ADVERTISEMENT
  • Home
  • About Us
  • ಕರ್ನಾಟಕ
Sunday, May 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಮುಕ್ತ ವ್ಯಾಪಾರ: ಚೀನಾ ದೊಡ್ಡ ಭೀತಿಯೂ ಹೌದು, ಅವಕಾಶವೂ ಹೌದು

by
November 5, 2019
in ಅಭಿಮತ
0
ಮುಕ್ತ ವ್ಯಾಪಾರ: ಚೀನಾ ದೊಡ್ಡ ಭೀತಿಯೂ ಹೌದು
Share on WhatsAppShare on FacebookShare on Telegram

ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (RCEP) ಮುಕ್ತ ವ್ಯಾಪಾರ ಒಪ್ಪಂದದಿಂದ ಭಾರತ ಹಿಂದೆ ಸರಿದಿದೆ. ಕೆಲವೊಂದು ಶರತ್ತುಗಳ ಹಿನ್ನೆಲೆಯಲ್ಲಿ Regional Comprehensive Economic Partnership (RCEP) ಒಪ್ಪಂದಕ್ಕೆ ಸಹಿ ಮಾಡಲು ಭಾರತ ಸದ್ಯಕ್ಕೆ ನಿರಾಕರಿಸಿದೆ. ಹಾಗಿದ್ದರೂ, RCEP ಒಪ್ಪಂದಕ್ಕೆ ಇನ್ನುಳಿದ 15 ದೇಶಗಳು ಸಹಿ ಮಾಡುವ ಮೂಲಕ ಹೊಸ ವ್ಯಾಪಾರ ವ್ಯವಸ್ಥೆ ಜಾರಿಗೆ ಬರಲಿದೆ.

ADVERTISEMENT

ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ನಲ್ಲಿ ನಡೆಯುತ್ತಿರುವ ಅಸಿಯಾನ್ ರಾಷ್ಟ್ರಗಳ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರೂ, ಕೆಲವೊಂದು ತೆರಿಗೆ ವಿಚಾರದಲ್ಲಿ ಸ್ಪಷ್ಟತೆ ಇಲ್ಲದಿರುವುದರಿಂದ ಭಾರತ ಒಪ್ಪಂದದಿಂದ ಹಿಂಜರಿದಿದೆ. ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (RCEP) ಒಪ್ಪಂದ ಅದರ ಮೂಲಾಶಯವನ್ನು ಪ್ರತಿಫಲಿಸುತ್ತಿಲ್ಲ. ಈ ಒಪ್ಪಂದವು ನ್ಯಾಯಯುತವಾಗಿಲ್ಲ ಎಂದು ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

RCEP ಎಂಬುದು ವಿಶ್ವದ 16 ರಾಷ್ಟ್ರಗಳು ಸೇರಿ ಮಾಡಿಕೊಳ್ಳುತ್ತಿರುವ ವ್ಯಾಪಾರ ಒಪ್ಪಂದವಾಗಿದೆ. ಇದರಲ್ಲಿ ಬಹುಮುಖ್ಯವಾಗಿ ಭಾರತ ಸೇರಿದಂತೆ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದ (ASEAN) ಹತ್ತು ದೇಶಗಳು ಹಾಗೂ ಈ ದೇಶಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿರುವ ಆಸ್ಟ್ರೇಲಿಯಾ, ಚೀನಾ, ದಕ್ಷಿಣ ಕೊರಿಯಾ, ಜಪಾನ್ ಮತ್ತು ನ್ಯೂಜಿಲೆಂಡ್ ಈ 6 ರಾಷ್ಟ್ರಗಳೂ ಇವೆ. ವಿಶ್ವ ಜಿಡಿಪಿಯ ಶೇಕಡ 30 ಈ ದೇಶಗಳ ಪಾಲಾಗಿದ್ದು, ವಿಶ್ವ ಜನಸಂಖ್ಯೆಯಲ್ಲಿ ಅರ್ಧದಷ್ಟು ಭಾಗವನ್ನು ಈ 16 ರಾಷ್ಟ್ರಗಳು ಹೊಂದಿವೆ. ಇದು 50 ಟ್ರಿಲಿಯನ್ ಡಾಲರ್ ಇಕಾನಮಿ. ಈ ಹಿನ್ನೆಲೆಯಲ್ಲಿ ಈ ವ್ಯಾಪಾರ ಒಪ್ಪಂದವು ಜಾಗತಿಕವಾಗಿ ಮಹತ್ವ ಪಡೆದಿದೆ.

ಹಲವು ವರ್ಷಗಳಿಂದ ಈ ನಿಟ್ಟಿನಲ್ಲಿ ಪ್ರಯತ್ನ ನಡೆದಿತ್ತು. RCEP ಒಪ್ಪಂದದ ಅಂತಿಮ ಘಟ್ಟದಲ್ಲಿ ಭಾರತ ಸಹಿ ಹಾಕಲು ಹಿಂದೇಟು ಹಾಕಲು ಕಾರಣಗಳಿವೆ. ಭಾರತವನ್ನು ಕಾಡುತ್ತಿರುವುದು ಚೀನಾ ಎಂಬ ವ್ಯಾಪಾರಿ ಪೆಂಡಭೂತ. RCEP ಒಪ್ಪಂದಕ್ಕೆ ಸಹಿ ಹಾಕಿದರೆ ಚೀನಾ ದೇಶದಿಂದ ಭಾರೀ ದೊಡ್ಡ ಪ್ರಮಾಣದಲ್ಲಿ ವಿವಿಧ ವಸ್ತುಗಳು ತೀರಾ ಕಡಿಮೆ ಬೆಲೆಯಲ್ಲಿ ಭಾರತೀಯ ಮಾರುಕಟ್ಟೆ ಲಗ್ಗೆ ಹಾಕುವ ಅಪಾಯವಿದೆ. ಹಾಗೇನಾದರೂ ಆದಲ್ಲಿ, ಭಾರತದ ಗುಡಿ ಕೈಗಾರಿಕೆ, ಸ್ಥಳೀಯ ಉದ್ಯಮ, ಕೃಷಿ ಮಾರುಕಟ್ಟೆ ಸಂಕಷ್ಟಕ್ಕೆ ಬೀಳುವ ಸಾಧ್ಯತೆ ನಿಚ್ಛಳವಾಗಿದೆ. ಈಗಾಗಲೇ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಅತ್ಯಂತ ಕರಾಳವಾಗಿದೆ. ಇಂತಹ ಸಂದರ್ಭದಲ್ಲೇ ಕೇಂದ್ರ ಸರಕಾರ ಇಂತಹ ಒಪ್ಪಂದವೊಂದಕ್ಕೆ ಸಹಿ ಮಾಡಿದಲ್ಲಿ ಬಹುಸಂಖ್ಯೆಯಲ್ಲಿ ಇಂತಹ ಕ್ಷೇತ್ರಗಳನ್ನು ಅವಲಂಬಿಸಿರುವ ಮಂದಿ ಆಡಳಿತಾರೂಢ ರಾಜಕೀಯ ಪಾರ್ಟಿಯ ವಿರುದ್ಧ ನಿಲ್ಲುವುದು ಖಚಿತವಾಗಿದೆ.

ಇತ್ತ ಅಮೆರಿಕಾ ದೇಶದ ವಿರುದ್ಧ ಹಿಂದಿನಿಂದಲೂ ಹಾವು ಮುಂಗುಸಿ ಆಟ ಆಡುತ್ತಿರುವ ಚೀನಾ ದೇಶವು ಭಾರತದ ಹೊರತಾಗಿಯೂ ಮುಕ್ತ ವ್ಯಾಪಾರ ಒಪ್ಪಂದ ಅಂತಿಮಗೊಳಿಸುವಲ್ಲಿ ಸಫಲವಾಗಿದೆ. ಇಂತಹ ಒಪ್ಪಂದದಿಂದ ಬಹುದೊಡ್ಡ ಪ್ರಯೋಜನ ಚೀನಾ ದೇಶ ಪಡೆದುಕೊಳ್ಳಲಿದೆ. ಅಮೆರಿಕಾ ವಿರುದ್ಧ ವಾಣಿಜ್ಯ ಯುದ್ಧ ಸಾರಿರುವ ಚೀನಾ ತಾನೇ ದೊಡ್ಡಣ್ಣ ಎಂಬುದನ್ನು ತೋರಿಸಿಕೊಳ್ಳಬೇಕಾಗಿದೆ. ಈಗಾಗಲೇ ASEAN ದೇಶಗಳಾದ ಬ್ರೂನಿ, ಕಾಂಬೊಡಿಯ, ಇಂಡೋನೇಶಿಯ, ಲಾವೊಸ್, ಮಲೇಶಿಯ, ಮ್ಯಾನ್ಮರ್, ಫಿಲಿಪೈನ್ಸ್, ಸಿಂಗಾಪುರ, ಥೈಲೆಂಡ್, ವಿಯೆಟ್ನಾಂ, ದಕ್ಷಿಣ ಕೊರಿಯ ಹಾಗೂ ಜಪಾನ್ ದೇಶಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ ಹೊಂದಿರುವ ಭಾರತಕ್ಕೆ ವ್ಯಾವಹಾರಿಕವಾಗಿ ಕಹಿ ಅನುಭವ ಆಗಿದೆ. ಇದಕ್ಕೆಲ್ಲಕಿಂತಲೂ ಬಹುದೊಡ್ಡ ಸಮಸ್ಯೆಯೇ ಚೀನಾ ಎಂಬ ದೈತ್ಯ ವ್ಯಾಪಾರಿ ದೇಶ.

ಈಗಾಗಲೇ ಚೀನಾದೊಂದಿಗೆ ದೊಡ್ಡ ಪ್ರಮಾಣದ ವ್ಯವಹಾರ ಹೊಂದಿರುವ ಭಾರತ ಅಷ್ಟೇ ದೊಡ್ಡ ಮೊತ್ತದ ವ್ಯಾಪಾರ ಕೊರತೆಯನ್ನೂ ಹೊಂದಿದೆ. ಚೀನಾ ಮಾತ್ರವಲ್ಲದೆ, 15 ದೇಶಗಳ ಪೈಕಿ 11 ದೇಶಗಳೊಡನೆ ಕೂಡ ಭಾರತದ ವ್ಯವಹಾರ ಇದೇ ರೀತಿ ಇದೆ. ಭಾರತದ ಶೇಕಡ 34 ರಷ್ಟು ಆಮದು ಈ ಪ್ರದೇಶಗಳಿಂದ ಆಗುತ್ತದೆ. ಆದರೆ, ರಫ್ತು ಮಾತ್ರ ಶೇಕಡ 21 ಮಾತ್ರ. ಕೃಷಿ ಕ್ಷೇತ್ರದಲ್ಲಿ ಭಾರತ ಸದ್ಯ ತೀರ ಅಲ್ಪ ಪ್ರಮಾಣದ ಹಾಲು ಮತ್ತು ಡೈರಿ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಈಗ ಹಾಲಿನ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕಡಿತ ಮಾಡಲು ಯಶಸ್ವಿಯಾದರೆ ಭಾರತಕ್ಕೆ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯ ದೇಶಗಳಿಂದ ರಫ್ತು ಪ್ರಮಾಣ ಬಹುದೊಡ್ಡ ಮೊತ್ತದಾಗಿರುತ್ತದೆ. ಇದು ನಮ್ಮ ದೇಶದ ರೈತರ ಮೊದಲ ಆತಂಕವಾಗಿದೆ.

ಚೀನಾ ಈಗಾಗಲೇ ಕಡಿಮೆ ಬೆಲೆಯ ಇಲೆಕ್ಟ್ರಾನಿಕ್ ಉಪಕರಣಗಳನ್ನು ರಫ್ತು ಮಾಡುತ್ತಿದೆ. ಒಪ್ಪಂದಕ್ಕೆ ಸಹಿ ಮಾಡಿದಾಗ ರಫ್ತು ಪ್ರಮಾಣ ಇನ್ನಷ್ಟು ಹೆಚ್ಚಳ ಆಗುವುದು ನಿಚ್ಛಳ. ಈ ಒಪ್ಪಂದದಿಂದ ಭಾರತದ ರಫ್ತುದಾರರಿಗೆ ಪ್ರಯೋಜನವೂ ಇದೆ. ಆದರೆ, ಅದಕ್ಕೂ ಮುನ್ನ ಭಾರತದ ನಿರ್ದಿಷ್ಟ ಕೈಗಾರಿಕಾ ಮತ್ತು ಕೃಷಿ ಕ್ಷೇತ್ರಗಳನ್ನು ಸಬಲೀಕರಣ ಮಾಡಬೇಕಾದ ಅಗತ್ಯವೂ ಇದೆ. ಭಾರತ ಸದ್ಯಕ್ಕೆ ಒಪ್ಪಂದಕ್ಕೆ ಸಹಿ ಮಾಡದಿದ್ದರೂ, ಮುಂದಿನ ದಿನಗಳಲ್ಲಿ ಆಲೋಚನೆ ಮಾಡಬೇಕಾದ ಅನಿವಾರ್ಯತೆ ಬರಬಹುದು.

ಭಾರತ ಈಗಾಗಲೇ ಇತರ ದೇಶಗಳೊಂದಿಗೆ ದ್ವಿಪಕ್ಷೀಯ ಒಪ್ಪಂದಗಳನ್ನು ಹೊಂದಿದ್ದು, RCEP ಒಪ್ಪಂದದ ಅನಂತರ ಚೀನಾ, ಆಸ್ಟ್ರೇಲಿಯ, ನ್ಯೂಜಿಲೆಂಡ್ ನಂತಹ ದೇಶಗಳ ವ್ಯಾಪಕ ಮಾರುಕಟ್ಟೆ ಅವಕಾಶವನ್ನು ಬಳಸಿಕೊಳ್ಳಬಹುದು. ಉದಾಹರಣೆಗೆ, ನಮ್ಮ ದೇಶದ ಔಷಧ ತಯಾರಕರು ಚೀನಾದ ಮಾರುಕಟ್ಟೆಯ ಲಾಭ ಪಡೆದುಕೊಳ್ಳಬಹುದು. ಅಮೆರಿಕಾ ದೇಶದ ಅನಂತರ ಬಹುದೊಡ್ಡ ಔಷಧ ಬಳಕೆ ಮಾಡುವ ದೇಶ ಚೀನಾ.

ಅದೇ ರೀತಿ ಹತ್ತಿ ಬಟ್ಟೆ ರಫ್ತು ಮಾಡುವ ದೇಶದ ವ್ಯಾಪಾರಿಗಳಿಗೆ ಇನ್ನಷ್ಟು ಉತ್ತೇಜನ ದೊರೆಯಲಿದೆ. ರಫ್ತುದಾರರ ಸಂಘಟನೆಗಳು ಹಿಂದಿನಂದಲೇ ಇಂತಹ ಒಪ್ಪಂದವೊಂದಕ್ಕೆ ಒತ್ತಾಯಿಸುತ್ತಲೇ ಬಂದಿದ್ದಾರೆ. RCEP ದೇಶಗಳ ಒಟ್ಟು ವ್ಯಾಪಾರ ವಹಿವಾಟು ಅಂದಾಜು ಮೂರು ಟ್ರಿಲಿಯನ್ ಡಾಲರ್ ಆಗಿದೆ. ಭಾರತ ಇಂತಹ ಒಪ್ಪಂದವೊಂದರ ಭಾಗವಾಗದಿದ್ದರೆ ಬಹುದೊಡ್ಡ ಮಾರುಕಟ್ಟೆಯಿಂದ ವಂಚಿತ ಆಗಲಿದೆ ಎನ್ನುತ್ತಾರೆ ರಫ್ತು ಸಂಘಟನೆಗಳ ಮುಖಂಡರು.

ಈಗಾಗಲೇ ಸಂಕಷ್ಟದಲ್ಲಿ ಇರುವ ಆಟೊಮೊಬೈಲ್, ಡೈರಿ ಉತ್ಪಾದಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುತ್ತಿದೆ Confederation of Indian Industry (CII). ಆದರೆ, ಬೀದಿಗಿಳಿದು ಹೋರಾಟ ಮಾಡಿರುವುದು ರೈತ ಸಮುದಾಯ ಮಾತ್ರ. ಸ್ವಯಂ ಸೇವಾ ಸಂಘದ ಸ್ವದೇಶಿ ಜಾಗರಣ ಮಂಚ್, RCEP ಒಪ್ಪಂದಕ್ಕೆ ವಿರೋಧ ವ್ಯಕ್ತಪಡಿಸಿದೆ. ಆದರೆ, ಪರಿವಾರದ ಇತರ ಕೆಲವು ಸಂಘಟನೆಗಳು ಇದರ ಪರವಾಗಿವೆ.

Tags: Agriculture and DairyingASEAN CountriesChinaCongress PartyFree tradeInternational agreementNarendra ModiNDA GovernmentRCEPUnited State of Americaಅಂತರಾಷ್ಟ್ರೀಯ ಒಪ್ಪಂದಅಮೆರಿಕಾ ಸಂಯುಕ್ತ ಸಂಸ್ಥಾನಎನ್ ಡಿ ಎ ಸರ್ಕಾರಏಷ್ಯಾ ರಾಷ್ಟ್ರಗಳುಕಾಂಗ್ರೆಸ್ ಪಕ್ಷಕೃಷಿ ಮತ್ತು ಹೈನುಗಾರಿಕೆಚೀನಾನರೇಂದ್ರಮೋದಿಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವಮುಕ್ತ ವ್ಯಾಪಾರ
Previous Post

ವಿಲೀನದ ಹೆಸರಲ್ಲಿ ಬ್ಯಾಂಕಿಂಗ್ ಸೇವೆಯನ್ನು ಕುಗ್ಗಿಸುತ್ತಿರುವ ಕೇಂದ್ರ ಸರ್ಕಾರ

Next Post

ಶಾಸಕರ ಅನರ್ಹತೆ: ಬಿ ಎಸ್ ವೈ ವಿಡಿಯೋ ತೀರ್ಪಿನ ಮೇಲೆ ಪರಿಣಾಮ ಬೀರುವುದೇ?

Related Posts

Top Story

ಸಿಬಿಎಸ್‌ಇ 2025: 10ನೇ ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

by ಪ್ರತಿಧ್ವನಿ
January 12, 2025
0

ಕೇಂದ್ರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025ನೇ ಸಾಲಿನ 10ನೇ ಮತ್ತು 12ನೇ ತರಗತಿಯ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪ್ರಕಾರ, ಪರೀಕ್ಷೆಗಳು ಫೆಬ್ರವರಿ 15,...

Read moreDetails

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

January 6, 2025

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ .

December 31, 2024

Central Govt: ಕೇಂದ್ರ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ.. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ..!!

December 6, 2024

ಉಪೇಂದ್ರ ನಿರ್ದೇಶಿಸಿ, ನಟಿಸಿರುವ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ..

December 3, 2024
Next Post
ಶಾಸಕರ ಅನರ್ಹತೆ: ಬಿ ಎಸ್ ವೈ ವಿಡಿಯೋ ತೀರ್ಪಿನ ಮೇಲೆ ಪರಿಣಾಮ ಬೀರುವುದೇ?

ಶಾಸಕರ ಅನರ್ಹತೆ: ಬಿ ಎಸ್ ವೈ ವಿಡಿಯೋ ತೀರ್ಪಿನ ಮೇಲೆ ಪರಿಣಾಮ ಬೀರುವುದೇ?

Please login to join discussion

Recent News

ದೇವೇಗೌಡರಿಗೆ ಜನ್ಮದಿನದ ಶುಭ ಕೋರಿದ ಸಿಎಂ..! – ಹಳೆ ಫೋಟೋ ಪೋಸ್ಟ್ ಮಾಡಿ ಫ್ಲಾಶ್ ಬ್ಯಾಕ್ ನೆನಪಿಸಿಕೊಂಡ ಸಿದ್ದು 
Top Story

ದೇವೇಗೌಡರಿಗೆ ಜನ್ಮದಿನದ ಶುಭ ಕೋರಿದ ಸಿಎಂ..! – ಹಳೆ ಫೋಟೋ ಪೋಸ್ಟ್ ಮಾಡಿ ಫ್ಲಾಶ್ ಬ್ಯಾಕ್ ನೆನಪಿಸಿಕೊಂಡ ಸಿದ್ದು 

by Chetan
May 18, 2025
ಅಂಕಪಟ್ಟಿಯಲ್ಲಿ RCB ನೇ ನಂಬರ್.1 ..! ಕೋಲ್ಕತ್ತಾ ಪಾಲಿಗೆ ಖಳನಾಯಕನಾದ ಮಳೆರಾಯ ! 
Top Story

ಅಂಕಪಟ್ಟಿಯಲ್ಲಿ RCB ನೇ ನಂಬರ್.1 ..! ಕೋಲ್ಕತ್ತಾ ಪಾಲಿಗೆ ಖಳನಾಯಕನಾದ ಮಳೆರಾಯ ! 

by Chetan
May 18, 2025
ಸಚಿವ ಕೃಷ್ಣ ಬೈರೇಗೌಡ ಆಪ್ತರಿಂದ ಗೂಂಡಾಗಿರಿ..?! – ಸರ್ಕಾರಿ ಅಧಿಕಾರಿ ಮೇಲೆ ನಡು ರಸ್ತೆಯಲ್ಲಿ ಹಲ್ಲೆ ಮಾಡಿ ದರ್ಪ 
Top Story

ಸಚಿವ ಕೃಷ್ಣ ಬೈರೇಗೌಡ ಆಪ್ತರಿಂದ ಗೂಂಡಾಗಿರಿ..?! – ಸರ್ಕಾರಿ ಅಧಿಕಾರಿ ಮೇಲೆ ನಡು ರಸ್ತೆಯಲ್ಲಿ ಹಲ್ಲೆ ಮಾಡಿ ದರ್ಪ 

by Chetan
May 18, 2025
ಪಹಲ್ಗಾಮ್ ಭೀಕರ ದಾಳಿಯ ಎಫೆಕ್ಟ್..! – ಅಮರನಾಥ ಯಾತ್ರೆಗೆ ಯಾತ್ರಾರ್ಥಿಗಳ ಹಿಂದೇಟು..! 
Top Story

ಪಹಲ್ಗಾಮ್ ಭೀಕರ ದಾಳಿಯ ಎಫೆಕ್ಟ್..! – ಅಮರನಾಥ ಯಾತ್ರೆಗೆ ಯಾತ್ರಾರ್ಥಿಗಳ ಹಿಂದೇಟು..! 

by Chetan
May 18, 2025
ನನ್ನ ಕನ್ನಡಕದ ಬಗ್ಗೆ ಮಾತನಾಡಿದವರು ಮಣ್ಣು ಮುಕ್ಕಿದ್ದಾರೆ ಜೋಕೆ..
Top Story

ನನ್ನ ಕನ್ನಡಕದ ಬಗ್ಗೆ ಮಾತನಾಡಿದವರು ಮಣ್ಣು ಮುಕ್ಕಿದ್ದಾರೆ ಜೋಕೆ..

by ಕೃಷ್ಣ ಮಣಿ
May 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೇವೇಗೌಡರಿಗೆ ಜನ್ಮದಿನದ ಶುಭ ಕೋರಿದ ಸಿಎಂ..! – ಹಳೆ ಫೋಟೋ ಪೋಸ್ಟ್ ಮಾಡಿ ಫ್ಲಾಶ್ ಬ್ಯಾಕ್ ನೆನಪಿಸಿಕೊಂಡ ಸಿದ್ದು 

ದೇವೇಗೌಡರಿಗೆ ಜನ್ಮದಿನದ ಶುಭ ಕೋರಿದ ಸಿಎಂ..! – ಹಳೆ ಫೋಟೋ ಪೋಸ್ಟ್ ಮಾಡಿ ಫ್ಲಾಶ್ ಬ್ಯಾಕ್ ನೆನಪಿಸಿಕೊಂಡ ಸಿದ್ದು 

May 18, 2025
ಅಂಕಪಟ್ಟಿಯಲ್ಲಿ RCB ನೇ ನಂಬರ್.1 ..! ಕೋಲ್ಕತ್ತಾ ಪಾಲಿಗೆ ಖಳನಾಯಕನಾದ ಮಳೆರಾಯ ! 

ಅಂಕಪಟ್ಟಿಯಲ್ಲಿ RCB ನೇ ನಂಬರ್.1 ..! ಕೋಲ್ಕತ್ತಾ ಪಾಲಿಗೆ ಖಳನಾಯಕನಾದ ಮಳೆರಾಯ ! 

May 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada