• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಿಜೆಪಿ ಜತೆ ಮೈತ್ರಿ ಮುರಿದುಕೊಂಡ ಮಿತ್ರ ಪಕ್ಷಗಳು    

by
January 21, 2020
in ದೇಶ
0
ಬಿಜೆಪಿ ಜತೆ ಮೈತ್ರಿ ಮುರಿದುಕೊಂಡ ಮಿತ್ರ ಪಕ್ಷಗಳು    
Share on WhatsAppShare on FacebookShare on Telegram

ಫೆಬ್ರವರಿ 8ರಂದು ನಡೆಯಲಿರುವ ದೆಹಲಿ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ಮಿತ್ರ ಪಕ್ಷ ಶಿರೋಮಣಿ ಅಕಾಲಿ ದಳ ಸ್ಪಷ್ಟಪಡಿಸಿದೆ. CAA ವಿಚಾರವಾಗಿ ಬಿಜೆಪಿ ಹಾಗೂ ಶಿರೋಮಣಿ ಅಕಾಲಿದಳದ ನಡುವೆ ಆರಂಭವಾದ ಮನಸ್ಥಾಪ ಇನ್ನೂ ಬಗೆಹರಿದಿಲ್ಲ. 70 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು ಈ ಚುನಾವಣೆಯ ಫಲಿತಾಂಶ ಫೆಬ್ರವರಿ 11ರಂದು ಹೊರ ಬೀಳಲಿದೆ.

ADVERTISEMENT

ಶಿರೋಮಣಿ ಅಕಾಲಿ ದಳದ ಶಾಸಕರಾಗಿರುವ ಮಂಜಿಂದರ್‌ ಸಿಂಗ್‌ ಸಿರ್ಸಾ ಅವರು ಹೇಳಿರುವ ಪ್ರಕಾರ, ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತಾಗಿ ಪಕ್ಷದ ನಿಲುವನ್ನು ಮರು ಪರಿಶೀಲನೆ ಮಾಡುವಂತೆ ಬಿಜೆಪಿಯು ಚುನಾವಣಾ ಪೂರ್ವ ಸಭೆಯಲ್ಲಿ ಆಗ್ರಹಿಸಿತ್ತು. ಆದರೆ, ಶಿರೋಮಣಿ ಅಕಾಲಿ ದಳ ಪಕ್ಷವು ತನ್ನ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. CAAಇಂದ ಮುಸ್ಲೀಂರನ್ನು ಹೊರಗಿಟ್ಟಿರುವುದು ಸರಿಯಲ್ಲ, ಎಂದು ಹೇಳಿದರು.

ಇನ್ನು, ತಮ್ಮ ಪಕ್ಷವು ಯೋಜಿತ ರಾಷ್ಟ್ರೀಯ ಪೌರತ್ವ ನೋಂದಣಿ (NRC)ಯನ್ನು ಕೂಡ ವಿರೋಧ ಮಾಡುತ್ತಿದ್ದು. ಭಾರತೀಯರು ತಮ್ಮ ಪೌರತ್ವವನ್ನು ಸಾಬೀತು ಪಡಿಸಲು ಸರತಿ ಸಾಲಿನಲ್ಲಿ ನಿಂತುಕೊಳ್ಳುವಂತೆ ಮಾಡುವ ಕಾನೂನು ಈ ದೇಶಕ್ಕೆ ಅಗತ್ಯವಿಲ್ಲ ಎಂದು ಹೇಳಿದರು. ಭಾರತವೊಂದು ಅದ್ಭುತವಾದ ರಾಷ್ಟ್ರ ಇಲ್ಲಿ ಕೋಮುವಾದಕ್ಕೆ ಅವಕಾಶವಿಲ್ಲ ಎಂದು ಬಿಜೆಪಿಗೆ ಪರೋಕ್ಷವಾಗಿ ಚಾಟಿ ಬೀಸಿದರು.

ಭಾರತವನ್ನು ಧರ್ಮದ ವಿಚಾರದಲ್ಲಿ ಮತ್ತೊಮ್ಮೆ ವಿಭಜನೆಗೊಳ್ಳಲು ಬಿಡುವುದಿಲ್ಲ. ಈ ಕುರಿತಾಗಿ ನಮ್ಮ ನಿಲುವನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ನಮ್ಮ ನಿಲುವು ಬದಲಾಯಿಸಿಕೊಳ್ಳುವ ಬದಲು, ನಾವು ಚುನಾವಣೆಯಿಂದಲೇ ಹಿಂದೆ ಸರಿಯುತ್ತೇವೆ ಎಂದು ಸಿರ್ಸಾ ಸ್ಪಷ್ಟಪಡಿಸಿದರು.

ದೆಹಲಿಯಲ್ಲಿ ಸುಮಾರು ಹತ್ತು ಲಕ್ಷಕ್ಕೂ ಮಿಕ್ಕಿ ಸಿಖ್ಖ್‌ ಮತದಾರರಿದ್ದು, ಅಕಾಲಿ ದಳದ ಈ ನಿರ್ಧಾರವು ಚುನಾವಣೆಯ ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀಳಲಿದೆ. ಮುಖ್ಯವಾಗಿ ಪಶ್ಚಿಮ ದೆಹಲಿಯ ಸುಮಾರು 10 ಕ್ಷೇತ್ರಗಳಲ್ಲಿ ಸಿಖ್ಖ್‌ ಸಮುದಾಯದ ಮತದಾರರು ಹೆಚ್ಚಿನ ಪಾಲು ಹೊಂದಿದ್ದಾರೆ. ಇದರಿಂದಾಗಿ, ಬಿಜೆಪಿಗೆ ಹೆಚ್ಚಿನ ಪ್ರಮಾಣದ ನಷ್ಟ ಉಂಟಾಗುವ ಸಂಭವಗಳು ಕೂಡಾ ಜಾಸ್ತಿಯಾಗಿವೆ.

ಇನ್ನು ಹರ್ಯಾಣದಲ್ಲಿ ಬಿಜೆಪಿಯೊಂದಿಗೆ ಕೈ ಜೋಡಿಸಿ ಸರ್ಕಾರ ನಿರ್ಮಿಸಿರುವ ಜನನಾಯಕ್‌ ಜನತಾ ಪಾರ್ಟಿ (ಜೆಜೆಪಿ) ಕೂಡ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ದೂರ ಉಳಿದಿದೆ. ಸೀಟು ಹಂಚಿಕೆ ವಿಚಾರದಲ್ಲಿ ಒಮ್ಮತ ಮೂಡಿ ಬರದ ಕಾರಣಕ್ಕೆ, ಈ ವರೆಗೆ ಮೈತ್ರಿಯ ವಿಚಾರವನ್ನು ತಳ್ಳಿ ಹಾಕುತ್ತಾ ಬಂದಿದ್ದ ಜೆಜೆಪಿಯನ್ನು ಬಿಜೆಪಿಯು ಸಂಪೂರ್ಣವಾಗಿ ಕಡೆಗಣಿಸಿ, ಸೋಮವಾರ ರಾತ್ರಿ ತನ್ನ ಕೊನೆಯ ಸ್ಪರ್ಧಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು.

ಈ ಬಾರಿ ದೆಹಲಿಯಲ್ಲಿ ಬಿಜೆಪಿಯೊಂದಿಗೆ ಜೆಡಿಯು ಹಾಗೂ ಎಲ್‌ಜೆಪಿ ಪಕ್ಷಗಳು ಮಾತ್ರ ಮೈತ್ರಿಯನ್ನು ಕಾಪಾಡಿಕೊಂಡು ಬಂದಿದ್ದು, ಉಳಿದ ಪಕ್ಷಗಳಿಗೆ ಕೊಕ್‌ ನೀಡಲಾಗಿದೆ. ಜೆಡಿಯು ಹಾಗೂ ಎಲ್‌ಜೆಪಿಗೆ ಮೂರು ಸೀಟುಗಳನ್ನು ಬಿಜೆಪಿಯು ಬಿಟ್ಟುಕೊಟ್ಟಿದೆ.

ಮನೋಜ್‌ ತಿವಾರಿ ನೇತೃತ್ವದಲ್ಲಿ ಈ ಬಾರಿ ಚುನಾವಣೆಗೆ ಸೊರ್ಧಿಸಲು ಹೊರಟಿರುವ ಬಿಜೆಪಿ ಪಕ್ಷಕ್ಕೆ ತೊಡಕಾಗಿರುವುದು ತಮ್ಮದೇ ಮೈತ್ರಿ ಪಕ್ಷಗಳು. CAA ವಿಚಾರದಲ್ಲಿ ತಮ್ಮ ಮೈತ್ರಿ ಪಕ್ಷಗಳೊಂದಿಗೆ ಒಮ್ಮತ ಮೂಡಿಸುವಲ್ಲಿ ಬಿಜೆಪಿಯು ಸಂಪೂರ್ಣವಾಗಿ ವಿಫಲವಾಗಿದೆ. ಅರಂವಿದ್‌ ಕೇಜ್ರಿವಾಲ್‌ ನೇತೃತ್ವದ ಆಪ್ ಎದುರು ಬಿಜೆಪಿಯು ಮತ್ತೊಮ್ಮೆ ಸೋಲಿನ ಭೀತಿಯನ್ನು ಎದುರು ನೋಡುವ ಎಲ್ಲಾ ಲಕ್ಷಣಗಳು ಕೂಡಾ ದೆಹಲಿಯಲ್ಲಿ ಕಾಣುತ್ತಿವೆ.

Tags: AM PrasadAravind KejriwalBJPCAADelhi ElectionNRCಬಿಜೆಪಿಮೈತ್ರಿರಾಷ್ಟ್ರೀಯ ಪೌರತ್ವ ನೋಂದಣಿಶಿರೋಮಣಿ ಅಕಾಲಿ ದಳ
Previous Post

ತುಕ್ಡೆ ತುಕ್ಡೆ ಗ್ಯಾಂಗ್‌ ಕುರಿತು ಯಾವುದೇ ಮಾಹಿತಿಯಿಲ್ಲ – ಗೃಹ ಸಚಿವಾಲಯ

Next Post

ಸಾಯಿಸುವ ದುರುದ್ದೇಶ ಹೊಂದಿದ್ದ ಪೊಲೀಸರು: ಟ್ರಿಬ್ಯುನಲ್ ಅಭಿಮತ

Related Posts

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ
ದೇಶ

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

by ಪ್ರತಿಧ್ವನಿ
November 18, 2025
0

  ದೆಹಲಿ: ಬಿಜೆಪಿಯು ಮತಕಳ್ಳತನಕ್ಕಾಗಿ ಎಸ್‌ಐಆ‌ರ್ ಪ್ರಕ್ರಿಯೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ‌‌‌ ವಿಶೇಷ ಮತ ಪರಿಷ್ಕರಣೆ ನಡೆಯುತ್ತಿರುವ 12 ರಾಜ್ಯಗಳು...

Read moreDetails
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

November 17, 2025
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

November 17, 2025
ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

November 17, 2025
ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

November 17, 2025
Next Post
ಸಾಯಿಸುವ ದುರುದ್ದೇಶ ಹೊಂದಿದ್ದ ಪೊಲೀಸರು: ಟ್ರಿಬ್ಯುನಲ್ ಅಭಿಮತ

ಸಾಯಿಸುವ ದುರುದ್ದೇಶ ಹೊಂದಿದ್ದ ಪೊಲೀಸರು: ಟ್ರಿಬ್ಯುನಲ್ ಅಭಿಮತ

Please login to join discussion

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada