• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಂಗಳೂರು ಗೋಲಿಬಾರ್, ದೆಹಲಿ ಕೋಮು ಗಲಭೆ ಪ್ರಭುತ್ವ ಪ್ರೇರಿತವೇ? ಅನುಮಾನಕ್ಕೀಡಾದ ಚಾರ್ಜ್ ಶೀಟ್

by
June 25, 2020
in ದೇಶ
0
ಮಂಗಳೂರು ಗೋಲಿಬಾರ್
Share on WhatsAppShare on FacebookShare on Telegram

ಪೌರತ್ವ ತಿದ್ದುಪಡಿ ಕಾಯ್ದೆ. ಭಾಗಶಃ ಭಾರತದ ರಾಜಕೀಯ ಇತಿಹಾಸದಲ್ಲಿ ಈ ಪರಿಯ ಜನಾಕ್ರೋಶಕ್ಕೆ ಕಾರಣವಾದ ಕಾಯ್ದೆ ಮತ್ತೊಂದಿರಲು ಸಾಧ್ಯವೇ ಇಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಅಲ್ಪ ಸಂಖ್ಯಾತ ಮತ್ತು ಪ್ರಜಾಪ್ರಭುತ್ವ-ಸಂವಿಧಾನ ಪರ ಹೋರಾಟಗಾರರು ಕಳೆದ ಆರೆಂಟು ತಿಂಗಳಿನಿಂದ ಈ ಕಾಯ್ದೆಯ ವಿರುದ್ಧ ಒಮ್ಮತದ ವಿರೋಧ ವ್ಯಕ್ತಪಡಿಸುತ್ತಲೇ ಇದ್ದಾರೆ.

ADVERTISEMENT

ದೆಹಲಿಯ ಶಾಹೀನ್ ಭಾಗ್ ಪ್ರದೇಶ ನಿರಂತರ ಚಳುವಳಿಗೆ ಕಾರಣವಾಗಿದ್ದರೆ, ಕರ್ನಾಟಕದ ಮಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಆಗಿಂದಾಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ದಾಖಲಾಗುತ್ತಲೇ ಇತ್ತು. ಆದರೆ, ಕೇಂದ್ರ ಸರ್ಕಾರ ದೆಹಲಿ ಪ್ರತಿಭಟನೆಯನ್ನು ವ್ಯವಸ್ಥಿತವಾಗಿ ಹತ್ತಿಕ್ಕಲು ದೆಹಲಿ ಗಲಭೆಯನ್ನೇ ಸೃಷ್ಟಿಸಿದ್ದು ಎಷ್ಟು ಸತ್ಯವೋ? ಸಿಎಎ ವಿಚಾರದಲ್ಲಿ ಕೇಂದ್ರಕ್ಕಿಂತ ಮುಂಚಿತವಾಗಿ ಕರುಣಾಹೀನವಾಗಿ ನಡೆದುಕೊಂಡಿದ್ದು ಮಾತ್ರ ಕರ್ನಾಟಕ ಎಂಬುದೂ ಅಷ್ಟೇ ಸತ್ಯ.!

ದೆಹಲಿ ಗಲಭೆಗೆ ಮುಂಚಿತವಾಗಿ ಡಿಸೆಂಬರ್ 19 ರಂದೇ ಮಂಗಳೂರಿನಲ್ಲಿ ಪೊಲೀಸರು ಸಿಎಎ ವಿರೋಧಿ ಹೋರಾಟಗಾರರ ವಿರುದ್ಧ ಗೋಲಿಬಾರ್ ನಡೆಸಿದ್ದರು. ಈ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟಿದ್ದರೆ, ಅನೇಕರು ಗಾಯಕ್ಕೊಳಗಾಗಿದ್ದರು. ಈ ಗಲಭೆ ಕುರಿತು ಈಗಾಗಲೇ ಸಿಐಡಿ ಪೊಲೀಸರು ಸೇರಿದಂತೆ ಒಟ್ಟು 8 ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಆದರೆ, ಈ ಚಾರ್ಜ್‌ಶೀಟ್ ಅನ್ನು ಒಮ್ಮೆ ಅವಲೋಕಿಸಿದರೆ ಘಟನೆಗಳನ್ನು ಎಷ್ಟು ತಿರುಚಲಾಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಮುಸ್ಲಿಂ ಜನರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ದೆಹಲಿ ಮತ್ತು ಕರ್ನಾಟಕದ ವ್ಯವಸ್ಥೆ ಎಂತಹಾ ಸಂಚನ್ನು ರೂಪಿಸಿದೆ ಎಂಬುದೂ ವೇದ್ಯವಾಗುತ್ತದೆ. ಅಸಲಿಗೆ ದೆಹಲಿ ಮತ್ತು ಕರ್ನಾಟಕದ ಗೋಲಿಬಾರ್ ನಡುವೆ ಇರುವ ಸಾಮ್ಯತೆ ಏನು? ಪೊಲೀಸ್ ಇಲಾಖೆ ಈ ಎರಡೂ ಪ್ರಕರಣದಲ್ಲಿ ಎಂತಹ ಸಂಚನ್ನು ರೂಪಿಸಿದೆ. ಚಾರ್ಜ್‌ಶೀಟಲ್ಲಿರುವ ಲೋಪವೇನು? ಪೊಲೀಸರ ಬ್ಲಾಕ್ಮೇಲ್ ತಂತ್ರವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ದೆಹಲಿ ಗಲಭೆ-ಮಂಗಳೂರು ಗೋಲಿಬಾರ್ ಸಾಮ್ಯತೆ:

ಕೋಮುವಾದಿ ಮತ್ತು ದ್ವೇಷದ ಟ್ವೀಟ್ಗಳಿಗೆ ಹೆಸರುವಾಸಿಯಾದ ಕಪಿಲ್ ಮಿಶ್ರಾ ಫೆಬ್ರವರಿ 23 ರಂದು ಈಶಾನ್ಯ ದೆಹಲಿಯ ಜಾಫ್ರಾಬಾದ್ ಬಳಿಯ ಮೌಜ್ಪುರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ರ‌್ಯಾಲಿ ಯನ್ನು ನಡೆಸಿದ್ದರು. ಅದೇ ಸ್ಥಳದಲ್ಲಿ ಸಿಎಎ ವಿರೋಧಿ ಹೋರಾಟ ಸಹ ನಡೆಯುತ್ತಿತ್ತು.

ಈ ವೇಳೆ ಪೊಲೀಸರಿಗೆ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದ ಕಪಿಲ್ ಮಿಶ್ರಾ, “ಮೂರು ದಿನಗಳೊಳಗೆ ಪೊಲೀಸರು ಇಲ್ಲಿನ ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ತೆರವುಗೊಳಿಸಬೇಕು. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೆಹಲಿಯಲ್ಲಿ ಇರುವವರೆಗೂ ಮಾತ್ರ ನಾವು ತಾಳ್ಮೆ ವಹಿಸುತ್ತೇವೆ. ಆದರೆ, ಆನಂತರವೂ ಇಲ್ಲಿನ ರಸ್ತೆಗಳನ್ನು ತೆರವುಗೊಳಿಸದಿದ್ದರೆ ನಾವು ಪೊಲೀಸರನ್ನು ಕೇಳುವುದಿಲ್ಲ, ನಾವೇ ಬೀದಿಗಿಳಿಯಬೇಕಾಗುತ್ತದೆ” ಎಂದು ಪೊಲೀಸ್ ಅಧಿಕಾರಿಗಳ ಎದುರಿಗೆ ಕಪಿಲ್ ಮಿಶ್ರಾ ಆಡಿದ್ದ ಉದ್ಧಟತನದ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದವು.

ಕೆಲವು ಗಂಟೆಗಳ ನಂತರ ಸಿಎಎ ವಿರೋಧಿ ಮತ್ತು ಪರ ಎಂಬ ಎರಡು ಗುಂಪುಗಳ ನಡುವೆ ಘರ್ಷಣೆಗಳು ಭುಗಿಲೆದ್ದವು. ನೋಡ ನೋಡುತ್ತಿದ್ದಂತೆ ದೆಹಲಿಯಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದಿತ್ತು. ಈ ಹಿಂಸಾಚಾರದಲ್ಲಿ ಕನಿಷ್ಟ 50ಕ್ಕೂ ಹೆಚ್ಚು ಮುಸ್ಲಿಮರು ಕೊಲ್ಲಲ್ಪಟ್ಟಿದ್ದರು.

ದೆಹಲಿ ಹಿಂಸಾಚಾರದ ಬೆನ್ನಿಗೆ ಕಪಿಲ್ ಮಿಶ್ರಾ ಅವರ ಹೇಳಿಕೆಗಳು ತೀವ್ರ ಟೀಕೆಗೆ ಗುರಿಯಾಗಿದ್ದವು. ದೆಹಲಿ ಹೈಕೋರ್ಟ್ ಬಿಜೆಪಿ ನಾಯಕರ ವಿರುದ್ಧದ ನಿಷ್ಕ್ರಿಯತೆಯ ಬಗ್ಗೆ ಪೊಲೀಸರನ್ನು ಪ್ರಶ್ನಿಸಿತ್ತು. ಬಿಜೆಪಿಯ ಕಪಿಲ್ ಮಿಶ್ರಾ, ಅನುರಾಗ್ ಠಾಕೂರ್ ಮತ್ತು ಪರ್ವೇಶ್ ವರ್ಮಾ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿತ್ತು. ಆದರೆ, ಈ ಎಲ್ಲಾ ಘಟನೆಗಳನ್ನು ಪ್ರಸ್ತುತ ಚಾರ್ಜ್‌ಶೀಟ್ ನಲ್ಲಿ ಕೈಬಿಡಲಾಗಿದೆ. ಈ ಹಿಂದೆ ವಿಚಾರಣೆಯೊಂದರಲ್ಲಿ ನ್ಯಾಯಮೂರ್ತಿ ಎಸ್. ಮುರಳೀಧರ್ ಅವರು ಕೋಪಗೊಂಡು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದರು. ಆದರೆ ಎರಡೇ ದಿನದಲ್ಲಿ ಆ ನ್ಯಾಯಾಧೀಶರನ್ನು ದೆಹಲಿಯಿಂದ ಹರಿಯಾಣಕ್ಕೆ ವರ್ಗಾಯಿಸಲಾಯಿತು.

ಮಂಗಳೂರು ಗಲಭೆ ಮತ್ತು ಗೋಲಿಬಾರ್ ಸಹ ಇದಕ್ಕಿಂತ ಭಿನ್ನವೇನಲ್ಲ. ಮಂಗಳೂರು ಗೋಲಿಬಾರ್ ನಡೆದ ಡಿಸೆಂಬರ್ 19 ಮತ್ತು ಅದರ ಹಿಂದಿನ ಕೆಲ ಪ್ರಮುಖ ಘಟನೆಗಳನ್ನು ತಾಳೆ ಹಾಕಿದರೆ ಈ ದೆಹಲಿಯಂತೆಯೇ ಇಲ್ಲೂ ಸಹ ಗಲಭೆ ಮತ್ತು ಗೋಲಿಬಾರ್ ಅನ್ನು ಉದ್ದೇಶಪೂರ್ವಕವಾಗಿಯೇ ನಡೆಸಲಾಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಮಂಗಳೂರು ಗೋಲಿಬಾರ್ ಅಸಲಿ ಕಥೆ ಏನು?

ಸಿಎಎ ಮಂಗಳೂರು ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು ಮತ್ತು ತನಿಖಾ ಸಂಸ್ಥೆ ಸುಮಾರು 8 ಚಾರ್ಜ್‌ಶೀಟ್ ಗಳನ್ನು ಸಲ್ಲಿಸಿದೆ. ಈ ಚಾರ್ಜ್‌ಶೀಟ್ ಗಳನ್ನು ಒಮ್ಮೆ ಅವಲೋಕಿಸಿದರೆ ಮಂಗಳೂರು ಗಲಭೆ ಮತ್ತು ಗೋಲಿಬಾರ್ ಪ್ರಭುತ್ವವೇ ಉದ್ದೇಶಪೂರ್ವಕವಾಗಿ ಪೂರ್ವನಿಯೋಜಿತವಾಗಿ ನಡೆಸಿದೆಯೇ? ಎಂಬ ಪ್ರಶ್ನೆ ಮೂಡುತ್ತಿದೆ.

ಅಸಲಿಗೆ ಡೆಸೆಂಬರ್.19 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಎದುರು ಸಿಎಎ ವಿರೋಧಿಸಿ ಪ್ರತಿಭಟಿಸಲು SKSSF ಸಂಘಟನೆ ಪ್ರಮುಖ ಮಂಗಳೂರು ಖಾಜಿ಼ ಜಿಲ್ಲಾಧಿಕಾರಿ ಬಳಿ ಅನುಮತಿ ಕೋರಿ ಪತ್ರ ಬರೆದಿದ್ದರು. ಅದರಂತೆ ಅನುಮತಿಯೂ ನೀಡಲಾಗಿತ್ತು.

Also Read: ಪೌರತ್ವ ವಿಚಾರದಲ್ಲಿ ಸರ್ಕಾರಕ್ಕೆ ಮುಖಭಂಗ! ವಿಪಕ್ಷಗಳಿಗೆ ಸಿಕ್ಕಿದೆ ಬ್ರಹ್ಮಾಸ್ತ್ರ!

ಆದರೆ, ದಿಢೀರ್ ಎಂದು ಮಂಗಳೂರು ಕಮಿಷನರ್ ಡಾ. ಹರ್ಷ ಡಿಸೆಂಬರ್ 18 ರಂದು ನಗರದಲ್ಲಿ ಯಾರೂ ಎಲ್ಲೂ ಪ್ರತಿಭಟನೆ ನಡೆಸುವಂತಿಲ್ಲ ಎಂದು ಉಲ್ಲೇಖಿಸಿ section 144 ಅನ್ನು ಜಾರಿಗೊಳಿಸಿದ್ದರು. ಇದರಿಂದ ವಿಚಲಿತವಾಗಿದ್ದ SKSSF ಸಂಘಟನೆ ಮರುದಿನ ದಿನ ಪತ್ರಿಕೆಯಲ್ಲಿ ತಾವು ಪ್ರತಿಭಟನೆಯನ್ನು ಹಿಂಪಡೆಯುವುದಾಗಿ ಘೋಷಿಸಿದೆ.

ಆದರೆ, ಈ ವಿಚಾರ ತಿಳಿಯದ ಅನೇಕ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಕರು ಡಿಸೆಂಬರ್ 19ರಂದು ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದಾರೆ. Secttion 144 ಇದ್ದರೂ ಸಹ ಜನ ಸಾಮಾನ್ಯರು ಜಿಲ್ಲಾಧಿಕಾರಿ ಭವನಕ್ಕೆ ಆಗಮಿಸುವುದು ಸಾಮಾನ್ಯ. ಆದರೆ. ಈ ಸನ್ನಿವೇಶವನ್ನೇ ತಮಗೆ ಸಾಧಕವಾಗಿ ಬಳಸಿಕೊಂಡ ಪೊಲೀಸ್ ಇಲಾಖೆ ಸುಮ್ಮನೆ ನಿಂತಿದ್ದ ಯುವಕರ ಗುಂಪಿನ ಮೇಲೆ ಏಕಾಏಕಿ ಲಾಠಿ ಚಾರ್ಚ್ ನಡೆಸಿದ್ದಾರೆ.

ಪರಿಣಾಮ ಕ್ರೋಧಗೊಂಡ ಜನ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಹೀಗಾಗಿ ಮುಸ್ಲಿಂ ಬಾಹುಳ್ಯವುಳ್ಳ ಪ್ರದೇಶಗಳಿಗೆ ನುಗ್ಗಿದ ಪೊಲೀಸರು ಮಸೀದಿಯ ಒಳಗಿದ್ದ ಜನರನ್ನು ಹೊರಗೆಳೆದು ಮನಸ್ಸೋ ಇಚ್ಛೆ ಥಳಿಸಿದ್ದಾರೆ. ಅಲ್ಲದೆ. ಉರ್ವ ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಶರೀಫ್ ಏಕಾಏಕಿ ರೈಫಲ್ ಟೀಮ್ ಕರೆಸಲು ಆಜ್ಞೆ ನೀಡಿದ್ದಾರೆ.

Also Read: ಮಂಗಳೂರು ಗೋಲಿಬಾರ್: ಪ್ರತಿಭಟನೆಯ ಹಾದಿಯ ಕಲ್ಲು ಮುಳ್ಳುಗಳು

ಅಲ್ಲಿ ಬಿದ್ದಿತ್ತು ಎರಡು ಹೆಣ:

ಪೊಲೀಸರು ಗೋಲಿಬಾರ್ ನಡೆಸುವ ಮುನ್ನ ಜನರಿಗೆ ಕನಿಷ್ಟ ಒಂದು ಎಚ್ಚರಿಕೆ ಸಂದೇಶ ರವಾನಿಸಬೇಕು ಎಂಬುದು ನಿಯಮ. ಆದರೆ, ಮಂಗಳೂರಿನಲ್ಲಿ ಗೋಲಿಬಾರ್ ನಡೆಸುವ ಮುನ್ನ ಕನಿಷ್ಟ ಒಂದು ಎಚ್ಚರಿಕೆಯನ್ನೂ ನೀಡದೆ ಏಕಾಏಕಿ ಗುಂಡಿನ ದಾಳಿ ನಡೆಸಲಾಗಿದೆ. ಪರಿಣಾಮ ಜಲೀಲ್ ಮತ್ತು ನೌಶಾದ್ ಎಂಬ ಇಬ್ಬರು ಯುವಕರು ಮೃತಪಟ್ಟಿದ್ದರು.

2008ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಯಡಿಯೂರಪ್ಪ ಸಿಎಂ ಆಗಿ ಎಂಟೇ ದಿನದಲ್ಲಿ ಇಬ್ಬರು ರೈತರ ಮೇಲೆ ಗೋಲಿಬಾರ್ ಮಾಡಿಸಿ ಸುದ್ದಿಯಾದಂತೆ ಮತ್ತೊಮ್ಮೆ ಸುದ್ದಿಯ ಕೇಂದ್ರದಲ್ಲಿದ್ದರು. ಹೀಗಾಗಿ ಇದರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಗೋಲಿಬಾರ್‌ನಿಂದ ಸಾವನ್ನಪ್ಪಿದವರು ಕಿಡಿಗೇಡಿಗಳು ಇವರಿಗೆ ಪಾಕಿಸ್ತಾನದ ನಂಟಿತ್ತು ಎಂಬ ಬಿಜೆಪಿ ನಾಯಕರ ಕಪೋಲಕಲ್ಪಿತ ಕತೆಗಳು ನಡೆದೇ ಇತ್ತು. ಅದನ್ನು ಭಿತ್ತರಿಸಲೂ ಸಹ ಕೆಲವು ಮಾಧ್ಯಮಗಳು ಬುಕ್ ಆಗಿದ್ದವು ಎಂಬುದೇ ವಾಸ್ತವ.

ಆದರೆ, ಅಸಲಿಗೆ ಜಲೀಲ್ ಎಂಬ ವ್ಯಕ್ತಿ ಮನೆಯಿಂದ ಮಸೀದಿಗೆ ನಡೆದು ಹೋಗುತ್ತಿದ್ದ ಸಂದರ್ಭದಲ್ಲಿ ಆತನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಈ ಸನ್ನಿವೇಶವನ್ನು ಸ್ವತಃ ಆತನ ಪತ್ನಿಯೇ ವಿಡಿಯೋ ತೆಗೆದಿದ್ದಾರೆ. ಈ ವಿಡಿಯೋದಲ್ಲಿ ಆತನ ಮಸೀದಿಗೆ ತೆರಳುವಾಗ ಗುಂಡಿನ ದಾಳಿ ನಡೆದಿರುವುದು ಸ್ಪಷ್ಟವಾಗಿದೆ. ಆದರೆ, ಪ್ರಕರಣದ ತನಿಖೆ ನಡೆಸಿರುವ CID DYSP ಬಾಲಕೃಷ್ಣ ಮೃತರ ವಿರುದ್ಧವೇ ಎಫ್ಐಆರ್ ದಾಖಲಿಸಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಪೊಲೀಸರ ಸಹಾಯಕ್ಕೆ ಬಂದವರ ಮೇಲೂ ಗುಂಡು!

ಕರಾವಳಿ ಭಾಗದಲ್ಲಿ ಗಲಭೆ ಹೆಚ್ಚಾಗುತ್ತಿದ್ದಂತೆ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಅಶ್ರಫ್ ಅವರನ್ನು ಪೊಲೀಸರು ಕರೆಸಿದ್ದರು. ಅಲ್ಲದೆ, ಗಲಭೆಯಲ್ಲಿ ತೊಡಗಿರುವ ಜನರನ್ನು ಶಾಂತವಾಗುವಂತೆ ಕೋರಿವಂತೆ ಅವರಲ್ಲಿ ಮನವಿ ಮಾಡಲಾಗಿತ್ತು.

ಇದರಂತೆ ಅಶ್ರಫ್ ಸಹ ಕೈನಲ್ಲಿ ಮೈಕ್ ಹಿಡಿದು ಮಸೀದಿ ಬಳಿಗೆ ತೆರಳಿದ್ದಾರೆ. ಜನ ಶಾಂತವಾಗಿರುವಂತೆ ಒತ್ತಾಯಿಸಿದ್ದಾರೆ. ಆದರೆ, ಅವರು ಮಾತನಾಡುತ್ತಿದ್ದ ವೇಳೆಯಲ್ಲೇ ಮತ್ತೊಮ್ಮೆ ಗುಂಡಿನ ದಾಳಿ ನಡೆಸಲಾಗಿದೆ. ಈ ವೇಳೆ ಅಶ್ರಫ್ ಅವರ ತಲೆಗೆ ಗುಂಡು ತಗುಲಿದೆ. ಇದಲ್ಲದೆ 7 ಜನರಿಗೆ ಗುಂಡಿನ ಏಟು ತಗುಲಿದೆ. ಅದೃಷ್ಟವಶಾತ್ ಪ್ರಾಣಾಪಾಯವಾಗದಿದ್ದರೂ. ಅಶ್ರಫ್ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Also Read: ಮಾನವ ಹಕ್ಕುಗಳ ಆಯೋಗದ ಕಟಕಟೆ ಹತ್ತಿದ ಗೋಲಿಬಾರ್ ಪ್ರಕರಣ

ಚಾರ್ಜ್‌ಶೀಟ್ ನಾಟಕ ಮತ್ತು ಪೊಲೀಸರ ಕಿರುಕುಳ

ಪೊಲೀಸರು ಯಾವಾಗ ತಮ್ಮ ನೆರವಿಗೆ ಬಂದ ಅಶ್ರಫ್ ಎಂಬ ವ್ಯಕ್ತಿಯ ಮೇಲೆಯೇ ಗುಂಡು ಹಾರಿಸಿದರೋ ಅಗಲೇ ಮಂಗಳೂರಿನ ಮುಸ್ಲಿಮರಲ್ಲಿ ಪೊಲೀಸರ ವಿರುದ್ಧ ತೀವ್ರ ಅಸಮಾಧಾನಕ್ಕೆ ಹುಟ್ಟಿಕೊಂಡಿತು. ಅಲ್ಲದೆ, ಪೊಲೀಸರ ವಿರುದ್ಧವೇ 16 ಪ್ರಕರಣಗಳನ್ನು ದಾಖಲಿಸಿದರು. ಮೃತ ಜಲೀಲ್ ಮತ್ತು ನೌಶಾದ್ ಕುಟುಂಬದವರು ಮಾನವ ಹಕ್ಕು ಆಯೋಗದ ಮೆಟ್ಟಿಲೇರಿದ್ದರು.

ಇನ್ನು ಸ್ವಾತಂತ್ಯ್ರ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಮತ್ತು ಗುಂಡಿನೇಟು ತಿಂದಿದ್ದ ಮಾಜಿ ಮೇಯರ್ ಅಶ್ರಫ್ ಹೈಕೋರ್ಟ್‌ಗೆ ಪಿಎಲ್ಐ ಸಲ್ಲಿಸಿದ್ದಾರೆ. ಮಂಗಳೂರು ಗಲಭೆಗೆ ಪೊಲೀಸರೇ ಕಾರಣರಾಗಿದ್ದು, ಸ್ವತಂತ್ಯ್ರ ತನಿಖಾ ತಂಡ ಈ ಕುರಿತು ತನಿಖೆ ನಡೆಸಬೇಕು ಎಂಬ ಮನವಿ ಮಾಡಿದ್ದಾರೆ.

ಆದರೆ, ಇದರ ಬೆನ್ನಿಗೆ ಚಾರ್ಜ್‌ಶೀಟ್ ಸಲ್ಲಿಸಿರುವ ಸಿಐಡಿ ಪೊಲೀಸರು 86 ಜನರ ಹೆಸರನ್ನು ಚಾರ್ಜ್‌ಶೀಟ್ ಲ್ಲಿ ಉಲ್ಲೇಖಿಸಿದೆ. ಅಲ್ಲದೆ, ಪೊಲೀಸರ ವಿರುದ್ಧ ದೂರು ನೀಡಿದ ಅಶ್ರಫ್ ಸೇರಿದಂತೆ ಪ್ರಕರಣಕ್ಕೆ ಸಂಬಂಧವೇ ಇಲ್ಲದ ಸುಮಾರು 26 ಜನರನ್ನು ಈ ಚಾರ್ಜ್‌ಶೀಟ್ ಲ್ಲಿ ಉಲ್ಲೇಖಿಸಿದ್ದಾರೆ. ಇನ್ನೂ ಗೋಲಿಬಾರ್ ನಲ್ಲಿ ಮೃತಪಟ್ಟ ಜಲೀಲ್‌ರ ಪತ್ನಿಯನ್ನು ತನಿಖೆ ನೆಪದಲ್ಲಿ ಪ್ರತಿನಿತ್ಯ ಪೊಲೀಸ್ ಠಾಣೆಗೆ ಕರೆಸಿ ಪೊಲೀಸರ ಮೇಲಿನ ದೂರನ್ನು ಹಿಂಪಡೆಯುವಂತೆ ಒತ್ತಾಯಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ತಮ್ಮ ವಿರುದ್ಧ ನೀಡಿರುವ ಪ್ರಕರಣ ಹಿಂಪಡೆದರೆ ತಾವೂ ಪ್ರಕರಣಕ್ಕೆ ಸಂಬಂಧಿಸದ 26 ಜನರ ಹೆಸರನ್ನು ಚಾರ್ಜ್‌ಶೀಟ್ ನಿಂದ ಕೈಬಿಡುವುದಾಗಿ ಪೊಲೀಸರು ಬ್ಲಾಕ್ಮೇಲ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಒಟ್ಟಾರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಪ್ರಭುತ್ವ ಒಟ್ಟಾಗಿಯೇ ಮಂಗಳೂರು ಗಲಭೆಯನ್ನು ಸೃಷ್ಟಿಸಿದೆ ಮತ್ತು ಗೋಲಿಬಾರ್ ಮೂಲಕ ಇಬ್ಬರ ಸಾವಿಗೆ ಕಾರಣವಾಗಿರುವುದು ಸ್ಪಷ್ಟವಾಗಿದೆ. ಅಲ್ಲದೆ, ಮುಸ್ಲಿಂ ಜನರನ್ನು ವ್ಯವಸ್ಥಿತವಾಗಿ ಹಣಿಯಲು ಯಾವ ಹಂತಕ್ಕೂ ಇಳಿಯಲು ಸಿದ್ದವಾಗಿರುವುದು ಸಹ ವೇದ್ಯವಾಗುತ್ತಿದೆ.

Tags: ದೆಹಲಿ ಗಲಭೆಮಂಗಳೂರು ಗೋಲಿಬಾರ್ಸಿಎಎ - ಎನ್‌ಆರ್‌ಸಿ
Previous Post

ಲಾಕ್‌ಡೌನ್‌ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆದಿಲ್ಲವೇ..?

Next Post

ಕರ್ನಾಟಕ: 160 ಕರೋನಾ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ..!

Related Posts

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ
Top Story

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

by ಪ್ರತಿಧ್ವನಿ
February 15, 2026
0

ಅಮೆರಿಕದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಕಳೆದು ಆರು ದಿನಗಳಿಂದ ನಾಪತ್ತೆಯಾಗಿದ್ದು, ಇದೀಗ ಶವ ನಾಪತ್ತೆಯಾಗಿದೆ. ಸಾಕೇತ್ ಶ್ರೀನಿವಾಸಯ್ಯ (22) ಮೃತದೇಹ ಕ್ಯಾಲಿಫೋರ್ನಿಯಾದಲ್ಲಿ(California) ಪತ್ತೆಯಾಗಿದೆ....

Read moreDetails
ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

February 14, 2026
“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”

“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”

February 14, 2026
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
Next Post
ಕರ್ನಾಟಕ: 160 ಕರೋನಾ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ..!

ಕರ್ನಾಟಕ: 160 ಕರೋನಾ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada