Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಬಿಜೆಪಿ ಜತೆ ಮೈತ್ರಿ ಮುರಿದುಕೊಂಡ ಮಿತ್ರ ಪಕ್ಷಗಳು    

ಬಿಜೆಪಿ ಜತೆ ಮೈತ್ರಿ ಮುರಿದುಕೊಂಡ ಮಿತ್ರ ಪಕ್ಷಗಳು
ಬಿಜೆಪಿ ಜತೆ ಮೈತ್ರಿ ಮುರಿದುಕೊಂಡ ಮಿತ್ರ ಪಕ್ಷಗಳು    

January 21, 2020
Share on FacebookShare on Twitter

ಫೆಬ್ರವರಿ 8ರಂದು ನಡೆಯಲಿರುವ ದೆಹಲಿ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ಮಿತ್ರ ಪಕ್ಷ ಶಿರೋಮಣಿ ಅಕಾಲಿ ದಳ ಸ್ಪಷ್ಟಪಡಿಸಿದೆ. CAA ವಿಚಾರವಾಗಿ ಬಿಜೆಪಿ ಹಾಗೂ ಶಿರೋಮಣಿ ಅಕಾಲಿದಳದ ನಡುವೆ ಆರಂಭವಾದ ಮನಸ್ಥಾಪ ಇನ್ನೂ ಬಗೆಹರಿದಿಲ್ಲ. 70 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು ಈ ಚುನಾವಣೆಯ ಫಲಿತಾಂಶ ಫೆಬ್ರವರಿ 11ರಂದು ಹೊರ ಬೀಳಲಿದೆ.

ಹೆಚ್ಚು ಓದಿದ ಸ್ಟೋರಿಗಳು

ಭಯೋತ್ಪಾದಕ ಕೃತ್ಯದಲ್ಲಿ ನಿಜ್ಜರ್‌ ಕೈವಾಡ: ಕೆನಡಾದಲ್ಲಿ ಹತ್ಯೆಯಾದ ಖಲಿಸ್ತಾನಿ ವಿರುದ್ಧ ಭಾರತ ಆರೋಪ

ಮಂಡ್ಯ ಬಂದ್​ ಬಗ್ಗೆಯೂ ಕೊಂಕು ಮಾತು.. ರೈತರ ಬಗ್ಗೆ ಯಾಕೀ ಕೋಪ..?

ತಮಿಳುನಾಡಿನ ಮೇಲೆ ಹೆಚ್ಚಾಗ್ತಿದೆ ಕನ್ನಡಿಗರ ಆಕ್ರೋಶ: ಬಂದ್, ಪ್ರತಿಭಟನೆ ವೇಳೆ ಹೈಅಲರ್ಟ್​!

ಶಿರೋಮಣಿ ಅಕಾಲಿ ದಳದ ಶಾಸಕರಾಗಿರುವ ಮಂಜಿಂದರ್‌ ಸಿಂಗ್‌ ಸಿರ್ಸಾ ಅವರು ಹೇಳಿರುವ ಪ್ರಕಾರ, ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತಾಗಿ ಪಕ್ಷದ ನಿಲುವನ್ನು ಮರು ಪರಿಶೀಲನೆ ಮಾಡುವಂತೆ ಬಿಜೆಪಿಯು ಚುನಾವಣಾ ಪೂರ್ವ ಸಭೆಯಲ್ಲಿ ಆಗ್ರಹಿಸಿತ್ತು. ಆದರೆ, ಶಿರೋಮಣಿ ಅಕಾಲಿ ದಳ ಪಕ್ಷವು ತನ್ನ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. CAAಇಂದ ಮುಸ್ಲೀಂರನ್ನು ಹೊರಗಿಟ್ಟಿರುವುದು ಸರಿಯಲ್ಲ, ಎಂದು ಹೇಳಿದರು.

ಇನ್ನು, ತಮ್ಮ ಪಕ್ಷವು ಯೋಜಿತ ರಾಷ್ಟ್ರೀಯ ಪೌರತ್ವ ನೋಂದಣಿ (NRC)ಯನ್ನು ಕೂಡ ವಿರೋಧ ಮಾಡುತ್ತಿದ್ದು. ಭಾರತೀಯರು ತಮ್ಮ ಪೌರತ್ವವನ್ನು ಸಾಬೀತು ಪಡಿಸಲು ಸರತಿ ಸಾಲಿನಲ್ಲಿ ನಿಂತುಕೊಳ್ಳುವಂತೆ ಮಾಡುವ ಕಾನೂನು ಈ ದೇಶಕ್ಕೆ ಅಗತ್ಯವಿಲ್ಲ ಎಂದು ಹೇಳಿದರು. ಭಾರತವೊಂದು ಅದ್ಭುತವಾದ ರಾಷ್ಟ್ರ ಇಲ್ಲಿ ಕೋಮುವಾದಕ್ಕೆ ಅವಕಾಶವಿಲ್ಲ ಎಂದು ಬಿಜೆಪಿಗೆ ಪರೋಕ್ಷವಾಗಿ ಚಾಟಿ ಬೀಸಿದರು.

ಭಾರತವನ್ನು ಧರ್ಮದ ವಿಚಾರದಲ್ಲಿ ಮತ್ತೊಮ್ಮೆ ವಿಭಜನೆಗೊಳ್ಳಲು ಬಿಡುವುದಿಲ್ಲ. ಈ ಕುರಿತಾಗಿ ನಮ್ಮ ನಿಲುವನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ನಮ್ಮ ನಿಲುವು ಬದಲಾಯಿಸಿಕೊಳ್ಳುವ ಬದಲು, ನಾವು ಚುನಾವಣೆಯಿಂದಲೇ ಹಿಂದೆ ಸರಿಯುತ್ತೇವೆ ಎಂದು ಸಿರ್ಸಾ ಸ್ಪಷ್ಟಪಡಿಸಿದರು.

ದೆಹಲಿಯಲ್ಲಿ ಸುಮಾರು ಹತ್ತು ಲಕ್ಷಕ್ಕೂ ಮಿಕ್ಕಿ ಸಿಖ್ಖ್‌ ಮತದಾರರಿದ್ದು, ಅಕಾಲಿ ದಳದ ಈ ನಿರ್ಧಾರವು ಚುನಾವಣೆಯ ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀಳಲಿದೆ. ಮುಖ್ಯವಾಗಿ ಪಶ್ಚಿಮ ದೆಹಲಿಯ ಸುಮಾರು 10 ಕ್ಷೇತ್ರಗಳಲ್ಲಿ ಸಿಖ್ಖ್‌ ಸಮುದಾಯದ ಮತದಾರರು ಹೆಚ್ಚಿನ ಪಾಲು ಹೊಂದಿದ್ದಾರೆ. ಇದರಿಂದಾಗಿ, ಬಿಜೆಪಿಗೆ ಹೆಚ್ಚಿನ ಪ್ರಮಾಣದ ನಷ್ಟ ಉಂಟಾಗುವ ಸಂಭವಗಳು ಕೂಡಾ ಜಾಸ್ತಿಯಾಗಿವೆ.

ಇನ್ನು ಹರ್ಯಾಣದಲ್ಲಿ ಬಿಜೆಪಿಯೊಂದಿಗೆ ಕೈ ಜೋಡಿಸಿ ಸರ್ಕಾರ ನಿರ್ಮಿಸಿರುವ ಜನನಾಯಕ್‌ ಜನತಾ ಪಾರ್ಟಿ (ಜೆಜೆಪಿ) ಕೂಡ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ದೂರ ಉಳಿದಿದೆ. ಸೀಟು ಹಂಚಿಕೆ ವಿಚಾರದಲ್ಲಿ ಒಮ್ಮತ ಮೂಡಿ ಬರದ ಕಾರಣಕ್ಕೆ, ಈ ವರೆಗೆ ಮೈತ್ರಿಯ ವಿಚಾರವನ್ನು ತಳ್ಳಿ ಹಾಕುತ್ತಾ ಬಂದಿದ್ದ ಜೆಜೆಪಿಯನ್ನು ಬಿಜೆಪಿಯು ಸಂಪೂರ್ಣವಾಗಿ ಕಡೆಗಣಿಸಿ, ಸೋಮವಾರ ರಾತ್ರಿ ತನ್ನ ಕೊನೆಯ ಸ್ಪರ್ಧಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು.

ಈ ಬಾರಿ ದೆಹಲಿಯಲ್ಲಿ ಬಿಜೆಪಿಯೊಂದಿಗೆ ಜೆಡಿಯು ಹಾಗೂ ಎಲ್‌ಜೆಪಿ ಪಕ್ಷಗಳು ಮಾತ್ರ ಮೈತ್ರಿಯನ್ನು ಕಾಪಾಡಿಕೊಂಡು ಬಂದಿದ್ದು, ಉಳಿದ ಪಕ್ಷಗಳಿಗೆ ಕೊಕ್‌ ನೀಡಲಾಗಿದೆ. ಜೆಡಿಯು ಹಾಗೂ ಎಲ್‌ಜೆಪಿಗೆ ಮೂರು ಸೀಟುಗಳನ್ನು ಬಿಜೆಪಿಯು ಬಿಟ್ಟುಕೊಟ್ಟಿದೆ.

ಮನೋಜ್‌ ತಿವಾರಿ ನೇತೃತ್ವದಲ್ಲಿ ಈ ಬಾರಿ ಚುನಾವಣೆಗೆ ಸೊರ್ಧಿಸಲು ಹೊರಟಿರುವ ಬಿಜೆಪಿ ಪಕ್ಷಕ್ಕೆ ತೊಡಕಾಗಿರುವುದು ತಮ್ಮದೇ ಮೈತ್ರಿ ಪಕ್ಷಗಳು. CAA ವಿಚಾರದಲ್ಲಿ ತಮ್ಮ ಮೈತ್ರಿ ಪಕ್ಷಗಳೊಂದಿಗೆ ಒಮ್ಮತ ಮೂಡಿಸುವಲ್ಲಿ ಬಿಜೆಪಿಯು ಸಂಪೂರ್ಣವಾಗಿ ವಿಫಲವಾಗಿದೆ. ಅರಂವಿದ್‌ ಕೇಜ್ರಿವಾಲ್‌ ನೇತೃತ್ವದ ಆಪ್ ಎದುರು ಬಿಜೆಪಿಯು ಮತ್ತೊಮ್ಮೆ ಸೋಲಿನ ಭೀತಿಯನ್ನು ಎದುರು ನೋಡುವ ಎಲ್ಲಾ ಲಕ್ಷಣಗಳು ಕೂಡಾ ದೆಹಲಿಯಲ್ಲಿ ಕಾಣುತ್ತಿವೆ.

RS 500
RS 1500

SCAN HERE

Pratidhvani Youtube

«
Prev
1
/
5477
Next
»
loading
play
H. D. Kumaraswamy | ಕಾವೇರಿ ಹೋರಾಟಕ್ಕೆ ಮತ್ತಷ್ಟು ಬಲ ತುಂಬಲು ಮಾಜಿ ಸಿಎಂ ಹೆಚ್‌.ಡಿ.ಕೆ ಸಜ್ಜು..!
play
Kaveri | ಕಾವೇರಿ ಯಾರಿಗೆ ಸೇರಿದ್ದು..? ಯಾರ್ಯಾರ ರಾಜಕೀಯ ಏನು..? | HD Kumaraswamy | @PratidhvaniNews
«
Prev
1
/
5477
Next
»
loading

don't miss it !

ರೈತರ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ಕೊಟ್ಟಿದೆ: ಹೆಚ್​ಡಿ ಕುಮಾರಸ್ವಾಮಿ
Top Story

ರೈತರ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ಕೊಟ್ಟಿದೆ: ಹೆಚ್​ಡಿ ಕುಮಾರಸ್ವಾಮಿ

by ಪ್ರತಿಧ್ವನಿ
September 23, 2023
ಯಾವ ಲಾಭಕ್ಕಾಗಿ ಬಂದ್ ಮಾಡುತ್ತೀರಿ? ಡಿಕೆ ಶಿವಕುಮಾರ್‌
Top Story

ಯಾವ ಲಾಭಕ್ಕಾಗಿ ಬಂದ್ ಮಾಡುತ್ತೀರಿ? ಡಿಕೆ ಶಿವಕುಮಾರ್‌

by ಪ್ರತಿಧ್ವನಿ
September 23, 2023
ತೇಜಸ್ವಿನಿ ಶರ್ಮ ಹುಟ್ಟುಹಬ್ಬಕ್ಕೆ “ಫುಲ್ ಮೀಲ್ಸ್” ಚಿತ್ರತಂಡದಿಂದ ವಿಶೇಷ ಉಡುಗೊರೆ
ಸಿನಿಮಾ

ತೇಜಸ್ವಿನಿ ಶರ್ಮ ಹುಟ್ಟುಹಬ್ಬಕ್ಕೆ “ಫುಲ್ ಮೀಲ್ಸ್” ಚಿತ್ರತಂಡದಿಂದ ವಿಶೇಷ ಉಡುಗೊರೆ

by ಪ್ರತಿಧ್ವನಿ
September 17, 2023
ಕಾವೇರಿ ನೀರಿನ ವಿಚಾರ ಯಡಿಯೂರಪ್ಪನವರದ್ದು ರಾಜಕೀಯ ಹೇಳಿಕೆ ; ಸಿಎಂ ಸಿದ್ದರಾಮಯ್ಯ
Top Story

ಕಾವೇರಿ ನೀರಿನ ವಿಚಾರ ಯಡಿಯೂರಪ್ಪನವರದ್ದು ರಾಜಕೀಯ ಹೇಳಿಕೆ ; ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
September 17, 2023
BJP strongly opposed to Rahul Gandhi’s statement : ಪ್ರಧಾನಿ ಮೋದಿ ದೇವರನ್ನೂ ಕನ್ಫ್ಯೂಸ್ ಮಾಡುತ್ತಾರೆ ಹೇಳಿಕೆ ; ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಿಡಿ ..!
Top Story

ಭಾರತೀಯರ ಸಾಧನೆಗಳು ವಿಶ್ವದಾದ್ಯಂತ ಚರ್ಚಿಸಲ್ಪಡುತ್ತಿವೆ ; ಪ್ರಧಾನಿ ಮೋದಿ

by ಪ್ರತಿಧ್ವನಿ
September 18, 2023
Next Post
ಸಾಯಿಸುವ ದುರುದ್ದೇಶ ಹೊಂದಿದ್ದ ಪೊಲೀಸರು: ಟ್ರಿಬ್ಯುನಲ್ ಅಭಿಮತ

ಸಾಯಿಸುವ ದುರುದ್ದೇಶ ಹೊಂದಿದ್ದ ಪೊಲೀಸರು: ಟ್ರಿಬ್ಯುನಲ್ ಅಭಿಮತ

ಕೇಜ್ರಿವಾಲ್ ಎದುರು ಮಂಡಿಯೂರಿದ ಕಾಂಗ್ರೆಸ್

ಕೇಜ್ರಿವಾಲ್ ಎದುರು ಮಂಡಿಯೂರಿದ ಕಾಂಗ್ರೆಸ್, ಬಿಜೆಪಿ!

ಕೇರಳದ ಬೀಡಿಕಟ್ಟುವ ಮಹಿಳೆ ಮೇಲೆ ಮಂಗಳೂರಿನ ಸಿಎಎ ಗಲಭೆ ಸಂಬಂಧಿಸಿದಂತೆ ನೊಟೀಸ್

ಕೇರಳದ ಬೀಡಿಕಟ್ಟುವ ಮಹಿಳೆ ಮೇಲೆ ಮಂಗಳೂರಿನ ಸಿಎಎ ಗಲಭೆ ಸಂಬಂಧಿಸಿದಂತೆ ನೊಟೀಸ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist