• Home
  • About Us
  • ಕರ್ನಾಟಕ
Sunday, November 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಿಜೆಪಿಯದ್ದು ಸೋಲಿನಲ್ಲೂ ಸಾರ್ಥಕ ಭಾವ… ಕಿಚ್ಚಿನಲ್ಲೂ ಲಾಭದ ಲೆಕ್ಕ?!   

by
February 15, 2020
in ದೇಶ
0
ಬಿಜೆಪಿಯದ್ದು ಸೋಲಿನಲ್ಲೂ ಸಾರ್ಥಕ ಭಾವ... ಕಿಚ್ಚಿನಲ್ಲೂ ಲಾಭದ ಲೆಕ್ಕ?!    
Share on WhatsAppShare on FacebookShare on Telegram

ದೆಹಲಿ ವಿಧಾನಸಭಾ ಸೋಲಿನ ಬಳಿಕ ಮೊದಲ ಬಾರಿ ಬಿಜೆಪಿ ಉತ್ತರ ಕೊಟ್ಟಿದೆ. ಸೋಲಿನ ಬಗ್ಗೆ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ, ದೆಹಲಿ ಸೋಲಿಗೆ ಬಿಜೆಪಿ ನಾಯಕರುಗಳು ನೀಡಿದ ವಿವಾದಿತ ಹೇಳಿಕೆಗಳೇ ಕಾರಣ ಎಂದಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಹಾಗು ಎನ್ಆರ್ಸಿ ಬಗ್ಗೆ ಬಿಜೆಪಿ ಪಕ್ಷದ ನಾಯಕರು ಗೋಲಿಮಾರೋ, ಇಂಡೋ ಪಾಕ್ ಮ್ಯಾಚ್ ಎಂಬ ಹೇಳಿಕೆಗಳನ್ನು ನೀಡಬಾರದಿತ್ತು ಎಂದು ಪಶ್ಚತ್ತಾಪ ವ್ಯಕ್ತಪಡಿಸಿದ್ದಾರೆ. ನಾಯಕರ ಹೇಳಿಕೆಗಳಿಂದ ಪಕ್ಷ ಅಂತರ ಕಾಯ್ದುಕೊಂಡಿತ್ತು. ಆದರೂ ಆ ರೀತಿಯ ಹೇಳಿಕೆಗಳನ್ನು ಕೊಡಬಾರದು. ಆ ಹೇಳಿಕೆಗಳೇ ನಮಗೆ ಮುಳುವಾದವು ಎಂದಿದ್ದಾರೆ. ಕೇಂದ್ರ ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಗಳಿಗೆ ಗುಂಡು ಹಾರಿಸಬೇಕು ಎಂದಿದ್ದರು. ಆ ಬಳಿಕ ಫೈರಿಂಗ್ ಕೂಡ ನಡೆದಿತ್ತು. ಮತ್ತೋರ್ವ ಬಿಜೆಪಿ ನಾಯಕ ಕಪಿಲ್‌ ಮಿಶ್ರಾ ದೆಹಲಿ ಚುನಾವಣೆಯನ್ನು ಇಂಡೋ ಪಾಕ್ ಯುದ್ಧಕ್ಕೆ ಹೋಲಿಕೆ ಮಾಡಿದ್ದೂ ವಿವಾದ ಸ್ವರೂಪ ಪಡೆದಿತ್ತು.

ADVERTISEMENT

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೇ ಈ ರೀತಿಯ ಹೇಳಿಕೆಗಳನ್ನು ನೀಡಬಾರದಿತ್ತು ಎಂದಿದ್ದಾರೆ. ಆದರೆ ಕರ್ನಾಟಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತ್ರ, ಮತ್ತೊಂದು ವಿವಾದ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ದೇಶದ್ರೋಹಿ ಕೆಲಸ ಮಾಡುವ ಸಿನಿಮಾ ಹೀರೋಗಳ ಚಿತ್ರಗಳನ್ನು ನೋಡಬೇಡಿ. ನಟ ಅಕ್ಷಯ್‌ಕುಮಾರ್‌ ಅವರಂಥ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೇ ಈ ರೀತಿಯ ಹೇಳಿಕೆಗಳನ್ನು ನೀಡಬಾರದಿತ್ತು ಎಂದಿದ್ದಾರೆ. ಆದರೆ ಕರ್ನಾಟಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತ್ರ, ಮತ್ತೊಂದು ವಿವಾದ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ದೇಶದ್ರೋಹಿ ಕೆಲಸ ಮಾಡುವ ಸಿನಿಮಾ ಹೀರೋಗಳ ಚಿತ್ರಗಳನ್ನು ನೋಡಬೇಡಿ. ನಟ ಅಕ್ಷಯ್‌ಕುಮಾರ್‌ ಅವರಂಥ ದೇಶಭಕ್ತರ ಸಿನಿಮಾಗಳ ನೋಡಿ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.

ವಿಜಯಪುರದಲ್ಲಿ ಅಪ್ಸರಾ ಟಾಕೀಸ್ ಬಳಿ ‘ತಾನಾಜಿ ಸಿನಿಮಾ’ ವೀಕ್ಷಣೆಗೂ ಮುನ್ನ ಮಾತನಾಡಿದ ಬಸನಗೌಡ ಪಾಟೀಲ್‌ ಯತ್ನಾಳ್, ಕೆಲವು ಜನ ದೇಶದ ಅನ್ನ ತಿಂದು ಪಾಕಿಸ್ತಾನವನ್ನು ಹೊಗಳುವ ಖಳನಾಯಕರಿದ್ದಾರೆ. ಸಲ್ಮಾನ್‌ ಖಾನ್, ಶಾರುಕ್‌ಖಾನ್, ಅಮೀರ್ ಖಾನ್ ಅವರಂಥವರು ದೇಶದ ಅನ್ನ ತಿಂದು ಪಾಕಿಸ್ತಾನಕ್ಕೆ ಸಹಾಯ ಮಾಡ್ತಾರೆ ಎಂದು ಟೀಕಿಸಿದರು. ಅಲ್ಲಿ ಭೂಕಂಪವಾದರೆ ಪರಿಹಾರ ಕೊಡ್ತಾರೆ. ನಮ್ಮ ದೇಶದಲ್ಲಿ ಭೂಕಂಪವಾದರೆ ಪರಿಹಾರ ನೀಡುವುದಿಲ್ಲ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟ ಬೆಂಬಲಿಸಿದ್ದ ನಟಿ ದೀಪಿಕಾ ಪಡುಕೋಣೆ ವಿರುದ್ಧವೂ ಕಿಡಿಕಾರಿದ್ದಾರೆ.

ಮುಗು ಚಿವುಟಿ ಅಳಿಸುವುದು, ಲಾಲಿ ಆಡಿಸಿ ಮಲಗಿಸುವುದು..!

ಬಿಜೆಪಿ ನಾಯಕರ ಮಾತುಗಳು ಈ ಗಾದೆಗೆ ಹೊಂದಿಕೊಳ್ಳುವ ಹೇಳಿಕೆಗಳಾಗಿವೆ. ಒಂದು ಕಡೆ ಕೇಂದ್ರ ಗೃಹ ಸಚಿವರೇ ವಿವಾದಿತ ಹೇಳಿಕೆಗಳಿಂದ ಬಿಜೆಪಿ ದೆಹಲಿಯಲ್ಲಿ ಸೋಲಬೇಕಾಯ್ತು ಎನ್ನುತ್ತಾರೆ. ಅದರ ಜೊತೆ ಜೊತೆಯಲ್ಲೇ ಕರ್ನಾಟಕ ಬಿಜೆಪಿ ಶಾಸಕ ಸಿನಿಮಾ ಮಾಯಕರನ್ನು ಧರ್ಮದ ಆಧಾರದಲ್ಲಿ ವಿಭಜಿಸಿ ದ್ವೇಶ ಸೃಷ್ಟಿಸುವ ವಿವಾದಿತ ಹೇಳಿಕೆ ಕೊಡ್ತಾರೆ. ಇದಕ್ಕೆ ಕಾರಣ ಕೇಂದ್ರ ಗೃಹ ಸಚಿವರ ದ್ವಂಧ್ವ ನಿಲುವು. ನಾವು ಸೋತಿದ್ದೇವೆ ಎನ್ನುವ ಜೊತೆಗೆ ದೆಹಲಿಯಲ್ಲಿ ನಾವು ಸಾಧಿಸಿದ್ದೇವೆ ಎಂದು ಸ್ವತಃ ಅಮಿತ್‌ ಷಾ ಹೇಳಿಕೆ ಕೊಟ್ಟಿದ್ದಾರೆ. ಜನರು ಯಾಕೆ ಒಂದು ಪಕ್ಷಕ್ಕೆ ಮತ ನೀಡಿದ್ದಾರೆ ಎಂದು ಅಷ್ಟು ಸುಲಭವಾಗಿ ಹೇಳುವುದು ಅಸಾಧ್ಯ. ಕೇವಲ ಚುನಾವಣೆಯಲ್ಲಿ ಗೆಲ್ಲುವುದಷ್ಟೇ ನಮಗೆ ಮುಖ್ಯವಲ್ಲ. ಚುನಾವಣೆ ಮೂಲಕ ನಮ್ಮ ಪಕ್ಷದ ಸಿದ್ಧಾಂತವನ್ನು ವಿಸ್ತರಣೆ ಮಾಡುತ್ತೇವೆ ಎನ್ನುವ ಮೂಲಕ ಹಿಂದುತ್ವ ಅಜೆಂಡಾ ವಿಸ್ತರಣೆ ಬಗ್ಗೆ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ನಾಯಕರು ಪದೇ ಪದೇ ಧರ್ಮದ ಆಧಾರದಲ್ಲಿ ವಿವಾದ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎನಿಸುತ್ತದೆ. ಸೋತರೂ ಪರವಾಗಿಲ್ಲ, ಹಿಂದೂ ಮುಸಲ್ಮಾನ್‌ ಎಂಬ ಪ್ರತ್ಯೇಕ ಮಾಡುವ ಕೆಲಸ ನಡೆಯುತ್ತಿದ್ಯಾ ಎಂದೆನಿಸುವ ಭಾವನೆ ದೇಶದ ಜನರಲ್ಲಿ ಮೂಡುವಂತಾಗಿದೆ.

ಕರ್ನಾಟಕ ಸರ್ಕಾರ ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಏಕಪಕ್ಷೀಯವಾಗಿದ್ದು, ಹೈಕೋರ್ಟ್‌ ಕೂಡ ಛಾಟಿ ಬೀಸಿದಿದೆ. ಕಳೆದ ಜನವರಿ 19ರಂದು ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡುವ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟ ತಡೆಯುವ ಕೆಲಸ ಮಾಡಿತ್ತು. ಆದರೆ ರಾಜ್ಯ ಸರ್ಕಾರದ ಈ ಕ್ರಮ ತಪ್ಪು ಎಂದು ಹೈಕೋರ್ಟ್‌ ವಿಭಾಗಿಯ ಪೀಠ ತಿಳಿಸಿದೆ. ಸರ್ಕಾರ ಈ ನಿರ್ಧಾರ ಅಕ್ರಮ ಹಾಗೂ ಕಾನೂನು ಬಾಹಿರ ಎಂದು ಸ್ಪಷ್ಟ ಅಭಿಪ್ರಾಯ ತಿಳಿಸಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್‌.ಓಕಾ ಹಾಗು ನ್ಯಾಯಮೂರ್ತಿ ಹೇಮಂತ ಚಂದನಗೌಡರ ವಿಭಾಗೀಯ ನ್ಯಾಯಪೀಠ ಮಹತ್ವದ ಆದೇಶ ಹೊರಡಿಸಿದ್ದಾರೆ. ಆದರೆ ನಿಷೇಧಾಜ್ಞೆ ನಡುವೆಯೂ ಹೋರಾಟ ನಡೆಸಲು ಮುಂದಾಗಿ ಪೊಲೀಸರ ಗುಂಡೇಟಿಗೆ ಬಲಿಯಾದ ಬಳಿಕ ಸರ್ಕಾರದ ನಿರ್ಧಾರ ತಪ್ಪು ಎನ್ನುವುದು ಗೊತ್ತಾದರೂ ಪ್ರಯೋಜನಕ್ಕೆ ಬಾರದಂತಾಗಿದೆ. ಒಟ್ಟಾರೆ, ತಾವು ಮಾಡುತ್ತಿರುವುದು ತಪ್ಪು ಎನ್ನುವುದು ಗೊತ್ತಿದ್ದರೂ ಮಾಡುವುದು, ಆ ಬಳಿಕ ತಪ್ಪಿನಲ್ಲೂ ಲಾಭದ ಲೆಕ್ಕಾಚಾರ ಹಾಕುವ ಪ್ರವೃತ್ತಿ ಬಿಜೆಪಿ ಪಾಲಿಗೆ ಕರಗತವಾಗಿದೆಯಾ..? ಎನ್ನುವ ಪ್ರಶ್ನೆ ಹುಟ್ಟಿಸುತ್ತಿದೆ.

Tags: ಬಿಜೆಪಿಸೋಲಿನಲ್ಲೂ ಸಾರ್ಥಕ ಭಾವ
Previous Post

ಕಾಲಿಟ್ಟಲ್ಲೆಲ್ಲಾ ಕರಿಬೇವು: ಮಲೆನಾಡಿನಲ್ಲೊಂದು ಭೀಮನ ಕಾಲದ ಬೇವಿನ ಬೆಟ್ಟ

Next Post

ವಿವಿಧತೆಯಿಲ್ಲದ ಏಕತೆ ನಮಗೇತಕೆ?

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

October 29, 2025
Next Post
ವಿವಿಧತೆಯಿಲ್ಲದ ಏಕತೆ ನಮಗೇತಕೆ?

ವಿವಿಧತೆಯಿಲ್ಲದ ಏಕತೆ ನಮಗೇತಕೆ?

Please login to join discussion

Recent News

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
Top Story

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

by ಪ್ರತಿಧ್ವನಿ
November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ
Top Story

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

by ಪ್ರತಿಧ್ವನಿ
November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ
Top Story

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

by ಪ್ರತಿಧ್ವನಿ
November 2, 2025
ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!
Top Story

ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada