Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಮಂಗಳೂರು ಪ್ರವೇಶ ನಿರಾಕರಣೆ ಮೂಲಕ ತುಘಲಕ್ ದರ್ಬಾರ್

ಮಂಗಳೂರು ಪ್ರವೇಶ ನಿರಾಕರಣೆ ಮೂಲಕ ತುಘಲಕ್ ದರ್ಬಾರ್
ಮಂಗಳೂರು ಪ್ರವೇಶ ನಿರಾಕರಣೆ ಮೂಲಕ ತುಘಲಕ್ ದರ್ಬಾರ್
Pratidhvani Dhvani

Pratidhvani Dhvani

December 21, 2019
Share on FacebookShare on Twitter

ಬಾಯಿಗೆ ಬಟ್ಟೆ ತುರುಕಿದ್ದಾರೆ

ಬಿಗಿದು ಕೈಯ ಕಟ್ಟಿದ್ದಾರೆ

ಗಂಟಲೊತ್ತಿ ಹಿಸುಕಿದ್ದಾರೆ

ಸತ್ತೆ ಸತ್ತೆ ಅಯ್ಯೋ ಸತ್ತೆ

ನಾ… ನು…. ಪ್ರ…ಜಾ… ಸ….ತ್ತೆ!

ರಾಷ್ಟ್ರಕವಿ ಕುವೆಂಪು ಅವರು 1975 ರಲ್ಲಿ ತುರ್ತುಪರಿಸ್ಥಿತಿಯ ನಗ್ನ ಚಿತ್ರಣವನ್ನು ಚಿತ್ರಿಸಿದ್ದು ಹೀಗೆ.

ಆದರೆ, ಈಗಿನ ಪರಿಸ್ಥಿತಿಯೂ ವಿಭಿನ್ನವಾಗಿಲ್ಲ. ದೇಶದಲ್ಲಿ ಪೌರತ್ವ ತಿದ್ದುಪಡಿ ಕಾನೂನಿನ ವಿಚಾರದಲ್ಲಿ ತಲೆದೋರಿರುವ ಬಿಕ್ಕಟ್ಟನ್ನೇ ನೆಪವಾಗಿಟ್ಟುಕೊಂಡು ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ತುರ್ತುಪರಿಸ್ಥಿತಿಯ ವಾತಾವರಣವನ್ನು ನಿರ್ಮಾಣ ಮಾಡಿದೆ. ತುರ್ತುಪರಿಸ್ಥಿತಿಯ ಘೋಷಣೆ ಮಾಡದಿದ್ದರೂ ದೇಶದೆಲ್ಲೆಡೆ ಅಶಾಂತಿ, ಆತಂಕ, ನಾಳೆ ಏನು ಎಂಬ ಭೀತಿ ಎದುರಾಗಿದೆ.

ಅಲ್ಪಸಂಖ್ಯಾತರನ್ನೇ ಅದರಲ್ಲೂ ಮುಸ್ಲಿಂ ಸಮುದಾಯವನ್ನೇ ಗುರಿಯಾಗಿಟ್ಟುಕೊಂಡು ಕಾನೂನುಗಳನ್ನು ರೂಪಿಸುತ್ತಿರುವ ಬಿಜೆಪಿ ಸರ್ಕಾರ ಅಸಹ್ಯ ಹುಟ್ಟಿಸುವ ರೀತಿಯಲ್ಲಿ ಆಡಳಿತ ನಡೆಸುತ್ತಿದೆ.

ಧ್ವನಿ ಎತ್ತಿದವರ ಧ್ವನಿಯನ್ನೇ ಅಡಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ ಬಿಜೆಪಿ ಈ ಮೂಲಕ ಅಧಿಕಾರವನ್ನು ಎಗ್ಗಿಲ್ಲದೇ ದುರ್ಬಳಕೆ ಮಾಡಿಕೊಳ್ಳುತ್ತಿದೆ.

ಮಂಗಳೂರಿನಲ್ಲಿ ಉಂಟಾದ ಗಲಭೆ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಅಲ್ಲಿ ಕರ್ಫ್ಯೂ ಹೇರಿದೆ. ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಭಟನೆ, ಹಿಂಸಾಚಾರಕ್ಕೆ ಸಂಬಂಧಿಸಿದ ಸುದ್ದಿ, ಚಿತ್ರ, ವಿಡೀಯೋಗಳ ಬಿತ್ತರವನ್ನು ನಿರ್ಬಂಧಿಸಿದೆ. ಇದೆಲ್ಲಾ ಬಿಗುವಿನ ವಾತಾವರಣವನ್ನು ತಹಬದಿಗೆ ತರುವ ಪ್ರಯತ್ನವೆಂದು ಎಲ್ಲರೂ ಸುಮ್ಮನಾಗಿದ್ದರು.

ಆದರೆ, ಪ್ರತಿಪಕ್ಷ ಕಾಂಗ್ರೆಸ್ ನಾಯಕರು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧ ಹೇರಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.

ಪೊಲೀಸರ ಗೋಲಿಬಾರ್ ನಿಂದ ಬಲಿಯಾದ ಯುವಕರಿಬ್ಬರ ಮನೆಗಳಿಗೆ ತೆರಳಿ ಅವರ ಕುಟುಂಬಗಳಿಗೆ ಸಾಂತ್ವನ ಹೇಳಲೆಂದು ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದ ತಂಡ ನಿನ್ನೆ ಮಂಗಳೂರಿಗೆ ತೆರಳಿತ್ತು. ಆದರೆ, ಅವರನ್ನು ವಿಮಾನನಿಲ್ದಾಣದಿಂದ ಹೊರಗೆ ಬಿಡದೇ ಅವರನ್ನು ತಳ್ಳಿ, ವಾಪಸ್ ಬೆಂಗಳೂರಿನ ವಿಮಾನವನ್ನು ಹತ್ತಿಸಲಾಯಿತು. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಮಂಗಳೂರು ಪ್ರವೇಶವನ್ನು ನಿರಾಕರಿಸಲಾಗಿತ್ತು.

ಇನ್ನು ಪ್ರತಿಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ನಿನ್ನೆ ಮಧ್ಯಾಹ್ನ 2 ಗಂಟೆಯ ವಿಮಾನದಲ್ಲಿ ಮಂಗಳೂರಿಗೆ ಹೋಗಬೇಕಿತ್ತು. ಆದರೆ, ಅಷ್ಟರೊಳಗೆ ಮಂಗಳೂರು ಪೊಲೀಸ್ ಆಯುಕ್ತರು ಸಿದ್ದರಾಮಯ್ಯನವರಿಗೆ ಒಂದು ನೊಟೀಸ್ ಕಳುಹಿಸಿ ಯಾವುದೇ ಕಾರಣಕ್ಕೂ ನೀವು ಮಂಗಳೂರಿಗೆ ಬರುವಂತಿಲ್ಲ. ಒಂದು ವೇಳೆ ಬಂದರೆ ಶಾಂತಿಗೆ ಭಂಗವಾಗುತ್ತದೆ ಎಂದು ಹೇಳಿ ಸಿದ್ದರಾಮಯ್ಯಗೆ ಮಂಗಳೂರು ಭೇಟಿಗೆ ನಿರ್ಬಂಧ ವಿಧಿಸಿದ್ದಾರೆ.

ಮಂಗಳೂರಲ್ಲಿ ವಿನಾಕಾರಣ ಗೋಲಿಬಾರ್ ಮಾಡಲಾಗಿದೆ.

ಉದ್ದೇಶ ಪೂರ್ವಕವಾಗಿ ನಿರಪರಾಧಿಗಳನ್ನು ಕೊಲ್ಲಲಾಗಿದೆ.

ಅವರೆಲ್ಲಾ ಹಿಂಸಾಚಾರದಲ್ಲಿ ತೊಡಗಿದವರಲ್ಲ.

ರಾಜ್ಯ ಸರ್ಕಾರವೇ ಗೋಲಿಬಾರ್ ಗೆ ಕುಮ್ಮಕ್ಕು ನೀಡಿದೆ.

ನಿಷೇಧಾಜ್ಞೆ ಜಾರಿಯಲ್ಲಿದ್ದಾಗ ಶಾಂತಿಯುತವಾಗಿ ಪ್ರತಿಭಟನೆ ಮಾಡಬಾರದೆಂದು ಯಾವುದೇ ಕೋರ್ಟ್ ಹೇಳಿಲ್ಲ.
– @siddaramaiah pic.twitter.com/5uC73KwvAi

— Karnataka Congress (@INCKarnataka) December 21, 2019


ಮಂಗಳೂರಿಗೆ ತೆರಳುವುದಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೆ ನಿರ್ಬಂಧ ಹೇರಿಲ್ಲ. ಕಾಂಗ್ರೆಸ್ ಅಧಿಕಾರ ಅವಧಿಯಲ್ಲಿ ಎಂತಹ ಪರಿಸ್ಥಿತಿ ಇತ್ತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಜತೆಗೆ ಮಂಗಳೂರಿಗೆ ತೆರಳುವುದಕ್ಕೂ ಮುನ್ನ ಮಾತನಾಡಿದ ಅವರು, ‘ಮಂಗಳೂರಿಗೆ ತೆರಳಿ, ಅಲ್ಲಿನ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಲಿದ್ದೇವೆ. ಬಳಿಕ ಉಡುಪಿಗೆ ತೆರಳಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿ ಮತ್ತೆ ಮಂಗಳೂರಿಗೆ ಬರಲಿದ್ಗಿದೇವೆ’ ಎಂದು ತಿಳಿಸಿದರು. ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ವಿಷಯಗಳನ್ನು ಮಂಗಳೂರಿನಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ನೀವು ಮಂಗಳೂರಿಗೆ ಬಂದರೆ ಕಾನೂನು ಸುವ್ಯವಸ್ಥೆಗೆ ಭಂಗವುಂಟಾಗುವ ಸಾಧ್ಯತೆ ಇರುವುದರಿಂದ ಡಿಸೆಂಬರ್ 22 ರ ಮಧ್ಯರಾತ್ರಿ 12 ಗಂಟೆಯವರೆಗೆ ಇಲ್ಲಿಗೆ ಬರುವುದನ್ನು ನಿಷೇಧಿಸಲಾಗಿದೆ. ಅಲ್ಲದೇ, ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಗೋವಾ ವಿಮಾನನಿಲ್ದಾಣಗಳಿಂದ ನಿಮ್ಮನ್ನು ಮಂಗಳೂರು ನಗರಕ್ಕೆ ಕರೆ ತರಲು ಯಾವುದೇ ರೀತಿಯ ವಾಹನ, ರೈಲಿನ ಸಂಚಾರದ ಪ್ರಯಾಣಕ್ಕೆ ಸಹಕರಿಸುವುದನ್ನೂ ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ರಾಜ್ಯದ ಒಬ್ಬ ಮಾಜಿ ಮುಖ್ಯಮಂತ್ರಿಗೆ ನೊಟೀಸ್ ನೀಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ರಾಜ್ಯದ ಒಬ್ಬ ಜವಾಬ್ದಾರಿಯುತರಾದ ಮಾಜಿ ಮುಖ್ಯಮಂತ್ರಿಗೆ ಪೊಲೀಸ್ ಅಧಿಕಾರಿ ಪ್ರವೇಶ ನಿರಾಕರಿಸಿರುವುದು ಎಷ್ಟರ ಮಟ್ಟಿಗೆ ಸರಿ? ಸರ್ಕಾರ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಪ್ರಜಾಪ್ರಭುತ್ವದ ಕೊಲೆ ಮಾಡಲು ಹೊರಟಂತಿದೆ.

ಸರ್ಕಾರ ಇಂತಹ ಪ್ರಜಾತಂತ್ರ ವಿರೋಧಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಪ್ರತಿಭಟನೆಗೆ ಪರೋಕ್ಷವಾಗಿ ಕುಮ್ಮಕ್ಕು ನೀಡುವಂತಿದೆ.

ಸಾಂತ್ವನ ಹೇಳುವ ಹಕ್ಕಿಲ್ಲವೇ?

ಸರ್ಕಾರಕ್ಕೆ ಎಷ್ಟು ಜವಾಬ್ದಾರಿ ಇರುತ್ತದೋ ಪ್ರತಿಪಕ್ಷಕ್ಕೂ ಅಷ್ಟೇ ಜವಾಬ್ದಾರಿ ಇರುತ್ತದೆ, ಸಮಾಜದ ಬಗ್ಗೆ ಕಳಕಳಿಯೂ ಇರುತ್ತದೆ. ಪ್ರತಿಪಕ್ಷದ ನಾಯಕನ ಸ್ಥಾನದಲ್ಲಿರುವ ಒಬ್ಬ ನಾಯಕ ಗೋಲಿಬಾರ್ ಒಂದೇ ಅಲ್ಲ, ರಾಜ್ಯದಲ್ಲಿ ಎಲ್ಲೇ ಅನಾಹುತಗಳು ನಡೆದರೂ ಅಲ್ಲಿಗೆ ಹೋಗಿ ಸಂತ್ರಸ್ತರಿಗೆ ನೆರವು ಹೇಳುವುದು ಅವರ ಆದ್ಯ ಕರ್ತವ್ಯವಾಗಿರುತ್ತದೆ ಮತ್ತು ಮಾನವೀಯ ಅಂಶವೂ ಆಗಿರುತ್ತದೆ.

ಮಂಗಳೂರಿನಲ್ಲಿ ನಡೆದ ಗೋಲಿಬಾರ್ ನಲ್ಲಿ ಸಾವಿಗೀಡಾದ ಯುವಕರ ಕುಟುಂಬಕ್ಕೆ ಸಾಂತ್ವನ ಹೇಳಲು ಸಿದ್ದರಾಮಯ್ಯ ಅಲ್ಲಿಗೆ ಹೋಗುವ ನಿರ್ಧಾರ ಮಾಡಿದ್ದರು. ಸಾವಿನ ಮನೆಗೆ ಹೋದರೆ ಅದು ಅಶಾಂತಿಗೆ ಹೇಗೆ ಕಾರಣವಾಗುತ್ತದೆ?

Police have issued a notice to me that reads I am prohibited from entering Mangaluru.

We are living in an undeclared emergency situation. @BSYBJP should insist @narendramodi to atleast declare emergency officially & run 'Tuglaq Darbar' as they wish. pic.twitter.com/Ug4joEYfq4

— Siddaramaiah (@siddaramaiah) December 21, 2019


ಹೆಚ್ಚು ಓದಿದ ಸ್ಟೋರಿಗಳು

ಶಿವಸೇನೆ ಶಾಸಕರನ್ನು ಅನರ್ಹಗೊಳಿಸುವಂತೆ ಮನವಿ ಸಲ್ಲಿಸಿದ ಶಿಂಧೆ ಬಣ

ಶೀಘವ್ರೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು : ಫಡ್ನವೀಸ್

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶಾಸಕರೊಬ್ಬರ ಮೇಲೆ ACB ದಾಳಿ : ಅಷ್ಟಕ್ಕೂ ACB ಕೆಲಸ ಏನು.!?

ಇದೇ ಪ್ರಶ್ನೆಯನ್ನು ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಕೇಳಿದ್ದಾರೆ. ಗಲಭೆ ಪೀಡಿತ ಮಂಗಳೂರಿಗೆ ಹೋಗುವುದನ್ನು ಕೇವಲ ಪ್ರತಿಪಕ್ಷದ ನಾಯಕರಿಗೆ ನಿರ್ಬಂಧಿಸಲಾಗಿದೆ. ನಾವೇನೂ ಅಲ್ಲಿ ಗಲಭೆ ಸೃಷ್ಟಿಸಲು ಹೋಗುತ್ತಿದ್ದೇವೆಯೇ? ಸಾವಿನ ಮನೆಗಳಿಗೆ ಹೋಗಿ ಬದುಕಿಗೆ ಆಸರೆಯಾಗಿದ್ದ ಸದಸ್ಯನನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಸಾಂತ್ವನ ಹೇಳಲು ಮಂಗಳೂರಿಗೆ ಹೋಗಲು ನಿರ್ಧರಿಸಿದ್ದೆವು. ಆದರೆ, ಈ ಜನವಿರೋಧಿ ಸರ್ಕಾರವು ನಮಗೆ ಅದಕ್ಕೂ ಅವಕಾಶವನ್ನು ನೀಡಲಿಲ್ಲ. ಸಾವಿನ ಮನೆಯಲ್ಲೂ ಬಿಜೆಪಿ ರಾಜಕಾರಣ ಮಾಡಲು ಹೊರಟಿದೆ. ಬಿಜೆಪಿ ಸರ್ಕಾರದ ಈ ನಿರ್ಧಾರ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾಟಿ ಬೀಸಿರುವ ನ್ಯಾಯಾಲಯ

ಇನ್ನು ರಾಜ್ಯ ಸರ್ಕಾರದ ಪ್ರಜಾತಂತ್ರ ವಿರೋಧಿ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿವೆ. ನ್ಯಾಯಾಲಯ ಕೂಡ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದೆ.

ಪೌರತ್ವ ತಿದ್ದುಪಡಿ ಕಾನೂನಿನ ಜಾರಿ ಮಾತುಗಳು ಕೇಳಿ ಬರುತ್ತಿದ್ದಂತೆಯೇ ರಾಜ್ಯದಲ್ಲಿ ಹಲವಾರು ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಇದನ್ನು ಹತ್ತಿಕ್ಕಲು ರಾಜ್ಯ ಬಿಜೆಪಿ ಸರ್ಕಾರ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿತ್ತು.

ಇದಕ್ಕೆ ಸರ್ಕಾರ ಕೊಟ್ಟ ಕಾರಣ:- ಪ್ರತಿಭಟನೆ ವೇಳೆ ಅಹಿತಕರ ಘಟನೆಗಳು ನಡೆಯಬಹುದು. ಈ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಬಗ್ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್ ಪ್ರತಿಯೊಂದು ಪ್ರತಿಭಟನೆಗಳು ಹಿಂಸಾತ್ಮಕವಾಗಿರುತ್ತವೆ ಎಂದು ಊಹೆ ಮಾಡಲು ಸಾಧ್ಯವೇ? ಈ ಊಹೆಯ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಹೇಗೆ ಸಾಧ್ಯ? ಸರ್ಕಾರದ ನಿರ್ಧಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸಬಾರದೇ? ಎಂದು ಪ್ರಶ್ನಿಸಿದೆ.

RS 500
RS 1500

SCAN HERE

don't miss it !

ನನ್ನ ಸಿನಿಮಾಗೆ A ಸರ್ಟಿಫಿಕೇಟ್‌ ಕೊಟ್ಟಿದೆ ನನ್ನಗೆ ಬೇಸರವಾಗಿದೆ : ತರಂಗ ವಿಶ್ವ
ಇದೀಗ

ನನ್ನ ಸಿನಿಮಾಗೆ A ಸರ್ಟಿಫಿಕೇಟ್‌ ಕೊಟ್ಟಿದೆ ನನ್ನಗೆ ಬೇಸರವಾಗಿದೆ : ತರಂಗ ವಿಶ್ವ

by ಪ್ರತಿಧ್ವನಿ
July 4, 2022
ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಹೊಸ ಪ್ಲ್ಯಾನ್ ನೊಂದಿಗೆ ಬಂದ ಬಿಬಿಎಂಪಿ.!
ಕರ್ನಾಟಕ

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಹೊಸ ಪ್ಲ್ಯಾನ್ ನೊಂದಿಗೆ ಬಂದ ಬಿಬಿಎಂಪಿ.!

by ಕರ್ಣ
June 29, 2022
ಬಿಜೆಪಿಯ ನಾಯಕರೇ ನಿಜವಾದ ತುಕ್ಡೆ ಗ್ಯಾಂಗ್‌ : ಸಿದ್ದರಾಮಯ್ಯ
ಕರ್ನಾಟಕ

ರಾಜ್ಯ ಸಾರಿಗೆ ನಿಗಮದಿಂದ ಕೇಂದ್ರ ಸರ್ಕಾರ ಹೆಚ್ಚುವರಿ ಹಣ ವಸೂಲಿ : ಸಿದ್ದರಾಮಯ್ಯ ಕಿಡಿ

by ಪ್ರತಿಧ್ವನಿ
July 1, 2022
ಪಾಲಿಕೆ ಆವರಣದಲ್ಲೇ ಕ್ರಿಕೆಟ್ ಆಡಿ ವಿನೂತನ ರೀತಿಯಲ್ಲಿ ಪ್ರತಿಭಟಿಸಿದ ಯುವಕರು
Uncategorized

ಪಾಲಿಕೆ ಆವರಣದಲ್ಲೇ ಕ್ರಿಕೆಟ್ ಆಡಿ ವಿನೂತನ ರೀತಿಯಲ್ಲಿ ಪ್ರತಿಭಟಿಸಿದ ಯುವಕರು

by ಪ್ರತಿಧ್ವನಿ
June 30, 2022
ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜುಗಳಿಗೆ ಇಂದು ರಜೆ ಘೋಷಣೆ!
ಕರ್ನಾಟಕ

ದ.ಕ.ದಲ್ಲಿ ಭಾರಿ ಮಳೆ : ಬೆಳ್ತಂಗಡಿ ಶಾಲಾ-ಕಾಲೇಜುಗಳಿಗೆ ರಜೆ!

by ಪ್ರತಿಧ್ವನಿ
July 4, 2022
Next Post
ʼCAA ವಿರುದ್ಧದ ಪ್ರತಿಭಟನೆಯಲ್ಲಿ ಒಗ್ಗಟ್ಟು ಮೂಡಿಬರಲಿʼ 

ʼCAA ವಿರುದ್ಧದ ಪ್ರತಿಭಟನೆಯಲ್ಲಿ ಒಗ್ಗಟ್ಟು ಮೂಡಿಬರಲಿʼ 

ʼವಿರೋಧ ಪಕ್ಷಗಳಿಗೆ ಕುರ್ಚಿ

ʼವಿರೋಧ ಪಕ್ಷಗಳಿಗೆ ಕುರ್ಚಿ, ಅಧಿಕಾರ ಇಲ್ಲದಿದ್ದರೆ ಧ್ವನಿಯೂ ಇರುವುದಿಲ್ಲʼ  

‘ಪೌರತ್ವ’ದ‌ ಹಿಂದೆ RSSನ ವಿಚಿತ್ರ ಸಿದ್ಧಾಂತ!

‘ಪೌರತ್ವ’ದ‌ ಹಿಂದೆ RSSನ ವಿಚಿತ್ರ ಸಿದ್ಧಾಂತ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist