• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ವಿಕಾಸ್‌ ದುಭೆ ಬಂಧನದ ಸುತ್ತ ಅನುಮಾನಗಳೇಕೆ?

by
July 9, 2020
in ದೇಶ
0
ವಿಕಾಸ್‌ ದುಭೆ ಬಂಧನದ ಸುತ್ತ ಅನುಮಾನಗಳೇಕೆ?
Share on WhatsAppShare on FacebookShare on Telegram

ಬಂಧಿಸಲು ತೆರಳಿದ ಎಂಟು ಪೋಲಿಸರನ್ನು ಹತ್ಯೆಗೈದು ತಲೆ ಮರೆಸಿಕೊಂಡಿದ್ದ ಉತ್ತರ ಪ್ರದೇಶದ ಕುಖ್ಯಾತ ಗ್ಯಾಂಗ್‌ಸ್ಟರ್‌ ವಿಕಾಸ್‌ ಧುಬೆಯನ್ನು ಪೋಲಿಸರು ಬಂಧಿಸಿದ್ದಾರೆ. ಮಧ್ಯಪ್ರದೇಶ, ಉಜ್ಜಯಿನಿಯ ಮಹಾಕಾಳ್‌ ದೇವಸ್ಥಾನದಲ್ಲಿದ್ದ ವಿಕಾಸ್‌ ದುಬೆಯನ್ನು ಅಲ್ಲಿನ ಭದ್ರತಾ ಸಿಬ್ಬಂಧಿ ಗುರುತಿಸಿ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಭಧ್ರತಾ ಸಿಬ್ಬಂದಿ ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಬಂದ ಪೋಲಿಸರು ಸಿನಿಮೀಯ ರೀತಿಯಲ್ಲಿ ಕ್ರಿಮಿನಲ್‌ನ್ನು ಬಂಧಿಸಿದ್ದಾರೆ.

ಅದಕ್ಕೂ ಮೊದಲು ಪೂಜೆಗೆ ತೆರಳುವ ಸಿದ್ಧತೆಯಲ್ಲಿದ್ದ ದುಬೆ, ಸ್ಥಳೀಯ ಅಂಗಡಿಯೊಂದರಿಂದ ಪೂಜಾ ಸಾಮಾಗ್ರಿಗಳನ್ನು ಖರೀದಿಸಿದ್ದಾನೆ, ಈತನ ಕುರಿತು ಅನುಮಾನ ಬಂದು ಅಂಗಡಿಯಾತ ದೇವಸ್ಥಾನದ ಭದ್ರತಾ ಸಿಬ್ಬಂಧಿಗೆ ಈತನ ಬಗ್ಗೆ ಸುಳಿವು ನೀಡಿದ್ದಾರೆ. ಸದ್ಯ ಮಧ್ಯ ಪ್ರದೇಶದ ಕಸ್ಟಡಿಯಲ್ಲಿರುವ ದುಬೆಯನ್ನು ಪೋಲಿಸರು ಉತ್ತರ ಪ್ರದೇಶದ ಪೋಲಿಸರಿಗೆ ಹಸ್ತಾಂತರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಂಧಿತ ವಿಕಾಸ್‌ ದುಭೆಯ ಮೇಲೆ ಉತ್ತರ ಪ್ರದೇಶ, ಹರ್ಯಾಣ, ದೆಹಲಿ ಹಾಗೂ ಮಧ್ಯ ಪ್ರದೇಶದ ಪೋಲಿಸ್‌ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಹಲ್ಲೆ, ದರೋಡೆ ಸೇರಿದಂತೆ ಸುಮಾರು 60 ಕ್ಕಿಂತಲೂ ಹೆಚ್ಚು ಪ್ರಕರಣ ದಾಖಲಾಗಿವೆ. ಜುಲೈ 3 ರಂದು ವಿಕಾಸ್‌ ದುಬೆಯನ್ನು ಬಂಧಿಸಲು ತೆರಳಿದ್ದ ಉತ್ತರ ಪ್ರದೇಶದ 8 ಪೋಲಿಸರನ್ನು ದುಬೆ ಹಾಗೂ ಸಂಗಡಿಗರು ಸೇರಿ ಹತ್ಯೆಗೈದಿದ್ದರು.

#WATCH Madhya Pradesh: After arrest in Ujjain, Vikas Dubey confesses, “Main Vikas Dubey hoon, Kanpur wala.” #KanpurEncounter pic.twitter.com/bIPaqy2r9d

— ANI (@ANI) July 9, 2020


ಅದಾಗ್ಯೂ, ವಿಕಾಸ್‌ ದುಬೆ ಬಂಧನದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಲವು ಅನುಮಾನಗಳು ಎದ್ದಿವೆ. ಹರ್ಯಾಣದ ಫರೀದಾಬಾದ್‌ನಲ್ಲಿರುವ ಒಂದು ಹೋಟೆಲಿನಲ್ಲಿ ವಿಕಾಸ್‌ ಇರುವುದು ಜನರ ಕಣ್ಣಿಗೆ ಬಿದ್ದಿತ್ತು, ಆದರೂ ಆತನನ್ನು ಮಧ್ಯ ಪ್ರದೇಶದ ಉಜ್ಜಯಿನಿಯಲ್ಲಿ ಹೇಗೆ ಬಂಧಿಸಿದ್ದಾರೆಂದು ಪ್ರಶ್ನೆಗಳೆದ್ದಿವೆ. ಇದರ ಬೆನ್ನಿಗೆ “ಇಷ್ಟು ದೊಡ್ಡ ಘಟನೆಯಾದ ಬಳಿಕವೂ ಆತನನ್ನು ಬಂಧಿಸಲು ನಮಗೆ ಸಾಧ್ಯವಾಗಲಿಲ್ಲ. ಆತ ಪ್ರಯಾಣಿಸುತ್ತಲೇ ಇದ್ದ. ಈ ಕುರಿತು ತನಿಖೆಯಾಗಬೇಕು” ಎಂದು ಉತ್ತರ ಪ್ರದೇಶದ IPS ಅಧಿಕಾರಿ ಅಮಿತಾಭ್‌ ಠಾಕೂರ್‌ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

हम विकास दूबे को गिरफ्तार नहीं कर पाए और वह उज्जैन में सरेंडर हो गया. इतनी बड़ी घटना के बाद भी हम उसे अरेस्ट नहीं कर सके…

Posted by Amitabh Thakur on Wednesday, July 8, 2020

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್‌ ಕೂಡ ಈ ಕುರಿತು ಪ್ರಶ್ನೆಗಳನ್ನೆತ್ತಿದ್ದು, ಕಾನ್ಪುರ್ ಹತ್ಯಾಕಾಂಡದ ಮುಖ್ಯ ಆರೋಪಿ ಈಗ ಪೊಲೀಸ್ ವಶದಲ್ಲಿದ್ದಾನೆ ಎಂದು ವರದಿಯಾಗಿದೆ. ನಿಜವಾಗಿದ್ದರೆ, ಇದು ಶರಣಾಗತಿ ಅಥವಾ ಬಂಧನವೇ ಎಂದು ಸರ್ಕಾರ ಸ್ಪಷ್ಟಪಡಿಸಬೇಕು. ಅಲ್ಲದೆ ಅವರ ಕರೆ ದಾಖಲೆಗಳನ್ನು ಸಾರ್ವಜನಿಕಗೊಳಿಸಬೇಕು ಆದ್ದರಿಂದ ನೆಕ್ಸಸ್ ಅನ್ನು ಬಹಿರಂಗಪಡಿಸಬಹುದು” ಎಂದು ಯುಪಿ ಮಾಜಿ ಮುಖ್ಯಮಂತ್ರಿ‌ ಅಖಿಲೇಶ್‌ ಯಾದವ್ ಟ್ವೀಟ್ ಮಾಡಿದ್ದಾರೆ.

ख़बर आ रही है कि ‘कानपुर-काण्ड’ का मुख्य अपराधी पुलिस की हिरासत में है. अगर ये सच है तो सरकार साफ़ करे कि ये आत्मसमर्पण है या गिरफ़्तारी. साथ ही उसके मोबाइल की CDR सार्वजनिक करे जिससे सच्ची मिलीभगत का भंडाफोड़ हो सके.

— Akhilesh Yadav (@yadavakhilesh) July 9, 2020


ADVERTISEMENT
Previous Post

ಸರ್ಕಾರದಿಂದ ಯಾವುದೇ ತಪ್ಪು ನಡೆದಿಲ್ಲ, ಎಲ್ಲಾ ವ್ಯವಸ್ಥೆ ಮಾಡುತ್ತೇವೆ – ಡಿಸಿಎಂ

Next Post

ಕಾರ್ಯಕರ್ತರ ಕೊರಳಿಗೆ ಟ್ರ್ಯಾಕರ್ ಘಂಟೆ ಕಟ್ಟಿದ ಕೆಪಿಸಿಸಿ ನೂತನ ಸಾರಥಿ!

Related Posts

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
0

ಇನ್ಮುಂದೆ ಮತದಾರರ ಪಟ್ಟಿ (Voters list) ಪರಿಷ್ಕರಣೆಗಾಗಿ ಮತದಾರರ ಆಧಾರ್ ಕಾರ್ಡ್ (Adhar card), ಮತದಾರರ ಗುರುತಿನ (Voter I’d ) ಚೀಟಿ ಮತ್ತು ಪಡಿತರ ಚೀಟಿಗಳನ್ನು...

Read moreDetails
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025
Next Post
ಕಾರ್ಯಕರ್ತರ ಕೊರಳಿಗೆ ಟ್ರ್ಯಾಕರ್ ಘಂಟೆ ಕಟ್ಟಿದ ಕೆಪಿಸಿಸಿ ನೂತನ ಸಾರಥಿ!

ಕಾರ್ಯಕರ್ತರ ಕೊರಳಿಗೆ ಟ್ರ್ಯಾಕರ್ ಘಂಟೆ ಕಟ್ಟಿದ ಕೆಪಿಸಿಸಿ ನೂತನ ಸಾರಥಿ!

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada