Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಬಿಜೆಪಿಯಲ್ಲಿ ‘ಪ್ರವಾಹ’ ಸೃಷ್ಟಿಸಿದ ಯತ್ನಾಳ್  ಕಿಡಿ

ಬಿಜೆಪಿಯಲ್ಲಿ ‘ಪ್ರವಾಹ’ ಸೃಷ್ಟಿಸಿದ ಯತ್ನಾಳ್  ಕಿಡಿ
ಬಿಜೆಪಿಯಲ್ಲಿ ‘ಪ್ರವಾಹ’ ಸೃಷ್ಟಿಸಿದ ಯತ್ನಾಳ್  ಕಿಡಿ

October 5, 2019
Share on FacebookShare on Twitter

ರಾಜ್ಯದ ಪ್ರವಾಹಪೀಡಿತ ಪ್ರದೇಶದ ಜನರ ಸಂಕಷ್ಟಕ್ಕೆ ಸ್ಪಂದಿಸದ ತಮ್ಮದೇ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದ ವಿಜಯಪುರ ಜಿಲ್ಲೆಯ ವಿವಾದಾತ್ಮಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೇಂದ್ರ ಶಿಸ್ತುಪಾಲನಾ ಸಮಿತಿ ಶೋ ಕಾಸ್ ನೋಟಿಸ್ ಜಾರಿಗೊಳಿಸುವ ಮೂಲಕ ರಾಜ್ಯ ಬಿಜೆಪಿಯಲ್ಲಿನ ಕ್ಷಿಪ್ರ ಬೆಳವಣಿಗೆಗೆ ಮುನ್ನುಡಿ ಬರೆದಿದೆ.

ಹೆಚ್ಚು ಓದಿದ ಸ್ಟೋರಿಗಳು

ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ ಎಐಎಡಿಎಂಕೆ, ಎನ್‌ಡಿಎಗೆ ಶಾಕ್‌..!

ಸೆ.26, ಬೆಂಗಳೂರು ಬಂದ್‌: ಮು.ಚಂದ್ರು , ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೂಪುರೇಷೆ ನಿರ್ಧಾರ..!

ಕಾವೇರಿ ಬಿಕ್ಕಟ್ಟು; ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಒತ್ತಾಯ

ತಮಗೆ ನೀಡಲಾದ ನೋಟಿಸ್ ಗೆ ಖಾಸಗಿ ಸುದ್ದಿಯೊಂದಿಗೆ ಮಾತನಾಡುತ್ತಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಯತ್ನಾಳ್ ಅವರು ಪಕ್ಷದಲ್ಲಿ ಬಣ ರಾಜಕೀಯ ತಾರಕಕ್ಕೇರಿರುವುದು ಹಾಗೂ ಪಕ್ಷದಲ್ಲಿ ಮೇಲುಗೈ ಸಾಧಿಸಲು ನಡೆಯುತ್ತಿರುವ ಹಗ್ಗಜಗ್ಗಾಟದ ಸೂಚನೆಗಳನ್ನು ಸ್ಪಷ್ಟವಾಗಿ ಗುರುತಿಸಿದ್ದಾರೆ. ಯತ್ನಾಳ್ ಮಾತಿನಲ್ಲಿ ಮೂರು ಪ್ರಮುಖ ವಿಚಾರಗಳು ಸ್ಪಷ್ಟವಾಗಿವೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕಾಲದಲ್ಲಿದ್ದ ಬಿಜೆಪಿಗೂ ಇಂದಿನ ನಾಯಕತ್ವಕ್ಕೂ ಸಾಕಷ್ಟು ವ್ಯತ್ಯಾಸವಿದೆ ಎಂಬುದನ್ನು ಉದಾಹರಣೆ ಸಮೇತ ವಿವರಿಸಿದ್ದಾರೆ. ಈ ಮೂಲಕ ಕೇಂದ್ರ ನಾಯಕತ್ವ ಏಕಪಕ್ಷೀಯವಾಗಿದೆ ಎಂಬ ಸಾರ್ವಜನಿಕ ಅಭಿಪ್ರಾಯಕ್ಕೆ ಅಧಿಕೃತ ಮುದ್ರೆ ಒತ್ತಿದ್ದಾರೆ.

ಪ್ರಧಾನಿ ಮೋದಿಯೊಂದಿಗೆ ಉತ್ತರ ಕರ್ನಾಟಕದ ಬಿಜೆಪಿ ನಾಯಕರೊಂದಿಗೆ ಯತ್ನಾಳ್

ಬಿಜೆಪಿ ರಾಜ್ಯ ಘಟಕದಲ್ಲಿ ಮೇಲುಗೈ ಸಾಧಿಸಲು ಕಳೆದೊಂದು ದಶಕದಿಂದ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ ಎನ್ನುವ ಮೂಲಕ ಬಣ ರಾಜಕೀಯದ ಕರಾಳಮುಖವನ್ನೂ ಪರಿಚಯಿಸಿದ್ದಾರೆ. ಇದೆಲ್ಲಕ್ಕೂ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಕಾರಣ ಎಂಬುದನ್ನು ಪರೋಕ್ಷವಾಗಿ ಧ್ವನಿಸುವ ಮೂಲಕ ರೋಗದ ಮೂಲವನ್ನೂ ಯತ್ನಾಳ್ ಗುರುತಿಸಿದ್ದಾರೆ. ತಮ್ಮ‌ ಆರೋಪಗಳಿಗೆ ಬಿ ಎಸ್ ಯಡಿಯೂರಪ್ಪ ಅವರ ಅಸಹಾಯಕ ಪರಿಸ್ಥಿತಿಯನ್ನು ಪ್ರಸ್ತಾಪಿಸಿರುವ ಯತ್ನಾಳ್ ಅವರು ತಮಗೆ ಆಗುತ್ತಿರುವ ಅನ್ಯಾಯಗಳಿಗೆ ಸಮುದಾಯದ ಅಸ್ಮಿತೆಯನ್ನು ಬಡಿದೆಬ್ಬಿಸುವ ಕೆಲಸವನ್ನೂ ಸೂಕ್ಷ್ಮವಾಗಿ ಆರಂಭಿಸಿದ್ದಾರೆ. ಇದರ ಭಾಗವಾಗಿಯೇ ಯಡಿಯೂರಪ್ಪ ಅವರ ಹೆಸರನ್ನು‌ ಪ್ರಸ್ತಾಪಿಸಿರುವುದು. ಪ್ರವಾಹಪೀಡಿತರ ಸಂಕಷ್ಟದ ಬಗ್ಗೆ ಪ್ರಧಾನ ಮಂತ್ರಿಗೆ ಮನವರಿಕೆ ಮಾಡಲು ಯತ್ನಿಸಿರುವ ಬಿ ಎಸ್ ವೈ ಗೆ ಕಾಲಾವಕಾಶ ನಿರಾಕರಿಸಲಾಗಿದೆ ಎನ್ನುವ ಮೂಲಕ ಕೇಂದ್ರ ನಾಯಕತ್ವದ ವಿರುದ್ಧ ನೇರ ಸಮರ ಸಾರಿದ್ದಾರೆ.

ಇದೆಲ್ಲಕ್ಕಿಂತಲೂ ಮಿಗಿಲಾಗಿ, ಬಿಜೆಪಿ ಹೊರತಾಗಿಯೂ ವಿಧಾನ ಪರಿಷತ್ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಗೆದ್ದು ತನ್ನ ಸಾಮರ್ಥ್ಯ ಪ್ರದರ್ಶಿಸಿದ್ದೇನೆ ಎನ್ನುವ ಮೂಲಕ ಮತ್ತೊಮ್ಮೆ ಉಚ್ಚಾಟನೆ ಶಿಕ್ಷೆಗೆ ಗುರಿಯಾದರೆ ಅದಕ್ಕೂ ಲೆಕ್ಕಿಸುವುದಿಲ್ಲ ಎಂಬುದನ್ನೂ ಬಿಜೆಪಿ ನಾಯಕತ್ವಕ್ಕೆ ಉತ್ತರಿಸಿದ್ದಾರೆ.
ವಿಧಾನಸಭಾ ಚುನಾವಣೆ ಹಾಗೂ ಅನಂತರದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಅನಪೇಕ್ಷಿತ ಹಾಗೂ ಅನಾವಶ್ಯಕ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಉತ್ತರ ಕನ್ನಡದ ಸಂಸದ ಅನಂತಕುಮಾರ್ ಹೆಗಡೆಯನ್ನು ಮೀರಿಸಿ, ಸಂಘ-ಪರಿವಾರವನ್ನು ಓಲೈಸುವ ವಿಫಲ ಸಾಹಸ ಮಾಡಿದ ಯತ್ನಾಳ್ ಸಕಾರಣವಾಗಿ ಪ್ರವಾಹಪೀಡಿತ ಜನರ ಪರವಾಗಿ ಧ್ವನಿ ಎತ್ತುವ ಮೂಲಕ ತಮ್ಮ ನೈಜ ವ್ಯಕ್ತಿತ್ವ ಅನಾವರಣಗೊಳಿಸಿದ್ದಾರೆ.

ಹುಸಿ, ನಕಲಿತನವೇ ಇಂದಿನ ಭಾರತದ ಮುಖ್ಯವಾಹಿನಿಯ ಭಾಗವಾಗಿರುವಾಗ ಕಹಿಸತ್ಯಗಳನ್ನು ಮಾತನಾಡುವ ಮೂಲಕ ಬಿಜೆಪಿಯಿಂದ ಹೊರನಡೆದ ಹಿರಿಯ ನಾಯಕರಾದ ಯಶವಂತ್ ಸಿನ್ಹಾ, ಅರುಣ್ ಶೌರಿ, ಶತ್ರುಘ್ನಾ ಸಿನ್ಹಾ ಅವರಿಗೆ ಎದುರಾದ ಸ್ಥಿತಿ ಯತ್ನಾಳ್ ಗೆ ಎದುರಾದರೆ ಆಶ್ಚರ್ಯವಿಲ್ಲ. ಒಟ್ಟಾರೆ ಪ್ರವಾಹ ಪರಿಸ್ಥಿತಿಯ ನೆಪದಲ್ಲಿ ಬಿಜೆಪಿಯ ಆಂತರಿಕ ಕಚ್ಚಾಟ ಸ್ಫೋಟಗೊಳ್ಳಬಹುದು. ಇದನ್ನು ಯಡಿಯೂರಪ್ಪ ನಿಷ್ಠರು ಸ್ವಾಭಿಮಾನದ ಹೋರಾಟವಾಗಿ ಬದಲಿಸುವರೋ ಇಲ್ಲ, ದೆಹಲಿ ಸುಲ್ತಾನರ ಮುಂದೆ ಕೈಕಟ್ಟಿ ನಿಲ್ಲುವರೋ ಎಂಬುದು ಕುತೂಹಲ ಮೂಡಿಸಿದೆ. ಎರಡನೇ ಸಾಧ್ಯತೆಯೇ ವಾಸ್ತವಕ್ಕೆ ಹತ್ತಿರ ಎನಿಸುತ್ತದೆ.‌

RS 500
RS 1500

SCAN HERE

Pratidhvani Youtube

«
Prev
1
/
5498
Next
»
loading
play
Bengaluru Bandh: ಫ್ರೀಡಂಪಾರ್ಕ್​ನಲ್ಲಿ ಕನ್ನಡ ಪರ ಸಂಘಟನೆಗಳ ಧರಣಿ!
play
D Boss Darshan: ದರ್ಶನ್ ಭಾಷಣದ ವೇಳೆ ಸುದೀಪ್ ಅಂತಾ ಹೇಳ್ತಿದ್ದಂತೆ ಹುಚ್ಚೆದ್ದು ಕುಣಿದ ಫ್ಯಾನ್ಸ್ | D
«
Prev
1
/
5498
Next
»
loading

don't miss it !

100 ದಿನದ ಸಂಭ್ರಮದಲ್ಲಿ ಶಕ್ತಿ ಯೋಜನೆ: ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ?
Top Story

100 ದಿನದ ಸಂಭ್ರಮದಲ್ಲಿ ಶಕ್ತಿ ಯೋಜನೆ: ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ?

by ಪ್ರತಿಧ್ವನಿ
September 20, 2023
ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯಲು ಕರವೇ ಮನವಿ, ಒಂದೇ ಬಾರಿ ರಾಜ್ಯ ಬಂದ್​ಗೆ ಪ್ಲಾನ್..?
ಇದೀಗ

ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯಲು ಕರವೇ ಮನವಿ, ಒಂದೇ ಬಾರಿ ರಾಜ್ಯ ಬಂದ್​ಗೆ ಪ್ಲಾನ್..?

by Prathidhvani
September 24, 2023
ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ವ್ಯಾಪಾರ- ವಹಿವಾಟು ಸ್ತಬ್ಧ!
Top Story

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ವ್ಯಾಪಾರ- ವಹಿವಾಟು ಸ್ತಬ್ಧ!

by ಪ್ರತಿಧ್ವನಿ
September 26, 2023
“ಕರ್ನಾಟಕದ ಅಳಿಯ” ನ ಹಾಡು ನೋಡಿ ಥ್ರಿಲ್ ಆದ “ಮುದ್ದಿನ ಅಳಿಯ”
ಸಿನಿಮಾ

“ಕರ್ನಾಟಕದ ಅಳಿಯ” ನ ಹಾಡು ನೋಡಿ ಥ್ರಿಲ್ ಆದ “ಮುದ್ದಿನ ಅಳಿಯ”

by ಪ್ರತಿಧ್ವನಿ
September 19, 2023
ಯಾವ ಲಾಭಕ್ಕಾಗಿ ಬಂದ್ ಮಾಡುತ್ತೀರಿ? ಡಿಕೆ ಶಿವಕುಮಾರ್‌
Top Story

ಯಾವ ಲಾಭಕ್ಕಾಗಿ ಬಂದ್ ಮಾಡುತ್ತೀರಿ? ಡಿಕೆ ಶಿವಕುಮಾರ್‌

by ಪ್ರತಿಧ್ವನಿ
September 23, 2023
Next Post
ಆರು ಹಂಪಿ ಸ್ಮಾರಕಗಳ ನಿರ್ವಹಣೆ ವಹಿಸಲಿರುವ ಖಾಸಗಿ ಸಂಸ್ಥೆಗಳು

ಆರು ಹಂಪಿ ಸ್ಮಾರಕಗಳ ನಿರ್ವಹಣೆ ವಹಿಸಲಿರುವ ಖಾಸಗಿ ಸಂಸ್ಥೆಗಳು

ಕೈಗಾ ಅಣು ವಿದ್ಯುತ್‌ ಸ್ಥಾವರ ವಿಸ್ತರಣೆ ಒಪ್ಪಿಗೆಯ ಸುತ್ತ….

ಕೈಗಾ ಅಣು ವಿದ್ಯುತ್‌ ಸ್ಥಾವರ ವಿಸ್ತರಣೆ ಒಪ್ಪಿಗೆಯ ಸುತ್ತ….

ಸಿ.ಎಂ. ಯಡಿಯೂರಪ್ಪ ಮುಂದಿದೆ ‘ಮಹಾ’ ಸವಾಲು

ಸಿ.ಎಂ. ಯಡಿಯೂರಪ್ಪ ಮುಂದಿದೆ ‘ಮಹಾ’ ಸವಾಲು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist