Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಮೊಬೈಲುಗಳಿಗೆ ‘ಜ್ಯೂಸ್ ಜಾಕಿಂಗ್’ ಎಂಬ ಅಪಾಯ!

ಮೊಬೈಲುಗಳಿಗೆ ‘ಜ್ಯೂಸ್ ಜಾಕಿಂಗ್’ ಎಂಬ ಅಪಾಯ!
ಮೊಬೈಲುಗಳಿಗೆ ‘ಜ್ಯೂಸ್ ಜಾಕಿಂಗ್’ ಎಂಬ ಅಪಾಯ!

November 23, 2019
Share on FacebookShare on Twitter

ದೆಹಲಿಯ ಪ್ರಸಿದ್ಧ ಶಾಪಿಂಗ್ ತಾಣಗಳಲ್ಲಿ ಒಂದಾದ ಕನಾಟ್ ಪ್ಲೇಸ್ ನಲ್ಲಿ ನಡೆಯುತ್ತಿದ್ದ ಆ ಯುವಕನ ಫೋನಿನ ಛಾರ್ಜ್ ಮುಗಿದು ಹೋಗಿತ್ತು. ಸನಿಹದಲ್ಲೇ ಪತ್ತೆಯಾದ ಉಚಿತ ಯು.ಎಸ್.ಬಿ. ಪವರ್ ಛಾರ್ಜಿಂಗ್ ಸೌಲಭ್ಯ ಬಳಸಿ ಛಾರ್ಜ್ ಮಾಡಿಕೊಂಡ. ತುಸು ಹೊತ್ತಿನಲ್ಲೇ ಆತನ ಬಂದ ಮೆಸೇಜ್ ನೋಡಿ ಗಾಬರಿಯಾದ. ಆತನ ಬ್ಯಾಂಕ್ ಖಾತೆಯಿಂದ 50 ಸಾವಿರ ರುಪಾಯಿಯನ್ನು ತೆಗೆಯಲಾಗಿತ್ತು. ಆದರೆ ಅಂತಹ ಯಾವುದೇ ವ್ಯವಹಾರವನ್ನು ಆತ ಮಾಡಿರಲಿಲ್ಲ.

ಹೆಚ್ಚು ಓದಿದ ಸ್ಟೋರಿಗಳು

‘Nudity Not Obscene by Default’: Kerala HC Quashes Case Against Rehana Fathima : ”ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು”: ರೆಹಾನಾ ಫಾತಿಮಾ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೇರಳ ಹೈಕೋರ್ಟ್!

ಅತ್ಯುತ್ತಮ ವಿಶ್ವವಿದ್ಯಾಲಯ ವಿಭಾಗದಲ್ಲಿ ಬೆಂಗಳೂರಿನ ʼಐಐಎಸ್​ಸಿʼ ನಂಬರ್‌ ಒನ್..! NIRF ರ್‍ಯಾಂಕಿಂಗ್‌

ಕುಸ್ತಿಪಟುಗಳು ಪರೋಕ್ಷ ಪ್ರಭುತ್ವಕ್ಕೆ ಗುಲಾಮರಾಗಬೇಕೆ? ಅನ್ಯಾಯದ ವಿರುದ್ಧ ದನಿ ಎತ್ತಬಾರದೇ?

ಆಕೆ ವಿದ್ಯಾರ್ಥಿನಿ. ದೆಹಲಿಯ ಸೌತ್ ಎಕ್ಸ್ ಶಾಪಿಂಗ್ ಪ್ರದೇಶದಲ್ಲಿ ಇದೇ ರೀತಿ ಮೊಬೈಲ್ ಛಾರ್ಜ್ ಮಾಡಿಕೊಂಡಳು. ಕೆಲ ಹೊತ್ತಿನಲ್ಲಿ ಆಕೆಯ ಸಾಮಾಜಿಕ ಜಾಲತಾಣ ಅಕೌಂಟಿನಿಂದ ಅಶ್ಲೀಲ ವಿಡಿಯೋವೊಂದು ಆಕೆಯ ಹೆಸರಿನಲ್ಲಿ ಆಪ್ಲೋಡ್ ಆಗಿತ್ತು. ವಾಸ್ತವದಲ್ಲಿ ಆಕೆ ಅಂತಹ ಯಾವ ವಿಡಿಯೋವನ್ನೂ ಅಪ್ಲೋಡ್ ಮಾಡಿರಲಿಲ್ಲ.

ಸಾರ್ವಜನಿಕ ಸ್ಥಳಗಳ ಉಚಿತ ಛಾರ್ಜಿಂಗ್ ಸೌಲಭ್ಯ ಬಳಸಿದ ಇವರಿಬ್ಬರ ಫೋನುಗಳನ್ನು ಹ್ಯಾಕ್ ಮಾಡಲಾಗಿದೆ ಎಂದಿದೆ ದೆಹಲಿ ಪೊಲೀಸರ ಸೈಬರ್ ಅಪರಾಧ ನಿಗ್ರಹ ವಿಭಾಗ.

ಸಾರ್ವಜನಿಕ ಸ್ಥಳಗಳಲ್ಲಿನ ಯು.ಎಸ್.ಬಿ. ಪವರ್ ಛಾರ್ಜಿಂಗ್ ಉಚಿತ ಸೌಲಭ್ಯದ ಉಪಯೋಗ- ದುರುಪಯೋಗದ ಮೇಲೆ ಯಾರೂ ನಿಗಾ ಇಟ್ಟಿರುವುದಿಲ್ಲ. ಹ್ಯಾಕ್ ಮಾಡುವ ಪಾತಕಿಗಳು ಈ ಅವಕಾಶವನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ. ಛಾರ್ಜ್ ಮಾಡಲು ಅಮಾಯಕರು ಇಡುವ ಮೊಬೈಲ್ ಫೋನುಗಳಿಂದ ಅವುಗಳಲ್ಲಿನ ಮಾಹಿತಿಯನ್ನು (ಡೇಟಾ) ಕದಿಯುತ್ತಾರೆ. ಯು.ಎಸ್.ಬಿ. ಪೋರ್ಟ್ ಗಳಲ್ಲಿ ಮಾಹಿತಿ ಕದಿಯುವ ‘ಚಿಪ್’ ಗಳನ್ನು ಅಡಗಿಸಿಡುತ್ತಾರೆ. ಯು.ಎಸ್.ಬಿ. ಕಾರ್ಡ್ ಗಳು ಸಾಮಾನ್ಯ ಛಾರ್ಜರ್ ಗಳಂತಲ್ಲ. ಡೇಟಾವನ್ನು ಫೋನಿನಿಂದ ಫೋನಿಗೆ, ಇಲ್ಲವೇ ಫೋನಿನಿಂದ ಕಂಪ್ಯೂಟರಿಗೆ, ಕಂಪ್ಯೂಟರಿಂದ ಫೋನಿಗೆ ವರ್ಗಾಯಿಸಲೂ ಯು.ಎಸ್.ಬಿ.ಕಾರ್ಡ್ ಗಳ ಬಳಕೆಯಾಗುತ್ತದೆ ಎಂಬುದನ್ನು ಗಮನಿಸಬೇಕು ಎನ್ನುತ್ತಾರೆ ದೆಹಲಿ ಪೊಲೀಸರು.

ಮೇಲ್ದರ್ಜೆಯ ಶಾಪಿಂಗ್ ತಾಣಗಳು ಮತ್ತು ವಿಮಾನನಿಲ್ದಾಣಗಳು ಹಾಗೂ ಪ್ರವಾಸಿ ತಾಣಗಳಲ್ಲಿ ಸೈಬರ್ ಮಾಹಿತಿ ಚೋರರು ಸಕ್ರಿಯವಾಗಿರುತ್ತಾರೆ. ಮೊಬೈಲಿನೊಳಗಿನ ಬ್ಯಾಂಕಿಂಗ್ ಮತ್ತು ಇತರೆ ಸೂಕ್ಷ್ಮ ಮಾಹಿತಿಗಳನ್ನು ಕದಿಯುತ್ತಾರೆ. ಇವರು ಪೋರ್ಟ್ ಗಳಲ್ಲಿ ಅಡಗಿಸಿಡುವ ಚೋರ ಸಾಧನವು ಪ್ರತಿ ಐದು ಸೆಕೆಂಡುಗಳಿಗೆ ಒಮ್ಮೆ ಫೋನಿನ ಸ್ಕ್ರೀನ್ ಶಾಟ್ ಗಳನ್ನು ತೆಗೆದು ರವಾನಿಸುತ್ತದೆ. ಬ್ಯಾಂಕ್ ಖಾತೆಯಿಂದ ಹಣ ತೆಗೆಯಲು ಮತ್ತು ಹೆಣ್ಣುಮಕ್ಕಳಿಗೆ ಕಿರುಕುಳ ನೀಡಲು ಹಾಗೂ ಬ್ಲ್ಯಾಕ್ ಮೇಲ್ ಮಾಡಲು ಈ ಮಾಹಿತಿಯನ್ನು ಅವರು ಬಳಸುತ್ತಾರೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ನಿಮ್ಮ ಮಾಮೂಲು ಮೊಬೈಲ್ ಛಾರ್ಜರ್ ಜೊತೆಗೆ ಒಯ್ಯಿರಿ. ಗೋಡೆಯಲ್ಲಿನ ಪ್ಲಗ್ ಗಳಿಗೆ ಸಿಕ್ಕಿಸಿ ಛಾರ್ಜ್ ಮಾಡಿರಿ. ಇಲ್ಲವೇ ಪವರ್ ಬ್ಯಾಂಕ್ ಬಳಸಿ. ಯು.ಎಸ್.ಬಿ. ಪೋರ್ಟ್ ಕೇಬಲ್ ಗಳನ್ನು ಬಳಸಬೇಡಿ ಎಂಬುದು ಅವರ ಕಿವಿಮಾತು.

ಜ್ಯೂಸ್ ಜಾಕಿಂಗ್ ಎಂದು ಕರೆಯಲಾಗುವ ಈ ಸೈಬರ್ ಚೌರ್ಯ ಕೇವಲ ದೆಹಲಿಗೆ ಸೀಮಿತವಲ್ಲ. ವಿಶ್ವದ ಬಹುತೇಕ ದೊಡ್ಡ ನಗರಗಳಿಂದ ಇಂತಹ ಕಳ್ಳತನಗಳು ವರದಿಯಾಗಿವೆ. ಬೆಂಗಳೂರು ಕೂಡ ಈ ಮಾತಿಗೆ ಹೊರತಲ್ಲ.

RS 500
RS 1500

SCAN HERE

Pratidhvani Youtube

«
Prev
1
/
4568
Next
»
loading
play
H.Vishwanath; ಡಿ.ದೇವರಾಜ ಅರಸು ಅವರ 41ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ MLC H. ವಿಶ್ವನಾಥ್ ಭಾಗಿ|Devarajaarasu
play
Live ; ಉಚಿತ ವಿದ್ಯುತ್‌ ಗೊಂದಲಕ್ಕೆ ತೆರೆ ಎಳೆದ ಸರ್ಕಾರ..! | CM Siddaramaiah | Congress Guarantees
«
Prev
1
/
4568
Next
»
loading

don't miss it !

Vishnuvardhan cutout : ಏಷ್ಯಾ, ಇಂಟರ್​ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್ ಸೇರಿದ‌ ‘ವಿಷ್ಣುವರ್ಧನ್‌ ಕಟೌಟ್ ಜಾತ್ರೆ’..!
Top Story

Vishnuvardhan cutout : ಏಷ್ಯಾ, ಇಂಟರ್​ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್ ಸೇರಿದ‌ ‘ವಿಷ್ಣುವರ್ಧನ್‌ ಕಟೌಟ್ ಜಾತ್ರೆ’..!

by ಪ್ರತಿಧ್ವನಿ
June 3, 2023
Lawyers Protection Act : ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ವಹಿಸಲು ಸಿದ್ದ.. ವಕೀಲರ ವಿಮೆ ಜಾರಿಗೂ ಚರ್ಚಿಸಿ ಸೂಕ್ತ ಕ್ರಮ  : ಸಿಎಂ ಭರವಸೆ
Top Story

Lawyers Protection Act : ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ವಹಿಸಲು ಸಿದ್ದ.. ವಕೀಲರ ವಿಮೆ ಜಾರಿಗೂ ಚರ್ಚಿಸಿ ಸೂಕ್ತ ಕ್ರಮ : ಸಿಎಂ ಭರವಸೆ

by ಪ್ರತಿಧ್ವನಿ
May 31, 2023
ರೈಲು ಪ್ರಯಾಣಿಕರಿಗೆ ಬಹುಮುಖ್ಯ ಮಾಹಿತಿ : ಕೇವಲ 35 ಪೈಸೆಗೆ ಸಿಗುತ್ತೆ 10 ಲಕ್ಷ ರೂ.ಗಳ ಇನ್ಶೂರೆನ್ಸ್​ ಕವರೇಜ್​
Top Story

ರೈಲು ಪ್ರಯಾಣಿಕರಿಗೆ ಬಹುಮುಖ್ಯ ಮಾಹಿತಿ : ಕೇವಲ 35 ಪೈಸೆಗೆ ಸಿಗುತ್ತೆ 10 ಲಕ್ಷ ರೂ.ಗಳ ಇನ್ಶೂರೆನ್ಸ್​ ಕವರೇಜ್​

by ಪ್ರತಿಧ್ವನಿ
June 6, 2023
ಕರೆಂಟ್ ಹೊಡೆದು ಕಂಬದಲ್ಲೇ ಪ್ರಾಣ ಬಿಟ್ಟ ಲೈನ್ ಮ್ಯಾನ್..!
Top Story

ಕರೆಂಟ್ ಹೊಡೆದು ಕಂಬದಲ್ಲೇ ಪ್ರಾಣ ಬಿಟ್ಟ ಲೈನ್ ಮ್ಯಾನ್..!

by ಪ್ರತಿಧ್ವನಿ
June 4, 2023
ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿದ ಸಾಕ್ಷಿ ಮಲ್ಲಿಕ್​
ದೇಶ

ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿದ ಸಾಕ್ಷಿ ಮಲ್ಲಿಕ್​

by Prathidhvani
June 5, 2023
Next Post
ಬಿಜೆಪಿ ವಿರುದ್ಧ ಕೈ ನಾಯಕರ ವಾಗ್ದಾಳಿ

ಬಿಜೆಪಿ ವಿರುದ್ಧ ಕೈ ನಾಯಕರ ವಾಗ್ದಾಳಿ

ರಾಜ್ಯವನ್ನು ಬೆಚ್ಚಿ ಬೀಳಿಸಿದೆ ಮಹಾರಾಷ್ಟ್ರ ಸರ್ಕಾರ ರಚನೆ ರಾಜಕಾರಣ!

ರಾಜ್ಯವನ್ನು ಬೆಚ್ಚಿ ಬೀಳಿಸಿದೆ ಮಹಾರಾಷ್ಟ್ರ ಸರ್ಕಾರ ರಚನೆ ರಾಜಕಾರಣ!

ಮಹಾರಾಷ್ಟ್ರದಲ್ಲಿ ಪ್ರಜಾತಂತ್ರ ಕಗ್ಗೊಲೆಗೆ ಮೋದಿ

ಮಹಾರಾಷ್ಟ್ರದಲ್ಲಿ ಪ್ರಜಾತಂತ್ರ ಕಗ್ಗೊಲೆಗೆ ಮೋದಿ, ಶಾ ಇಟ್ಟ ದಶ ಹೆಜ್ಜೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist