• Home
  • About Us
  • ಕರ್ನಾಟಕ
Thursday, January 8, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸ್ಟೂಡೆಂಟ್‌ ಕಾರ್ನರ್

ವಿವಿಧತೆಯಿಲ್ಲದ ಏಕತೆ ನಮಗೇತಕೆ?

by
February 15, 2020
in ಸ್ಟೂಡೆಂಟ್‌ ಕಾರ್ನರ್
0
ವಿವಿಧತೆಯಿಲ್ಲದ ಏಕತೆ ನಮಗೇತಕೆ?
Share on WhatsAppShare on FacebookShare on Telegram

ಭಾರತ ಹಲವು ಸಂಸ್ಕೃತಿ, ಪರಂಪರೆ, ಜಾತಿ, ಧರ್ಮ, ಭಾಷೆಗಳ ಗೂಡು. “ವಿವಿಧತೆಯಲ್ಲಿ ಏಕತೆ” ಎಂಬ ಸೂತ್ರವೇ ಭಾರತವನ್ನು ಬೇರೆಲ್ಲಾ ರಾಷ್ಟ್ರಗಳಿಗಿಂತ ವಿಭಿನ್ನವಾಗಿಸಿರುವುದು. ಭಾರತೀಯತೆಯ ಗುಟ್ಟು ಅಡಗಿರುವುದೇ ಈ ವಿವಿಧತೆಯನ್ನು ಗೌರವಿಸುವುದರಲ್ಲಿ ಹಾಗೂ ಉಳಿಸಿಕೊಳ್ಳುವುದರಲ್ಲಿ. ಆದರೆ, ಪ್ರಸ್ತುತ ನಮ್ಮ ಪೀಳಿಗೆಯ ಮನಸ್ಥಿತಿ ಸಂಕುಚಿತಗೊಳ್ಳುತ್ತಿರುವ ಪರಿಣಾಮವಾಗಿ ವೈವಿಧ್ಯತೆಯನ್ನೇ ಅಲ್ಲಗಳೆಯುವ ಮಟ್ಟಕ್ಕೆ ಬಂದು ತಲುಪಿದ್ದೇವೆ. ಜಾತಿ, ಧರ್ಮ, ಭಾಷೆ ಹೀಗೆ ಪ್ರತಿಯೊಂದು ವಿಷಯದಲ್ಲೂ ಮೂಗು ತೂರಿಸುತ್ತಿರುವ ನಾವು ಭಾರತದ ನೈಜ ಸೊಗಡನ್ನೇ ಮರೆಮಾಚುವ ಭ್ರಮೆಯಲ್ಲಿದ್ದೇವೆ. ಮೇಲ್ನೋಟಕ್ಕೆ ಈ ವಿಚಾರ, ವಿವಾದಗಳೆಲ್ಲಾ ಭಾರತದಂತಹ ದೊಡ್ಡ ರಾಷ್ಟ್ರದಲ್ಲಿ ಸಹಜ ಎನ್ನಿಸಿದರೂ, ಅದೊರಳಗಿನ ಸೂಕ್ಷ್ಮತೆಯನ್ನು ಅರಿತು ನಿಭಾಯಿಸದಿದ್ದಲ್ಲಿ ಇವುಗಳೇ ಮುಳುವಾಗಿ ಪರಿಣಮಿಸಿದರೂ ಅಚ್ಚರಿಯಿಲ್ಲ.

ADVERTISEMENT

ಭಾರತದಲ್ಲಿ ಸುಲಲಿತ ಆಡಳಿತ ಹಾಗೂ ಜನಸಾಮಾನ್ಯರ ಅನುಕೂಲವನ್ನು ದೃಷ್ಟಿಯಲ್ಲಿರಿಸಿಕೊಂಡು ಭಾಷಾವಾರು ಪ್ರಾಂತ್ಯಗಳ ವಿಂಗಡಣೆಯಾದ ಬಳಿಕ ಎಲ್ಲಾ ರಾಜ್ಯಗಳಲ್ಲೂ ಅವರದೇ ಆದ ಭಾಷೆಯನ್ನು ರಾಜ್ಯಭಾಷೆಯನ್ನಾಗಿ ಬಳಸಲಾಗುತ್ತಿದೆ. ಆಯಾ ರಾಜ್ಯಗಳ ಜನರಿಗೆ ಬೇರೆಲ್ಲಾ ಭಾಷೆಗಳಿಗಿಂತ ನಮ್ಮ ಭಾಷೆಯೇ ಹೆಚ್ಚು ಎಂಬ ಶ್ರೇಷ್ಠತೆಯ ವ್ಯಸನ ಕೂಡ ಸಹಜವಾಗಿಯೇ ಇದೆ. ಅದೇ ಕಾರಣಕ್ಕಾಗಿ ನಮ್ಮಲ್ಲಿ ಭಾಷೆಯ ವಿಚಾರಕ್ಕಾಗಿಯೇ ಹಲವು ಆಂದೋಲನಗಳಾಗಿವೆ ಕೂಡ. ಇತ್ತೀಚಿನ ವರ್ಷಗಳಲ್ಲಿ ಭಾಷೆಯ ಕುರಿತಾಗಿ ಅತಿ ಹೆಚ್ಚು ಚಾಲ್ತಿಯಲ್ಲಿರುವುದು “ಹಿಂದಿ ಹೇರಿಕೆ” ಕೂಗು. ನಾವುಗಳು ಶಾಲೆಯಲ್ಲಿರುವಾಗ ಕಲಿತಿದ್ದ “ಹಿಂದಿ ನಮ್ಮ ರಾಷ್ಟ್ರಭಾಷೆ” ಎಂಬ ವಿಚಾರವೇ ಈಗ ಅತಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಉತ್ತರ ಭಾರತದಲ್ಲಿ ಹಿಂದಿ ಪ್ರಧಾನ ಭಾಷೆಯಾಗಿ ಕಂಡುಬರುವುದರಿAದ ಅಲ್ಲಿಯ ಬಹುತೇಕ ಭಾಗದಲ್ಲಿ ಬಳಕೆಯಲ್ಲಿದೆ. ಆದರೆ, ದಕ್ಷಿಣ ಭಾಗದಲ್ಲಿ ಹಿಂದಿ ಇಂದಿಗೂ ಪರಭಾಷೆಯಂತೆಯೇ ಇದೆ.

ಅದೇ ಕಾರಣಕ್ಕಾಗಿ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಒಪ್ಪಿಕೊಳ್ಳುವುದಕ್ಕೆ ಹಾಗೂ ಹಿಂದಿ ಭಾಷೆಯನ್ನು ನಾಮಫಲಕಗಳಲ್ಲಿ, ವ್ಯವಹಾರದ ಸಂದರ್ಭಗಳಲ್ಲಿ ತೂರಿಸುವುದಕ್ಕೆ ಬಲವಾದ ವಿರೋಧ ವ್ಯಕ್ತವಾಗುತ್ತಿರುವುದು. ಅಂದಹಾಗೆ ಈ ವಿವಾದ ಒಂದೆರೆಡು ದಿನಗಳದ್ದೇನಲ್ಲ, ಭಾಷೆಯ ವಿಚಾರಕ್ಕಾಗಿ ದೇಶದಲ್ಲಿ ಆಗಾಗ ಒಂದಷ್ಟು ವಿವಾದ, ಚರ್ಚೆ, ಕೂಗು ಕೇಳಿಸುತ್ತಲೇ ಇರುತ್ತದೆ. ಕೆಲವು ತಿಂಗಳ ಹಿಂದೆಯಷ್ಟೇ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನಾಧರಿಸಿಕೊಂಡು “ಒಂದು ರಾಷ್ಟ್ರ, ಒಂದು ಭಾಷೆ” ಪರಿಕಲ್ಪನೆಯ ಕುರಿತು ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈಗ ಕರ್ನಾಟಕ – ಬರೋಡ ರಣಜಿ ಪಂದ್ಯದ ಎರಡನೇ ದಿನದಾಟದ ಸಂದರ್ಭದಲ್ಲಿ ವೀಕ್ಷಕ ವಿವರಣೆಗಾರ ಸುಶೀಲ್ ದೋಶಿ “ಪ್ರತಿಯೊಬ್ಬ ಭಾರತೀಯನೂ ಹಿಂದಿ ಭಾಷೆ ಕಲಿಯಬೇಕು. ಅದು ನಮ್ಮ ಮಾತೃಭಾಷೆ, ಹಿಂದಿಗಿAತ ಉತ್ತಮ ಭಾಷೆ ಮತ್ತೊಂದಿಲ್ಲ” ಎಂದಿರುವುದು ಹಿಂದಿ ಹೇರಿಕೆ ವಿಚಾರವನ್ನು ಮತ್ತೆ ಮುನ್ನೆಲೆಗೆ ತಂದಿಟ್ಟಿದೆ.

ಇಂತಹ ಹಲವು ಹೇಳಿಕೆಗಳು ಈ ಹಿಂದೆ ಕೂಡ ವ್ಯಕ್ತವಾಗಿವೆ. ಅವುಗಳನ್ನೆಲ್ಲಾ ಒಟ್ಟಾಗಿ ನೋಡಿದಾಗ ಕಾಣುವ ಸಾಮಾನ್ಯ ಅಂಶವೆAದರೆ ಹಿಂದಿ ಭಾರತದಲ್ಲಿ ಅತ್ಯವಶ್ಯಕ ಎಂದು ನಂಬಿಸುವ ಪ್ರಯತ್ನ. ಪ್ರಸ್ತುತ ನಮ್ಮ ಪ್ರಾದೇಶಿಕ ಭಾಷೆಗಳನ್ನು ಕಲಿಸುವುದು ಹಾಗೂ ಉಳಿಸುವುದೇ ಸವಾಲು ಎನ್ನಿಸುತ್ತಿರುವ ಸಂದರ್ಭದಲ್ಲಿ ಹಿಂದಿ ಭಾಷೆಗೆ ಪ್ರಾಶಸ್ತ್ಯ ನೀಡುವ ಪ್ರಯತ್ನ ಒಳ್ಳೆಯದೂ ಅಲ್ಲ. ನಾವಿಲ್ಲಿ ಬಹುಮುಖ್ಯವಾಗಿ ಗಮನಿಸಬೇಕಾದದ್ದೇನೆಂದರೆ ವಿರೋಧ ಇರುವುದು ಬೇರೆ ಭಾಷೆಗಳನ್ನು ಕಲಿಯುವುದಕ್ಕಲ್ಲ ಪರಭಾಷೆಗಳನ್ನು ನಮ್ಮ ನೆಲದಲ್ಲಿ ತಂದು ಬೇರೂರುವಂತೆ ಮಾಡುವ ಯತ್ನಕ್ಕೆ. ಸಾಧಾರಣವಾಗಿ ಶಾಲೆಗಳಲ್ಲಿ ಹಿಂದಿಯನ್ನು ತೃತೀಯ ಭಾಷೆಯನ್ನಾಗಿ ಕಲಿಸಲಾಗುತ್ತದೆ. ಹಿಂದಿಯನ್ನಾಗಲೀ, ಇನ್ನಿತರ ಯಾವುದೇ ಭಾಷೆಗಳಾಗಳನ್ನಾಗಲೀ ನಮ್ಮ ಸ್ವಂತ ಇಚ್ಛೆಯಿಂದ ಕಲಿತರೆ ಖಂಡಿತವಾಗಿಯೂ ತೊಂದರೆ ಇಲ್ಲ. ಆದರೆ, ಅದೇ ಭಾಷೆಗಳನ್ನು ನೀವು ಕಲಿಯಲೇಬೇಕು ಎಂದು ಒತ್ತಾಯಿಸುವುದರಲ್ಲಿ, ಅನಾವಶ್ಯಕವಾಗಿ ತಂದು ನಮ್ಮ ಮೇಲೆ ಹೇರುವುದರಲ್ಲಿ ಅಪಾಯವಿದೆ.

ಒಂದು ವೇಳೆ, ಇಡೀ ಭಾರತಕ್ಕೆ ಹಿಂದಿ ಅಗತ್ಯ ಎಂಬ ನಿಯಮ ರೂಪಿತವಾಯಿತು ಎಂದಿಟ್ಟಕೊಳ್ಳಿ, ಆಗ ಅಳಿಯುವುದು ಪ್ರಾದೇಶಿಕ ಭಾಷೆಗಳಷ್ಟೇ ಅಲ್ಲ, ಅಲ್ಲಿಯ ಸಂಸ್ಕೃತಿ, ಆಚರಣೆ, ವೈವಿಧ್ಯತೆ ಎಲ್ಲವೂ ಅಲ್ಲಿಯ ಭಾಷೆಯೊಟ್ಟಿಗೇ ಮಣ್ಣಾಗುತ್ತವೆ. ವಿವಿಧತೆಯನ್ನು ಅಳಿಸುವ ಪ್ರಯತ್ನ ಯಾವ ವಲಯದಲ್ಲೂ ಆಗದೇ ಇರಲಿ. ವಿವಿಧತೆಯಿಲ್ಲದ ಏಕತೆ ನಮಗೇತಕೆ?

Tags: ಏಕತೆವಿವಿಧತೆವಿವಿಧತೆಯಿಲ್ಲದ ಏಕತೆ ನಮಗೇತಕೆ?
Previous Post

ಬಿಜೆಪಿಯದ್ದು ಸೋಲಿನಲ್ಲೂ ಸಾರ್ಥಕ ಭಾವ… ಕಿಚ್ಚಿನಲ್ಲೂ ಲಾಭದ ಲೆಕ್ಕ?!   

Next Post

ಗುಜರಾತ್ ಗಲಭೆಯಲ್ಲಿ ಮೋದಿ ಆರೋಪ ಮುಕ್ತಗೊಳಿಸಿದ್ದ ಐಪಿಎಸ್ ಅಧಿಕಾರಿ ರಾಕೇಶ್ ಅಸ್ತಾನಾಗೆ ಕ್ಲೀನ್ ಚಿಟ್!

Related Posts

Top Story

ಸರಕಾರಿ ಶಾಲೆಗಳಿಗೆ ಟೆಲಿಸ್ಕೋಪ್‌ ವಿತರಣೆ ಯೋಜನೆ ವಿಸ್ತರಿಸಲು ಚಿಂತನೆ: ಸಚಿವ ಎನ್.ಎಸ್. ಭೋಸರಾಜು

by ಪ್ರತಿಧ್ವನಿ
December 4, 2025
0

- ಕ್ರೈಸ್‌ ಶಾಲಾ ಶಿಕ್ಷಕರುಗಳಿಗೆ ಟೆಲಿಸ್ಕೋಪ್‌ ನಿರ್ವಹಣೆಯ ತರಬೇತಿ ಉದ್ಥಾಟನೆ - 2026 ನೇ ಸಾಲಿನ ಆಸ್ಟ್ರೋನಾಮಿಕಲ್‌ ಕ್ಯಾಲೆಂಡರ್‌ ಅನಾವರಣ ಕರ್ನಾಟಕದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು...

Read moreDetails

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

November 24, 2025

Lakshmi Hebbalkar: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 20, 2025

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

CM Siddaramaiah: ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ..?

October 14, 2025
Next Post
ಗುಜರಾತ್ ಗಲಭೆಯಲ್ಲಿ ಮೋದಿ ಆರೋಪ ಮುಕ್ತಗೊಳಿಸಿದ್ದ ಐಪಿಎಸ್ ಅಧಿಕಾರಿ ರಾಕೇಶ್ ಅಸ್ತಾನಾಗೆ ಕ್ಲೀನ್ ಚಿಟ್!

ಗುಜರಾತ್ ಗಲಭೆಯಲ್ಲಿ ಮೋದಿ ಆರೋಪ ಮುಕ್ತಗೊಳಿಸಿದ್ದ ಐಪಿಎಸ್ ಅಧಿಕಾರಿ ರಾಕೇಶ್ ಅಸ್ತಾನಾಗೆ ಕ್ಲೀನ್ ಚಿಟ್!

Please login to join discussion

Recent News

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!
Top Story

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

by ಪ್ರತಿಧ್ವನಿ
January 8, 2026
ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ
Top Story

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

by ಪ್ರತಿಧ್ವನಿ
January 8, 2026
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌
Top Story

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

by ಪ್ರತಿಧ್ವನಿ
January 8, 2026
ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ  ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..
Top Story

ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

by ಪ್ರತಿಧ್ವನಿ
January 8, 2026
ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ
Top Story

ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

January 8, 2026
ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada