಟ್‌ನಲ್ಲಿ ಹಲವು ರೀತಿಯ ನಿರೀಕ್ಷೆಗಳಿವೆ.

ADVERTISEMENT

ನಿರುದ್ಯೋಗ ಸಮಸ್ಯೆ

ನಿರುದ್ಯೋಗ ಸಮಸ್ಯೆಯು ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಶಿಕ್ಷಣದಿಂದಾಗಿ ಉದ್ಯೋಗ ದಕ್ಕಿಸಿಕೊಳ್ಳಬಹುದು ಎಂದುಕೊಂಡು ಅನೇಕ ವಿದ್ಯಾರ್ಥಿಗಳು ಶಿಕ್ಷಣ ಸಾಲವನ್ನು ಪಡೆದುಕೊಂಡಿರುತ್ತಾರೆ. ಅನೇಕ ಮಂದಿ ಸ್ನಾತಕೋತ್ತರ ಪದವಿಯನ್ನೂ ಪೂರೈಸಿಕೊಂಡು ಹೊರಬರುವಾಗ ಇತ್ತ ಉದ್ಯೋಗವೂ ಇಲ್ಲದೇ ಅತ್ತ ಸಾಲವನ್ನೂ ತೀರಿಸಲಾಗದ ಪರಿಸ್ಥಿತಿ ಎದುರಾಗಿದೆ. ಸರಕಾರವು ಉದ್ಯೋಗ ಸೃಷ್ಠಿಸುವ ಯೋಜನೆಗಳನ್ನು ದಿನೇ ದಿನೇ ಜಪಿಸುತ್ತಿದೆ. ಆದರೆ ಯಾವುದೇ ರೀತಿಯ ಯೋಜನೆ ಅನುಷ್ಠಾನಗೊಂಡಿಲ್ಲ, ಉದ್ಯೋಗ ಸೃಷ್ಠಿಯಿಂದ ಆರ್ಥಿಕ ಹೊಡೆತದಿಂದ ಪಾರಾಗಬಹುದೆಂದು ಕೇಂದ್ರ ಹಣಕಾಸು ಸಚಿವರ ಯೋಚನೆಯಾಗಿದ್ದರೆ ಒಳಿತು. ಕೇಂದ್ರ ಸರಕಾರವು ಈ ಸಮಸ್ಯೆಗೆ ಹಲವಾರು ರೀತಿಯ ಕಾರಣಗಳನ್ನು ನೀಡುತ್ತಿದೆ. ಆದರೆ ಸಮಸ್ಯೆಗೆ ಪರಿಹಾವಂತೂ ಸಿಕ್ಕಿಲ್ಲ, ಹಾಗಾಗಿ  ಮುಂಬರುವ ಬಜೆಟ್‌ನಲ್ಲಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಸಿಗಬಹುದೇ ಎಂದು ನಿರುದ್ಯೋಗಿ ಯುವಕರ ಮತ್ತು ವಿದ್ಯಾರ್ಥಿಗಳ ನಿರೀಕ್ಷೆಯಾಗಿದೆ.

ಸಣ್ಣ ಕೈಗಾರಿಕೆಗಳಲ್ಲಿ ಶೇ 5೦%ರಷ್ಟು ಮುಚ್ಚಿಹೋಗಿವೆ. ಇದರಿಂದಾಗಿ ಸಾಕಷ್ಟು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಸಣ್ಣ ಕೈಗಾರಿಕೆಗಳನ್ನು ಮತ್ತೆ ಪುನಃಶ್ಚೇನಗೊಳಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಆರ್ಥಿಕತೆಯ ಕುಸಿತದೊಂದಿಗೆ, ಅಟೋಮೊಬೈಲ್ ಉತ್ಪಾದಕ ಕ್ಷೇತ್ರದಲ್ಲಿ ಸಾಕಷ್ಟು ಮಂದಿ ಉದ್ಯೋಗ ಕಳೆದುಕೊಂಡು ಹತಾಷರಾಗಿದ್ದಾರೆ. ಗಾರ್ಮೆಂಟ್ ಉದ್ಯಮ ಸೇರಿದಂತೆ ಹಲವಾರು ಕೈಗಾರಿಕೋದ್ಯಮಗಳು ಉದ್ಯೋಗ ಕಡಿತವನ್ನು ಮಾಡುತ್ತಿದೆ. ಆರ್ಥಿಕತೆಯ ಕುಸಿತದಿಂದಾಗಿ ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ನಗರ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಠಿಸುವುದರ ಜೊತೆಗೆ ಗ್ರಾಮೀಣ ಭಾಗದಲ್ಲೂ ಕೈಗಾರಿಕೋದ್ಯಮಕ್ಕೆ ಆದ್ಯತೆಯನ್ನು ಕಲ್ಪಿಸಬೇಕು. ಇದರಿಂದ ಆರ್ಥಿಕತೆಯ ಮೇಲೆ ಸ್ವಲ್ಪ ಮಟ್ಟಿಗಾದರೂ ಸ್ಥಿರತೆಯನ್ನು ಕಾಯ್ದುಕೊಳ್ಳಬಹುದು.

ಕೃಷಿ ವಲಯ

ಭಾರತವು ವರ್ಷದಲ್ಲಿ 200 ದಿನದಿಂದ 240 ದಿನಗಳವರೆಗೆ ದುಡಿಮೆಯನ್ನು ಮಾಡುವಂತಹ ಹವಾಮಾನವನ್ನು ಹೊಂದಿದೆ. ಈ ವ್ಯವಸಾಯವನ್ನು ನಂಬಿಕೊಂಡು ಶೇ 4೦%ರಷ್ಟು ಕೂಲಿಗಾರರು, ಶೇ 45%ರಷ್ಟು ಸಣ್ಣ ಅತಿ ಸಣ್ಣ ರೈತರು ಹಾಗೂ ಶೇ 7.5% ರಷ್ಟು ಮಂದಿ ಇದನ್ನೇ ಜೀವಾಳವಾಗಿ ನಂಬಿದ್ದಾರೆ. ಕೃಷಿಯಲ್ಲಿನ ಹಿನ್ನಡೆ ಮತ್ತು ಉತ್ತಮ ಬೇಡಿಕೆಯ ಕೊರತೆಯಿಂದಾಗಿ ಸಾಕಷ್ಟು ಮಂದಿ ನಷ್ಟ ಅನುಭವಿಸುತ್ತಿದ್ದಾರೆ. ಕೃಷಿ ವಲಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಇದರಲ್ಲಿ ಪ್ರಮುಖವಾಗಿ ರೈತರ ಆದಾಯ ದುಪ್ಪಟ್ಟುಗೊಳಿಸುವ ಇರಾದೆ ಇದೆ. ರೈತರಿಗೆ ವಾರ್ಷಿಕ 6 ಸಾವಿರ ರೂಪಾಯಿ ನೀಡುವ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಈಗಾಗಲೇ ಕೇಂದ್ರ ಸರಕಾರ ಜಾರಿಗೆ ತಂದಿದೆ. ಇದರಿಂದ ಸರಕಾರದ ಬೊಕ್ಕಸಕ್ಕೆ 75 ಸಾವಿರ ಕೋಟಿ ರೂ. ಹೊರೆ ಬೀಳುತ್ತಿದೆ. ಉದ್ಯೋಗವನ್ನರಸಿ ನಗರ ಪ್ರದೇಶಗಳಿಗೆ ವಲಸೆ ಬರುವವರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಕೃಷಿಗೆ ಯುವ ಸಮುದಾಯವನ್ನು ಪ್ರೋತ್ಸಾಹಿಸುವ ಸಲುವಾಗಿ ಕೇಂದ್ರ ಸರ್ಕಾರವು ಯೋಜನೆಗಳನ್ನು ಹಮ್ಮಿಕೊಳ್ಳಬೇಕಿದೆ. ರೈತಾಪಿ ವರ್ಗದ ಅಭಿವೃದ್ಧಿ ಯೋಜನೆಗಳು ರಾಷ್ಟ್ರ ಮಟ್ಟಕ್ಕಿಂತಲೂ ಹೆಚ್ಚಾಗಿ ಪ್ರಾದೇಶಿಕ ಮಟ್ಟದಲ್ಲಿ ರೂಪುಗೊಳ್ಳಬೇಕಾಗಿದೆ. ಕೇಂದ್ರದ ರೈತಪರ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯಗಳು ಉತ್ತಮ ಸಹಕಾರ ನೀಡಬೇಕು ಸರಿಯಾದ ನಿಟ್ಟಿನಲ್ಲಿ ಅನುಷ್ಠಾನಗೊಳಿಸಬೇಕು. ಹಾಗಾಗಿ ರೈತಾಪಿ ವರ್ಗವೂ ಈ ಬಾರಿಯ ಬಜೆಟ್‌ನಲ್ಲಿ ಉತ್ತಮ ಯೋಜನೆಗಳನ್ನು ನಿರೀಕ್ಷಿಸುತ್ತಿದೆ.

ಇವೆಲ್ಲಾ ಕ್ಷೇತ್ರಗಳಲ್ಲಿ ಆಗಬೇಕಾದ ಸುಧಾರಣೆಗಳು ಬಹಳಷ್ಟಿವೆ. ಅತೀ ಮುಖ್ಯವಾಗಿ, ಯುವ ಜನತೆ ಉದ್ಯೋಗವಿಲ್ಲದೆ ಪರದಾಡುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಉದ್ಯೋಗಗಳನ್ನು ಸೃಷ್ಟಿಸುವಂತಹ ಯೋಜನೆಗಳು ಜಾರಿಗೆ ಬಂದಲ್ಲಿ, ಉದ್ಯೋಗ ಸೃಷ್ಟಿಯ ಜೊತೆಗೆ ಆರ್ಥಿಕತೆಯನ್ನು ಕೂಡ ಸ್ಥಿರಗೊಳಿಸುವ ಅವಕಾಶ ಕೇಂದ್ರ ಸರ್ಕಾರಕ್ಕಿದೆ. ಹಾಗಾಗಿ, ನಿರುದ್ಯೋಗ ಮತ್ತು ಕೃಷಿ ವಲಯದಲ್ಲಿನ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ ಇರಬಹುದು ಎಂಬ ಆಶಾ ಭಾವನೆ ಯುವಕರಲ್ಲಿ ಹಾಗೂ ಕೃಷಿಕರಲ್ಲಿ ಮೂಡಿದೆ.

Tags: Budget 2020Budget sessionUnion Budgetಕೃಷಿಕಬಜೆಟ್‌ 2020ಯುವಜನ
Previous Post

ಅಪಾಯಕಾರಿ ಕರೋನಾಗೆ ಯುನಾನಿ, ಹೊಮಿಯೋಪತಿ ಮದ್ದು

Next Post

ಕೊನೆಗೂ ಶಾ ಭೇಟಿಯಾದ ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಮೂರು ದಿನ ಗಡುವು  

Related Posts

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
0

-----ನಾ ದಿವಾಕರ---- ಕಾರ್ಪೋರೇಟ್‌ ಕೇಂದ್ರಿತ ನಗರೀಕರಣ ಪ್ರಕ್ರಿಯೆಯ ಒಂದು ಬಂಡವಾಳಶಾಹಿ ಸ್ವರೂಪ ಆಂಗ್ಲ ಭಾಷೆಯಲ್ಲಿ ಸ್ಮಾರ್ಟ್‌ (Smart) ಎಂಬ ಪದವನ್ನು ನಾಮಪದವಾಗಿಯೂ, ಲಿಂಗತಟಸ್ಥ ಪದವಾಗಿಯೂ ಬಳಸಲಾಗುತ್ತದೆ. ಕನ್ನಡದಲ್ಲಿ...

Read moreDetails
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025
ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

July 1, 2025

ಲೋಕಾಯುಕ್ತರು ಹಾಗೂ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ವಜಾಗೊಳಿಸಿ: ರವಿಕೃಷ್ಣಾ ರೆಡ್ಡಿ.

June 30, 2025
Next Post
ಕೊನೆಗೂ ಶಾ ಭೇಟಿಯಾದ ಯಡಿಯೂರಪ್ಪ

ಕೊನೆಗೂ ಶಾ ಭೇಟಿಯಾದ ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಮೂರು ದಿನ ಗಡುವು  

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada