Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಬೃಹತ್‌ ಮೋಸ ಬಯಲು

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಬೃಹತ್‌ ಮೋಸ ಬಯಲು
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಬೃಹತ್‌ ಮೋಸ ಬಯಲು

February 17, 2020
Share on FacebookShare on Twitter

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಗುತ್ತಿಗೆದಾರರಿಗೆ ಹಣ ಪಾವತಿ ಮಾಡುವ ಸಂದರ್ಭದಲ್ಲಿ ಸುಮಾರು 4.15ಕೋಟಿಯಷ್ಟು ಅವ್ಯವಹಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತಾಗಿ FIR ದಾಖಲಾದ ಒಂದು ವಾರದೊಳಗೆ ಈ ಅವ್ಯವಹಾರದಲ್ಲಿ ಭಾಗಿಯಾಗಿದ್ದ ನಾಲ್ವರನ್ನು ಬೆಂಗಳೂರು ಮೆಟ್ರೊಪಾಲಿಟನ್‌ ಟಾಸ್ಕ್‌ ಫೋರ್ಸ್‌ (BMTF) ಅಧಿಕಾರಿಗಳು ಬಂಧಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಬೆಂಗಳೂರಿನಾದ್ಯಂತ ‘ಕಾವೇರಿ’ ಹೋರಾಟದ ಕಿಚ್ಚು: ಪ್ರತಿಭಟನಾಕಾರರ ಬಂಧನಕ್ಕೆ ಮುಖ್ಯಮಂತ್ರಿ ಚಂದ್ರು ಕಿಡಿ

ಸುಪ್ರೀಂ ಕೋರ್ಟ್ ಗಮನ ಸೆಳೆಯಲು ಬೀದಿಗಿಳಿದು ಹೋರಾಟ ಅನಿವಾರ್ಯ: ಬಸವರಾಜ ಬೊಮ್ಮಾಯಿ

ಕಾವೇರಿ ವಾಗ್ವಾದ : ಕರ್ನಾಟಕ ಜಲ ಸಂರಕ್ಷಣಾ ಸಮಿತಿ ವತಿಯಿಂದ ಸಿಎಂಗೆ ಹಕ್ಕೊತ್ತಾಯ ಪತ್ರ ಸಲ್ಲಿಕೆ

ಈ ಅವ್ಯವಹಾರವನ್ನು ಕಂಡುಹಿಡಿದ BBMPಯ ಮುಖ್ಯ ಲೆಕ್ಕಾಧಿಕಾರಿಯಾದ ಡಾ. ಗೋವಿಂದರಾಜು ಅವರು ಫೆಬ್ರುವರಿ 12, 2020ರಂದು ಈ ಕುರಿತಾಗಿ ದೂರು ದಾಖಲಿಸಿದ್ದರು. ತಮ್ಮ ಕಚೇರಿಯಲ್ಲಿ ಲೆಕ್ಕಾಧಿಕಾರಿಗಳಾಗಿರುವ ಕಾರ್ಯ ನಿರ್ವಹಿಸುತ್ತಿರುವ ರಾಮಮೂರ್ತಿ ಆರ್‌ ಮತ್ತು ಅನಿತಾ, ಎರಡನೇ ದರ್ಜೆ ಗುಮಾಸ್ತ ರಾಘವೇಂದ್ರ ಹಾಗೂ HDFC ಮತ್ತು ಜನತಾ ಸೇವಾ ಕೋ-ಆಪರೇಟಿವ್‌ ಬ್ಯಾಂಕ್‌ ನ ಮ್ಯಾನೇಜರ್‌ಗಳ ಮೇಲೆ ದೂರು ಸಲ್ಲಿಸಿದ್ದರು.

ಈ ಐವರ ಮೇಲೆ ಅಕ್ರಮವಾಗಿ ಲಾಭ ಮಾಡುವ ಉದ್ದೇಶದಿಂದ ಕಾಮಗಾರಿಯ ಬಿಲ್ಲುಗಳ ಪಾವತಿಯಲ್ಲಿ ಅಕ್ರಮವೆಸಗಿ ಪಾಳಿಕೆಗೆ ನಷ್ಟ ಉಂಟು ಮಾಡಿರುವ ಆರೋಪವನ್ನು ದಾಖಲಿಸಲಾಗಿತ್ತು. ಅಷ್ಟಕ್ಕೂ ಈ ಐವರು ಸೇರಿ ಮಾಡಿದ್ದೇನೆಂದರೆ, ಆನ್ಲೈನ್‌ ಮೂಲಕ ಹಣ ಪಾವತಿ ಮಾಡುವ ಉದ್ದೇಶದಿಂದ ತೆರೆಯಲಾಗಿರುವ IFMS ತಂತ್ರಾಂಶದಲ್ಲಿ ಅಪ್‌ಲೋಡ್‌ ಆಗಿದ್ದ Cancelled Cheque ಅನ್ನು ತಿದ್ದಿ, ತಮಗೆ ಬೇಕಾಗಿರುವ ರೀತಿಯಲ್ಲಿ ಬದಲಾಯಿಸಿಕೊಂಡಿದ್ದಾರೆ ಹಾಗೂ ಗುತ್ತಿಗೆದಾರನ ಖಾತೆಯ ಬದಲಿಗೆ ಬೇರೆಯವರ ಖಾತೆಗೆ ಹಣ ವರ್ಗಾಯಿಸಿದ್ದಾರೆ. IFMS ತಂತ್ರಾಂಶದಲ್ಲಿ ಈ ತಿದ್ದುಪಡಿಯನ್ನು ಗಮನಿಸಿದ ಗೊವಿಂದರಾಜು ಅವರು ತಕ್ಷಣವೇ ಈ ಕುರಿತಾಗಿ ದೂರನ್ನು ಸಲ್ಲಿಸಿದ್ದಾರೆ. ಯಾರ ಖಾತೆಗೆ ಹಣ ಜಮಾ ಆಗಿದೆಯೋ, ಅವರು ಖಾತೆಯಿಂದ ಹಣವನ್ನು withdraw ಮಾಡಿರುವುದಾಗಿ ಬ್ಯಾಂಕಿನ ಸಿಬ್ಬಂದಿ ಧೃಡಪಡಿಸಿದ್ದಾರೆ.

ಈ ಅವ್ಯವಹಾರದ ಕುರಿತು ದೂರು ದಾಖಲಾಗುತ್ತಿದ್ದಂತೆ ವಿಚಾರಣೆ ಆರಂಭಿಸಿದ BMTF ಅಧಿಕಾರಿಗಳು, ಒಂದೇ ವಾರದೊಳಗೆ ರಾಮಮೂರ್ತಿ, ಅನಿತಾ, ನಾಗೇಶ್‌ ಹಾಗೂ ಗಂಗಾಧರ್‌ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಈಗಾಗಲೇ 3.86 ಕೋಟಿ ಮೊತ್ತವನ್ನು ವಶಪಡಿಸಿಕೊಳ್ಳಲಾಗಿದ್ದು, ಇನ್ನು 29 ಲಕ್ಷ ರೂಪಾಯಿ ಕುರಿತು ತನಿಖೆ ನಡೆಸಲಾಗುತ್ತಿದೆ. ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ಇನ್ನೋರ್ವ ವ್ಯಕ್ತಿ ರಾಘವೇಂದ್ರ ತಲೆಮರೆಸಿಕೊಂಡಿದ್ದು ಅವರನ್ನು ಶೀಘ್ರವೇ ಪತ್ತೆ ಹಚ್ಚಲಾಗುವುದು ಎಂದು, BMTF ಮುಖ್ಯ ಅಧೀಕ್ಷಕರಾದ ಓಬಳೇಶ್‌ ತಿಳಿಸಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
5515
Next
»
loading
play
Tamil Naduನಲ್ಲಿ Siddaramaiah ಫೋಟೋಗೆ ಹಾರ ಹಾಕಿ ಧರಣಿ | ರಾಮನಗರದಲ್ಲಿ ತಮಿಳುನಾಡು ಸಿಎಂ Stalin​ಗೆ ತಿಥಿ!
play
Mandya : ರಾಮನಗರದಲ್ಲಿ ತಮಿಳುನಾಡು ಸಿಎಂ Stalin​ಗೆ ತಿಥಿ!
«
Prev
1
/
5515
Next
»
loading

don't miss it !

Top Story

ಯುವತಿ ರಾತ್ರಿ ಮಲಗಿದ್ದ ಕೋಣೆಯ ಬಳಿ ಬಂದು ಕಿರುಕುಳ – ನೆರೆಮನೆಯಾತನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಪ್ರಕರಣ

by ಪ್ರತಿಧ್ವನಿ
September 22, 2023
ತಮಿಳುನಾಡಿನ ಮೇಲೆ ಹೆಚ್ಚಾಗ್ತಿದೆ ಕನ್ನಡಿಗರ ಆಕ್ರೋಶ: ಬಂದ್, ಪ್ರತಿಭಟನೆ ವೇಳೆ ಹೈಅಲರ್ಟ್​!
Top Story

ತಮಿಳುನಾಡಿನ ಮೇಲೆ ಹೆಚ್ಚಾಗ್ತಿದೆ ಕನ್ನಡಿಗರ ಆಕ್ರೋಶ: ಬಂದ್, ಪ್ರತಿಭಟನೆ ವೇಳೆ ಹೈಅಲರ್ಟ್​!

by ಕೃಷ್ಣ ಮಣಿ
September 23, 2023
ಮುಖ್ಯಮಂತ್ರಿ ಆಕಾಂಕ್ಷಿ ನಾಯಕರಿಗೆ ಇಷ್ಟೊಂದು ಕಠಿಣ ಭಾಷೆ ಅವಶ್ಯವೇ..?
Top Story

ಮುಖ್ಯಮಂತ್ರಿ ಆಕಾಂಕ್ಷಿ ನಾಯಕರಿಗೆ ಇಷ್ಟೊಂದು ಕಠಿಣ ಭಾಷೆ ಅವಶ್ಯವೇ..?

by ಲಿಖಿತ್‌ ರೈ
September 21, 2023
100 ದಿನದ ಸಂಭ್ರಮದಲ್ಲಿ ಶಕ್ತಿ ಯೋಜನೆ: ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ?
Top Story

100 ದಿನದ ಸಂಭ್ರಮದಲ್ಲಿ ಶಕ್ತಿ ಯೋಜನೆ: ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ?

by ಪ್ರತಿಧ್ವನಿ
September 20, 2023
ಸುಪ್ರೀಂ ಕೋರ್ಟ್ ಗಮನ ಸೆಳೆಯಲು ಬೀದಿಗಿಳಿದು ಹೋರಾಟ ಅನಿವಾರ್ಯ: ಬಸವರಾಜ ಬೊಮ್ಮಾಯಿ
Top Story

ಸುಪ್ರೀಂ ಕೋರ್ಟ್ ಗಮನ ಸೆಳೆಯಲು ಬೀದಿಗಿಳಿದು ಹೋರಾಟ ಅನಿವಾರ್ಯ: ಬಸವರಾಜ ಬೊಮ್ಮಾಯಿ

by ಪ್ರತಿಧ್ವನಿ
September 26, 2023
Next Post
ಭಾರತಕ್ಕೆ ಕಾಶ್ಮೀರ ವಿವಾದ ಯಾವಾಗಲೂ ಜೀವಂತವಾಗಿಯೇ ಇರಬೇಕಾ?

ಭಾರತಕ್ಕೆ ಕಾಶ್ಮೀರ ವಿವಾದ ಯಾವಾಗಲೂ ಜೀವಂತವಾಗಿಯೇ ಇರಬೇಕಾ?

ಬಿಜೆಪಿಯಲ್ಲಿ ಮಧ್ಯರಾತ್ರಿ ಬುಗಿಲೆದ್ದ ಬಂಡಾಯ?!

ಬಿಜೆಪಿಯಲ್ಲಿ ಮಧ್ಯರಾತ್ರಿ ಬುಗಿಲೆದ್ದ ಬಂಡಾಯ?!

ಏನಿದು ಕಲಂ 370? ಇದರ ಹಿನ್ನೆಲೆ

ಏನಿದು ಕಲಂ 370? ಇದರ ಹಿನ್ನೆಲೆ, ಇತಿಹಾಸವೇನು? ಭವಿಷ್ಯದ ಮೇಲಾಗುವ ಪರಿಣಾಮಗಳೇನು? ಇಲ್ಲಿದೆ ಮಾಹಿತಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist