• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಿಹಾರದ ಗದ್ದುಗೆ ಹಿಡಿಯುವತ್ತ ಬಿಜೆಪಿ, ಮಹಾಘಟಬಂಧನಕ್ಕೆ ಅನಿರೀಕ್ಷಿತ ಹಿನ್ನಡೆ

by
November 10, 2020
in ದೇಶ
0
ಬಿಹಾರದ ಗದ್ದುಗೆ ಹಿಡಿಯುವತ್ತ ಬಿಜೆಪಿ
Share on WhatsAppShare on FacebookShare on Telegram

ಬಹುನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಕರೋನಾ ಸಂಕಷ್ಟ ಮತ್ತು ನಿರುದ್ಯೋಗದ ಬಿಕ್ಕಟ್ಟಿನ ವಿಷಯದಲ್ಲಿ ದೇಶದ ಜನಸಾಮಾನ್ಯರ ಜನಾದೇಶವಾಗಲಿದೆ ಎಂಬ ಲೆಕ್ಕಾಚಾರಗಳು ಕೇಳಿಬಂದಿದ್ದವು. ಆದರೆ, ಇದೀಗ ಬಹುತೇಕ ಶೇ.50ರಷ್ಟು ಮತ ಎಣಿಕೆ ಮುಗಿಯುವ ಹೊತ್ತಿಗೆ ಬಿಜೆಪಿ ನೇತೃತ್ವದ ಎನ್ ಡಿಎ ಹೆಚ್ಚಿನ ಮುನ್ನಡೆ ಸಾಧಿಸಿದ್ದು, ಬಹುತೇಕ ಮುಂದಿನ ಸುತ್ತುಗಳಲ್ಲಿಯೂ ಇದೇ ಮುನ್ನಡೆ ಕಾಯ್ದುಕೊಂಡಲ್ಲಿ ಬಿಜೆಪಿ ಮೈತ್ರಿ ಮತ್ತೊಮ್ಮೆ ಬಿಹಾರದ ಅಧಿಕಾರದ ಗದ್ದುಗೆಗೇರುವುದು ನಿಶ್ಚಿತವಾಗಿದೆ.

ADVERTISEMENT

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಈ ಸಮರದಲ್ಲಿ ಸದ್ಯದ ಸ್ಥಿತಿಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಮೈತ್ರಿಕೂಟ ಮತ್ತು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ನೇತೃತ್ವದ ಮಹಾ ಘಟಬಂಧನ್ ಮೈತ್ರಿ ನಡುವೆ ತೀವ್ರ ಪೈಪೋಟಿ ಕಂಡುಬಂದಿದೆ. 133 ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಯುನ ಮೈತ್ರಿಕೂಟದ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದರೆ, 99 ಕ್ಷೇತ್ರಗಳಲ್ಲಿ ಮಹಾಘಟಬಂಧನದ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ಎರಡು ಕಡೆ ಚಿರಾಗ್ ಪಾಸ್ವಾನ್ ಅವರ ಎಲ್ ಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಹುತೇಕ ಚುನಾವಣಾ ಮತಗಟ್ಟೆ ಸಮೀಕ್ಷೆಗಳ ಲೆಕ್ಕಾಚಾರವನ್ನು ಈ ಆರಂಭಿಕ ಫಲಿತಾಂಶಗಳು ತಲೆಕೆಳಗು ಮಾಡಿದ್ದು, ಯಾವೊಂದು ಸಮೀಕ್ಷೆಯೂ ನಿರೀಕ್ಷೆ ಮಾಡದ ರೀತಿಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವತ್ತ ದಾಪುಗಾಲಿಟ್ಟಿದೆ. ಅದೇ ಹೊತ್ತಿಗೆ ಸಿಎಂ ನಿತೀಶ್ ಕುಮಾರ್ ಅವರ ಜೆಡಿಯು ಸಾಕಷ್ಟು ಸ್ಥಾನಗಳನ್ನು ಕಳೆದುಕೊಳ್ಳುವ ದಿಕ್ಕಿನಲ್ಲಿದ್ದು, ಬಹುತೇಕ ಅದರ ಅಭ್ಯರ್ಥಿಗಳಿಗೆ ಪಾಸ್ವಾನ್ ಅವರ ಎಲ್ ಜೆಪಿ ದೊಡ್ಡ ಪೆಟ್ಟು ಕೊಟ್ಟಿದೆ. ಆ ಮೂಲಕ ಬಿಜೆಪಿಯ ತಂತ್ರಗಾರಿಕೆ ಫಲಿಸಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಸದ್ಯದ ಫಲಿತಾಂಶದ ಚಿತ್ರಣದ ಪ್ರಕಾರ ಬಿಜೆಪಿ ಬಿಹಾರದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದ್ದು ,ಸಿಎಂ ನಿತೀಶ್ ಕುಮಾರ್ ಅವರ ಜೆಡಿಯು ತೀರಾ ಹೀನಾಯ ರೀತಿಯಲ್ಲಿ ಸೋಲು ಕಾಣುವ ಮೂಲಕ ಎನ್ ಡಿಎ ಮೈತ್ರಿಯಲ್ಲಿ ತನ್ನ ಪ್ರಾಮುಖ್ಯತೆ ಕಳೆದುಕೊಳ್ಳುವ ಹಾದಿಯಲ್ಲಿದೆ.

Also Read: ನಿತೀಶ್ ಕುಮಾರ್ ಮತ್ತು ಬಿಜೆಪಿಗೆ ನಿರ್ಣಾಯಕವಾಗಿರುವ ಬಿಹಾರ ಗೆಲುವು!

ಈ ನಡುವೆ ಎಲ್ಲಾ ಮತಗಟ್ಟೆ ಸಮೀಕ್ಷೆ ಮತ್ರು ಚುನಾವಣಾ ವಿಶ್ಲೇಷಣೆಗಳನ್ನು ತಲೆ ಕೆಳಗು ಮಾಡುವಂತೆ ಮಹಾಘಟಬಂಧನದ ಪ್ರಮುಖ ಪಕ್ಷಗಳಾದ ತೇಜಸ್ವಿ ಯಾದವ್ ಅವರ ಜೆಡಿಯು ಮತ್ತು ಕಾಂಗ್ರೆಸ್ ಕಳೆದ ಬಾರಿಗಿಂತ ಕಳಪೆ ಸಾಧನೆಯ ಹಾದಿಯಲ್ಲಿದ್ದರೆ, ಸಿಪಿಐಎಂಎಲ್, ಸಿಪಿಐ, ಸಿಪಿಎಂ ಸೇರಿದಂತೆ ಮಹಾಘಟಬಂಧನದ ಸಣ್ಣಪಕ್ಣಗಳು ಅಚ್ಷರಿಯ ಮುನ್ನಡೆ ಪಡೆದಿವೆ.

ಈ ನಡುವೆ, ಬಿಜೆಪಿ ತನ್ನದೇ ಮೈತ್ರಿಯ ಜೆಡಿಯು ಮತ್ತು ಅದರ ನಾಯಕ ನಿತೀಶ್ ವಿರುದ್ಧದ ತಂತ್ರಗಾರಿಕೆಯ ಭಾಗವಾಗಿ ಎಲ್ ಜೆಪಿಗೆ ಪರೋಕ್ಷ ಬೆಂಬಲ ನೀಡುತ್ತಿದೆ ಮತ್ರು ಆ ಮೂಲಕ ಮೈತ್ರಿಯಲ್ಲಿ ನಿತೀಶ್ ಪ್ರಭಾವ ಕುಗ್ಗಿಸುವ ಲೆಕ್ಕಾಚಾರ ಇದೆ ಎಂಬ ಚುನಾವಣಾ ವಿಶ್ಲೇಷಣೆಗಳ ಊಹೆಯಂತೆ ಎಲ್ ಜೆಪಿ ಬಹುತೇಕ ಕಡೆ ಜೆಡಿಯುಗೆ ಕಡಿವಾಣ ಹಾಕಿದೆ. ಹಾಗಾಗಿ ಬಿಜೆಪಿ ನೇತೃತ್ವದ ಎನ್ ಡಿಎ ಈಗಿನ ಮುನ್ನಡೆಯನ್ನೇ ಕಾಯ್ದುಕೊಂಢು ಜಯಗಳಿಸಿದರೂ ಚುನಾವಣಾ ಘೋಷಣೆಯಂತೆ ನಿತಿಶ್ ಅವರೇ ಸಿಎಂ ಅಗುವರೆ ಅಥವಾ ಸ್ಚತಃ ನಿತೀಶ್ ಮೈತ್ರಿ ಮುರಿದುಕೊಂಡು ಎರಡನೇ ಅತಿಹೆಚ್ಚು ಸ್ಥಾನ ಗಳಿಸುವ ಸಾಧ್ಯತೆ ಇರುವ ತೇಜಸ್ವಿ ಯಾದವ್ ಜೊತೆ ಕೈಜೋಡಿಸುವರೇ ಎಂಬುದು ಕುತೂಹಲ ಮೂಡಿಸಿದೆ.

ಸದ್ಯದ ಮಾಹಿತಿಯ ಪ್ರಕಾರ, ಎನ್ ಡಿಎ 130 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆ ಪೈಕಿ ಬಿಜೆಪಿ 77, ಜೆಡಿಯು 45, ಇತರೆ 8 ,ಕ್ಷೇತ್ರಗಳಲ್ಲಿ ಮುಂದಿವೆ. ಮಹಾಘಟನಬಂಧನ 102 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದ್ದು, ಆ ಪೈಕಿ ಆರ್ ಜೆಡಿ 66, ಕಾಂಗ್ರೆಸ್ 18, ಸಿಪಿಐಎಂಎಲ್ 11, ಇತರೆ 7 ಕಡೆ ಮುನ್ನಡೆಯಲ್ಲಿವೆ. ಎಲ್ ಜೆಪಿ ಎರಡು ಕಡೆ ಮುನ್ನಡೆ ಪಡೆದಿದೆ.

Tags: ಬಿಹಾರಬಿಹಾರ ಚುನಾವಣೆಬಿಹಾರ ಮುಖ್ಯಮಂತ್ರಿಬಿಹಾರ ರಾಜ್ಯ ಸರ್ಕಾರಬಿಹಾರ ವಿಧಾನಸಭಾ ಚುನಾವಣೆಮಹಾಘಟಬಂಧನ್
Previous Post

ಬಾಂಬೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಅರ್ನಾಬ್

Next Post

BJP ಸರ್ಕಾರದ ಕಳೆದ 15 ತಿಂಗಳ ಕಾಳಜಿ ಚುನಾವಣೆ ಗೆಲ್ಲಿಸಿತು -ಕುಮಾರಸ್ವಾಮಿ

Related Posts

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ನಿನ್ನೆ (ಜೂನ್.19) 55ನೇ ವರ್ಷಕ್ಕೆ ಕಾಲಿಟ್ಟಿದ್ದು,ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೆ  ಅಭಿಮಾನಿಗಳು ತಮ್ಮ...

Read moreDetails
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
BJP ಸರ್ಕಾರದ ಕಳೆದ 15 ತಿಂಗಳ ಕಾಳಜಿ ಚುನಾವಣೆ ಗೆಲ್ಲಿಸಿತು -ಕುಮಾರಸ್ವಾಮಿ

BJP ಸರ್ಕಾರದ ಕಳೆದ 15 ತಿಂಗಳ ಕಾಳಜಿ ಚುನಾವಣೆ ಗೆಲ್ಲಿಸಿತು -ಕುಮಾರಸ್ವಾಮಿ

Please login to join discussion

Recent News

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 20, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada