• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರು ಮಳೆಗೆ ಮತ್ತಷ್ಟು ಹದೆಗೆಟ್ಟ ವೃಷಭಾವತಿ ತಡೆ ಗೋಡೆ

by
September 11, 2020
in ಕರ್ನಾಟಕ
0
ಬೆಂಗಳೂರು ಮಳೆಗೆ ಮತ್ತಷ್ಟು ಹದೆಗೆಟ್ಟ ವೃಷಭಾವತಿ ತಡೆ ಗೋಡೆ
Share on WhatsAppShare on FacebookShare on Telegram

ಜೂನ್ 25ರಂದು ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೊಚ್ಚಿಹೋಗಿದ್ದ ದುಬಾಸಿ ಪಾಳ್ಯ ಬಳಿಯ ವೃಷಾಭಾವತಿ ತಡೆ ಗೋಡೆ ಕಳೆದ ಎರಡು ದಿನಗಳ ಮಳೆಯಿಂದಾಗಿ ಮತ್ತಷ್ಟು ಕುಸಿದಿದೆ. ಕಾಂಕ್ರಿಟ್‌ ಕಾಮಗಾರಿ ಬಹುತೇಕ ಪೂರ್ಣಗೊಂಡ ಸಮಯದಲ್ಲಿ, ಬೆಂಗಳೂರಿನಾದ್ಯಂತ ಸುರಿದ ಭಾರೀ ಮಳೆಯಿಂದಾಗಿ, ತಡೆಗೋಡೆ ಮರು ನಿರ್ಮಾಣ ಕಾರ್ಯ ಮತ್ತಷ್ಟು ತೊಂದರೆ ಅನುಭವಿಸುತ್ತಿದೆ.

ADVERTISEMENT

ಎರಡು ದಿನಗಳ ಹಿಂದೆ ಸುರಿದ ಧಾರಾಕಾರ ಮಳೆಯಿಂದಾಗಿ ಸಂಪೂರ್ಣ ಬೆಂಗಳೂರು ನಲುಗಿ ಹೋಗಿತ್ತು. ಇದಕ್ಕೆ ವೃಷಾಭಾವತಿಗೆ ನಿರ್ಮಿಸಲಾಗಿದ್ದ ತಡೆಗೋಡೆ ನಿರ್ಮಾಣ ಕಾರ್ಯ ಕೂಡಾ ಹೊರತಾಗಿಲ್ಲ. ತಡೆಗೋಡೆ ಮರು ನಿರ್ಮಿಸಲು ಕಲ್ಲುಗಳನ್ನು ಪುಡಿಗಟ್ಟಿ ಮಣ್ಣು ಹಾಕಿ ನಿರ್ಮಿಸಲಾಗಿದ್ದ ಒಡ್ಡು ಸಂಪೂರ್ಣವಾಗಿ ಕೊಚ್ಚಿಹೋಗಿದ್ದು, ಹೊಸದಾಗಿ ಹಾಕಿದ್ದ ಕಾಂಕ್ರಿಟ್ ಗೋಡೆ ಕೂಡಾ ನೀರುಪಾಲಾಗಿದೆ.

ಹೊಸದಾಗಿ ನಿರ್ಮಿಸಲಾದ ರಸ್ತೆಯು ಸಂಪೂರ್ಣವಾಗಿ ಕುಸಿಯುವ ಸೂಚನೆಯಿದ್ದು, ಅಲ್ಲಲ್ಲಿ ಬಿರುಕು ಮೂಡಿದೆ. ಬಿರುಕು ಮೂಡಿರುವ ಭಾಗದಿಂದ ಪಕ್ಕದಲ್ಲಿರುವ ಮೆಟ್ರೋ ಕಂಭಗಳ ನಡುವೆ ಕೇವಲ ಎಂಟರಿಂದ ಹತ್ತು ಮೀಟರ್‌ಗಳಷ್ಟು ಮಾತ್ರ ವ್ಯತ್ಯಾಸವಿದ್ದು, ಮೆಟ್ರೋ ಕಂಭಗಳಿಗೂ ಕೂಡಾ ಹಾನಿಯಾಗುವ ಸಂಭವವನ್ನು ಅಲ್ಲಗೆಳೆಯುವಂತಿಲ್ಲ.

ಈ ಕುರಿತಾಗಿ ಪ್ರತಿಧ್ವನಿಯೊಂದಿಗೆ ಮಾತನಾಡಿದ ಸತೀಶ್ ಎಂಬುವವರು, ತಡೆಗೋಡೆಯನ್ನು ಕಟ್ಟುವ ಕೆಲಸ ಕ್ಷಿಪ್ರಗತಿಯಲ್ಲಿ ನಡೆದರೂ, ಮಳೆ ಎಲ್ಲಾ ಕೆಲಸಗಳಿಗೂ ಅಡ್ಡಿಪಡಿಸುತ್ತಿದೆ ಎಂದು ಹೇಳಿದ್ದಾರೆ. ಗುತ್ತಿಗಾದಾರರಿಗೆ ಸಂಪೂರ್ಣ ನಷ್ಟವಾಗುತ್ತಿದ್ದು, ದಿನಾ ಸುರಿಯುವ ಮಳೆ ತಂದಿಡುವ ಕಸಗಡ್ಡಿಗಳನ್ನು ತೆರವುಗೊಳಿಸುವುದೇ ನಿತ್ಯಕೆಲಸವಾಗಿದೆ. ಅದಕ್ಕಾಗಿಯೇ ಎರಡು ಹಿಟಾಚಿ ಯಂತ್ರಗಳನ್ನು ಇರಿಸಲಾಗಿದೆ, ಕಾಲುವೆಯಲ್ಲಿ ನಿಂತ ಕಸಗಡ್ಡಿಗಳಿಂದಾಗಿ ನೀರು ಸುಸೂತ್ರವಾಗಿ ಹರಿಯದೆ, ಕೊಳಚೆ ನೀರು ರಸ್ತೆಯ ಮೇಲೆ ಬರುತ್ತದೆ, ಅದನ್ನು ಈ ಯಂತ್ರಗಳು ತೆರವುಗೊಳಿಸಿ, ಸರಾಗ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದೆ ಎಂದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪ್ರತೀ ಬಾರಿ ಮಳೆ ಬಂದಾಗಲೂ, ತಡೆಗೋಡೆ ಕುಸಿದು ಉಳಿದಿರುವ ಅವಶೇಷಗಳು ವೃಷಾಭಾವತಿಯ ಒಡಲು ಸೇರಿ, ಮತ್ತೆ ನೀರಿಯ ಹರಿವನ್ನು ತಡೆಯುತ್ತಿದೆ. ಇದನ್ನು ತೆರವುಗೊಳಿಸುವಷ್ಟರಲ್ಲಿ, ಮತ್ತೆ ಸುರಿವ ಮಳೆಯು, ತಡೆಗೋಡೆ ನಿರ್ಮಾಣ ಕಾರ್ಮಿಕರನ್ನು ಹೈರಾಣಾಗಿಸಿದೆ. ಒಟ್ಟಿನಲ್ಲಿ, ಬೆಂಗಳೂರಿನ ಮಳೆಯ ಅಬ್ಬರಕ್ಕೆ, ವೃಷಾಭಾವತಿ ತಡೆಗೋಡೆ ನಿರ್ಮಾಣ ಕಾರ್ಯ ಸುಸೂತ್ರವಾಗಿ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ತಡೆಗೋಡೆ ನಿರ್ಮಾಣವಾಗುವವರೆಗೂ, ವಾಹನಗಳು ರಸ್ತೆಯ ಒಂದು ಭಾಗದಲ್ಲಿ ಮಾತ್ರ ಚಲಿಸಬೇಕಾಗಿದೆ. ಹಾಗಾಗಿ ಸವಾಲುಗಳನ್ನು ನಿವಾರಿಸಿ ತಡೆಗೋಡೆ ನಿರ್ಮಾಣ ಕಾರ್ಯ ಆದಷ್ಟು ಶೀಘ್ರದಲ್ಲಿ ಮುಗಿಸುವತ್ತ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕಿದೆ.

Tags: ಬೆಂಗಳೂರುಬೆಂಗಳೂರು ಮಳೆ
Previous Post

ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣ: ಜೂನ್‌ ಮಧ್ಯದಲ್ಲೇ ಆರೋಪಿಗಳಿಗೆ ಸಿಕ್ಕಿತ್ತು ದಾಳಿಯ ಮಾಹಿತಿ

Next Post

ಕರೋನಾ ಇಲ್ಲ, ಮಮತಾ ನಾಟಕವಾಡುತ್ತಿದ್ದಾರೆ: ಬಿಜೆಪಿ ನಾಯಕ ದಿಲೀಪ್ ಘೋಷ್ ಹಾಸ್ಯಾಸ್ಪದ ಹೇಳಿಕೆ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಕರೋನಾ ಇಲ್ಲ

ಕರೋನಾ ಇಲ್ಲ, ಮಮತಾ ನಾಟಕವಾಡುತ್ತಿದ್ದಾರೆ: ಬಿಜೆಪಿ ನಾಯಕ ದಿಲೀಪ್ ಘೋಷ್ ಹಾಸ್ಯಾಸ್ಪದ ಹೇಳಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada