• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮಸೀದಿಗೆ ಬದಲು ಮಸೀದಿಯೇ ಬೇಕು- ಸುಪ್ರೀಮ್ ಗೆ ಜಾಮಿಯತ್ ಮೇಲ್ಮನವಿ

by
December 4, 2019
in ದೇಶ
0
ಮಸೀದಿಗೆ ಬದಲು ಮಸೀದಿಯೇ ಬೇಕು- ಸುಪ್ರೀಮ್ ಗೆ ಜಾಮಿಯತ್ ಮೇಲ್ಮನವಿ
Share on WhatsAppShare on FacebookShare on Telegram

ಅಯೋಧ್ಯೆಯ ಬಾಬರಿ ಮಸೀದಿ ನಿಂತಿದ್ದ ಜಾಗದಲ್ಲಿ ಮತ್ತೊಂದು ಮಸೀದಿಯನ್ನು ನಿರ್ಮಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಜಾಮಿಯತ್ ಉಲೇಮಾ ಹಿಂದ್ ಸುಪ್ರೀಮ್ ಕೋರ್ಟಿಗೆ ಮರುವಿಮರ್ಶಾ ಮನವಿ ಸಲ್ಲಿಸಿದೆ.

ADVERTISEMENT

ನ್ಯಾಯವಿಲ್ಲದೆ ಶಾಂತಿ ನೆಲೆಸುವುದು ಸಾಧ್ಯವಿಲ್ಲ ಎಂದು ಮನವಿಯಲ್ಲಿ ವಾದಿಸಿರುವ ಜಾಮಿಯತ್, ಇತ್ತೀಚೆಗೆ ಹೊರಬಿದ್ದ ಬಾಬರಿ ಮಸೀದಿ-ರಾಮಜನ್ಮಭೂಮಿ ತೀರ್ಪು ನ್ಯಾಯಯುತವಾಗಿಲ್ಲ ಎಂದಿದೆ.

ಕಳೆದ ನವೆಂಬರ್ ತಿಂಗಳಿನಲ್ಲಿ ಹೊರಬಿದ್ದಿದ್ದ ಈ ತೀರ್ಪು 2.70 ಎಕರೆಯಷ್ಟು ವಿವಾದಿತ ಜಮೀನಿನಲ್ಲಿ ರಾಮಮಂದಿರ ನಿರ್ಮಿಸುವಂತೆಯೂ, ಮಸೀದಿ ನಿರ್ಮಾಣಕ್ಕೆ ಆಯೋಧ್ಯೆಯಲ್ಲಿ ಐದು ಎಕರೆಗಳಷ್ಟು ಪ್ರತ್ಯೇಕ ನಿವೇಶನವನ್ನು ನೀಡುವಂತೆಯೂ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಮರುವಿಮರ್ಶಾ ಅರ್ಜಿ ಸಲ್ಲಿಸುವ ಇರಾದೆಯನ್ನು ಈಗಾಗಲೆ ವ್ಯಕ್ತಪಡಿಸಿದೆ. ಆದರೆ ಉತ್ತರಪ್ರದೇಶದ ಸುನ್ನಿ ಕೇಂದ್ರೀಯ ವಕ್ಫ್ ಮಂಡಳಿ ಮುಂತಾದ ಹಲವು ಮುಸ್ಲಿಂ ಸಂಘಟನೆಗಳು ಮರುವಿಮರ್ಶೆ ಅರ್ಜಿ ಸಲ್ಲಿಸುವುದಿಲ್ಲವೆಂದು ಸ್ಪಷ್ಟಪಡಿಸಿವೆ.

1934ರಲ್ಲಿ ಬಾಬರಿ ಮಸೀದಿಯ ಗುಮ್ಮಟಗಳಿಗೆ ಹಾನಿ ಉಂಟು ಮಾಡಿದ್ದು, 1949ರಲ್ಲಿ ರಾಮಲಲ್ಲಾ ವಿಗ್ರಹಗಳನ್ನು ರಾತ್ರೋ ರಾತ್ರಿ ತಂದಿರಿಸಿದ್ದು ಹಾಗೂ 1992ರಲ್ಲಿ ಬಾಬರಿ ಮಸೀದಿ ಕೆಡವಿದ್ದು ಕ್ರಿಮಿನಲ್ ಕೃತ್ಯಗಳು ಎಂದು ತಾನೇ ಬಣ್ಣಿಸಿದ ನಂತರವೂ ವಿವಾದಿತ ಜಮೀನನ್ನು ರಾಮಮಂದಿರ ನಿರ್ಮಾಣಕ್ಕೆ ನೀಡಿದ ನ್ಯಾಯಾಲಯದ ತೀರ್ಪು ನಿರಾಶಾದಾಯಕ ಎಂದು ಮನವಿಯಲ್ಲಿ ಹೇಳಲಾಗಿದೆ. ದೇಶದಲ್ಲಿ ಶಾಂತಿ ಮತ್ತು ಸಾಮರಸ್ಯ ಸ್ಥಾಪಿಸಲು ಈ ಸೂಕ್ಷ್ಮ ವಿಷಯವನ್ನು ವಿಶ್ರಮಿಸಲು ಬಿಡಬೇಕೆಂಬುದು ಹೌದಾದರೂ, ನ್ಯಾಯವಿಲ್ಲದೆ ಶಾಂತಿ ಇರಲು ಸಾಧ್ಯವಿಲ್ಲ ಎಂದು ವಾದಿಸಲಾಗಿದೆ.

ಈ ಮನವಿಯಲ್ಲಿ ಪಟ್ಟಿ ಮಾಡಲಾಗಿರುವ ಸುಪ್ರೀಮ್ ಕೋರ್ಟ್ ತೀರ್ಪಿನ ದೋಷಗಳು ಹೀಗಿವೆ-

ಸುಪ್ರೀಮ್ ಕೋರ್ಟಿನ ತೀರ್ಪು ವಾಸ್ತವವಾಗಿ ಬಾಬರಿ ಮಸೀದಿಯನ್ನು ಕೆಡವಲು ನೀಡಿರುವ ಆದೇಶವಾಗಿದೆ. 1992ರ ಡಿಸೆಂಬರ್ 6ರಂದು ಮಸೀದಿಯನ್ನು ಕೆಡವದೆ ಹೋಗಿದ್ದಿದ್ದರೆ, ಇಂದು ಸುಪ್ರೀಮ್ ಕೋರ್ಟ್ ತೀರ್ಪನ್ನು ಜಾರಿ ಮಾಡುವುದು ಸಾಧ್ಯವಿರುತ್ತಿರಲಿಲ್ಲ. ತೀರ್ಪಿನ ಪ್ರಕಾರ ರಾಮಮಂದಿರ ಕಟ್ಟಲು ಮಸೀದಿಯನ್ನು ಕೆಡವಬೇಕಾಗಿ ಬರುತ್ತಿತ್ತು.

1934, 1949 ಹಾಗೂ 1992ರಲ್ಲಿ ಮಂದಿರವಾದಿಗಳು ಮಾಡಿದ ಅಪರಾಧಗಳಿಗೆ ಬಹುಮಾನವಾಗಿ ನ್ಯಾಯಾಲಯ ಮಂದಿರ ನಿರ್ಮಾಣದ ತೀರ್ಪನ್ನು ನೀಡಿದಂತಾಗಿದೆ.

ವಿವಾದಿತ ಜಮೀನನ್ನು ಮಂದಿರ ನಿರ್ಮಾಣಕ್ಕೆ ನೀಡಿರುವ ತೀರ್ಪಿನಿಂದಾಗಿ ಅಕ್ರಮ ಕೃತ್ಯದಿಂದ ಯಾವ ವ್ಯಕ್ತಿಯೂ ಪ್ರಯೋಜನ ಹೊಂದಲಾರ ಎಂಬ ಮೂಲಭೂತ ತತ್ವದ ಉಲ್ಲಂಘನೆಯಾಗಿದೆ.

ಕಳಂಕಿತ ಕೃತ್ಯವು ಊರ್ಜಿತವಾಗುವುದಿಲ್ಲ ಎಂಬ ಕಾನೂನಿನ ಸ್ಥಾಪಿತ ತತ್ವವನ್ನು ನ್ಯಾಯಾಲಯದ ತೀರ್ಪು ಅನಾದರದಿಂದ ಕಂಡಿದೆ.

ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಬಾಬರಿ ಮಸೀದಿಯನ್ನು ಕೆಡವಲಾಗಿದೆ ಎಂದು ತೀರ್ಪಿನಲ್ಲಿ ಒಪ್ಪಿಕೊಂಡಿರುವ ಕಾರಣ, ಕೆಡವಲಾಗಿರುವ ಮಸೀದಿಗೆ ಬದಲಾಗಿ ಅದೇ ಜಾಗದಲ್ಲಿ ಮತ್ತೊಂದು ಮಸೀದಿ ನಿರ್ಮಿಸುವುದರಿಂದ ಮಾತ್ರವೇ ನ್ಯಾಯ ದೊರೆಯುವುದು ಸಾಧ್ಯ.

ವಿವಾದಿತ ಜಾಗದ ಮೇಲಿನ ದಾವೆಯನ್ನು ಹಿಂದು ಅರ್ಜಿದಾರರು ಮುಸ್ಲಿಂ ಅರ್ಜಿದಾರರಿಗಿಂತ ಪರಿಣಾಮಕಾರಿಯಾಗಿ ರುಜುವಾತು ಮಾಡಿದ್ದಾರೆಂದು ತೀರ್ಪಿನಲ್ಲಿ ಹೇಳಲಾಗಿದೆ. ವಿವಾದಿತ ಜಾಗದ ಹೊರಾಂಗಣ ಹಿಂದು ಅರ್ಜಿದಾರರ ವಶದಲ್ಲಿತ್ತು ಮತ್ತು ಒಳಾಂಗಣವು ಮುಸ್ಲಿಮ್ ಅರ್ಜಿದಾರರ ವಶದಲ್ಲಿತ್ತು ಎಂಬ ಅಂಶವನ್ನು ಆಧರಿಸಿ ಈ ಮಾತು ಹೇಳಲಾಗಿರುವುದು ವಿರೋಧಾಭಾಸದ ಸಂಗತಿ.

1857ಕ್ಕೆ ಮುನ್ನ ವಿವಾದಿತ ಜಾಗದ ಒಳಾಂಗಣದ ಕೇವಲ ತಮ್ಮ ವಶದಲ್ಲಿತ್ತು ಎಂಬುದನ್ನು ಮುಸ್ಲಿಂ ಅರ್ಜಿದಾರರು ರುಜುವಾತು ಮಾಡುವಲ್ಲಿ ವಿಫಲರಾಗಿದ್ದಾರೆ. ಆದರೆ ವಿವಾದಿತ ಜಾಗದಲ್ಲಿ ನಿಂತಿದ್ದ ಕಟ್ಟಡವು ಮಸೀದಿಯಾಗಿತ್ತು ಮತ್ತು ಸದಾ ಮುಸ್ಲಿಮರ ವಶದಲ್ಲಿತ್ತು ಎಂಬುದನ್ನು ತೀರ್ಪು ಗುರುತಿಸಿಲ್ಲ.

1528-1856 ನಡುವೆ ಬಾಬರಿ ಮಸೀದಿಯಲ್ಲಿ ನಮಾಜು ನಡೆಯುತ್ತಿತ್ತು ಎಂದು ಸಾಬೀತಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ಮಸೀದಿಯನ್ನು ಕಟ್ಟಿಸಿದ್ದು 1528ರಲ್ಲಿ. ಮಸೀದಿಯು ನಮಾಜಿಗೆಂದೇ ಗುರುತಾಗಿರುವ ಪ್ರದೇಶ. 1500 ಚದರ ಗಜಗಳಲ್ಲಿ ನಿಂತಿರುವ ಭಾರೀ ಮಸೀದಿಯನ್ನು 1528-1856 ನಡುವಣ ಮುಸ್ಲಿಂ ಆಡಳಿತದ ಅವಧಿಯಲ್ಲಿ ನಮಾಜಿಗೆ ಬಳಸಿಲ್ಲ ಎಂದು ಬಗೆಯುವುದು ಸೂಕ್ತವಲ್ಲ.

ವಿವಾದದ ಇತ್ಯರ್ಥ ವಿಳಂಬ ಕುರಿತು ಹಿಂದೂಗಳಲ್ಲಿ ಅಸಹನೆ ಬೆಳೆಯುತ್ತಿದೆ ಎಂಬ ಕಾರಣವನ್ನು ರಾಮಲಲ್ಲಾ ಪರವಾಗಿ ಸಲ್ಲಿಸಲಾದ ಅರ್ಜಿಯಲ್ಲಿ ನಮೂದಿಸಲಾಗಿತ್ತು. ಅಸಹನೆಯ ಆಧಾರದ ಕೇಸನ್ನು ಆರಂಭದಲ್ಲಿಯೇ ವಜಾ ಮಾಡಬೇಕಿತ್ತು. ಯಾಕೆಂದರೆ ಯಾವುದೇ ಅಹವಾಲಿಗೆ ಅಸಹನೆಯ ಕಾರಣ ನೀಡಲು ಬರುವುದಿಲ್ಲ.

ಯಾತ್ರಿಕರ ಬರೆಹಗಳು ಮತ್ತು ಪುರಾತತ್ವ ಇಲಾಖೆಯ ಸಾಕ್ಷ್ಯಗಳನ್ನು ನ್ಯಾಯಾಲಯ ಆಧರಿಸಿತು. ಯಾತ್ರಿಕರ ಪ್ರವಾಸ ಬರೆಹಗಳೇ ನಿರ್ಣಾಯಕ ಅಲ್ಲ ಮತ್ತು ಪುರಾತತ್ವ ಸಾಕ್ಷ್ಯಾಧಾರಗಳು ನ್ಯಾಯನಿರ್ಣಯದ ಆಧಾರ ಆಗಲಾರವು ಎಂದು ನ್ಯಾಯಾಲಯ ತಾನೇ ಹೇಳಿದೆ. 1856ರಲ್ಲಿ ಅವಧ ರಾಜ್ಯವನ್ನು ವಜೀದ ಅಲಿ ಶಾ ನಿಂದ ಬ್ರಿಟಿಷರ ವಶಪಡಿಸಿಕೊಂಡ ನಂತರದ ವಾಸ್ತವಾಂಶಗಳನ್ನು ಆಧರಿಸಿ ನ್ಯಾಯನಿರ್ಣಯ ಮಾಡಲಾಗುವುದು ಎಂದೂ ನ್ಯಾಯಾಲಯ ಹೇಳಿತ್ತು. ಆದರೆ ತದ್ವಿರುದ್ಧವಾಗಿ 1856ಕ್ಕಿಂತ ಹಿಂದಿನ ಅಂಶಗಳನ್ನೇ ಆಧರಿಸಿಲಾಗಿದೆ.

ಹಿಂದುಗಳು ನಡೆಸಿದ ವಿಧ್ವಂಸ ಮತ್ತು ಅತಿಕ್ರಮಣದ ಕೃತ್ಯಗಳನ್ನೇ ವಿವಾದಿತ ಜಾಗದ ಮೇಲಿನ ದಾವೆಯ ಸಮರ್ಥನೆ ಎಂದು ನ್ಯಾಯಾಲಯವು ಬಗೆದಿದೆ.

ಜಾಮಿಯತ್ ನ ಈ ನಡೆಯನ್ನು ಪ್ರಮುಖ ಹಿಂದೂ ಸಂಘಟನೆಗಳು ಖಂಡಿಸಿವೆ. ರಾಮಮಂದಿರ ನಿರ್ಮಾಣಕ್ಕೆ ತಡೆ ಒಡ್ಡುವ ವಿಳಂಬ ತಂತ್ರವಿದು. ಹಿಂದೂಗಳು ಮತ್ತು ಮುಸಲ್ಮಾನರ ನಡುವಣ ಸಾಮರಸ್ಯದ ಭಾವನೆಯನ್ನ ಕದಡುವ ಪ್ರಯತ್ನವಿದು. ಆದರೆ ಇದರಿಂದಾಗಿ ಅಯೋಧ್ಯೆ ಕುರಿತ ತೀರ್ಪಿನ ಮೇಲೆ ಯಾವ ಪರಿಣಾಮವೂ ಆಗುವುದಿಲ್ಲ ಎಂದು ರಾಮಜನ್ಮಭೂಮಿ ನ್ಯಾಸದ ಮುಖ್ಯಸ್ಥ ಮಹಂತ ನೃತ್ಯ ಗೋಪಾಲ ದಾಸ ಮತ್ತು ವಿಶ್ವಹಿಂದೂ ಪರಿಷತ್ತಿನ ಪ್ರಾದೇಶಿಕ ವಕ್ತಾರ ಶರದ್ ಶರ್ಮ ಹೇಳಿದ್ದಾರೆ.

Tags: AyodhyaJamiat Ulema-e-HindMuslim bodyRam LallaSunni Central Waqf Boardsupreme courtಅಯೋಧ್ಯಕೇಂದ್ರೀಯ ವಕ್ಫ್ ಮಂಡಳಿಜಾಮಿಯತ್ ಉಲೇಮಾ ಹಿಂದ್ಮುಸ್ಲಿಂ ಮಂಡಳಿರಾಮ ಲಲ್ಲಾಸುಪ್ರೀಂ ಕೋರ್ಟ್
Previous Post

ಬ್ಯಾಂಕಿನಲ್ಲಿ ನೀವು ಕೋಟಿ ಇಟ್ಟರೂ ಲಕ್ಷ ರುಪಾಯಿಗೆ ಮಾತ್ರ ವಿಮಾ ಸುರಕ್ಷೆ!

Next Post

ನಾವು ಬಳಸುವ ಔಷಧಿಗಳು ಎಷ್ಟುಸುರಕ್ಷಿತ ?       

Related Posts

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ
ಇದೀಗ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

by ಪ್ರತಿಧ್ವನಿ
December 11, 2025
0

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲೂ ಭಾರಿ ಹಿನ್ನಡೆಯಾಗಿದೆ. https://youtu.be/o065VKKs78I?si=wzQjEXztDgyZ6scx...

Read moreDetails
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

December 11, 2025
ಬದುಕು ಘನತೆ ಮತ್ತು ಮಾನವ ಹಕ್ಕುಗಳ ಪ್ರಶ್ನೆ

ಬದುಕು ಘನತೆ ಮತ್ತು ಮಾನವ ಹಕ್ಕುಗಳ ಪ್ರಶ್ನೆ

December 10, 2025

ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಖರೀದಿ ಮಾಡಲ್ಲ, ಬಾಡಿಗೆ ಪಡೆಯಲು ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

December 9, 2025

ಗಣ್ಯ ವ್ಯಕ್ತಿಗಳ ಪ್ರಯಾಣಕ್ಕೆ ಚಾಪರ್, ವಿಮಾನ ಬಾಡಿಗೆ ಕುರಿತ ಸಭೆ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್‌..

December 9, 2025
Next Post
ನಾವು ಬಳಸುವ ಔಷಧಿಗಳು ಎಷ್ಟುಸುರಕ್ಷಿತ ?       

ನಾವು ಬಳಸುವ ಔಷಧಿಗಳು ಎಷ್ಟುಸುರಕ್ಷಿತ ?       

Please login to join discussion

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada