• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಾರತವನ್ನು ಸ್ವತಂತ್ರ ರಾಷ್ಟ್ರವನ್ನಾಗಿರಲು ಬಿಡಿ – ಸುಪ್ರಿಂ ಕೋರ್ಟ್

by
October 30, 2020
in ದೇಶ
0
ಭಾರತವನ್ನು ಸ್ವತಂತ್ರ ರಾಷ್ಟ್ರವನ್ನಾಗಿರಲು ಬಿಡಿ – ಸುಪ್ರಿಂ ಕೋರ್ಟ್
Share on WhatsAppShare on FacebookShare on Telegram

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರವನ್ನು ಹಾಗೂ ರಾಜಕೀಯ ಘಟನೆಗಳನ್ನು ಟೀಕಿಸಿದವರ ವಿರುದ್ದ ದೇಶದ ಮೂಲೆ ಮೂಲೆಗಳಲ್ಲಿ ಪ್ರಕರಣಗಳು ದಾಖಲಾಗುತ್ತಿರುವುದರ ಕುರಿತು ಸುಪ್ರಿಂಕೋರ್ಟ್‌ ಕಳವಳ ವ್ಯಕ್ತಪಡಿಸಿದೆ. ಭಾರತವನ್ನು ಸ್ವತಂತ್ರ ರಾಷ್ಟ್ರವಾಗಿ ಇರಲು ಬಿಡಿ ಎಂದು ಸರ್ಕಾರಕ್ಕೆ ಹಾಗೂ ಪೊಲೀಸರಿಗೆ ತಿಳಿಸಿದೆ.

ADVERTISEMENT

ಪಶ್ಚಿಮ ಬಂಗಾಳದಲ್ಲಿ ಲಾಕ್‌ಡೌನ್‌ ನಿಯಮಗಳನ್ನು ಸರಿಯಾಗಿ ಪಾಲಿಸಿಲ್ಲ ಎಂಬದು ದೆಹಲಿ ಮೂಲದ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಿದ್ದರು. ಈ ಕಾರಣಕ್ಕೆ ಅವರ ವಿರುದ್ದ ಪಶ್ಚಿ ಬಂಗಾಳದಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಜಸ್ಟೀಸ್‌ ಡಿ ವೈ ಚಂದ್ರಚೂಡ್‌ ಹಾಗೂ ಜಸ್ಟೀಸ್‌ ಇಂದಿರಾ ಬ್ಯಾನರ್ಜಿ ಅವರಿದ್ದ ಪೀಠವು, “ಭಾರತವನ್ನು ಸ್ವತಂತ್ರ ರಾಷ್ಟ್ರವಾಗಿರಲು ಬಿಡಿ. ಹದ್ದು ಮೀರಬೇಡಿ. ಸಾಮಾನ್ಯ ಜನರು ಸರ್ಕಾರಗಳಿಂದ ತೊಂದರೆಗೆ ಒಳಗಾಗಬಾರದು ಎಂಬ ಕಾರಣಕ್ಕೆ ಸಂವಿಧಾನವು ಸುಪ್ರಿಂಕೋರ್ಟ್‌ ಅನ್ನು ರೂಪಿಸಿದೆ,” ಎಂದು ಹೇಳಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ನಾಳೆ ಕೊಲ್ಕತ್ತಾ, ಮುಂಬೈ, ಚೆನ್ನೈ ಮತ್ತು ಮಣಿಪುರ ಪೊಲೀಸರು ದೇಶದ ಮೂಲೆ ಮೂಲೆಯ ನಾಗರಿಕರಿಗೆ ಸಮನ್ಸ್‌ ನೀಡುತ್ತಾರೆ. ನಿಮಗೆ ವಾಕ್‌ ಸ್ವಾತಂತ್ರ್ಯ ಬೇಕಲ್ಲವೇ, ನಾವು ನಿಮಗೆ ಬುದ್ದಿ ಕಲಿಸುತ್ತೇವೆ ಎಂದು ಸಂದೇಶ ನೀಡುತ್ತಾರೆ. ಇದು ತುಂಬಾ ಅಪಾಯಕಾರಿ. ಸರ್ಕಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಿದ ಕಾರಣಕ್ಕೆ ದೇಶದ ನಾಗರಿಕರನ್ನು ಒಂದು ಮೂಲೆಯಿಂದ ಒನ್ನೊಂದು ಮೂಲೆ ಪದೇ ಪದೇ ಕರೆಸಿಕೊಳ್ಳುವುದು ತಪ್ಪು,” ಎಂದು ಸುಪ್ರಿಂ ಹೇಳಿದೆ.

ಸಂವಿಧಾನದ 19(1) ನೇ ವಿಧಿಯು ಪ್ರತಿಯೊಬ್ಬ ನಾಗರಿಕರಿಗೂ ವಾಕ್‌ ಸ್ವಾತಂತ್ರ್ಯವನ್ನು ನೀಡಿ, ಎಷ್ಟೇ ಕಷ್ಟವಾದರೂ ಆ ಹಕ್ಕನ್ನು ರಕ್ಷಿಸಬೇಕು ಎಂದು ಹೇಳುತ್ತದೆ, ಎಂದು ಎಲ್ಲಾ ರಾಜ್ಯ ಸರ್ಕಾರಗಳಿಗೂ ನೇರವಾದ ಹಾಗೂ ಸ್ಪಷ್ಟವಾದ ಸಂದೇಶವನ್ನು ರವಾನಿಸಿದೆ.

ದೆಹಲಿಯಿಂದ ಕೊಲ್ಕತ್ತಾಗೆ ಸಮನ್ಸ್‌ ನೀಡಿದ್ದು ದೌರ್ಜನ್ಯ

ಕೊಲ್ಕತ್ತಾದ ರಾಜಾ ಬಜಾ಼ರ್‌ ಪ್ರದೇಶದಲ್ಲಿ ಹೆಚ್ಚಿನ ಜನಸಂದಣಿ ಇರುವುದನ್ನು ದೆಹಲಿಯ ರೋಶನಿ ಬಿಸ್ವಾಸ್‌ ಎಂಬ ಮಹಿಳೆ ಫೇಸ್‌ಬುಕ್‌ನಲ್ಲಿ ಟೀಕಿಸಿದ್ದರು. ಇದನ್ನು ಗಮನಿಸಿದ ಕೊಲ್ಕತ್ತಾ ಪೊಲೀಸರು ರೋಶನಿ ವಿರುದ್ದ ಪ್ರಕರಣವನ್ನು ದಾಖಲಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಕೂಡಾ ಜಾರಿ ಮಾಡಿದ್ದರು. ಈ ಸಮನ್ಸ್‌ ವಿರುದ್ದ ರೋಶನಿ ಅವರು ಸುಪ್ರಿಂ ಮೆಟ್ಟಿಲೇರಿದ ಕಾರಣ, ಕೊಲ್ಕತ್ತಾ ಪೊಲೀಸರ ವಿರುದ್ದ ಸುಪ್ರಿಂ ಕೋರ್ಟ್‌ ಕಿಡಿಕಾರಿದೆ.

ಸುಪ್ರಿಂ ಕೋರ್ಟ್‌ನಲ್ಲಿ ವಿವರಣೆ ನೀಡಿದ ಪಶ್ಚಿಮ ಬಂಗಾಳದ ವಕೀಲರು, ರೋಶನಿ ಅವರನ್ನು ಕೇವಲ ವಿಚಾರಣೆಗಾಗಿ ಮಾತ್ರ ಕರೆಸಿಕೊಳ್ಳಲಾಗುವುದು. ಅವರರನ್ನು ಬಂಧಿಸುವುದಿಲ್ಲ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್‌ “ಈ ಪ್ರಕ್ರಿಯೆಯು ನಾಗರಿಕರನ್ನು ಬೆದರಿಸಿದಂತಾಗುತ್ತದೆ. ಅವರ ವಾಕ್‌ ಸ್ವಾತಂತ್ರ್ಯವನ್ನು ಮೊಟಕುಗೊಳಿಸದಂತಾಗುತ್ತದೆ. ಕರೋನಾ ಸೋಂಕನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಿಲ್ಲ ಎಂದು ಟೀಕಿಸಿದ ಕಾರಣಕ್ಕೆ ಅವರ ವಿರುದ್ದ ಪ್ರಕರಣ ದಾಖಲಿಸಲು ಆಗುವುದಿಲ್ಲ,” ಎಂದು ಹೇಳಿದೆ.

“ರೋಶನಿ ಅವರನ್ನು ದೆಹಲಿಯಿಂದ ಕೊಲ್ಕತ್ತಾಗೆ ಬರಲು ಸಮನ್ಸ್‌ ನೀಡಿದ್ದು ದೌರ್ಜನ್ಯ,” ಎಂದು ಸುಪ್ರಿಂಕೋರ್ಟ್‌ ಹೇಳಿದೆ.

Tags: ಸಂವಿಧಾನಸುಪ್ರಿಂ ಕೋರ್ಟ್‌ಸ್ವತಂತ್ರ ರಾಷ್ಟ್ರ
Previous Post

ಪ್ರತಿರೋಧದ ದನಿ ಬಗ್ಗುಬಡಿಯಲು ಸರ್ಕಾರಿ ನೌಕರರ ಮೇಲೆ ಹೊಸ ನಿಯಮ ಪ್ರಯೋಗ!

Next Post

ಹೊಸ ನೋಟಿನಲ್ಲಿ ತಪ್ಪಾದ ನಕ್ಷೆ ಮುದ್ರಿಸಿದ ಸೌದಿ ಅರೇಬಿಯ: ಭಾರತದಿಂದ ವಿರೋಧ

Related Posts

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
0

ಇನ್ಮುಂದೆ ಮತದಾರರ ಪಟ್ಟಿ (Voters list) ಪರಿಷ್ಕರಣೆಗಾಗಿ ಮತದಾರರ ಆಧಾರ್ ಕಾರ್ಡ್ (Adhar card), ಮತದಾರರ ಗುರುತಿನ (Voter I’d ) ಚೀಟಿ ಮತ್ತು ಪಡಿತರ ಚೀಟಿಗಳನ್ನು...

Read moreDetails
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025
Next Post
ಹೊಸ ನೋಟಿನಲ್ಲಿ ತಪ್ಪಾದ ನಕ್ಷೆ ಮುದ್ರಿಸಿದ ಸೌದಿ ಅರೇಬಿಯ: ಭಾರತದಿಂದ ವಿರೋಧ

ಹೊಸ ನೋಟಿನಲ್ಲಿ ತಪ್ಪಾದ ನಕ್ಷೆ ಮುದ್ರಿಸಿದ ಸೌದಿ ಅರೇಬಿಯ: ಭಾರತದಿಂದ ವಿರೋಧ

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada