• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ವಲಸೆ ಕಾರ್ಮಿಕರಿಗೂ ಕಿಸಾನ್ ಸಮ್ಮಾನ್ ಯೋಜನೆಯಡಿ ಸಿಗಲಿದೆ 6,000 ರೂ.!

by
May 30, 2020
in ದೇಶ
0
ವಲಸೆ ಕಾರ್ಮಿಕರಿಗೂ ಕಿಸಾನ್ ಸಮ್ಮಾನ್ ಯೋಜನೆಯಡಿ ಸಿಗಲಿದೆ 6
Share on WhatsAppShare on FacebookShare on Telegram

ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ದೇಶದ ಸುಮಾರು ಹತ್ತು ಕೋಟಿ ರೈತರಿಗೆ ಸಂಕಷ್ಟದ ಕಾಲದಲ್ಲಿ ದೊಡ್ಡ ಬೆಂಬಲವಾಗಿ ನಿಂತಿದೆ. ಈ ಯೋಜನೆಯ ಎಲ್ಲಾ ಷರತ್ತುಗಳನ್ನೂ ಪೂರೈಸಿದರೆ ಇದೀಗ ವಲಸೆ ಕಾರ್ಮಿಕರೂ ಸಹ ಇದರ ಪ್ರಯೋಜನವನ್ನು ಪಡೆಯಬಹುದಾಗಿದೆ. ಆದರೆ, ಈ ಸವಲತ್ತನ್ನು ಪಡೆಯಲು ಅವರು ವಯಸ್ಕರಾಗಿರಬೇಕು ಮತ್ತು ಅವರ ಹೆಸರನ್ನು ತೆರಿಗೆ ಇಲಾಖೆ ದಾಖಲೆಗಳಲ್ಲಿ ಸೇರಿಸಬೇಕು. ಕೃಷಿ ದಾಖಲೆಯಲ್ಲಿ ಯಾರೊಬ್ಬರ ಹೆಸರನ್ನು ಸೇರಿಸಿದ್ದರೆ ಅವರು ಜಂಟಿ ಕುಟುಂಬದ ಸದಸ್ಯರಾಗಿದ್ದರೂ ಸಹ ಪ್ರತ್ಯೇಕವಾಗಿ ಈ ಯೋಜನೆಯ ಪ್ರಯೋಜನವನ್ನು ತೆಗೆದುಕೊಳ್ಳಬಹುದಾಗಿದೆ.

ADVERTISEMENT

ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ವಲಸೆ ಕಾರ್ಮಿಕರಿಗೂ ಸಹ ಹಣವನ್ನು ನೀಡಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಕಾರ್ಮಿಕರು ಅರ್ಜಿ ಸಲ್ಲಿಸಲು ಮತ್ತು ನೋಂದಣಿ ಮಾಡಿಕೊಳ್ಳಲು ಎಲ್ಲಿಗೂ ಹೋಗಬೇಕಾದ ಅವಶ್ಯಕತೆ ಇಲ್ಲ. ಯೋಜನೆಯ ವೆಬ್‌ ಸೈಟ್ ಮೂಲಕವೇ ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಆದರೆ, ಕಾರ್ಮಿಕರು ಸರ್ಕಾರದ ಈ ಎಲ್ಲಾ ಷರತ್ತುಗಳನ್ನು ಅನುಸರಿಸುತ್ತಿರಬೇಕು ಎಂದು ಕ್ಯಾಬಿನೆಟ್ ಕೃಷಿ ರಾಜ್ಯ ಸಚಿವ ಕೈಲಾಶ್ ಚೌಧರಿ ʼನ್ಯೂಸ್ 18ʼ ಜೊತೆಗಿನ ಸಂಭಾಷಣೆಯಲ್ಲಿ ತಿಳಿಸಿದ್ದಾರೆ.

ಯಾರಿಗೆಲ್ಲಾ ಪಿಎಂ ಕಿಸಾನ್ ಯೋಜನೆಯ ಲಾಭ?

ರೈತರಿಗೆ ನೇರವಾಗಿ ಸಹಾಯ ಮಾಡುವ ಈ ರೀತಿಯ ಯೋಜನೆ ಇದೇ ಮೊದಲನೆಯದು. ಗಂಡ, ಹೆಂಡತಿ ಮತ್ತು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಒಳಗೊಂಡಿರುವ ಹಾಗೂ ಅವರ ಹೊರತಾಗಿಯೂ ಕೃಷಿಗೆ ಸಂಬಂಧಿಸಿದ ದಾಖಲೆಗಳಲ್ಲಿ ಬೇರೆ ಯಾವುದೇ ವ್ಯಕ್ತಿಯ ಹೆಸರನ್ನು ಸೇರಿಸಿದ್ದರೆ ಅವರಿಗೂ ಸಹ ʼಪಿಎಂ ಕಿಸಾನ್ ಸಮ್ಮಾನ್ ಯೋಜನೆʼಯ ಮೂಲಕ 6,000 ರೂ. ವಾರ್ಷಿಕವಾಗಿ ನೀಡಲಾಗುತ್ತದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಇತರೆ ಷರತ್ತುಗಳು:

ಕೃಷಿ ಯೋಜನೆಯ ದಾಖಲೆಗಳ ಜೊತೆಗೆ ಈ ಯೋಜನೆಯ ಲಾಭ ಪಡೆಯಲು ಬಯಸುವ ವ್ಯಕ್ತಿಗೆ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಆಧಾರ್ ಸಂಖ್ಯೆ ಕಡ್ಡಾಯವಾಗಿದೆ. ಸಂಬಂಧಪಟ್ಟ ರಾಜ್ಯ ಸರ್ಕಾರ ಮೊದಲು ಈ ದಾಖಲೆಗಳನ್ನು ಪರಿಶೀಲಿಸುತ್ತದೆ. ನಂತರ ಕೇಂದ್ರ ಸರ್ಕಾರವು ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾಯಿಸುತ್ತದೆ.

ಫಲಾನುಭವಿ ರೈತರ ಸಂಖ್ಯೆ ಇನ್ನೂ 10 ಕೋಟಿಗೆ ತಲುಪಿಲ್ಲ:

ಪಿಎಂ ಕಿಸಾನ್ ಯೋಜನೆಯ ಒಟ್ಟು ಬಜೆಟ್ 75 ಸಾವಿರ ಕೋಟಿ ರೂ. ಮತ್ತು ಮೋದಿ ಸರ್ಕಾರವು ವಾರ್ಷಿಕವಾಗಿ 14.4 ಕೋಟಿ ಜನರಿಗೆ ಹಣವನ್ನು ನೀಡಲು ಯೋಜನೆ ರೂಪಿಸಿದೆ. ಆದರೆ, ಈ ಸಂಖ್ಯೆ ಈವರೆಗೆ 10 ಕೋಟಿಗಳಿಗೆ ತಲುಪಿಲ್ಲ.

ಒಟ್ಟು ಫಲಾನುಭವಿಗಳು ಕೇವಲ 9.65 ಕೋಟಿಗಳು ಮತ್ತು 17 ತಿಂಗಳ ಹಿಂದೆ ಈ ಯೋಜನೆಯನ್ನು ಪ್ರಾರಂಭಿಸಿದ್ದಾಗ ಪರಿಸ್ಥಿತಿ ಭಿನ್ನವಾಗಿತ್ತು. ಅನಿವಾರ್ಯ ಕಾರಣಗಳಿಂದಾಗಿ ಹಲವಾರು ರೈತರು ಈ ಯೋಜನೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರಲಿಲ್ಲ. ಆದರೆ, ಇದೀಗ ನಗರ ಭಾಗದಿಂದ ವಲಸೆ ಕಾರ್ಮಿಕರು ಮತ್ತೆ ತಮ್ಮ ಹಳ್ಳಿಗಳಿಗೆ ಹಿಂದಿರುಗುತ್ತಿದ್ದು ಅವರಿಗೆ ಈ ಯೋಜನೆ ಹೆಚ್ಚು ಉಪಯೋಗವಾಗಲಿದೆ ಎಂದು ಹೇಳಲಾಗುತ್ತಿದೆ.

ಹೆಚ್ಚಿನ ಸಂಖ್ಯೆಯ ವಲಸಿಗರು ಕೃಷಿ ಕೆಲಸಕ್ಕೆ ಆದ್ಯತೆ ನೀಡುತ್ತಿದ್ದಾರೆ: ರೈತ ಸಂಘಟನೆಗಳು

ವಲಸೆ ಕಾರ್ಮಿಕರಲ್ಲಿ ಹೆಚ್ಚಿನವರು ಕೃಷಿ ಸಂಬಂಧಿತ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಬಯಸುತ್ತಾರೆ, ಇಲ್ಲದಿದ್ದರೆ ನರೇಗಾ ಯೋಜನೆಯ ಅಡಿಯಲ್ಲಿ ಎಲ್ಲೋ ಒಂದು ಕಡೆ ಕೆಲಸ ಮಾಡಲು ಇಚ್ಚಿಸುತ್ತಿದ್ದಾರೆ ಎಂದು ರಾಷ್ಟ್ರೀಯ ರೈತ ಒಕ್ಕೂಟದ (ರಾಷ್ಟ್ರೀಯ ಕಿಸಾನ್ ಮಹಾಸಂಘ) ಸ್ಥಾಪಕ ಸದಸ್ಯ ವಿನೋದ್ ಆನಂದ್ ಅಭಿಪ್ರಾಯಪಟ್ಟಿದ್ದಾರೆ.

ಇಂತಹ ಪರಿಸ್ಥಿತಿಗಳಲ್ಲಿ, ಕೃಷಿ ಭೂಮಿಯನ್ನು ಹೊಂದಿರುವವರು, ವಾರ್ಷಿಕವಾಗಿ 6,000 ರೂಗಳನ್ನು ಪಡೆಯಲು ಕಿಸಾನ್ ಸಮ್ಮನ್ ನಿಧಿಗೆ ನೋಂದಾಯಿಸಿ ಕೊಳ್ಳಬಹುದು. ಈ ಮೊತ್ತವನ್ನು ಇನ್ನೂ ಸ್ವಲ್ಪ ಹೆಚ್ಚಿಸಲು ರೈತ ಸಂಘಗಳು ಮತ್ತು ಕೃಷಿ ವಿಜ್ಞಾನಿಗಳು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಹಳ್ಳಿಗಳಲ್ಲಿನ ಪರಿಸ್ಥಿತಿಗಳನ್ನು ಸುಧಾರಿಸಲು ನರೇಗಾ ಬಜೆಟ್ ಹೆಚ್ಚಳ:

2006 ರಲ್ಲಿ ನರೇಗಾ ಯೋಜನೆ ಪ್ರಾರಂಭವಾದ ನಂತರ ಈ ಯೋಜನೆಯ ಬಜೆಟ್ ಅನ್ನುಒಂದು ಲಕ್ಷ ಕೋಟಿಗೆ ಏರಿಸಲಾಗಿದೆ. ಕೊರೋನಾ ಬಿಕ್ಕಟ್ಟಿನ ದೃಷ್ಟಿಯಿಂದ ಮೋದಿ ಸರ್ಕಾರ ಈ ಬಜೆಟ್ ಅನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆ ಇದೆ. ಈ ಮೂಲಕ ಹಳ್ಳಿಗಳಲ್ಲಿ ಗರಿಷ್ಠ ಉದ್ಯೋಗಗ:ಳನ್ನು ಸೃಷ್ಟಿಸಬಹುದು.

2020-21ರಲ್ಲಿ ರೂ. 1,01,500 ಕೋಟಿ ರೂ.ಗಳನ್ನು ನರೇಗಾ ಯೋಜನೆಯ ಅಡಿಯಲ್ಲಿ ಖರ್ಚು ಮಾಡಲು ಉದ್ದೇಶಿಸಲಾಗಿದೆ. ಕಳೆದ ವರ್ಷ ಈ ಯೋಜನೆಗೆ 71,000 ಕೋಟಿ ರೂ ಖರ್ಚು ಮಾಡಲಾಗಿತ್ತು. 2020-21ನೇ ಸಾಲಿನ ಬಜೆಟ್ ಘೋಷಿಸಿದಾಗ ಸರ್ಕಾರ ನರೇಗಾ ಯೋಜನೆಗೆ 61,500 ಕೋಟಿ ರೂ ಬಜೆಟ್ ಘೋಷಿಸಿತ್ತು. ಆದರೆ, ಈಗ ಈ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Tags: Covid 19kisaan samman schemeMigrant WorkersPM Modiಕಿಸಾನ್‌ ಸಮ್ಮಾನ್‌ ಯೋಜನೆಕೋವಿಡ್-19ಪ್ರಧಾನಿ ಮೋದಿವಲಸೆ ಕಾರ್ಮಿಕರು
Previous Post

ಪ್ರಭಾವಿ ಲಾಬಿಯ ಮುಂದೆ ಮಂಡಿಯೂರಿದರೆ ಪರಿಸರ ತಜ್ಞರು?

Next Post

ಸಾಮಾಜಿಕ ತಾಣಗಳನ್ನು ಹೊಣೆ ಮಾಡುವ ಸೆಕ್ಷನ್ 230 ರ ಬದಲಾವಣೆಗೆ ಮುಂದಾದ ಡೊನಾಲ್ಡ್ ಟ್ರಂಪ್!

Related Posts

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್
ಇದೀಗ

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

by ಪ್ರತಿಧ್ವನಿ
January 18, 2026
0

ಬೆಂಗಳೂರು : ರಾಜ್ಯದ ಅಬಕಾರಿ ಇಲಾಖೆಯಲ್ಲಿ ಕೇಳಿ ಬಂದಿರುವ ಲಂಚ ಹಗರಣದಲ್ಲಿ ಬೆಂಗಳೂರು ನಗರ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು...

Read moreDetails
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Next Post
ಸಾಮಾಜಿಕ ತಾಣಗಳನ್ನು ಹೊಣೆ ಮಾಡುವ ಸೆಕ್ಷನ್ 230 ರ ಬದಲಾವಣೆಗೆ ಮುಂದಾದ ಡೊನಾಲ್ಡ್ ಟ್ರಂಪ್!

ಸಾಮಾಜಿಕ ತಾಣಗಳನ್ನು ಹೊಣೆ ಮಾಡುವ ಸೆಕ್ಷನ್ 230 ರ ಬದಲಾವಣೆಗೆ ಮುಂದಾದ ಡೊನಾಲ್ಡ್ ಟ್ರಂಪ್!

Please login to join discussion

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು
Top Story

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

by ಪ್ರತಿಧ್ವನಿ
January 19, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

January 19, 2026
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada