• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಂಗಳೂರು ಪೊಲೀಸರ ಟವರ್ ನೋಟೀಸ್ ವಿರುದ್ಧ ಕಾಸರಗೋಡು ಜಿಪಂ ನಿರ್ಣಯ

by
January 24, 2020
in ಕರ್ನಾಟಕ
0
ಮಂಗಳೂರು ಪೊಲೀಸರ ಟವರ್ ನೋಟೀಸ್ ವಿರುದ್ಧ ಕಾಸರಗೋಡು ಜಿಪಂ ನಿರ್ಣಯ
Share on WhatsAppShare on FacebookShare on Telegram

ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಮಂಗಳೂರು ನಗರ ಪೊಲೀಸರು ಕೇರಳದ ನಾಗರಿಕರಿಗೆ ನೊಟೀಸ್ ನೀಡುತ್ತಿರುವುದರ ವಿರುದ್ಧ ಜನವರಿ 23ರಂದು ಗುರುವಾರ ಕಾಸರಗೋಡು ಜಿಲ್ಲಾ ಪಂಚಾಯತ್ ನಿರ್ಣಯ ಅಂಗೀಕರಿಸಿದೆ.

ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಡಿ.19ರಂದು ನಗರದ ಸ್ಟೇಟ್‌ಬ್ಯಾಂಕ್ ಸರ್ಕಲ್ ಪರಿಸರದಲ್ಲಿ ಉಂಟಾದ ಗಲಭೆಯ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಕೇರಳ ಮತ್ತು ಕರ್ನಾಟಕ ಗಡಿಭಾಗದ ವಿದ್ಯಾರ್ಥಿಗಳು ಮತ್ತು ಕಾರ್ಮಿಕರು, ಮಹಿಳೆಯರು ಎನ್ನದೆ ನೊಟೀಸು ಜಾರಿ ಮಾಡುತ್ತಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಮಂದಿಗೆ ಈಗಾಗಲೇ ನೊಟೀಸು ಕಳುಹಿಸಲಾಗಿತ್ತು, ಸುಮಾರು ಎರಡು ಸಾವಿರ ಮಂದಿಗೆ ನೊಟೀಸು ಕಳುಹಿಸಲಾಗುತ್ತಿದೆ ಎನ್ನಲಾಗಿದೆ.

ಭಾರತೀಯ ದಂಡ ಸಂಹಿತೆ (CRPC) ಸೆಕ್ಷನ್ 41-ಎ ಪ್ರಕಾರ ನೊಟೀಸು ನೀಡಲಾಗುತ್ತಿದೆ. ಭಾರತೀಯ ದಂಡ ಸಂಹಿತೆಯ (IPC)143 (ಕಾನೂನುಬಾಹಿರ ಗುಂಪುಗೂಡಿವಿಕೆ), 147 (ಗಲಭೆಯಲ್ಲಿ ಭಾಗಿ), 148 (ಅಕ್ರಮ ಆಯುಧ ಹೊಂದುವಿಕೆ), 188 (ನಿಷೇಧಾಜ್ಞೆ ಉಲ್ಲಂಘನೆ), 353 (ಹಲ್ಲೆ), 332 (ಕರ್ತವ್ಯಕ್ಕೆ ಅಡ್ಡಿ), 324 (ಹಿಂಸೆ), 427 (ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ), 307 (ಕೊಲೆಯತ್ನ), 120 ಬಿ (ಪಿತೂರಿ) ಪ್ರಕಾರ ಅಪರಾಧವಾಗಿರುವ ಪ್ರಕರಣದಲ್ಲಿ ನೀವು ಆರೋಪಿಯಾಗಿದ್ದು, ತನಿಖೆಗಾಗಿ ಮಂಗಳೂರಿನ ಉತ್ತರ ಪೊಲೀಸ್ ಠಾಣೆಗೆ ಹಾಜರಾಗುವಂತೆ ನೊಟೀಸಿನಲ್ಲಿ ಸೂಚಿಸಲಾಗಿದೆ. ಸಿಟಿ ಕ್ರೈಂ ರೆಕಾರ್ಡ್ ಬ್ಯುರೋ ಸಹಾಯಕ ಆಯುಕ್ತರ (ಎಸಿಪಿ) ಕಚೇರಿಯಿಂದ ಸ್ಪೀಡ್ ಪೋಸ್ಟಿನಲ್ಲಿ ನೊಟೀಸ್ ನೀಡಲಾಗುತ್ತಿದೆ.

ಮಂಗಳೂರಿನಲ್ಲಿ ಡಿ.19ರಂದು ಸೆ.144 ಜಾರಿಗೊಳಿಸಲಾಗಿತ್ತು. ಆದರೂ ಕೆಲವು ಪ್ರತಿಭಟನಾಕಾರರು ಸ್ಟೇಟ್‌ಬ್ಯಾಂಕ್ ಪರಿಸರದಲ್ಲಿ ಜಮಾಯಿಸಿದ್ದು, ಅನಂತರ ನಡೆದ ಕಲ್ಲು ತೂರಾಟ, ಗಲಭೆಯ ನಡುವೆ ಪೊಲೀಸ್ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟಿದ್ದರು. ಸ್ಟೇಟ್ ಬ್ಯಾಂಕ್ ಪರಿಸರದಲ್ಲಿ ನಡೆದಿರುವ ಈ ಘಟನೆಗಳಿಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಎರಡು ಡಜನಿಗಿಂತಲೂ ಹೆಚ್ಚು ಎಪ್ಐಆರ್ ದಾಖಲಿಸಿದ್ದರು. ಈ ಎಫ್ಐಆರ್ ಗಳಲ್ಲಿ ಎರಡು ಸಾವಿರಕ್ಕೂ ಹೆಚ್ಚು ಅನಾಮಧೇಯ ಆರೋಪಿಗಳ ಸಂಖ್ಯೆಯನ್ನು ನಮೂದಿಸಲಾಗಿತ್ತು.

ಈಗ ಪೊಲೀಸರು ಅಂದು ಮಂಗಳೂರಿಗೆ ಆಗಮಿಸಿದವರು ಮೊಬೈಲ್ ಫೋನ್ ಟವರ್ ಲೊಕೇಶನ್ ಆಧರಿಸಿ ನೊಟೀಸ್ ನೀಡುತ್ತಿದ್ದು, ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದಾರೆ. ಮಾತ್ರವಲ್ಲದೆ, ಪೊಲೀಸರು ನಗೆಪಾಟಲಿಗೂ ಗುರಿಯಾಗುತ್ತಿದ್ದಾರೆ. ಇದರೊಂದಿಗೆ ರಾಷ್ಟ್ರೀಯ ಮಟ್ಟದಲ್ಲಿ ಪೊಲೀಸರ ಈ ನೊಟೀಸು ವಿಚಾರ ಸುದ್ದಿಯಾಗಿದೆ. ಕೇರಳದ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಇದೊಂದು ನಿತ್ಯ ಚರ್ಚೆಯ ಸುದ್ದಿಯಾಗಿದ್ದು, ಮಂಗಳೂರು ಪೊಲೀಸರ ನೊಟೀಸು ಬರುತ್ತಲೇ ಇದೆ ಎನ್ನುತ್ತಾರೆ ಕಾಸರಗೋಡಿನ ಜಿಲ್ಲಾ ಪಂಚಾಯತ್ ಸದಸ್ಯ ಹರ್ಷದ್ ವರ್ಕಾಡಿ.

ಶಿಕ್ಷಣ, ಆರೋಗ್ಯ ಸೇವೆ, ವಾಣಿಜ್ಯ ಚಟುವಚಿಕೆ, ಉದ್ಯೋಗಕ್ಕಾಗಿ ಕಾಸರಗೋಡಿನ ಜನತೆ ಸಂಪೂರ್ಣವಾಗಿ ಮಂಗಳೂರು ನಗರವನ್ನು ಆಶ್ರಯಿಸಿದ್ದಾರೆ. ಕಾಸರಗೋಡು ಮತ್ತು ಮಂಗಳೂರು ಮಧ್ಯೆ ಪ್ರತಿ ಎರಡು ನಿಮಿಷಕ್ಕೊಂದು ಬಸ್ಸುಗಳು ಓಡಾಡುತ್ತಿವೆ.ಎರಡೂ ರಾಜ್ಯಗಳ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಈ ಸೇವೆ ನೀಡುತ್ತಿವೆ. ಕನ್ನಡ ಮಾಧ್ಯಮದ ಬಹುತೇಕ ವಿದ್ಯಾರ್ಥಿಗಳು ಮಂಗಳೂರಿನ ಶಿಕ್ಷಣ ಸಂಸ್ಥೆಗಳನ್ನು ಅವಲಂಬಿಸಿದ್ದಾರೆ. ಹೀಗಿರುವಾಗ ಮಂಗಳೂರಿನ ಬಹುತೇಕ ಪ್ಲೋಟಿಂಗ್ ಪೊಪ್ಯುಲೇಷನ್ ಕಾಸರಗೋಡಿನವರೇ ಆಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಮಂಗಳೂರು ನಗರ ಪೊಲೀಸರು ಮೊಬೈಲ್ ಟವರ್ ಆಧಾರದಲ್ಲಿ ನೊಟೀಸು ನೀಡುತ್ತಿರುವುದು ಎಷ್ಟರ ಮಟ್ಟಿಗೆ ನ್ಯಾಯ ಸಮ್ಮತ ಮತ್ತು ವೈಜ್ಞಾನಿಕ ವಿಧಾನ ಎಂಬುದಷ್ಟೇ ಅಲ್ಲದೆ, ಇದು ಅಧಿಕಾರದ ದುರುಪಯೋಗ ಕೂಡ ಆಗಿದೆ.

ಮಂಗಳೂರು ಪೊಲೀಸರು ಕಿರುಕುಳಕಾಗಿ ನೊಟೀಸಿಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಸರಗೋಡು ಜಿಲ್ಲಾ ಪಂಚಾಯತ್ ಮಂಗಳೂರು ಪೊಲೀಸರ ಕ್ರಮದ ವಿರುದ್ಧ ತನ್ನ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು, ಇಂತಹ ಕ್ರಮವನ್ನು ತಕ್ಷಣ ನಿಲ್ಲಿಸುವಂತೆ ಕರ್ನಾಟಕ ಮತ್ತು ಕೇರಳ ರಾಜ್ಯ ಸರಕಾರಗಳನ್ನು ಒತ್ತಾಯಿಸಿದೆ. .

ಈಗಾಗಲೇ ಪೊಲೀಸರು ಹೊರಡಿಸಿದ್ದ ನೋಟಿಸ್‌ನ್ನು ಸ್ವೀಕರಿಸಿದ ಹಲವರು ಬಂದರು ಠಾಣೆಗೆ ಹಾಜರಾಗಿದ್ದಾರೆ. ಇದರಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಠಾಣೆಗೆ ಹಾಜರಾದವರ ಹೆಸರು, ಮೊಬೈಲ್ ಸಂಖ್ಯೆ, ಸಹಿ ಮತ್ತು ಕೆಲವರ ಫೋಟೊ ಕೂಡ ತೆಗೆದುಕೊಂಡಿರುವ ಪೊಲೀಸರು ಪ್ರಕರಣದ ತನಿಖೆ ನಡೆಸುವ ಸಿಐಡಿಯಿಂದ ನೋಟಿಸ್ ಬಂದರೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.

ನೊಟೀಸ್ ಪಡೆದವರಲ್ಲಿ ಬಹುಪಾಲು ಮಂದಿ ಮುಸ್ಲಿಂ ಸಮುದಾಯವರಾಗಿದ್ದು, ಮೀನುಗಾರಿಕಾ ಧಕ್ಕೆಯಲ್ಲಿ ಕೆಲಸ ಮಾಡುವ ಮಂಜೇಶ್ವರ ಪ್ರದೇಶದ ಇತರ ಕಾರ್ಮಿಕರಿಗೂ ಕೂಡ ನೊಟೀಸ್ ಬಂದಿದೆ. ಪೊಲೀಸ ಎದುರು ಹಾಜರಾಗಿರುವ ಬಹುತೇಕ ಜನರು ಅಮಾಯಕರಾಗಿದ್ದು, ಅಂದಿನ ಗಲಭೆ, ಪ್ರತಿಭಟನೆಯಲ್ಲಿ ಭಾಗವಹಿಸಿದವರೂ ಅಲ್ಲ, ನಿಷೇದಾಜ್ಞೆಯನ್ನು ಉಲ್ಲಂಘಿಸಿದವರೂ ಕೂಡ ಅಲ್ಲ.

ಕೆಲವು ಪ್ರಕರಣಗಳಲ್ಲಿ ಪೊಲೀಸರು ಕ್ರಮ ಹಾಸ್ಯಾಸ್ಪದವಾಗಿದೆ. ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಇವರು ಆರೋಪಿಗಳನ್ನು ಆಯ್ಕೆ ಮಾಡುವಾಗ ಬಹಳಷ್ಟು ಸಂದರ್ಭಗಳಲ್ಲಿ ವಿದ್ಯಾರ್ಥಿಗಳ ತಾಯಿಯಂದಿರಿಗೆ, ವಯೋವೃದ್ಧ ಮಹಿಳೆಯರಿಗೆ ಕೂಡ ನೊಟೀಸ್ ನೀಡಿದ್ದಾರೆ. ಮಂಗಳೂರಿಗೆ ಕಾಲೇಜಿಗೆ ಬರುತ್ತಿದ್ದ ಮಗ ತಾಯಿಯ ಹೆಸರಿನಲ್ಲಿ ಮೊಬೈಲ್ ಸಂಪರ್ಕ ಪಡೆದಿದ್ದು, ತಾಯಿಗೆ ಪೊಲೀಸರು ನೊಟೀಸು ನೀಡಿದ್ದಾರೆ.

ಮಂಗಳೂರು ಹಳೆ ಬಂದರು ಪ್ರದೇಶದಲ್ಲಿ ಮೀನುಗಾರಿಕೆ ಕೆಲಸ ಮಾಡುವವರು, ಸಮುದ್ರ ಮೀನುಗಾರಿಕೆ ಕಾರ್ಮಿಕರು, ಧಕ್ಕೆಯಿಂದ ಮೀನು ಖರೀದಿಸಿ ಕೇರಳ ಗಡಿ ಪ್ರದೇಶದಲ್ಲಿ ಮಾರಾಟ ಮಾಡುವವರು ಇತ್ಯಾದಿ ಎಲ್ಲರಿಗೂ ನೊಟೀಸ್ ಜಾರಿ ಮಾಡಿರುವ ಪೊಲೀಸರು ಏನು ಮಹಾನ್ ಸಾಧನೆ ಮಾಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಅದಕ್ಕೂ ಮುನ್ನ ಕೇರಳದ ಕೆಲವು ರಾಜಕೀಯ ಮುಖಂಡರು ನ್ಯಾಯಾಲಯ ಮತ್ತು ಮಾನವ ಹಕ್ಕುಗಳ ವೇದಿಕೆ ಮೊರೆ ಹೋಗಲು ಸಿದ್ಧತೆ ನಡೆಸಿದ್ದಾರೆ. ಇನ್ನೊಂದು ವಿಶೇಷವೆಂದರೆ ಸ್ಥಳೀಯ ಮಾಧ್ಯಮಗಳಲ್ಲಿ ಈ ವಿಚಾರ ಸುದ್ದಿಯಾಗಿಲ್ಲ. ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ಏಕೆಂದರೆ, ಮಂಗಳೂರು ಪೊಲೀಸರು ಈ ಬಗ್ಗೆ ಯಾವ ಪ್ರತಿಕ್ರಿಯೆಯನ್ನು ನೀಡುತ್ತಿಲ್ಲ.

Tags: anti-CAA protestsKasaragod districtKeralaMangalore PoliceMuslimsprobesummonsViolentಕಾಸರಗೋಡು ಜಿಲ್ಲೆಕೇರಳಪೊಲೀಸ್ ತನಿಖೆಪ್ರತಿಭಟನೆಮಂಗಳೂರುಮುಸ್ಲಿಂರುಸಮನ್ಸ್ಸಿಎಎ ವಿರೋಧಿಹಿಂಸಾಚಾರ
Previous Post

ಪೊಲೀಸರನ್ನು ಟೀಕಿಸುವ ಭರದಲ್ಲಿ ಗೌರವಕ್ಕೆ ಧಕ್ಕೆ ತಂದುಕೊಂಡರೇ HDK?   

Next Post

ಬ್ರೆಜಿಲ್ ಅಧ್ಯಕ್ಷ ಭಾರತಕ್ಕೆ ಬರುವುದು ಬೇಡವೆನ್ನುವುದಕ್ಕೆ ಇಲ್ಲಿವೆ ಕಾರಣ

Related Posts

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್
ಕರ್ನಾಟಕ

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

by ಪ್ರತಿಧ್ವನಿ
July 13, 2025
0

ಕನಕದಾಸರು ಕುಲದ ಅವಮಾನವನ್ನು ಅನುಭವಿಸಿ ಬಳಿಕ ಅಳಿಸಿದರು: ಕೆ.ವಿ.ಪಿ ಕನಕದಾಸರನ್ನು ಭಕ್ತಿಗೆ ಕಟ್ಟಿಹಾಕದೆ-ಅವರ ಬಂಡಾಯವನ್ನೂ ನಾವು ಅರಿಯಬೇಕಿದೆ: ಕೆ.ವಿ.ಪಿ ಪ್ರತಿಭಾ ಪುರಸ್ಕಾರ ಅಂದರೆ ಆತ್ಮವಿಶ್ವಾಸದ ರಕ್ತದಾನವಿದ್ದಂತೆ: ಕೆ.ವಿ.ಪ್ರಭಾಕರ್...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025
Next Post
ಬ್ರೆಜಿಲ್ ಅಧ್ಯಕ್ಷ ಭಾರತಕ್ಕೆ ಬರುವುದು ಬೇಡವೆನ್ನುವುದಕ್ಕೆ ಇಲ್ಲಿವೆ ಕಾರಣ

ಬ್ರೆಜಿಲ್ ಅಧ್ಯಕ್ಷ ಭಾರತಕ್ಕೆ ಬರುವುದು ಬೇಡವೆನ್ನುವುದಕ್ಕೆ ಇಲ್ಲಿವೆ ಕಾರಣ

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada