• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬ್ಯಾಂಕುಗಳ ನಿಷ್ಕ್ರಿಯ ಸಾಲದ ಸಂಕಷ್ಟ; ಒಂದು ಲಕ್ಷ ಕೋಟಿ ರುಪಾಯಿ ಏರಿಕೆ!

by
November 14, 2019
in ದೇಶ
0
ಬ್ಯಾಂಕುಗಳ ನಿಷ್ಕ್ರಿಯ ಸಾಲದ ಸಂಕಷ್ಟ;  ಒಂದು ಲಕ್ಷ ಕೋಟಿ ರುಪಾಯಿ ಏರಿಕೆ!
Share on WhatsAppShare on FacebookShare on Telegram

ನಿಷ್ಕ್ರಿಯ ಸಾಲದ ಸಂಕಷ್ಟಗಳಿಂದ ಬ್ಯಾಂಕುಗಳು ಹೊರಬರುತ್ತಿವೆ, ಬ್ಯಾಂಕುಗಳ ಸಾಲ ನೀಡಿಕೆ ವ್ಯವಸ್ಥೆ ಹೆಚ್ಚು ಸುರಕ್ಷಿತ ಮತ್ತು ಸದೃಢವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಗಾಗ್ಗೆ ಹೇಳುತ್ತಾ ಬಂದಿದ್ದರೂ ಅಂಕಿಅಂಶಗಳು ಬೇರೆಯದೇ ಸತ್ಯವನ್ನು ಹೇಳುತ್ತಿವೆ. ದೇಶದ ಅಗ್ರ ಹತ್ತು ಬ್ಯಾಂಕುಗಳಲ್ಲಿನ 1 ಲಕ್ಷ ಕೋಟಿ ಒತ್ತಡದ ಸಾಲವು ಈಗ ನಿಷ್ಕ್ರಿಯ ಸಾಲವಾಗಿ ಪರಿವರ್ತನೆಗೊಂಡಿದೆ.

ADVERTISEMENT

ಪ್ರಸಕ್ತ ವಿತ್ತೀಯ ವರ್ಷದ ಪೂರ್ವಾರ್ಧದಲ್ಲೇ ಇಷ್ಟು ದೊಡ್ಡಪ್ರಮಾಣದ ಸಾಲವು ನಿಷ್ಕ್ರಿಯ ಸಾಲವಾಗಿ ಪರಿವರ್ತನೆ ಆಗಿರುವುದು ಆತಂಕಕ್ಕೆ ಎಡೆ ಮಾಡಿದೆ. ಪ್ರಸ್ತುತ ದೇಶದ ಆರ್ಥಿಕ ಸ್ಥಿತಿ ಎದುರಿಸುತ್ತಿರುವ ಸವಾಲುಗಳಿಂದಾಗಿ ಪ್ರಸಕ್ತ ವಿತ್ತೀಯ ವರ್ಷದ ಉತ್ತರಾರ್ಧದಲ್ಲಿ ಮತ್ತಷ್ಟು ಒತ್ತಡದ ಸಾಲವು ನಿಷ್ಕ್ರಿಯ ಸಾಲವಾಗಿ ಪರಿವರ್ತನೆಯಾಗುವ ಭೀತಿ ಎದುರಾಗಿದೆ. ಯಾವ ಸಾಲವು ಸಕಾಲದಲ್ಲಿ ಮರುಪಾವತಿಯಾಗುವುದಿಲ್ಲವೋ ಮತ್ತು ನಿಯಮಿತವಾಗಿ ಸಾಲದ ಮೇಲಿನ ಬಡ್ಡಿಯೂ ಪಾವತಿಯಾಗುವುದಿಲ್ಲವೋ ಅದು ಒತ್ತಡದಲ್ಲಿರುವ ಸಾಲ. ಈ ಒತ್ತಡದಲ್ಲಿರುವ ಸಾಲದ ಕಾಲಮಿತಿ ಮೀರಿದರೆ ಅದು ನಿಷ್ಕ್ರಿಯ ಸಾಲವಾಗಿ ಪರಿವರ್ತನೆಯಾಗುತ್ತದೆ. ಯಾವ ಸಾಲವು ಅಸಲು ಮರುಪಾವತಿ ಮತ್ತು ಮತ್ತು ಬಡ್ಡಿ ಪಾವತಿ ಆಗದೇ ಸುಧೀರ್ಘ ಅವಧಿಗೆ ಸುಸ್ತಿಯಾಗುತ್ತದೋ ಅದನ್ನು ನಿಷ್ಕ್ರಿಯ ಸಾಲವೆಂದು ಘೋಷಿಸಲಾಗುತ್ತದೆ. ನಿಷ್ಕ್ರಿಯ ಸಾಲವು ಬ್ಯಾಂಕುಗಳಿಗೆ ಹೊರೆ. ಒಂದರ್ಥದಲ್ಲಿ ಅದು ಬ್ಯಾಂಕುಗಳಿಗೆ ಶಾಪವೂ ಹೌದು. ನಿಷ್ಕ್ರಿಯ ಸಾಲ ಬ್ಯಾಂಕುಗಳಿಗೆ ಹೇಗೆ ಹೊರೆ ಮತ್ತು ಶಾಪವೋ ಹಾಗೆಯೇ ಬೃಹದಾರ್ಥಿಕತೆ ಪಾಲಿಗೂ ಅದು ಶಾಪವಾಗಿ ಪರಿಣಮಿಸುತ್ತದೆ.

ಇಷ್ಟು ಬೃಹತ್ ಪ್ರಮಾಣದಲ್ಲಿ ನಿಷ್ಕ್ರಿಯ ಸಾಲದ ಪ್ರಮಾಣ ಏರಿಕೆ ಆಗಲು ಕಾರಣವೇನು? ದೇಶದ ಆರ್ಥಿಕತೆ ಎದುರಿಸುತ್ತಿರುವ ಸಂಕಷ್ಟ ಒಂದು ಕಾರಣವಾದರೆ ಮತ್ತೊಂದೆಡೆ ಒತ್ತಡದ ಸಾಲಗಳ ವ್ಯಾಜ್ಯ ವಿಲೇವಾರಿಯಲ್ಲಾಗುತ್ತಿರುವ ವಿಳಂಬವೂ ಮತ್ತೊಂದು ಕಾರಣ. ಪ್ರಸಕ್ತ ವಿತ್ತೀಯ ವರ್ಷದ ಪೂರ್ವಾರ್ಧದಲ್ಲಿ ಅಂದರೆ ಏಪ್ರಿಲ್- ಸೆಪ್ಟೆಂಬರ್ ತಿಂಗಳ ನಡುವೆ 1 ಲಕ್ಷ ಕೋಟಿ ರುಪಾಯಿ ನಿಷ್ಕ್ರಿಯ ಸಾಲವಾಗಿ ಪರಿವರ್ತನೆಯಾಗಿದೆ. ಇದು ಕಳೆದ ಸಾಲಿನಲ್ಲಿ ಇದೇ ಅವಧಿಯಲ್ಲಿದ್ದ 90,000 ಕೋಟಿಗೆ ಹೋಲಿಸಿದೆ ಸುಮಾರು ಶೇ.11ರಷ್ಟು ಹೆಚ್ಚಳವಾಗಿದೆ.

ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ 25,017 ಕೋಟಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ 13,531 ಕೋಟಿ, ಬ್ಯಾಂಕ್ ಆಫ್ ಬರೋಡ 11,584 ಕೋಟಿ, ಯೆಸ್ ಬ್ಯಾಂಕ್ 12,175 ಕೋಟಿ, ಆಕ್ಸಿಸ್ ಬ್ಯಾಂಕ್ 9,781 ಕೋಟಿ, ಎಚ್ಡಿಎಫ್ಸಿ ಬ್ಯಾಂಕ್ 7,939 ಕೋಟಿ, ಬ್ಯಾಂಕ್ ಆಫ್ ಇಂಡಿಯಾ 6,849 ಕೋಟಿ, ಕೆನರಾ ಬ್ಯಾಂಕ್ 6,278 ಕೋಟಿ, ಐಸಿಐಸಿಐ ಬ್ಯಾಂಕ್ 5,261 ಕೋಟಿ,ಕೋಟಕ್ ಮಹಿಂದ್ರಾ ಬ್ಯಾಂಕ್ 1800 ಕೋಟಿ ಸೇರಿದಂತೆ ನಿಷ್ಕ್ರಿಯ ಸಾಲದ ಮೊತ್ತವು 1,00,215 ಕೋಟಿಗೆ ಏರಿದೆ.

ಈ ಪೈಕಿ ಸಾರ್ವಜನಿಕ ವಲಯದ ಬ್ಯಾಂಕುಗಳ ಪಾಲು ಶೇ.63ರಷ್ಟಿದೆ. ಒಟ್ಟಾರೆ ನಿಷ್ಕ್ರಿಯ ಸಾಲದ ಪೈಕಿ ದೇಶದ ಅತಿದೊಡ್ಡ ಸಾರ್ಜಜನಿಕ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪಾಲು ಶೇ.25ರಷ್ಟು ದಾಟಿದೆ. ಖಾಸಗಿ ವಲಯದ ಬ್ಯಾಂಕುಗಳ ಪೈಕಿ ಇತ್ತೀಚೆಗೆ ತೀವ್ರ ವಿವಾದಕ್ಕೆ ಈಡಾಗಿರುವ ಯೆಸ್ ಬ್ಯಾಂಕ್ ಪಾಲು 12,175 ಕೋಟಿಗಳಷ್ಟಿದೆ.

ಆರ್ಬಿಐ ಮಾರ್ಗ ಸೂಚಿಗಳ ಪ್ರಕಾರ ಬ್ಯಾಂಕುಗಳು ನಿಯಮಿತವಾಗಿ ನಿಷ್ಕ್ರಿಯ ಸಾಲದ ಪ್ರಮಾಣವನ್ನು ಘೋಷಣೆ ಮಾಡಬೇಕು ಮತ್ತು ಆಯಾ ತ್ರೈಮಾಸಿಕಗಳಲ್ಲಿನ ಲಾಭನಷ್ಟ ಪಟ್ಟಿಯಲ್ಲಿ ನಿಷ್ಕ್ರಿಯ ಸಾಲದ ಹೊರೆ ತಗ್ಗಿಸಲು ಲಾಭದ ಪ್ರಮಾಣವನ್ನು ಮೀಸಲಿಡಬೇಕು.

ಹೀಗಾಗಿ ನಿಷ್ಕ್ರಿಯ ಸಾಲದ ಪ್ರಮಾಣವು ಹೆಚ್ಚಾದಂತೆ ಬ್ಯಾಂಕು ತಾನುಗಳಿಸುವ ಲಾಭದ ಪೈಕಿ ಅತಿ ದೊಡ್ಡ ಪಾಲನ್ನು ಈ ನಿಷ್ಟ್ರಿಯ ಸಾಲದ ಭಾರವನ್ನು ತಗ್ಗಿಸಲು ಮೀಸಲಿಡಬೇಕಾಗುತ್ತದೆ. ಹೀಗಾಗಿಯೇ ಸಾರ್ವಜನಿಕ ವಲಯದ ಬ್ಯಾಂಕುಗಳು ಹಲವು ತ್ರೈಮಾಸಿಕಗಳಿಂದ ವಾಸ್ತವಿಕವಾಗಿ ಲಾಭವನ್ನು ಗಳಿಸುತ್ತಿದ್ದರೂ ನಿಷ್ಕ್ರಿಯ ಸಾಲದ ಹೊರೆ ತಗ್ಗಿಸಲು ಲಾಭದ ಮೊತ್ತದ ಜತೆಗೆ ಹೆಚ್ಚುವರಿ ಮೊತ್ತವನ್ನು ಮೀಸಲಿಡುತ್ತಿರುವುದರಿಂದ ನಷ್ಟವನ್ನು ಘೋಷಣೆ ಮಾಡುತ್ತಿವೆ.

ಒತ್ತಡದ ಸಾಲಗಳ ವಸೂಲಾತಿಗಾಗಿ ರೂಪಿಸಿರುವ ಪರಿಹಾರ ಕ್ರಮಗಳ ಜಾರಿಯಲ್ಲಿ ವಿಳಂಬವಾಗುತ್ತಿರುವುದರಿಂದಾಗಿ ಬ್ಯಾಂಕುಗಳ ಸಾಲದ ಮೇಲಿನ ವೆಚ್ಚವು ಹೆಚ್ಚಾಗುತ್ತಿದೆ. ಹೀಗಾಗಿ ಲಾಭದ ಪ್ರಮಾಣವು ತಗ್ಗುತ್ತಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ದಿವಾಳಿ ಸಂಹಿತೆ (ಐಬಿಸಿ) ಮತ್ತು ಅಂತರ ಸಾಲದಾತರ ಒಡಂಬಡಿಕೆ (ಐಸಿಎ)ಯ ನಂತರವೂ ಒತ್ತಡದ ಸಾಲದ ವ್ಯಾಜ್ಯ ವಿಲೇವಾರಿ ವಿಳಂಬವಾಗಿ, ಅದು ನಿಷ್ಕ್ರಿಯ ಸಾಲವಾಗಿ ಪರಿಣಮಿಸುತ್ತಿದೆ.

ವ್ಯತಿರಿಕ್ತ ಪರಿಣಾಮ ಹೇಗೆ?

ಒಂದು ಲಕ್ಷ ಕೋಟಿ ರುಪಾಯಿ ನಿಷ್ಕ್ರಿಯ ಸಾಲವಾಗಿ ಪರಿವರ್ತನೆಗೊಂಡರೆ, ಅದು ಸಾಲ ನೀಡಿದ ಬ್ಯಾಂಕಿಗೆ ಹೊರೆ ಆಗುವುದಷ್ಟೇ ಅಲ್ಲ, ಆ ಒಂದು ಲಕ್ಷ ಕೋಟಿ ರುಪಾಯಿ ವಹಿವಾಟಾಗದೇ ಇರುವುದರಿಂದ ಅಷ್ಟರ ಮಟ್ಟಿಗೆ ಅದು ಆರ್ಥಿಕ ಚಟುವಟಿಕೆಗಳ ಮುಖ್ಯವಾಹಿನಿಯಿಂದ ದೂರ ಉಳಿಯುತ್ತದೆ. ಹೀಗಾಗಿ ಅದು ಆರ್ಥಿಕ ಚಟುವಟಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಒಂದು ಲಕ್ಷ ಕೋಟಿ ರುಪಾಯಿಗಳು ಸಾಲ ನೀಡಿಕೆಗೆ ಲಭ್ಯವಾಯಿತು ಎಂದಿಟ್ಟುಕೊಳ್ಳಿ. ಅದನ್ನು ತಲಾ 50 ಲಕ್ಷ ರುಪಾಯಿಗಳಂತೆ ಎರಡು ಲಕ್ಷ ಜನರಿಗೆ ಗೃಹಸಾಲವಾಗಿ ನೀಡಿದರೆ, ಈಗ ಮಾರಾಟವಾಗದೇ ಉಳಿದಿರುವ 2 ಲಕ್ಷ ವಸತಿ ಘಟಕಗಳು (ಫ್ಲ್ಯಾಟ್ ಗಳು) ಮಾರಾಟವಾಗುತ್ತವೆ. ಆಗ ರಿಯಲ್ ಎಸ್ಟೇಟ್ ವಲಯದಲ್ಲಿ ಬೇಡಿಕೆ ಕುದುರುತ್ತದೆ. ಹೊಸ ಯೋಜನೆಗಳು ಪ್ರಾರಂಭವಾಗುತ್ತವೆ. ಸಹಜವಾಗಿಯೇ ಹೊಸ ಯೋಜನೆಗಳು ಉದ್ಯೋಗವನ್ನು ಸೃಷ್ಟಿಸುತ್ತವೆ. ಉದ್ಯೋಗ ಸೃಷ್ಟಿಯು ಅಂತಿಮವಾಗಿ ಆರ್ಥಿಕ ಚಟುವಟಿಕೆ ಉತ್ತೇಜಿಸುತ್ತದೆ. ಅದು ಆಯಾ ತ್ರೈಮಾಸಿಕ ಮತ್ತು ವಾರ್ಷಿಕ ಜಿಡಿಪಿಯಲ್ಲಿ ಪ್ರತಿಫಲನಗೊಳ್ಳುತ್ತದೆ. ನಿಷ್ಕ್ರಿಯ ಸಾಲದ ಪ್ರಮಾಣವು ಹೆಚ್ಚಾದಂತೆ ಬ್ಯಾಂಕಿಂಗ್ ವ್ಯವಸ್ಥೆಗಷ್ಟೇ ಹಾನಿಕಾರಕವಲ್ಲ, ಇಡೀ ಆರ್ಥಿಕ ವ್ಯವಸ್ಥೆಗೆ ಹಾನಿಕಾರಕವಾಗುತ್ತದೆ. ನಿಷ್ಕ್ರಿಯ ಸಾಲದ ಪ್ರಮಾಣ ಬೆಳೆಯುತ್ತಿರುವುದು ಈಗಾಗಲೇ ಸಂಕಷ್ಟ ಎದುರಿಸುತ್ತಿರುವ ಭಾರತದ ಆರ್ಥಿಕತೆ ಪಾಲಿಗೆ ಗಾಯದ ಮೇಲೆ ಬರೆ ಎಳೆದಂತೆ!

Tags: Bank CreditBank interestBank LoanNarendra ModiNirmala SitaramanRBIReal Estate BusinessReserve Bank of IndiaState Bank of Indiaಆರ್‌ಬಿಐನರೇಂದ್ರ ಮೋದಿನಿರ್ಮಲ ಸೀತಾರಾಮನ್ಬ್ಯಾಂಕ್‌ ಲೋನ್ಬ್ಯಾಂಕ್‌ ಸಾಲರಿಯಲ್‌ ಎಸ್ಟೇಟ್‌ರಿಸರ್ವ್‌ ಬ್ಯಾಂಕ್‌ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
Previous Post

ವಿದೇಶಿ ವಿನಿಮಯ ತರುವ ಕ್ರೂಸ್ ಪ್ರವಾಸೋದ್ಯಮದ ಸುವರ್ಣ ಯುಗ

Next Post

ಆಪರೇಷನ್ ಕಮಲದಂತಲ್ಲ ಉಪಚುನಾವಣೆ!

Related Posts

Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
0

16 ಬಜೆಟ್ ಮಂಡಿಸಿದವರು ಸಿದ್ದರಾಮಯ್ಯ. ದೇವರಾಜ್ ಅರಸ್ ದಾಖಲೆ ಮುರಿದು ಸಿಎಂ ಆಗಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸ ಸಿಎಂ ಮೇಲಿರಲಿ. ನಿಮ್ಮ ಆಶೀರ್ವಾದ ಇರೋವರೆಗೂ ಸಿದ್ದರಾಮಯ್ಯ ಅವರಿಗೆ...

Read moreDetails

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025

CM Siddaramaiah: ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ..!!

July 12, 2025

Santhosh Lad: ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ..

July 12, 2025
Next Post
ಆಪರೇಷನ್ ಕಮಲದಂತಲ್ಲ ಉಪಚುನಾವಣೆ!

ಆಪರೇಷನ್ ಕಮಲದಂತಲ್ಲ ಉಪಚುನಾವಣೆ!

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada