• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ವಲಸೆ ಕಾರ್ಮಿಕರಿಗೆ ಊಟ ನೀಡಿದ ಮೇಲೆ ಹಣದ ಅಗತ್ಯವೇನಿದೆ ಎಂದ ಸುಪ್ರೀಂಕೋರ್ಟ್!

by
April 8, 2020
in ದೇಶ
0
ವಲಸೆ ಕಾರ್ಮಿಕರಿಗೆ ಊಟ ನೀಡಿದ ಮೇಲೆ ಹಣದ ಅಗತ್ಯವೇನಿದೆ ಎಂದ ಸುಪ್ರೀಂಕೋರ್ಟ್!
Share on WhatsAppShare on FacebookShare on Telegram

ಒಂದು ಕಡೆ ಲಾಕ್ ಡೌನ್ ನಿಂದಾಗಿ ಕೂಲಿ ಇಲ್ಲದೆ ಬದುಕು ನಡೆಸುವುದು ಕಷ್ಟವೆಂದು ಬೆಂಗಳೂರು ತೊರೆದು ದೂರದ ಸಿಂಧನೂರಿಗೆ ನಡೆದುಕೊಂಡು ಹೊರಟ್ಟಿದ್ದ ಗಂಗಮ್ಮ ಅನ್ನ-ನೀರು ಕಾಣದೆ ಹಾದಿಯ ಹೆಣವಾದ ಸುದ್ದಿ ಬಂದಿದೆ. ಮತ್ತೊಂದೆಡೆ ಇಂತಹ ವಲಸಿಗ ಕೂಲಿಕಾರ್ಮಿಕರಿಗೆ ಸರ್ಕಾರ ಮಾಸಾಶನ ನೀಡಬೇಕು ಎಂಬ ಕೋರಿಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿರುವ ದೇಶದ ಸರ್ವೋಚ್ಛ ನ್ಯಾಯಾಲಯ, ಅಂಥವರಿಗೆಲ್ಲಾ ಸರ್ಕಾರ ಊಟೋಪಚಾರದ ವ್ಯವಸ್ಥೆ ಮಾಡಿರುವಾಗ ಪ್ರತ್ಯೇಕವಾಗಿ ಹಣಕಾಸಿನ ನೆರವಿನ ಅಗತ್ಯವಿಲ್ಲ ಎಂದಿದೆ!

ADVERTISEMENT

ಲಾಕ್ ಡೌನ್ ಹಿನ್ನೆಲೆಯಲ್ಲಿ ಕೆಲಸ ಕಳೆದುಕೊಂಡು ಬೀದಿಪಾಲಾಗಿರುವ ದಿನಗೂಲಿ ವಲಸೆ ಕಾರ್ಮಿಕರಿಗೆ ಕೂಡಲೇ ದಿನಗೂಲಿ ಭತ್ಯೆ ನೀಡಬೇಕು ಎಂದು ಕೋರಿ ಸಾಮಾಜಿಕ ಹೋರಾಟಗಾರ ಹರ್ಷ ಮಂದರ್ ಹಾಗೂ ಅಂಜಲಿ ಭಾರದ್ವಾಜ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್ಎ ಬೊಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರ ಪೀಠ, ನಿರಾಶ್ರಿತರ ಶಿಬಿರಗಳಲ್ಲಿ ವಲಸೆ ಕಾರ್ಮಿಕರು ಊಟೋಪಚಾರ ಪಡೆಯುತ್ತಿರುವುದರಿಂದ ಅವರಿಗೆ ದಿನಗೂಲಿಯಾಗಿ ಹಣವನ್ನು ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.

ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್, ದೇಶಾದ್ಯಂತ ಸುಮಾರು ನಾಲ್ಕು ಲಕ್ಷ ವಲಸೆ ಕಾರ್ಮಿಕರು ನಿರಾಶ್ರಿತರ ಶಿಬಿರಗಳಲ್ಲಿದ್ದಾರೆ. ಇದು ಸಾಮಾಜಿಕ ಅಂತರದ ಕಟು ವ್ಯಂಗ್ಯ. ತಮ್ಮ ಕಕ್ಷಿದಾರರ ಸಮೀಕ್ಷೆಯ ಪ್ರಕಾರ ಶೇ.40ರಷ್ಟು ವಲಸೆ ಕಾರ್ಮಿಕರು ಈಗಲೂ ನಗರಗಳ ತಮ್ಮ ಮನೆಗಳಲ್ಲೇ ವಾಸವಿದ್ದು, ವಾಪಸ್ ತಮ್ಮ ಊರುಗಳಿಗೆ ಮರುವಲಸೆ ಹೋಗಿಲ್ಲ. ಅಂಥವರಿಗೆ ಒಂದು ಹೊತ್ತಿನ ಊಟಕ್ಕೂ ಈಗ ಕೈಯಲ್ಲಿ ಕಾಸಿಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದು ನ್ಯಾಯಪೀಠದ ಮನವರಿಕೆಗೆ ಯತ್ನಿಸಿದರು.

ಆದರೆ, ವಲಸೆ ಕಾರ್ಮಿಕರಿಗೆ ನಿರಾಶ್ರಿತರ ಶಿಬಿರಗಳಲ್ಲಿ ಊಟೋಪಚಾರದ ವ್ಯವಸ್ಥೆ ಮಾಡಿರುವುದರಿಂದ ಅವರಿಗೆ ಪ್ರತ್ಯೇಕವಾಗಿ ಹಣ ನೀಡುವ ಅಗತ್ಯವಿಲ್ಲ ಎಂಬ ಕೇಂದ್ರ ಸರ್ಕಾರದ ಪ್ರಮಾಣಪತ್ರವನ್ನು ಉಲ್ಲೇಖಿಸಿ, ಅವರಿಗೆ ಶಿಬಿರದಲ್ಲಿ ಆಹಾರ ಬೇಕಿದೆ ಅಷ್ಟೇ ಅಲ್ಲವೇ ಎಂದು ಸಿಜೆಐ ಪ್ರಶ್ನಿಸಿದರು. ಆ ವೇಳೆ, ಭೂಷಣ್, ಅವರಿಗೆ ಆಹಾರವಷ್ಟೇ ಅಲ್ಲದೆ, ನಡುವೆ ಸಿಕ್ಕಿಹಾಕಿಕೊಂಡಿರುವ ತಮ್ಮ ಮನೆಮಂದಿಯನ್ನು ಊರಿಗೆ ತಲುಪಿಸಲು ಹಣದ ಅಗತ್ಯವೂ ಇದೆ ಎಂದು ಕೋರಿದರು.

ಈ ನಡುವೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸರ್ಕಾರ ವಲಸೆ ಕಾರ್ಮಿಕರ ಸಮಸ್ಯೆಗಳನ್ನು ಕೇಳಲು ಪ್ರತ್ಯೇಕ ಕಾಲ್ ಸೆಂಟರ್‌ ಗಳನ್ನೂ ಸ್ಥಾಪಿಸಿದೆ ಎಂಬ ವಿವರವನ್ನೂ ಪೀಠದ ಮುಂದೆ ಮಂಡಿಸಿದರು.

ಆದರೆ, ಭೂಷಣ್ ಅವರು ಶಿಬಿರದಲ್ಲಿ ಕಾರ್ಮಿಕರಿಗೆ ನೀಡುತ್ತಿರುವ ಆಹಾರದ ಗುಣಮಟ್ಟ ಕೂಡ ಸರಿಯಿಲ್ಲ ಎಂದಾಗ, ಆಹಾರದ ಗುಣಮಟ್ಟದ ವಿಷಯದಲ್ಲಿ ನಾವು ತಜ್ಞರಲ್ಲ. ವಾಸ್ತವವಾಗಿ ಅಲ್ಲಿ ಏನು ನಡೆಯುತ್ತಿದೆ ಎಂಬುದನ್ನು ತಿಳಿಯದೇ ಆ ಬಗ್ಗೆ ಮಧ್ಯಪ್ರವೇಶಿಸಲು ಬಯಸುವುದಿಲ್ಲ. ಹೆಚ್ಚೆಂದರೆ ಅಲ್ಲಿನ ಜನರ ಸಮಸ್ಯೆ ಆಲಿಸಲು ಪ್ರತ್ಯೇಕ ಹೆಲ್ಪ್ ಲೈನ್ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಸೂಚಿಸುತ್ತೇವೆ ಎಂದು ಸಿಜೆಐ ಪ್ರತಿಕ್ರಿಯಿಸಿದರು.

ಆ ಹಂತದಲ್ಲಿ ಮಧ್ಯಪ್ರವೇಶಿಸಿದ ಸಾಲಿಸಿಟರ್ ಜನರಲ್, ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕೇವಲ ಊಹಾಪೋಹದ ಮೇಲೆ ನಿಂತಿದೆ ವಿನಃ ಯಾವುದೇ ವಾಸ್ತವಾಂಶಗಳಿಲ್ಲ ಎಂದು ಪೀಠದ ಗಮನ ಸೆಳೆದರು. ಆ ಬಳಿಕ ಕೇಂದ್ರ ಸರ್ಕಾರ ಈ ವಿಷಯದಲ್ಲಿ ಸಲ್ಲಿಸಿರುವ ಪ್ರಮಾಣಪತ್ರವನ್ನು ಓದಲು ವಕೀಲ ಭೂಷಣ್ ಅವರಿಗೆ ಕಾಲಾವಕಾಶ ನೀಡುವುದಾಗಿ ಹೇಳಿದ ಪೀಠ, ಏಪ್ರಿಲ್ 13ಕ್ಕೆ ವಿಚಾರಣೆಯನ್ನು ಮುಂದೂಡಿತು!

Tags: Central GovtCovid 19prashanth bhushansupreme courtಕೇಂದ್ರ ಸರಕಾರಕೋವಿಡ್-19ಪ್ರಶಾಂತ್ ಭೂಷಣ್ಸುಪ್ರೀಂ ಕೋರ್ಟ್
Previous Post

ಕೇರಳ-ಕರ್ನಾಟಕ ಗಡಿ ನಿರ್ಬಂಧ ಮುಗಿದ ಅಧ್ಯಾಯ; ಕರ್ನಾಟಕದಿಂದ ʼಷರತ್ತುಗಳು ಅನ್ವಯʼ!

Next Post

ಕೋವಿಡ್‌ – 19: ಸರ್ಕಾರದ ಅಧಿಕೃತ ಮಾಧ್ಯಮ ಪ್ರಕಟಣೆ – 08/04/2020

Related Posts

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
0

ನವದೆಹಲಿ: ಇಂದು ಕೇಂದ್ರ ಸರ್ಕಾರ 2026ರ ಬಜೆಟ್‌ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ತಮ್ಮ ದಾಖಲೆಯ 9ನೇ ಬಜೆಟ್‌ನಲ್ಲಿ ಹಲವು ಮಹತ್ವದ...

Read moreDetails
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Next Post
ಕೋವಿಡ್‌ - 19: ಸರ್ಕಾರದ ಅಧಿಕೃತ ಮಾಧ್ಯಮ ಪ್ರಕಟಣೆ - 08/04/2020

ಕೋವಿಡ್‌ - 19: ಸರ್ಕಾರದ ಅಧಿಕೃತ ಮಾಧ್ಯಮ ಪ್ರಕಟಣೆ - 08/04/2020

Please login to join discussion

Recent News

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada