Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ವಿಶ್ವದ ಗಮನ ಸೆಳೆದ ಕಂಬಳ ಕ್ರೀಡೆ ಮತ್ತು ಕ್ರೀಡಾ ಪ್ರತಿಭಾನ್ವೇಷಣೆ

ವಿಶ್ವದ ಗಮನ ಸೆಳೆದ ಕಂಬಳ ಕ್ರೀಡೆ ಮತ್ತು ಕ್ರೀಡಾ ಪ್ರತಿಭಾನ್ವೇಷಣೆ
ವಿಶ್ವದ ಗಮನ ಸೆಳೆದ ಕಂಬಳ ಕ್ರೀಡೆ ಮತ್ತು ಕ್ರೀಡಾ ಪ್ರತಿಭಾನ್ವೇಷಣೆ

February 18, 2020
Share on FacebookShare on Twitter

ಕೇಂದ್ರ ಸಚಿವರ ಬಕೆಟ್ ಸಂಸ್ಕೃತಿ ಕರ್ನಾಟಕ ಕರಾವಳಿ ಜಾನಪದ ಕ್ರೀಡೆ ಕಂಬಳವನ್ನು ಮತ್ತೊಮ್ಮೆ ವಿಶ್ವಕ್ಕೆ ಪರಿಚಯಿಸಿದೆ. ವಿಶ್ವದ ಅತೀ ವೇಗದ ಓಟಗಾರ ಉಸೇನ್ ಬೋಲ್ಟ್ ಅವರ ದಾಖಲೆ ಹಿಂದಿಕ್ಕುವ ಮೂಲಕ ಜಾನಪದ ಕ್ರೀಡೆ ಕಂಬಳ ಪಟು ಶ್ರೀನಿವಾಸ ಗೌಡ ಹೊಸ ಸಾಧನೆ ಮಾಡಿದ್ದಾರೆ ಎಂದು ಅದ್ಯಾರೊ ಸೋಶಿಯಲ್ ಮಿಡಿಯಾದಲ್ಲಿ ಹರಿಯಬಿಟ್ಟಿದ್ದರು. ಅದನ್ನು ನಮ್ಮ ಮಾಧ್ಯಮದವರು ಎತ್ತಿಕೊಂಡರು. ದೇಶದ ಎಲ್ಲ ಭಾಷೆಗಳಲ್ಲಿ ಹರಿದಾಡಿ ಬಿಸಿಸಿಯಲ್ಲೂ ಬಿತ್ತರವಾಯಿತು.

ಹೆಚ್ಚು ಓದಿದ ಸ್ಟೋರಿಗಳು

10 ತಿಂಗಳ ನಂತ್ರ ನವಜೋತ್‌ ಸಿಂಗ್‌ ಸಿಧು ಜೈಲಿನಿಂದ ಬಿಡುಗಡೆ..!

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಎ.ಟಿ.ರಾಮಸ್ವಾಮಿ ..!

ಚುನಾವಣೆ ಘೋಷಣೆ : ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..!

ವಿಶ್ವದ ವೇಗದ ಟ್ರಾಕ್ ಓಟಗಾರ ಉಸೇನ್ ಬೋಲ್ಟ್ ಅವರೊಂದಿಗೆ ಶ್ರೀನಿವಾಸ್ ಗೌಡ ಅವರ ಸಾಧನೆಯನ್ನು ಹೋಲಿಕೆ ಮಾಡಲಾಗಿತ್ತು.

ಈ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆಯುವ ಟ್ವೀಟ್ ಮಾಡಲು ಕಾಯುತ್ತಿದ್ದ ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವರು ಕಂಬಳ ಓಟಗಾರ ಶ್ರೀನಿವಾಸ್
ಗೌಡ ಅವರನ್ನು ಕೂಡಲೇ ಸ್ಪೋರ್ಟ್ಸ್ ಆಥಾರಿಟಿ ಆಫ್ ಇಂಡಿಯಾಕ್ಕೆ ಆಹ್ವಾನ ನೀಡಿದ್ದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್ ಟ್ಯಾಗ್ ಮಾಡಿದ ಟ್ವೀಟಿಗೆ ಉತ್ತರಿಸಿದ ಕೇಂದ್ರ ಕ್ರಡಾ ಸಚಿವ ಕಿರಣ್ ರಿಜಿಜು ಈ ರೀತಿ ಟ್ವೀಟ್ ಮಾಡಿದ್ದರು. … I will ensure top national coaches to conduct his trials properly. We are team @narendramodi ji and will do everything to identity sporting talents!

ಮುರಳೀಧರ ರಾವ್ ಅವರು ರಾಜ್ಯ ಸರಕಾರದ ಕ್ರೀಡಾ ಸಚಿವ ಸಿ.ಟಿ.ರವಿ ಅವರಿಗೆ ಕೂಡ ಟ್ವೀಟನ್ನು ಟ್ಯಾಗ್ ಮಾಡಿದ್ದರು.

ಸೋಶಿಯಲ್ ಮಿಡಿಯಾದಲ್ಲಿ ಈ ವಿಚಾರ ವೈರಲ್ ಆಗುತ್ತಿರುವಾಗ ಕಂಬಳ ಓಟಗಾರ ಶ್ರೀನಿವಾಸ್
ಗೌಡ ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಸಮೀಪ ಮತ್ತೊಂದು ಕಂಬಳ ಓಟದ ಸಿದ್ಧತೆಯಲ್ಲಿದ್ದರು. ಕಾರ್ಮಿಕ ಆಯುಕ್ತರು ಆಗಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರು ಆಗಿರುವ ಪಿ.ಮಣಿವಣ್ಣನ್ ಅವರು ಶ್ರೀನಿವಾಸ ಗೌಡ ಅವರನ್ನು ಬೆಂಗಳೂರಿಗೆ ಅಹ್ವಾನಿಸಿದರು.

ಕೇಂದ್ರ ಕ್ರೀಡಾ ಸಚಿವ, ಬಿಜೆಪಿ ಪ್ರಧಾನ ಕಾರ್ಯದ್ರಶಿ ಮತ್ತು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಶ್ರೀನಿವಾಸ್ ಗೌಡ ಅವರನ್ನುಪ್ರಶಂಸಿರುವುದನ್ನು ಗಮಸಿದ ಕಾರ್ಮಿಕ ಇಲಾಖೆ ಎಚ್ಚೆತ್ತುಕೊಂಡಿತು. ಕಟ್ಟಡ ನಿರ್ಮಾಣ ಕಾರ್ಮಿಕನೂ ಆಗಿರುವ ಗೌಡರ ಮನೆಗೆ ಕಾರ್ಮಿಕ ಇಲಾಖೆ ಸಿಬ್ಬಂದಿ ಧಾವಿಸಿದರು. ಕಂಬಳ ಓಟದಲ್ಲಿ ನಿರತರಾಗಿದ್ದ ಶ್ರೀನಿವಾಸ್ ಗೌಡ ಅವರಿಂದ ಅರ್ಜಿ ಪಡೆದ ಇಲಾಖೆ ಸಿಬ್ಬಂದಿ ಸದ್ಯದಲ್ಲೇ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ನೀಡಲು ಮುಂದಾಗಿದ್ದಾರೆ.

ಕೇವಲ ಕ್ರೀಡಾ ಇಲಾಖೆ ಮಾತ್ರ ಯಾಕೆ ಶ್ರೀನಿವಾಸ್ ಗೌಡ ನಮಗೂ ಸೇರಿದವನು, ಆತ ಕಟ್ಟಡ ಕಾರ್ಮಿಕ ಎಂದು ಕಾರ್ಮಿಕ ಇಲಾಖೆಯವರು ಕ್ರೀಡಾ ಇಲಾಖೆಯೊಂದಿಗೆ ಕಂಬಳದ ಉಸೇನ್ ಬೋಲ್ಟ್ ಸನ್ಮಾನಕ್ಕೆ ಕೈಜೋಡಿಸಿದರು. ಸರಕಾರದ ವತಿಯಿಂದ ಮೂರು ಲಕ್ಷ ರೂಪಾಯಿ ಚೆಕ್ಕನು ಸೋಮವಾರ ಹಸ್ತಾಂತರಿಸಲಾಗಿದೆ.

ಬೆಂಗಳೂರಿನಲ್ಲಿ ಅತ್ಯಂತ ವೇಗದ ಕಂಬಳ ಓಟಗಾರ ಎಂದು ಶ್ರೀನಿವಾಸ್ ಗೌಡ ಸನ್ಮಾನ ಸ್ವೀಕರಿಸುತ್ತಿದ್ದಂತೆ ಬಂದ ಹೊಸ ಸುದ್ದಿ ಗೌಡರ ದಾಖಲೆಯನ್ನು ಮತ್ತೋರ್ವ ಕಂಬಳ ಓಟಗಾರ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಮುರಿಯುವ ಮೂಲಕ ಮತ್ತೊಂದು ದಾಖಲೆ ಬರೆದಿದ್ದಾರೆ ಎಂದಾಗಿತ್ತು. ಈಗ ನಿಶಾಂತ್ ಶೆಟ್ಟಿ ಅವರಿಗೆ ಕೂಡ ಇದೇ ಗೌರವ ಸನ್ಮಾನ ಆಹ್ವಾನಗಳು ದೊರೆಯುತ್ತವೆಯೇ ಎಂದು ಕಾದು ನೋಡಬೇಕಾಗಿದೆ.

ಫೆ.16ರಂದು ಭಾನುವಾರ ವೇಣೂರಿನ ಪೆರ್ಮುಡ ಕಂಬಳದಲ್ಲಿ ನಿಶಾಂತ್ ಈ ಸಾಧನೆ ಮಾಡಿದ್ದಾರೆ. 143 ಮೀಟರ್‌ ದೂರವನ್ನು ನಿಶಾಂತ್ ಕೇವಲ 13.61 ಸೆಕೆಂಡಿನಲ್ಲಿ ಓಡಿದ್ದಾರೆ. ಈ ಮೂಲಕ ಶ್ರೀನಿವಾಸ ಗೌಡ ಅವರ ದಾಖಲೆಯನ್ನು ಮುರಿದಿದ್ದಾರೆ. ಶ್ರೀನಿವಾಸ್ ಗೌಡ 13.62 ಸೆಕೆಂಡ್‌ನಲ್ಲಿ 143 ಮೀಟರ್‌ ಕ್ರಮಿಸಿದ್ದರು. ಆದರೆ, ನಿಶಾಂತ್ ಶೆಟ್ಟಿ ಈ ದೂರವನ್ನು ಕೇವಲ 13.61 ಸೆಕೆಂಡ್‌ಗಳಲ್ಲಿ ಓಡಿದ್ದಾರೆ. ನಿಶಾಂತ್ ಶೆಟ್ಟಿ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬಜಗೋಳಿ ನಿವಾಸಿ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಶ್ರೀನಿವಾಸ ಗೌಡ ಕಂಬಳ ಸ್ಪರ್ಧೆಯಲ್ಲಿ 143 ಮೀ. ಓಡುವಾಗ 100 ಮೀಟರ್ ಅನ್ನು ಕೇವಲ 9.55 ಸೆಕೆಂಡ್‌ನಲ್ಲಿ ಕ್ರಮಿಸಿದಂತೆ ಆಗುತ್ತದೆ ಎನ್ನುವ ಲೆಕ್ಕಚಾರ ಸೋಶಿಯಲ್ ಮಿಡಿಯಾದಲ್ಲಿ ಬರುತ್ತಿದ್ದಂತೆ ಸಚಿವರು, ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರೀಡಾ ಪ್ರತಿಭಾನ್ವೇಷಣೆಗೆ ತೊಡಗಿದ್ದು.

ಕಂಬಳ ಓಟಗಾರರಾಗಲಿ, ಕಂಬಳ ಕ್ರೀಡೆಯಲ್ಲಿ ತೊಡಗಿದ್ದವರಾಗಲಿ ಕೇಂದ್ರ ಕ್ರೀಡಾ ಸಚಿವರ ಆಹ್ವಾನವನ್ನು ಮೊದಲಿಗೆ ಗಂಭೀರವಾಗಿ ಪರಿಗಣಿಸಲಿಲ್ಲ. ಅವರಿಗೊಂದು ಖುಷಿ ಏನೆಂದರೆ ಕಂಬಳ ಕ್ರೀಡೆಗೆ ಅಪಾರ ಪ್ರಚಾರ ದೊರೆಯಿತಿರುವುದು. ಆದರೆ, ರಾಜ್ಯ ಸರಕಾರದ ಆಮಂತ್ರಣವನ್ನು ಅವರು ನಿರಾಕರಿಸಲಿಲ್ಲ.

ಕೇಂದ್ರ ಸರಕಾರದ ಕ್ರೀಡಾ ಸಚಿವರ ವಿನಂತಿ ಮೇರೆಗೆ ಅನಿವಾರ್ಯವಾಗಿ ಏಸ್‌ಎಐ ಸೆಂಟರಿಗೆ ಶ್ರೀನಿವಾಸ ಗೌಡ ಅವರು ಹೋಗಬೇಕಾಗಿ ಬಂದಿದೆ. ಶ್ರೀನಿವಾಸ ಗೌಡ ಒಂದು ಕಂಬಳದಲ್ಲಿ ಹಲವು ಜೋಡಿ ಕೋಣಗಳನ್ನು ಓಡಿಸುತ್ತಾರೆ. ಮಾತ್ರವಲ್ಲದೆ, ಮೂರು ಮಂದಿ ಕಂಬಳ ಮಾಲೀಕರೊಂದಿಗೆ ಗೌಡ ವಾರ್ಷಿಕ ಒಪ್ಪಂದ ಮಾಡಿಕೊಂಡಿದ್ದಾರೆ. ವಾರ್ಷಿಕ ನೆಲೆಯಲ್ಲಿ ಕಂಬಳ ಓಟಗಾರನಿಗೆ ಒಂದು ದೊಡ್ಡ ಮೊತ್ತವನ್ನು ಕೋಣಗಳು ಮಾಲೀಕರು ನಿಗದಿ ಮಾಡಿರುತ್ತಾರೆ. ನವೆಂಬರ್ ತಿಂಗಳಲ್ಲಿ ಆರಂಭವಾಗುವ ಕಂಬಳ ಸೀಸನ್ ಮಾರ್ಚ್ ಎರಡನೇ ವಾರ ಮುಕ್ತಾಯ ಆಗುತ್ತದೆ. ಕಂಬಳ ಸಮಿತಿ ನಿಗದಿ ಮಾಡಿದಂತೆ ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಪ್ರತಿ ಶನಿವಾರ ಕಂಬಳ ಆರಂಭವಾಗಿ ಭಾನುವಾರ ಮುಕ್ತಾಯ ಆಗುತ್ತದೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸ ಗೌಡ ತಕ್ಷಣ ಕ್ರೀಡಾ ಪ್ರಾಧಿಕಾರದ ತರಬೇತಿಗೆ ಹಾಜರಾಗುವಂತೆ ಇಲ್ಲ.

ಇದೀಗ ಶ್ರೀನಿವಾಸ ಗೌಡ ಮಾತ್ರವಲ್ಲದೆ ಇನ್ನಿತರ ವೇಗದ ಕಂಬಳ ಓಟಗಾರ ಯುವಕರನ್ನು ಕೂಡ ಕ್ರೀಡಾ ಪ್ರಾಧಿಕಾರ ತರಬೇತಿಗೆ ಆಹ್ವಾನ ನೀಡುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ. ಶ್ರೀನಿವಾಸ ಗೌಡ, ನಿಶಾಂತ್ ಶೆಟ್ಟಿ ಸಹಿತ ಐದಾರು ಮಂದಿ ಗಟ್ಟಿಗ ಓಟಗಾರರು ಇದ್ದಾರೆ. ಅವರೆಲ್ಲರೂ ಕಂಬಳ ಅಕಾಡಮಿಯಲ್ಲಿ ಕೋಣದ ಓಟ ಕಂಬಳಕ್ಕಾಗಿ ತರಬೇತಿ ಪಡೆದವರು. ಜಾನಪದ ಕ್ರೀಡೆಗಾಗಿ ಸ್ಥಾಪಿಸಲಾದ ಕಂಬಳ ಅಕಾಡಮಿ ಇಂತಹ ಪ್ರತಿಭೆಗಳನ್ನು ಬೆಳಸಲು ಸಾಧ್ಯ ಆಗಿರುವುದನ್ನು ಸರಕಾರ ಮತ್ತು ಕ್ರೀಡಾ ಪ್ರಾಧಿಕಾರದ ಅಧಿಕಾರಿಗಳು ಗಮನಿಸಬೇಕು.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ರಾಹುಲ್ಅನರ್ಹತೆಯೂ ಅಧಿಕಾರ ರಾಜಕಾರಣದ ವ್ಯತ್ಯಯಗಳೂ.. ಪ್ರಜಾಪ್ರಭುತ್ವ ವ್ಯವಸ್ಥೆಯ ತಳಪಾಯ ಶಿಥಿಲವಾಗುತ್ತಿರುವುದು ಭವಿಷ್ಯದ ಭಾರತಕ್ಕೆ ಒಳಿತಲ್ಲ..!
ಅಂಕಣ

ರಾಹುಲ್ಅನರ್ಹತೆಯೂ ಅಧಿಕಾರ ರಾಜಕಾರಣದ ವ್ಯತ್ಯಯಗಳೂ.. ಪ್ರಜಾಪ್ರಭುತ್ವ ವ್ಯವಸ್ಥೆಯ ತಳಪಾಯ ಶಿಥಿಲವಾಗುತ್ತಿರುವುದು ಭವಿಷ್ಯದ ಭಾರತಕ್ಕೆ ಒಳಿತಲ್ಲ..!

by ನಾ ದಿವಾಕರ
March 28, 2023
MANDYA : ಮಂಡ್ಯ ಜಿಲ್ಲೆ ಚುನಾವಣ ಕಣ |BJP | JDS | CONGRESS | SUMALATHA | ELECTION 2023
ಇದೀಗ

MANDYA : ಮಂಡ್ಯ ಜಿಲ್ಲೆ ಚುನಾವಣ ಕಣ |BJP | JDS | CONGRESS | SUMALATHA | ELECTION 2023

by ಪ್ರತಿಧ್ವನಿ
March 29, 2023
ಸಿದ್ದರಾಮಯ್ಯ ಅವರಿಗೆ ಜನರ ಮೂಲಕವೇ ಉತ್ತರ ಕೊಡಿಸುತ್ತೇನೆ ; ಕಾಂಗ್ರೆಸ್‌ ವಿರುದ್ಧ ಗುಡುಗಿದ ಹೆಚ್.ಡಿ.ಕುಮಾರಸ್ವಾಮಿ
Top Story

ಸಿದ್ದರಾಮಯ್ಯ ಅವರಿಗೆ ಜನರ ಮೂಲಕವೇ ಉತ್ತರ ಕೊಡಿಸುತ್ತೇನೆ ; ಕಾಂಗ್ರೆಸ್‌ ವಿರುದ್ಧ ಗುಡುಗಿದ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
March 31, 2023
ಯಾರು ಬಂದ್ರೂ ಹೊಡೆದು ಓಡಿಸಿ: ತಮಿಳರಿಗೆ ಮುನಿರತ್ನ ಪ್ರಚೋದನೆ
Uncategorized

ಯಾರು ಬಂದ್ರೂ ಹೊಡೆದು ಓಡಿಸಿ: ತಮಿಳರಿಗೆ ಮುನಿರತ್ನ ಪ್ರಚೋದನೆ

by ಪ್ರತಿಧ್ವನಿ
March 31, 2023
ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಪಾತ್ರವಿಲ್ಲ;  ಕಾಂಗ್ರೆಸ್ ಮುಖಂಡ ನಾಗರಾಜಗೌಡ ಸ್ಪಷ್ಟನೆ
Top Story

ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಪಾತ್ರವಿಲ್ಲ; ಕಾಂಗ್ರೆಸ್ ಮುಖಂಡ ನಾಗರಾಜಗೌಡ ಸ್ಪಷ್ಟನೆ

by ಪ್ರತಿಧ್ವನಿ
March 28, 2023
Next Post
ಕಾಶ್ಮೀರದಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಸಿದರೆ FIR ದಾಖಲು

ಕಾಶ್ಮೀರದಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಸಿದರೆ FIR ದಾಖಲು

ತುಳುನಾಡಿನ ಕಂಬಳಕ್ಕೆ ಕಂಬಳವೇ ಸಾಟಿ

ತುಳುನಾಡಿನ ಕಂಬಳಕ್ಕೆ ಕಂಬಳವೇ ಸಾಟಿ

ಸೋಮಣ್ಣ ಹಾಗು ವಿಜಯೇಂದ್ರ ನಡುವೇ ಶುರುವಾಯಿತೇ ಮಾತಿನ ಸಮರ?

ಸೋಮಣ್ಣ ಹಾಗು ವಿಜಯೇಂದ್ರ ನಡುವೇ ಶುರುವಾಯಿತೇ ಮಾತಿನ ಸಮರ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist