• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಮಹಿಳಾ ಇಂಡಿಯನ್ ಪ್ರೀಮಿಯರ್ ಲೀಗ್: ಬಲಿಷ್ಠ ಮಹಿಳಾ ತಂಡ ಕಟ್ಟಲು ಸಹಾಯಕ

by
March 10, 2020
in Uncategorized
0
ಮಹಿಳಾ ಇಂಡಿಯನ್ ಪ್ರೀಮಿಯರ್ ಲೀಗ್: ಬಲಿಷ್ಠ ಮಹಿಳಾ ತಂಡ ಕಟ್ಟಲು ಸಹಾಯಕ
Share on WhatsAppShare on FacebookShare on Telegram

ಭಾನುವಾರ ನಡೆದಂತಹ ಮಹಿಳೆಯರ ಟಿ ಟ್ವೆಂಟಿ ಕ್ರಿಕೇಟ್‌ನಲ್ಲಿ ಇದೇ ಮೊದಲ ಬಾರಿಗೆ ನಮ್ಮ ಭಾರತದ ಮಹಿಳಾ ಕ್ರಿಕೆಟ್ ತಂಡವು ಫೈನಲ್ ಪ್ರವೇಶೀಸಿದ್ದು ಒಂದು ಹೆಮ್ಮೆಯ ಸಂಗತಿಯಾಗಿದೆ. ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 85 ರನ್ ಗಳಿಂದ ಸೋತಿದ್ದರೂ ಭಾರತಿಯರಿಂದ ಮೆಚ್ಚುಗೆಯ ಮಹಾಪೂರವನ್ನೇ ಗಳಿಸಿದೆ. ಆ ಮೂಲಕ ಮೊದಲ ಬಾರಿಗೆ ವಿಶ್ವಕಪ್ ರನ್ನರ್‌ ಆಗಿ ಹೊರಹೊಮ್ಮಿದೆ.

ADVERTISEMENT

ಪಂದ್ಯದ ನಂತರದಲ್ಲಿ ಮಾಜಿ ಕ್ರಿಕೆಟಿಗರು ಭಾರತ ತಂಡಕ್ಕೆ ಅಭಿನಂದನೆಯನ್ನು ಸಲ್ಲಿಸಿದರು. ಆದರೆ ಭಾರತೀಯ ಹಿರಿಯ ಕ್ರಿಕೇಟಿಗ ಸುನೀಲ್ ಗವಾಸ್ಕರ್ ಭಾರತೀಯ ಕ್ರಿಕೇಟ್ ನಿಯಂತ್ರಣಾ ಮಂಡಳಿಗೆ ( ಬಿಸಿಸಿಐ) ಉತ್ತಮ ರೀತಿಯ ಒಂದು ಸಲಹೆಯನ್ನು ನೀಡಿದ್ದಾರೆ. ಇವರು ಪುರುಷರ ಐಪಿಎಲ್ ನಂತೆಯೆ ಮುಂದಿನ ವರ್ಷದಿಂದಲೇ ನೂತನವಾಗಿ ಮಹಿಳಾ ಇಂಡಿಯನ್ ಪ್ರೀಮಿಯರ್ ಲೀಗನ್ನು ಪ್ರಾರಂಭಿಸುವುದು ಉತ್ತಮ ಎಂದು ತಿಳಿಸಿದ್ದಾರೆ.

ಏನಿದು ಮಹಿಳಾ ಐಪಿಎಲ್!

ಭಾರತದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ನಡೆಯುವ ಸಮಯದಲ್ಲಿಯೇ ಕ್ರಿಕೆಟ್ ಆಸ್ಟ್ರೇಲಿಯಾ ವು(ಸಿಎ) ಪುರುಷರಂತೆ ಮಹಿಳೆಯರಿಗೆ ಪ್ರತ್ಯೇಕ ಬಿಗ್ ಬ್ಯಾಷ್ ಲೀಗ್ (ಬಿಬಿಎಲ್) ಆಯೋಜಿಸುತ್ತಿದೆ. ಈ ಬಾರಿ ಆಸ್ಟ್ರೇಲಿಯಾ ತಂಡವು ಪ್ರಶಸ್ತಿ ಗೆಲ್ಲಲು ಇದೂ ಒಂದು ಪ್ರಮುಖವಾದ ಕಾರಣವಾಗಿದೆ ಎಂದು ಹೇಳಬಹುದು. ಇದರಿಂದಾಗಿ ಅವರ ತಂಡವು ಬಹಳಷ್ಟು ಬಲಿಷ್ಠವಾಗಿ ಹೊರಹೊಮ್ಮಲು ಸಹಾಯವಾಯಿತು. ಇದಕ್ಕಾಗಿ ನಮ್ಮಲ್ಲಿರುವ ಶಿಫಾಲಿ ವರ್ಮಾರಂತಹ ಅನೇಕ ಯುವ ಕ್ರಿಕೆಟಿಗರಿಗೆ ಉತ್ತಮ ವೇದಿಕೆ ದೊರೆಯಲಿದೆ.

ಮಹಿಳಾ ಪ್ರೀಮಿಯರ್ ಲೀಗನಿಂದ ಏನು ಪ್ರಯೋಜನ ?

ಇದು ಸಾಮಾನ್ಯವಾಗಿ ಎಲ್ಲರಲ್ಲಿಯೂ ಮೂಡುವಂತಹ ಪ್ರಶ್ನೆಯಾಗಿದೆ. ಆದರೆ ಇಂತಹ ಲೀಗ್‌ಗಳಿಂದಾಗಿ ನಮಗೆ ಭಾರತ ತಂಡವನ್ನು ಆಯ್ಕೆ ಮಾಡಲು ಸಹಾಯವಾಗುತ್ತದೆ. ಹಾಗೇಯೆ ಭಾರತದಲ್ಲಿ ಸಾಕಷ್ಟು ಮಂದಿ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರ್ತಿಯರಿದ್ದಾರೆ ಇನ್ನು ಮಹಿಳೆಯರಿಗಾಗಿಯೇ ಪ್ರತ್ಯೇಕವಾಗಿ ಐಪಿಎಲ್ ಅನ್ನು ಆಯೋಜಿಸುವುದರಿಂದಾಗಿ ನಮ್ಮಲ್ಲಿ ಇನ್ನಷ್ಟು ಹೊಸ ಪ್ರತಿಭೆಗಳನ್ನು ಹುಡುಕಲು ಸಹಾಯವಾಗುತ್ತದೆ. ಅಲ್ಲದೆಯೇ ಅದೇಷ್ಟೋ ಉತ್ತಮ ಆಟಗಾರ್ತಿಯರು ತೆರೆಮರೆಯಿಂದ ಈ ರಂಗಕ್ಕೆ ನೇರವಾಗಿ ಬರಲು ಇದು ಸಹಾಯಕವಾಗುತ್ತದೆ. ಈಗಿರುವ ತಂಡವು ಬಲಿಷ್ಠವಾಗಿದೆ ನಿಜ, ಆದರೆ ಈ ರೀತಿಯ ಸರಣಿಗಳನ್ನು ಆಯೋಜಿಸುವುದರಿಂದ ನಮ್ಮ ಭಾರತ ಮಹಿಳಾ ಕ್ರಿಕೆಟ್ ತಂಡವು ಮತ್ತಷ್ಟು ಬಲಿಷ್ಠಗೊಳ್ಳಲು ಸಹಾಯಕವಾಗುತ್ತದೆ.

ಇನ್ನು ಮಹಿಳಾ ಐಪಿಎಲ್‌ನಿಂದಾಗಿ ಅಂತರಾಷ್ಟ್ರೀಯ ಸರಣಿಗಳಲ್ಲಿ ಇನ್ನೂ ಹೆಚ್ಚಿನ ಪ್ರಶಸ್ತಿಗಳನ್ನು ಗೆಲ್ಲಲೂ ಸಹಾಯಕವಾಗುತ್ತದೆ. ಇದರೊಂದಿಗೆ ಎಲ್ಲಾ ಸ್ಥಳಿಯ ಆಟಗಾರರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಒಳ್ಳೆಯ ವೇದಿಕೆಯಾಗ ಬಹುದಾಗಿದೆ. ಈ ರೀತಿಯ ಟೂರ್ನಮೆಂಟ್ಗಳಿAದ ವಿದೇಶಿ ಆಟಗಾರರೊಂದಿಗೆ ಸೇರಿ ಆಡುವುದರಿಂದ ಅವರಲ್ಲಿರುವ ಉತ್ತಮ ರೀತಿಯ ಸಲಹೆಗಳು ಮತ್ತು skillಳನ್ನು ಕಲಿಯಬಹುದಾಗಿದೆ. ವಿದೇಶಿ ಸಹ ಆಟಗಾರರೊಂದಿಗೂ ಉತ್ತಮ ಸ್ನೇಹ ಬಾಂದವ್ಯ ಬೆಳೆಯಲು ಮಹಿಳಾ ಐಪಿಎಲ್ ಪ್ರಯೋಜನಕಾರಿಯಾಗುತ್ತದೆ. ಹಾಗೇಯೆ ಅನೇಕರಿಗೆ ಇದು ಕ್ರಿಕೆಟ್ ಪ್ರಪಂಚಕ್ಕೆ ಬರಲು ಸ್ಪೂರ್ತಿಯೂ ಆಗಬಹುದಾಗಿದೆ. ಜೊತೆಗೆ ಹೆಚ್ಚಿನ ಪ್ರೋತ್ಸಾಹವೂ ಈ ಮೂಲಕವಾಗಿ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಸಿಗವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಈ ಯೋಜನೆಯನ್ನು ಭಾರತೀಯ ಕ್ರಿಕೇಟ್ ಮಂಡಳಿ ಆದಷ್ಟು ಬೇಗ ಗಣನೆಗೆ ತೆಗೆದುಕೊಂಡಲ್ಲಿ ಮುಂಬರುವ ದಿನಗಳಲ್ಲಿ ಭಾರತೀಯ ಮಹಿಳೆಯರ ಕ್ರಿಕೆಟ್ ತಂಡವು ವಿಶ್ವದ ನಂಬರ್ ಒನ್ ತಂಡವಾಗಿ ಹೊರಹೊಮ್ಮವಲ್ಲಿ ಸಹಾಯಕವಾಗುತ್ತದೆ. ಮತ್ತು ಈ ವರ್ಷ ಕೈ ತಪ್ಪಿದ ಕನಸಿಗೆ ಮುಂದಿನ ದಿನದಲ್ಲಿ ಮುತ್ತಿಕ್ಕಲು ಈ ವೇದಿಕೆ ಬಹಳಷ್ಟು ಸಹಾಯವಾಗುತ್ತದೆ.

Tags: BBLIPLWBBLWomen's IPLಇಂಡಿಯನ್ ಪ್ರೀಮಿಯರ್ ಲೀಮಹಿಳಾ ಇಂಡಿಯನ್ ಪ್ರೀಮಿಯರ್ ಲೀಗ್
Previous Post

ಬೆಂಗಳೂರಿಗೆ ಶರಾವತಿ: ಮಲೆನಾಡಿಗರನ್ನು ರೊಚ್ಚಿಗೆಬ್ಬಿಸಿದ ಹೊಸ ಪ್ರಸ್ತಾಪ!

Next Post

ಸೋದರಳಿಯನ ಸೆಳೆಯಲು ಕುಟುಂಬ ಪ್ರೇಮ ಅಸ್ತ್ರವಾಯಿತೇ? 

Related Posts

ಡಿಜಿಪಿ ರಾಸಲೀಲೆ ಕೇಸ್: ತನಿಖೆಗೆ ಆದೇಶ
Uncategorized

ಡಿಜಿಪಿ ರಾಸಲೀಲೆ ಕೇಸ್: ತನಿಖೆಗೆ ಆದೇಶ

by ಪ್ರತಿಧ್ವನಿ
January 23, 2026
0

ಬೆಂಗಳೂರು: DCRI ವಿಭಾಗದ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಲಾಗಿದೆ. ಇತ್ತೀಚೆಗೆ ರಾಮಚಂದ್ರ ರಾವ್ ತಮ್ಮ ಕಚೇರಿಯಲ್ಲಿ ಮಹಿಳೆಯರೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದ ವಿಡಿಯೋ ವೈರಲ್...

Read moreDetails
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಿಸಿಬಿ ನೋಟಿಸ್

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಿಸಿಬಿ ನೋಟಿಸ್

January 21, 2026
BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

January 19, 2026
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

January 16, 2026
Next Post
ಸೋದರಳಿಯನ ಸೆಳೆಯಲು ಕುಟುಂಬ ಪ್ರೇಮ ಅಸ್ತ್ರವಾಯಿತೇ? 

ಸೋದರಳಿಯನ ಸೆಳೆಯಲು ಕುಟುಂಬ ಪ್ರೇಮ ಅಸ್ತ್ರವಾಯಿತೇ? 

Please login to join discussion

Recent News

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ
Top Story

ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada