Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮಗ್ರಂಥ! ಬಿಡುಗಡೆಗೆ ಬರ್ತಾರೆ ಮೋದಿ!

ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮಗ್ರಂಥ! ಬಿಡುಗಡೆಗೆ ಬರ್ತಾರೆ ಮೋದಿ!
ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮಗ್ರಂಥ! ಬಿಡುಗಡೆಗೆ ಬರ್ತಾರೆ ಮೋದಿ!

February 15, 2020
Share on FacebookShare on Twitter

ಲಿಂಗಾಯತ ಹಿಂದೂ ಧರ್ಮದಿಂದ ಸಿಡಿದು ರೂಪುಗೊಂಡಂತಹ ಪ್ರತ್ಯೇಕ ಧರ್ಮ. ಹಿಂದೂ ಧರ್ಮದ ಪ್ರವಾದದಲ್ಲಿ ಆಚರಣೆಗಳು ಇನ್ನೂ ಸ್ವಲ್ಪ ಹಾಗೆಯೇ ಉಳಿದುಕೊಂಡಿದೆ. ಆದರೆ ನಾವು ಮೂರ್ತಿ ಪೂಜೆಯನ್ನು ಮಾಡುವುದು ಸರಿಯಲ್ಲ. ನಮ್ಮದೇನಿದ್ದರೂ ಲಿಂಗಾರಾಧನೆ. ಆತ್ಮಲಿಂಗವನ್ನು ಮಾತ್ರ ನಾವು ಪೂಜಿಸುತ್ತೇವೆ ಎನ್ನುವುದು ಒಂದು ವರ್ಗ. ನಾವು ಹಿಂದೂಗಳು ಬೇರೆ ಬೇರೆಯಲ್ಲ, ನಾವು ಕೂಡ ಹಿಂದೂ ಧರ್ಮದ ಭಾಗವೇ ಆಗಿದ್ದೇವೆ ಎನ್ನುವುದು ಮತ್ತೊಂದು ವರ್ಗ. ಈ ನಡುವೆ ವೀರಶೈವ ಲಿಂಗಾಯತ ಹಾಗು ಲಿಂಗಾಯತ ಪಂಥಗಳು ಬೇರೆ ಬೇರೆ ಎನ್ನುವುದು ಮತ್ತೊಂದು ವರ್ಗದ ಜನರ ಮಾತು. ಲಿಂಗಾಯತರು ಹಾಗು ವೀರಶೈವ ಲಿಂಗಾಯತರು ಎಲ್ಲರೂ ಒಂದೇ. ಎರಡೂ ಪಂಥಗಳು ಹಿಂದೂ ಧರ್ಮದ ಭಾಗವೇ ಆಗಿದ್ದಾರೆ ಎನ್ನುವುದು ಹಲವರ ವಾದ. ಇವೆಲ್ಲವೂ ತಮ್ಮ ಸಮಾಜದಲ್ಲಿರುವ ತಜ್ಞರು, ಜ್ಞಾನಿಗಳು, ಬುದ್ಧಿಜೀವಿಗಳ ಅಭಿಪ್ರಾಯ.

ಹೆಚ್ಚು ಓದಿದ ಸ್ಟೋರಿಗಳು

ಚಾಮರಾಜಪೇಟೆ ಮೈದಾನದ ಈದ್ಗಾ ಟವರ್ ತೆರವುಗೊಳಿಸಲು ಸರ್ಕಾರಕ್ಕೆ ಗಡುವು ನೀಡಿದ ಹಿಂದೂಪರ ಸಂಘಟನೆಗಳು

ಮೀಸಲಾತಿಗಾಗಿ ಹೋರಾಟ ನಡೆಸುವ ದಿನಗಳು ದೂರವುಳಿದಿಲ್ಲ : ಜಿ.ಟಿ.ದೇವೇಗೌಡ

ಈ ಭಾರೀ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧವಿಲ್ಲ : ಆರ್ ಅಶೋಕ್

ಏನಿದು ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ?

ಕಳೆದ 2014ರಲ್ಲಿ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಲಿಂಗಾಯತ ಸಮುದಾಯದ ನಾಯಕರು ಪ್ರತ್ಯೇಕ ಧರ್ಮ ಘೋಷಣೆಗೆ ಮನವಿ ಮಾಡಿದ್ದರು. ಮನವಿ ಸ್ವೀಕರಿಸಿದ ಸಿದ್ದರಾಮಯ್ಯ ಸರ್ಕಾರ ಪ್ರಸ್ತಾವನೆಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರ ನಿರ್ಧಾರಕ್ಕಾಗಿ ಕಳುಹಿಸಿಕೊಟ್ಟಿತ್ತು. ಅಷ್ಟರಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿ ಅಂತ್ಯವಾಗುತ್ತಾ ಸಾಗಿದ್ದರಿಂದ ಸಿದ್ದರಾಮಯ್ಯ ಸರ್ಕಾರ ಕೂಡ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ನಿರ್ಧಾರ ಮಾಡಿತ್ತು. ಲಿಂಗಾಯತ ಪ್ರತ್ಯೇಕ ಧರ್ಮ ಮಾಡಲು ನಮ್ಮದೇನು ಅಭ್ಯಂತರವಿಲ್ಲ ಎನ್ನುವ ಹೇಳಿಕೆಗಳು ಹೊರಬಿದ್ದವು.

ಅದನ್ನೇ ತಿರುಗುಬಾಣ ಮಾಡಿದ ಬಿಜೆಪಿ ಲಿಂಗಾಯತ ಹಾಗು ವೀರಶೈವ ಲಿಂಗಾಯತ ಎರಡೂ ಒಂದೇ, ಇವರಿಬ್ಬರ ನಡುವೆ ಒಡಕು ಮೂಡಿಸಿ, ಮತಗಳಿಸುವ ಹುನ್ನಾರವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದು ಆರೋಪಿಸಿತ್ತು. ಆ ಬಳಿಕ ಕಾಂಗ್ರೆಸ್‌ ಯಾವುದೇ ಹೇಳಿಕೆ ಕೊಟ್ಟರೂ ಇಕ್ಕಟ್ಟಿಗೆ ಸಿಲುಕಿದ ಅನುಭವ ಉಂಟಾಯಿತು. ಕೊನೆಗೆ ಲಿಂಗಾಯತ ಪ್ರಾಬಲ್ಯವಿರುವ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್‌ ಸಂಪೂರ್ಣವಾಗಿ ಧೂಳಿಪಟವಾಯ್ತು. ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವನೆಯೇ ಸಿದ್ದರಾಮಯ್ಯ ಸೋಲಿಗೆ ಪ್ರಮುಖ ಕಾರಣವಾಯ್ತು.

ಬಸವ ಪೀಠದ ಧರ್ಮಾಧ್ಯಕ್ಷೆಯಾಗಿದ್ದ ಮಾತೆ ಮಹಾದೇವಿ ಅವರ ನೇತೃತ್ವದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಸಮಿತಿ ರೂಪಿಸಲಾಯ್ತು. ರಾಜಕೀಯ ನಾಯಕರನ್ನೂ ಒಳಗೊಂಡಂತೆ ಪಕ್ಷಾತೀತ ವೇದಿಕೆ ಮೂಲಕ ಹೋರಾಟ ಮುಂದುವರಿಸಲಾಗಿದೆ. ಮಾಜಿ ಸಚಿವ ಬಸವರಾಜ ಹೊರಟ್ಟಿ, ಎಂ.ಬಿ ಪಾಟೀಲ್‌ ಸೇರಿದಂತೆ ಹಲವಾರು ನಾಯಕರು ಇನ್ನು ಪ್ರತ್ಯೇಕ ಧರ್ಮ ಮಾನ್ಯತೆಗೆ ಒತ್ತಾಯ ಮಾಡುತ್ತಲೇ ಇದ್ದಾರೆ. ಆದರೆ ಅಂದು ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವನೆಯನ್ನು ತೀಕ್ಷ್ಣವಾಗಿ ವಿರೋಧಿಸಿ, ಲಿಂಗಾಯತ ವೀರಶೈವ ಎರಡು ಹಿಂದೂ ಧರ್ಮದ ಭಾಗವೇ ಆಗಿದೆ ಎಂದು ವಾದಿಸಿದ್ದ ಬಿಜೆಪಿ ನಾಯಕರು ಇಂದು ಪ್ರತ್ಯೇಕ ಧರ್ಮ ಗ್ರಂಥ ಬಿಡುಗಡೆಗೆ ಮುಂದಾಗಿದ್ದಾರೆ. ಅದರಲ್ಲೂ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರೇ ಲಿಂಗಾಯತ ಧರ್ಮ ಗ್ರಂಥ ಬಿಡುಗಡೆ ಮಾಡುತ್ತಿರುವುದು ಮತ್ತೊಂದು ವಿಶೇಷ.

ಲಿಂಗಾಯತ ಧರ್ಮ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹ ಚುನಾವಣಾ ಸಮಾವೇಶಗಳಲ್ಲಿ ಅಬ್ಬರಿಸಿದ್ರು. ಧರ್ಮವನ್ನು ಒಡೆಯುವ ಕಾಂಗ್ರೆಸ್‌ಗೆ ಮತ ಹಾಕಬೇಡಿ ಎಂದು ಕರೆ ಕೊಟ್ಟಿದ್ದರು. ಇದೀಗ ನಾಳೆ ನಡೆಯುತ್ತಿರುವ ಶ್ರೀಜಗದ್ಗುರು ವಿಶ್ವಾರಾಧ್ಯ ಗುರುಕುಲದ ಶತಮಾನೋತ್ಸವ ಸಮಾರಂಭದಲ್ಲಿ ವೀರಶೈವ ಲಿಂಗಾಯತ ಧರ್ಮಗ್ರಂಥ ʻಸಿದ್ಧಾಂತ ಶಿಖಾಮಣಿʼ ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ. 18 ರಾಷ್ಟ್ರೀಯ ಹಾಗು ಕೆಲವು ಅಂತಾರಾಷ್ಟ್ರೀಯ ಭಾಷೆಗಳಲ್ಲೂ ಈ ಕೃತಿ ನಾಳೆ ಬಿಡುಗಡೆ ಆಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಣಸಿಯಲ್ಲೇ ಕಾರ್ಯಕ್ರಮ ಆಯೋಜನೆಯಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.

ವೀರಶೈವ ಲಿಂಗಾಯತ ಹಾಗು ಲಿಂಗಾಯತ ಒಂದೇ. ಅವು ಹಿಂದೂ ಧರ್ಮದ ಭಾಗ ಎಂದ ಮೇಲೆ ಪ್ರತ್ಯೇಕ ಧರ್ಮಗ್ರಂಥ ಇರುವುದಕ್ಕೆ ಹೇಗೆ ಸಾಧ್ಯ? ಅದರಲ್ಲೂ ಲಿಂಗಾಯತ ಹಾಗು ವೀರಶೈವ ಲಿಂಗಾಯತ ಹಿಂದೂ ಧರ್ಮದ ಭಾಗ ಎನ್ನುತ್ತಿದ್ದ ಬಿಜೆಪಿಯೇ ಪ್ರತ್ಯೇಕ ಧರ್ಮಗ್ರಂಥ ಬಿಡುಗಡೆ ಮಾಡಲು ಮುಂದಾಗಿರುವುದು ಕಮಲ ಪಕ್ಷದ ಇಬ್ಬಗೆ ನೀತಿಯನ್ನು ಸಾರುವಂತಿದೆ. ತಮ್ಮ ಅಧಿಕಾರದಲ್ಲಿ ತಮಗೆ ಬೇಕಾದ ನಿಲುವು ತೆಗೆದುಕೊಳ್ತಾರೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ ಈ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮಗ್ರಂಥ.

RS 500
RS 1500

SCAN HERE

don't miss it !

ಮೆಟ್ರೋ ಸಂಚಾರದಲ್ಲಿ ಭಾರೀ ಬದಲಾವಣೆ: 15 ನಿಮಷಕ್ಕೊಂದು ರೈಲು!
ಕರ್ನಾಟಕ

ಮೆಟ್ರೋ ಸಂಚಾರದಲ್ಲಿ ಭಾರೀ ಬದಲಾವಣೆ: 15 ನಿಮಷಕ್ಕೊಂದು ರೈಲು!

by ಪ್ರತಿಧ್ವನಿ
August 6, 2022
ಭಾರತವು ಆತ್ಮಹತ್ಯೆಯ ರೂಪದಲ್ಲಿ ಅತಿಹೆಚ್ಚಿನ ಸಂಖ್ಯೆಯ ಯುವ ತಾಯಂದಿರನ್ನು ಏಕೆ ಕಳೆದುಕೊಳ್ಳುತ್ತಿದೆ?
ದೇಶ

ಭಾರತವು ಆತ್ಮಹತ್ಯೆಯ ರೂಪದಲ್ಲಿ ಅತಿಹೆಚ್ಚಿನ ಸಂಖ್ಯೆಯ ಯುವ ತಾಯಂದಿರನ್ನು ಏಕೆ ಕಳೆದುಕೊಳ್ಳುತ್ತಿದೆ?

by ಫಾತಿಮಾ
August 5, 2022
ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ
ಕರ್ನಾಟಕ

ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ

by ಪ್ರತಿಧ್ವನಿ
August 5, 2022
ಉತ್ತರಪ್ರದೇಶ; ಉದ್ಯೋಗಾಕಾಂಕ್ಷಿ ಮೇಲೆ ಸಾಮೂಹಿಕ ಅತ್ಯಾಚಾರ
ದೇಶ

ಉತ್ತರಪ್ರದೇಶ; ಉದ್ಯೋಗಾಕಾಂಕ್ಷಿ ಮೇಲೆ ಸಾಮೂಹಿಕ ಅತ್ಯಾಚಾರ

by ಪ್ರತಿಧ್ವನಿ
August 7, 2022
ಪರಿಹಾರ ನೀಡಲು ಹಣದ ಕೊರತೆ ಇಲ್ಲ: ಸಚಿವ ಆರ್. ಅಶೋಕ್
ಕರ್ನಾಟಕ

ಮಳೆಯಿಂದ ಸಂತ್ರಸ್ತರಿಗೆ ಕಾಳಜಿ ಕಿಟ್‌ ವಿತರಣೆ: ಕಂದಾಯ ಸಚಿವ ಆರ್.ಅಶೋಕ್‌

by ಪ್ರತಿಧ್ವನಿ
August 8, 2022
Next Post
ಶಾಹೀನ್ ಶಾಲೆ ಪರ ಬೀದಿ ಹೋರಾಟ ಮತ್ತು ವಿಧಾನ ಮಂಡಲ ಕಲಾಪಕ್ಕೆ ಕಾಂಗ್ರೆಸ್ಸಿನ ತಾಲೀಮು!

ಶಾಹೀನ್ ಶಾಲೆ ಪರ ಬೀದಿ ಹೋರಾಟ ಮತ್ತು ವಿಧಾನ ಮಂಡಲ ಕಲಾಪಕ್ಕೆ ಕಾಂಗ್ರೆಸ್ಸಿನ ತಾಲೀಮು!

ಬೆಂಗಳೂರಿಗೆ ಕಾಫಿಯನ್ನು ಪರಿಚಯಿಸಿದ್ದು ಯಾರು ಗೊತ್ತೇ ?

ಬೆಂಗಳೂರಿಗೆ ಕಾಫಿಯನ್ನು ಪರಿಚಯಿಸಿದ್ದು ಯಾರು ಗೊತ್ತೇ ?

ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ದ ನಡೆದ ಮಹತ್ತರವಾದ ಪ್ರತಿಭಟನೆಗಳು ಯಾವುವು?

ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ದ ನಡೆದ ಮಹತ್ತರವಾದ ಪ್ರತಿಭಟನೆಗಳು ಯಾವುವು?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist