Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ರಾಷ್ಟ್ರವ್ಯಾಪಿ ಲಾಕ್‌ ಡೌನ್‌ ಘೋಷಣೆ ನಂತರವೂ ಯೋಗಿ ಆದಿತ್ಯನಾಥ್‌ ಟೆಂಪಲ್‌ ರನ್‌..!

ರಾಷ್ಟ್ರವ್ಯಾಪಿ ಲಾಕ್‌ ಡೌನ್‌ ಘೋಷಣೆ ನಂತರವೂ ಯೋಗಿ ಆದಿತ್ಯನಾಥ್‌ ಟೆಂಪಲ್‌ ರನ್‌..!
ರಾಷ್ಟ್ರವ್ಯಾಪಿ ಲಾಕ್‌ ಡೌನ್‌ ಘೋಷಣೆ ನಂತರವೂ ಯೋಗಿ ಆದಿತ್ಯನಾಥ್‌ ಟೆಂಪಲ್‌ ರನ್‌..!

March 25, 2020
Share on FacebookShare on Twitter

ಕರೋನಾ ವೈರಸ್ ನ ಸಂಪೂರ್ಣ ನಿರ್ಮೂಲನೆಗಾಗಿ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ರಾಷ್ಟ್ರವ್ಯಾಪಿ ಲಾಕ್ ಡೌನ್ ಘೋಷಿಸಿದ 12 ಗಂಟೆಗಳ ನಂತರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಯಲ್ಲಿದ್ದರು. ಅಷ್ಟೇ ಅಲ್ಲ, ರಾಮ ಜನ್ಮಭೂಮಿಯಲ್ಲಿ ಇರುವ ತಗಡಿನ ಶೆಡ್‌ನಿಂದ ಶ್ರೀರಾಮನ ವಿಗ್ರಹವನ್ನು ಹೊರಗೆ ತೆಗೆದು ಫೈಬರ್‌ನಿಂದ ನಿರ್ಮಿಸಲಾಗಿರುವ ತಾತ್ಕಾಲಿಕ ಶೆಡ್‌ಗೆ ಸ್ಥಳಾಂತರಿಸುವ ಕಾರ್ಯದಲ್ಲೂ ತೊಡಗಿಕೊಂಡರು. ಈ ಶೆಡ್‌ ನಲ್ಲಿ ಶ್ರೀರಾಮನ ಮೂರ್ತಿಯು ದೇವಾಲಯ ನಿರ್ಮಾಣವಾಗುವವರೆಗೂ ಇರಲಿದೆ.

ಮಂಗಳವಾರ ತಡರಾತ್ರಿ ಅಯೋಧ್ಯೆ ತಲುಪಿದ ಮುಖ್ಯಮಂತ್ರಿ, ನವರಾತ್ರಿಯ ಮೊದಲ ದಿನದಂದು ಈ ಆಚರಣೆಯನ್ನು ಅಯೋಧ್ಯೆಯಲ್ಲಿ ರಾಮ್ ದೇವಾಲಯ ನಿರ್ಮಾಣದ ಮೊದಲ ಹಂತದ ಆರಂಭ ಎಂದು ನಂತರ ಟ್ವೀಟ್‌ ಮಾಡಿದ್ದಾರೆ. ಅಯೋಧ್ಯಾ ಪಟ್ಟಣದಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ದೇವಾಲಯದ ನಿರ್ಮಾಣದ ದಿನಾಂಕವನ್ನು ನಿರ್ಧರಿಸುವ ಸಭೆ ನಡೆಯಬೇಕಿತ್ತು, ಆದರೆ ಅದು ಮುಂದೆ ಹೋಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ.

ರಾಷ್ಟ್ರವನ್ನು ವ್ಯಾಪಿಸಿರುವ ಭೀಕರ ಕರೋನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಈ ವಿಗ್ರಹ ಸ್ಥಳಾಂತರವನ್ನು ಮುಂದೂಡಬಹುದೆಂದು ವರದಿಗಳು ತಿಳಿಸಿದ್ದವು. ಆದರೆ ಮುಖ್ಯಮಂತ್ರಿಗಳು ಸ್ಥಳಾಂತರಕ್ಕೆ ಮುಂದಾಗಿದ್ದು ಇದರಲ್ಲಿ 20 ಜನರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ತೆಗೆಯಲಾದ ವೀಡಿಯೋಗಳಲ್ಲಿ ಅನೇಕ ಸಾಧು ಸಂತರ ಸಮ್ಮುಖದಲ್ಲಿ ಮುಖ್ಯಮಂತ್ರಿಗಳು ಪೂಜೆಯ ನೇತೃತ್ವ ವಹಿಸಿರುವುದು ಕಂಡು ಬಂದಿದೆ. ಹಿರಿಯ ಸರ್ಕಾರಿ ಅಧಿಕಾರಿಗಳು, ಅಯೋಧ್ಯೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ಸೇರಿದಂತೆ ಎಲ್ಲರೂ ಈ ಸಂದರ್ಭದಲ್ಲಿ ಹಾಜರಿದ್ದರು. ಸ್ಥಳಾಂತರದ ನಂತರ ಯೋಗಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿರುವ ರಾಷ್ಟ್ರವ್ಯಾಪಿ ಲಾಕ್‌ ಡೌನ್‌ ಗೆ ಜನತೆ ಸಹಕರಿಸಬೇಕೆಂದು ವಿನಂತಿ ಮಾಡಿಕೊಂಡರು.

अयोध्या करती है आह्वान…

भव्य राम मंदिर के निर्माण का पहला चरण आज सम्पन्न हुआ, मर्यादा पुरुषोत्तम प्रभु श्री राम त्रिपाल से नए आसन पर विराजमान…

मानस भवन के पास एक अस्थायी ढांचे में 'रामलला' की मूर्ति को स्थानांतरित किया।

भव्य मंदिर के निर्माण हेतु ₹11 लाख का चेक भेंट किया। pic.twitter.com/PWiAX8BQRR

— Yogi Adityanath (@myogiadityanath) March 25, 2020


ಹೆಚ್ಚು ಓದಿದ ಸ್ಟೋರಿಗಳು

ಮೋದಿ ಹಿರಿಯಣ್ಣ, ಅವರೊಂದಿಗೆ ಕೆಲಸ ಮಾಡಲು ಬಯಸುತ್ತೇನೆ: ಕೇಜ್ರಿವಾಲ್‌

ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಅಪಘಾತ : ಶಸ್ತ್ರಚಿಕಿತ್ಸೆ ಮುಗಿಸಿ ಆ್ಯಂಬುಲೆನ್ಸ್​ನಲ್ಲೇ ಪರೀಕ್ಷೆ ಬರೆದ ಸಾಹಸಿ

ಅಭಿವೃದ್ಧಿಯ ಮಾರ್ಗವೂ ಕಾರ್ಪೋರೇಟ್ ಬಂಡವಾಳವೂ ಸಮಾಜದ ಮೇಲ್ವರ್ಗಕ್ಕೆ ಮಾತ್ರವೇ ನಿಲುಕುವ ಅಭಿವೃದ್ಧಿ ಮಾದರಿಗಳೇ ನವಉದಾರವಾದದ ಜೀವಾಳ

ಹಿಂದಿನ ದಿನವಷ್ಟೆ ಪ್ರಧಾನಿಯವರು ಹೆಚ್ಚು ಜನ ಸೇರುವುದನ್ನು ತಪ್ಪಿಸಿ ವೈರಸ್‌ ಸೋಂಕು ಹರಡುವುದನ್ನು ತಡೆಗಟ್ಟಲು ಪ್ರತಿಯೊಬ್ಬ ನಾಗರಿಕನೂ ಶ್ರಮಿಸಬೇಕೆಂದು ಕರೆ ನೀಡಿದ್ದರು. ಚೀನಾದ ವುಹಾನ್‌ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಈ ಭೀಕರ ವೈರಸ್‌ ಪತ್ತೆಯಾಗಿದ್ದು ನಂತರ ಅನೇಕ ದೇಶಗಳಿಗೆ ಹಬ್ಬಿತ್ತು. ಕೇಂದ್ರ ಗೃಹ ಸಚಿವಾಲಯವು ಲಾಕ್ ಡೌನ್‌ ಸಮಯದಲ್ಲಿ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಕುರಿತು ಸುತ್ತೋಲೆಯನ್ನು ಹೊರಡಿಸಿದ್ದು ಎಲ್ಲ ರೀತಿಯ ಧಾರ್ಮಿಕ ಕೇಂದ್ರಗಳನ್ನು ಕಡ್ಡಾಯವಾಗಿ ಮುಚ್ಚುವಂತೆಯೇ ಆದೇಶಿಸಿತ್ತು. ಈ ಕುರಿತು ಪ್ರಧಾನಿ ಮೋದಿ ಅವರೂ ಟ್ವೀಟ್‌ ಮೂಲಕ ವೈರಸ್‌ ವಿರುದ್ದ ಹೋರಾಟಕ್ಕೆ ಕರೆ ನೀಡಿದ್ದರು.
ಅಯೋಧ್ಯಾ ಜಿಲ್ಲಾಡಳಿತವು ಏಪ್ರಿಲ್‌ 2 ರ ವರೆಗೆ ಈ ನಗರಿಗೆ ಭಕ್ತರ ಪ್ರವೇಶವನ್ನೇ ನಿಷೇಧಿಸಿತ್ತು. ದೇಶದಲ್ಲಿ ಅತ್ಯವಶ್ಯ ವಸ್ತುಗಳ ಸಾಗಾಟ ಹೊರತುಪಡಿಸಿ ಎಲ್ಲ ಸಾರ್ವಜನಿಕ ಪ್ರಯಾಣಿಕರ ವಾಹನಗಳು, ವಿಮಾನಗಳ ಹಾರಾಟ, ರೈಲುಗಳ ಓಡಾಟವನ್ನೂ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಕಳೆದ ನವೆಂಬರ್‌ ನಲ್ಲಷ್ಟೇ ದೇಶದ ಸರ್ವೋಚ್ಚ ನ್ಯಾಯಾಲಯವು ವಿವಾದಿತ ರಾಮ ಜನ್ಮ ಭೂಮಿಯ ಕುರಿತು ಐತಿಹಾಸಿಕ ತೀರ್ಪು ನೀಡಿ ಭೂಮಿಯನ್ನು ರಾಮಲಲ್ಲಾ ಸಮಿತಿಗೆ ನೀಡಿತ್ತು. ಅಲ್ಲದೆ ಉತ್ತರ ಪ್ರದೇಶದ ಮುಖ್ಯ ಸ್ಥಳದಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಸ್ಥಳವನ್ನು ನೀಡುವಂತೆಯೂ ಆದೇಶಿಸಿತ್ತು.

ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರು ರಾಮ ದೇವಾಲಯವನ್ನು ಕೆಲವು ತಿಂಗಳುಗಳಲ್ಲೇ ಕಟ್ಟುವುದಾಗಿಯೂ ಹೇಳಿದ್ದರು. ಸರ್ಕಾರವು ಮಸೀದಿ ನಿರ್ಮಾಣಕ್ಕಾಗಿ ಗುರುತಿಸಿರುವ ಸ್ಥಳವು ಈಗಿರುವ ರಾಮ ಜನ್ಮಭೂಮಿ ಸ್ಥಳದಿಂದ 25 ಕಿಲೋಮೀಟರ್‌ ದೂರದಲ್ಲಿದೆ. ಈ ನಿವೇಶನವು ಅಯೋಧ್ಯಾ ಸಮೀಪದ ಧನಿಪುರ ಗ್ರಾಮದಲ್ಲಿದ್ದು ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಿಲ್ಲಾ ಕೇಂದ್ರದಿಂದ 18 ಕಿಲೋಮೀಟರ್‌ ದೂರದಲ್ಲಿದೆ ಎಂದು ಉತ್ತರ ಪ್ರದೇಶದ ಮಂತ್ರಿ ಶ್ರೀಕಂಠ ಶರ್ಮ ಕಳೆದ ಫೆಬ್ರುವರಿಯಲ್ಲೇ ತಿಳಿಸಿದ್ದರು. ಹಿಂದೂ ಹಾಗೂ ಮುಸ್ಲಿಂ ಸಮುದಾಯದ ನಡುವೆ ವಿವಾದಕ್ಕೆ ಕಾರಣವಾಗಿದ್ದ ರಾಮಜನ್ಮ ಭೂಮಿಯ ವಿವಾದವು ದಶಕಗಳಷ್ಟು ಇತಿಹಾಸ ಹೊಂದಿದ್ದರೂ ಸುಪ್ರೀಂ ಕೋರ್ಟಿನ ತೀರ್ಪಿನಿಂದಾಗಿ ಎರಡೂ ಸಮುದಾಯಗಳ ನಡುವೆ ಶಾಂತಿ ನೆಲೆಸಲೂ ಕಾರಣವಾಯಿತು.

ಪ್ರಧಾನ ಮಂತ್ರಿಗಳ ಕರೆಯ ನಡುವೆಯೂ ಹಿರಿಯ ಜನಪ್ರತಿನಿಧಿಯಾಗಿ ರಾಜ್ಯವೊಂದರ ಮುಖ್ಯ ಹುದ್ದೆಯಲ್ಲಿರುವ ಯೋಗಿ ಅವರು ಸರ್ಕಾರದ ಆದೇಶವನ್ನೇ ಗಾಳಿಗೆ ತೂರಿ ಮಂಗಳವಾರ ಬೆಳಿಗ್ಗೆ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಆದೇಶಗಳು ಬರೀ ಜನಸಾಮಾನ್ಯರಿಗೆ ಮಾತ್ರವೋ ಉನ್ನತ ಹುದ್ದೆ ಮತ್ತು ಅಧಿಕಾರಸ್ಥರಿಗೆ ಇದು ಅನ್ವಯವಾಗುದಿಲ್ಲವೋ ಎಂಬುದನ್ನು ಆಳುವ ಸರ್ಕಾರವೇ ಸ್ಪಷ್ಟಪಡಿಸಬೇಕಿದೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ಕಾಂಗ್ರೆಸ್ ಗ್ಯಾರಂಟಿ ನಂಬರ್ 4 : ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ..! : Congress guarantee number 4
Top Story

ಕಾಂಗ್ರೆಸ್ ಗ್ಯಾರಂಟಿ ನಂಬರ್ 4 : ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ..! : Congress guarantee number 4

by ಪ್ರತಿಧ್ವನಿ
March 20, 2023
ಲಂಡನ್​​ನಲ್ಲಿ ಭಾರತೀಯ ಹೈಕಮಿಷನ್​ ಕಚೇರಿ ಮೇಲೆ ಖಲಿಸ್ತಾನಿ ಉಗ್ರರ ಅಟ್ಟಹಾಸ : ತ್ರಿವರ್ಣ ಧ್ವಜಕ್ಕೆ ಅವಮಾನ
ವಿದೇಶ

ಲಂಡನ್​​ನಲ್ಲಿ ಭಾರತೀಯ ಹೈಕಮಿಷನ್​ ಕಚೇರಿ ಮೇಲೆ ಖಲಿಸ್ತಾನಿ ಉಗ್ರರ ಅಟ್ಟಹಾಸ : ತ್ರಿವರ್ಣ ಧ್ವಜಕ್ಕೆ ಅವಮಾನ

by ಮಂಜುನಾಥ ಬಿ
March 20, 2023
ಮಾ.26ಕ್ಕೆ ಮೈಸೂರಿನಲ್ಲಿ ಪಂಚರತ್ನ ಸಮಾರೋಪ :  ಸಮಾವೇಶದಲ್ಲಿ 10 ಲಕ್ಷ ಜನ ಸೇರಲಿದ್ದಾರೆ ; ಹೆಚ್.ಡಿ.ಕುಮಾರಸ್ವಾಮಿ
Top Story

ಮಾ.26ಕ್ಕೆ ಮೈಸೂರಿನಲ್ಲಿ ಪಂಚರತ್ನ ಸಮಾರೋಪ : ಸಮಾವೇಶದಲ್ಲಿ 10 ಲಕ್ಷ ಜನ ಸೇರಲಿದ್ದಾರೆ ; ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
March 18, 2023
ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ : ಶೋಭಾ ಡೆವಲಪರ್ಸ್ ಕಚೇರಿಗಳ ಮೇಲೆ ರೇಡ್‌..! IT Raid At Dawn in Bangalore: Raid on the offices of Shobha Developers..!
Top Story

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ : ಶೋಭಾ ಡೆವಲಪರ್ಸ್ ಕಚೇರಿಗಳ ಮೇಲೆ ರೇಡ್‌..! IT Raid At Dawn in Bangalore: Raid on the offices of Shobha Developers..!

by ಪ್ರತಿಧ್ವನಿ
March 20, 2023
ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಕೈ ಬಿಟ್ಟಿದ್ದಕ್ಕೆ ಕಾರಣ ಮತ್ತು ಮುಂದಿನ ರಾಜಕೀಯ : Siddaramaiah
Top Story

ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಕೈ ಬಿಟ್ಟಿದ್ದಕ್ಕೆ ಕಾರಣ ಮತ್ತು ಮುಂದಿನ ರಾಜಕೀಯ : Siddaramaiah

by ಕೃಷ್ಣ ಮಣಿ
March 19, 2023
Next Post
ಹಳ್ಳಿ ಜನರಿಗಾಗಿ ಸಿಎಂ ಯಡಿಯೂರಪ್ಪ ಕೈಗೊಂಡ ಈ ನಿರ್ಧಾರ ಎಷ್ಟು ಸರಿ?

ಹಳ್ಳಿ ಜನರಿಗಾಗಿ ಸಿಎಂ ಯಡಿಯೂರಪ್ಪ ಕೈಗೊಂಡ ಈ ನಿರ್ಧಾರ ಎಷ್ಟು ಸರಿ?

ಕರೋನಾ ವೈರಸ್‌ ಎಫೆಕ್ಟ್‌ ; ಭಾರತೀಯ ಚಿತ್ರರಂಗದ ತವಕ - ತಲ್ಲಣಗಳು..!?

ಕರೋನಾ ವೈರಸ್‌ ಎಫೆಕ್ಟ್‌ ; ಭಾರತೀಯ ಚಿತ್ರರಂಗದ ತವಕ - ತಲ್ಲಣಗಳು..!?

ಕರೋನಾ ಕತ್ತಲಲ್ಲಿ ಗದ್ದುಗೆ ಏರಿದ ಶಿವರಾಜ್‌ ಸಿಂಗ್‌ ಚೌಹಾಣ್‌

ಕರೋನಾ ಕತ್ತಲಲ್ಲಿ ಗದ್ದುಗೆ ಏರಿದ ಶಿವರಾಜ್‌ ಸಿಂಗ್‌ ಚೌಹಾಣ್‌

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist