• Home
  • About Us
  • ಕರ್ನಾಟಕ
Wednesday, January 21, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೋದಿಗೆ ಉಘೇ ಎಂದಿದ್ದಕ್ಕೆ ರಜಿನಿಕಾಂತ್‌ ಬಚಾವ್, ವಿರೋಧಿಸಿ ವಿಜಯ್‌ಗೆ ಸಂಕಷ್ಟ

by
February 7, 2020
in ದೇಶ
0
ಮೋದಿಗೆ ಉಘೇ ಎಂದಿದ್ದಕ್ಕೆ ರಜಿನಿಕಾಂತ್‌ ಬಚಾವ್
Share on WhatsAppShare on FacebookShare on Telegram

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಶುರು ಮಾಡಿದ್ಯಾ..? ಹೀಗೊಂದು ಅನುಮಾನ ದಟ್ಟವಾಗಿ ಕಾಡಲು ಶುರುಮಾಡಲು ಕಾರಣ ನಮ್ಮ ಪಕ್ಕದ ರಾಜ್ಯದ ಕಾಲಿವುಡ್. ನಮ್ಮ ಕರ್ನಾಟಕದ ಸ್ಯಾಂಡಲ್‌ವುಡ್ ರೀತಿಯಲ್ಲಿ ತಮಿಳುನಾಡಿನ ಚಿತ್ರೋದ್ಯಮವನ್ನು ಕಾಲಿವುಡ್‌ ಎನ್ನುವುದು ರೂಢಿ. ತಮಿಳು ಚಿತ್ರರಂಗದಲ್ಲಿ ಕನ್ನಡಿಗ ರಜಿನಿಕಾಂತ್‌ ಹಾಗು ವಿಜಯ್‌ ಇಬ್ಬರು ದೊಡ್ಡ ಸ್ಟಾರ್‌ಕಾಸ್ಟ್‌ ಹೊಂದಿರುವ ನಟರು. ಈ ಇಬ್ಬರು ನಟರ ನಡುವೆ ಅಭಿಪ್ರಾಯ ಬೇಧವಿದೆ. ಈ ಅಭಿಪ್ರಾಯ ಬೇಧ ಅವರ ಜೀವನದ ಮೇಲೆ ಪರಿಣಾಮ ಬೀರಿದೆ. ಆದರೆ ಆ ಅಭಿಪ್ರಾಯ ಬೇದ ರಾಜಕಾರಣಕ್ಕೆ ಸಂಬಂಧಿಸಿದಂತೆ ಪರಿಣಾಮ ಬೀರಿರುವುದು ಅಚ್ಚರಿಗೆ ಕಾರಣವಾಗಿದೆ. ಅದರಲ್ಲೂ ನರೇಂದ್ರ ಮೋದಿ ಸರ್ಕಾರ ಇಬ್ಬರು ನಟರ ವಿಚಾರದಲ್ಲಿ ತಾರತಮ್ಯ ಮಾಡಿದೆಯಾ ಅನ್ನೋ ಪ್ರಶ್ನೆ ಹುಟ್ಟು ಹಾಕಿದೆ.

ADVERTISEMENT

ರಜಿನಿಕಾಂತ್‌ ಕರ್ನಾಟಕದಿಂದ ತಮಿಳುನಾಡಿಗೆ ವಲಸೆ ಹೋಗಿದ್ದರೂ ತಲೈವಾ, ಸೂಪರ್‌ ಸ್ಟಾರ್‌ ಎನ್ನುವ ಬಿರುದು ಕೊಟ್ಟು ಜನ ಆರಾಧಿಸುತ್ತಿದ್ದಾರೆ. ಈ ರೀತಿ ಜನರ ಮನಸ್ಸು ಗೆದ್ದಿರುವ ಕನ್ನಡಿಗ ರಜಿನಿಕಾಂತ್‌ ಮೇಲೂ ಸದ್ಯಕ್ಕೆ ಅನುಮಾನ ಮೂಡುತ್ತಿದೆ. ಕೇಂದ್ರ ಸರ್ಕಾರ ತನ್ನ ಮೇಲಿನ ಆದಾಯ ವಂಚನೆಯ 3 ಕೇಸ್‌ಗಳನ್ನು ಪಾಪಸ್‌ ಪಡೆದುಕೊಳ್ಳಲು ನಿರ್ಧಾರ ಮಾಡಿದ್ದಕ್ಕೆ ಪೌರತ್ವ ಕಾಯ್ದೆಯನ್ನು ಬೆಂಬಲಿಸುವ ಮೂಲಕ ಪ್ರತ್ಯುಪಕಾರ ಮಾಡಿದ್ರಾ ಎನ್ನುವ ಆಲೋಚನೆ ಮೂಡುವಂತೆ ಮಾಡಿದೆ.

ಜನವರಿ 28ರಂದು ಆದಾಯ ತೆರಿಗೆ ಇಲಾಖೆ ಒಂದು ನಿರ್ಧಾರ ಮಾಡಿದ್ದು, 2002-2003, 2003-2004, 2004-2005ರ ನಡುವೆ ರಜನಿಕಾಂತ್‌ ತೆರಿಗೆ ಪಾವತಿ ಮಾಡಿಲ್ಲ ಎನ್ನುವ ಕಾರಣಕ್ಕೆ ಪ್ರಕರಣ ದಾಖಲಿಸಿತ್ತು. ಆ ಬಳಿಕ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿರುವ ಆದಾಯ ತೆರಿಗೆ ಇಲಾಖೆ ಪ್ರಕರಣ ವಾಪಸ್‌ ಪಡೆದುಕೊಳ್ಳುವ ನಿರ್ಧಾರ ತೀಲಿಸಿದೆ. ಇದಾದ ಬಳಿಕ ಇಷ್ಟು ದಿನಗಳ ಕಾಲ ಮೌನ ವಹಿಸಿದ್ದ ನಟ ರಜಿನಿಕಾಂತ್‌, ಇದೀಗ ಮೌನ ಮುರಿದಿದ್ದಾರೆ.

ಪೌರತ್ವ ಕಾಯ್ದೆ ಜಾರಿಯಿಂದ ಮುಸ್ಲಿಂ ಸಮುದಾಯಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ. ಒಂದು ವೇಳೆ ಪೌರತ್ವ ಕಾಯ್ದೆಯಿಂದ ತೊಂದರೆ ಆದರೆ ನಾನೇ ಮೊದಲಿಗನಾಗಿ ದನಿ ಎತ್ತುತ್ತೇನೆ ಎಂದಿದ್ದಾರೆ. ರಜಿನಿಕಾಂತ್‌ ಹೇಳಿಕೆಯನ್ನು ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್‌ ಖಂಡಿಸಿದ್ದು, ಶೀಘ್ರದಲ್ಲೇ ತಮ್ಮ ಹೇಳಿಕೆಯನ್ನು ವಾಪಸ್‌ ಪಡೆಯಬೇಕೆಂದು ಆಗ್ರಹಿಸಿದ್ದಾರೆ. 66.22 ಲಕ್ಷ ರೂಪಾಯಿ ದಂಡ ಹಾಕಿದ್ದ ಕೇಸ್‌ ವಾಪಸ್‌ ಪಡೆದಿದ್ದಕ್ಕೆ ನರೇಂದ್ರ ಮೋದಿ ಸರ್ಕಾರ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸುವ ಮೂಲಕ ಕೃತಜ್ಞತೆ ಸಲ್ಲಿಸಿದ್ರಾ ಅನ್ನೋ ಮಾತುಗಳು ಕೇಳಿ ಬಂದಿದೆ. ಈ ಮಾತಿಗೆ ಪೂರಕ ಎನ್ನುವಂತೆ ನರೇಂದ್ರ ಮೋದಿಯ ಆಡಳಿತ ವೈಖರಿ ಟೀಕಿಸಿದ್ದ ಮತ್ತೋರ್ವ ನಾಯಕನಿಗೆ ಸಂಕಷ್ಟ ಎದುರಾಗಿರುವುದು.

ನಟ ವಿಜಯ್‌ ನಿವಾಸ ಸೇರಿದಂತೆ 38 ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಇಲ್ಲದ ಬರೋಬ್ಬರಿ 77 ಕೋಟಿ ರೂಪಾಯಿ ಸೀಜ್‌ ಮಾಡಲಾಗಿದೆ ಎನ್ನುವ ವರದಿಗಳು ಬಂದಿವೆ. ಜೊತೆಗೆ 300 ಕೋಟಿಗೂ ಹೆಚ್ಚು ಆಸ್ತಿ ಪತ್ತೆಯಾಗಿದೆ ಎಂದು ಐಟಿ ಅಧಿಕಾರಿಗಳ ಮೂಲಗಳು ಮಾಹಿತಿ ಕೊಟ್ಟಿವೆ. ಇನ್ನೊಂದು ಮೂಲಗಳ ಪ್ರಕಾರ ನಟ ವಿಜಯ್‌, ಸಿನಿಮಾದಲ್ಲಿ ಜಿಎಸ್‌ಟಿ ಬಗ್ಗೆ ಹೇಳುವ ಮೂಲಕ ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ ಕಾರಣಕ್ಕೆ ಮೋದಿ ಸರ್ಕಾರ ಟಾರ್ಗೆಟ್‌ ಮಾಡಿದೆ ಎನ್ನಲಾಗುತ್ತಿದೆ.

2017ರ ಅಕ್ಟೋಬರ್‌ನಲ್ಲಿ ಬಿಡುಗಡೆಯಾದ ಮೆರ್ಸೆಲ್‌ ಚಿತ್ರವನ್ನು ತಡೆಯಲು ಎಐಎಡಿಎಂಕೆ ಸಾಕಷ್ಟು ಪ್ರಯತ್ನ ಮಾಡಿತ್ತು. ಆ ಬಳಿಕ ಕೇಂದ್ರ ಸರ್ಕಾರದ ನಿಲುವುಗಳನ್ನು ವಿಜಯ್‌ ಖಂಡಿಸಿದ್ದರಿಂದ ಆದಾಯ ತೆರಿಗೆ ಪ್ರಕರಣದಲ್ಲಿ ಸಿಲುಕಿಸಲಾಗ್ತಿದೆ ಎನ್ನುವ ಆರೋಪಗಳು ಎದುರಾಗಿವೆ. ಅಭಿಮಾನಿಗಳು ಇದೊಂದು ಅಭಿಯಾನ ಮಾಡುತ್ತಿದ್ದು, ವಿ ಸ್ಟ್ಯಾಂಡ್‌ ವಿತ್‌ ವಿಜಯ್‌ ಅನ್ನೋ ಅಭಿಯಾನ ಟ್ರೆಂಡ್‌ ಆಗಿದೆ. ಒಟ್ಟಾರೆ ಮೋದಿ ಸರ್ಕಾರ ನಟ ವಿಜಯ್‌ ಅವರನ್ನು ಟಾರ್ಗೆಟ್‌ ಮಾಡಿದೆ ಎನ್ನುವುದು ಅಭಿಮಾನಿಗಳ ಆರೋಪ. ಇದಕ್ಕೆ ಕಾರಣ ಬಿಜೆಪಿ ಪರವಾಗಿ ಇರುವ ನಟ ರಜಿನಿಕಾಂತ್‌ ಅವರ ಪ್ರಕರಣ ಕೈಬಿಟ್ಟಿರೋದು. ತಪ್ಪು ಯಾರು ಮಾಡಿದರೂ ತಪ್ಪು. ಆದರೆ ಬೆಂಬಲಿಗರಿಗೆ ಒಂದು ನ್ಯಾಯ, ವಿರೋಧಿಗಳಿಗೆ ಒಂದು ನ್ಯಾಯವೇ? ಎನ್ನುವುದು ಜನರ ಪ್ರಶ್ನೆಯಾಗಿದೆ.

Tags: Income Tax DepartmentNarendra ModiRajinikanthVijayಆದಾಯ ತೆರಿಗೆ ಇಲಾಖೆಮೋದಿರಜಿನಿಕಾಂತ್‌ವಿಜಯ್‌
Previous Post

ಬಿಜೆಪಿ ಅಧಿಕಾರ ಸವಿಯಲು ನೆರವಾದವರ ಮೇಲೆ ಕರಾಳ ಕಾನೂನು ಅಸ್ತ್ರ ಪ್ರಯೋಗವೇಕೆ?

Next Post

ಅಭಿವೃದ್ದಿ ಮತ್ತು ವಿಭಜನೆ; ದೆಹಲಿ ಚುನಾವಣೆಯಲ್ಲಿ ಯಾರಿಗೆ ಮಣೆ? 

Related Posts

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!
ಇದೀಗ

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

by ಪ್ರತಿಧ್ವನಿ
January 20, 2026
0

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿಂದು ನಡೆದ ಮಹಾಸಭಾದ ಕಾರ್ಯಕಾರಿಣಿ ಸಭೆಯಲ್ಲಿ...

Read moreDetails

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
Viral Video: ವ್ಯಕ್ತಿಯ ಜೀವ ಬಲಿ ಪಡೆದ 26 ಸೆಕೆಂಡ್‌ಗಳ ರೀಲ್ಸ್‌: ಅಸಲಿಗೆ ಆಗಿದ್ದೇನು..?

Viral Video: ವ್ಯಕ್ತಿಯ ಜೀವ ಬಲಿ ಪಡೆದ 26 ಸೆಕೆಂಡ್‌ಗಳ ರೀಲ್ಸ್‌: ಅಸಲಿಗೆ ಆಗಿದ್ದೇನು..?

January 20, 2026
“ರಾಯರನ್ನು ಅಪಮಾನ ಮಾಡಿದವರು ಯಾರು ಉದ್ಧಾರ ಆದ ಇತಿಹಾಸವಿಲ್ಲಾ!”

“ರಾಯರನ್ನು ಅಪಮಾನ ಮಾಡಿದವರು ಯಾರು ಉದ್ಧಾರ ಆದ ಇತಿಹಾಸವಿಲ್ಲಾ!”

January 20, 2026
Next Post
ಅಭಿವೃದ್ದಿ ಮತ್ತು ವಿಭಜನೆ; ದೆಹಲಿ ಚುನಾವಣೆಯಲ್ಲಿ ಯಾರಿಗೆ ಮಣೆ? 

ಅಭಿವೃದ್ದಿ ಮತ್ತು ವಿಭಜನೆ; ದೆಹಲಿ ಚುನಾವಣೆಯಲ್ಲಿ ಯಾರಿಗೆ ಮಣೆ? 

Please login to join discussion

Recent News

Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ
Top Story

ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

January 20, 2026

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada