• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಶಾಂತಿಯುತ ಪ್ರತಿಭಟನೆಗೆ ಅಡ್ಡಿಪಡಿಸುವುದು ಸಂವಿಧಾನ ಉಲ್ಲಂಘನೆ ಅಲ್ಲವೇ?

by
February 3, 2020
in ಕರ್ನಾಟಕ
0
ಶಾಂತಿಯುತ ಪ್ರತಿಭಟನೆಗೆ ಅಡ್ಡಿಪಡಿಸುವುದು ಸಂವಿಧಾನ ಉಲ್ಲಂಘನೆ ಅಲ್ಲವೇ?
Share on WhatsAppShare on FacebookShare on Telegram

ರಾಜ್ಯ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕತೆಯರು, ಬಿಸಿಯೂಟ ಕಾರ್ಯಕತೆಯರು, ಆಶಾ ಕಾರ್ಯಕತೆಯರು ಸೇರಿದಂತೆ ಒಂದಲ್ಲ ಒಂದು ಸಂಘಟನೆ ಪ್ರತಿಭಟನೆ ನಡೆಸುತ್ತಿರುವುದು ಸಾಮಾನ್ಯ. ಆದರೆ ಪ್ರ೫ತಿಭಟನೆ ಮಾಡಿದ ಬಳಿಕ ಸರ್ಕಾರ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತದೆ ಎನ್ನುವ ನಂಬಿಕೆ ಇರಲ್ಲ. ಆದರೂ ಪ್ರತಿಭಟನಾಕಾರರು ಸರ್ಕಾರಕ್ಕೆ ತಮ್ಮ ಕೂಗು ಕೇಳಿಸ ಬೇಕು ಎನ್ನುವ ಕಾರಣದಿಂದ ಸಾವಿರಾರು ಜನರು ಜಮಾಯಿಸಿ ಪ್ರತಿಭಟನೆ ಮಾಡುತ್ತಾರೆ. ಇವತ್ತು ರಾಜ್ಯ ಬಿಸಿಯೂಟ ತಯಾರಕ ಸಂಘದಿಂದ ಪ್ರಭಟನೆಗೆ ಕರೆ ಕೊಡಲಾಗಿತ್ತು, ಪೊಲೀಸರ ಬಳಿ ಪ್ರತಿಭಟನೆಗೆ ಅನುಮತಿಯನ್ನೂ ಕೇಳಲಾಗಿತ್ತು. ಪೊಲೀಸ್‌ ಇಲಾಖೆ ಮಾತ್ರ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದೆ. ಅಲ್ಲದೆ ಬಿಸಿಯೂಟ ಕಾರ್ಯಕರ್ತರು ಬೆಂಗಳೂರು ಪ್ರವೇಶ ಮಾಡದಂತೆ ತಮ್ಮ ತಮ್ಮ ಜಿಲ್ಲೆಗಳಲ್ಲೇ ತಡೆಯಲು ಜಿಲ್ಲಾಡಳಿತಗಳಿಗೆ ಸೂಚನೆ ಕೊಡಲಾಗಿದೆ.

ADVERTISEMENT

ಪ್ರತಿಭಟನಾ ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಆದರೂ ರಾಜಧಾನಿಯತ್ತ ಸಾವಿರಾರು ಜನ ಬಿಸಿಯೂಟ ಕಾರ್ಯಕರ್ತೆಯರು ಜಮಾಯಿಸಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ‌ ಆಗಮಿಸಿರುವ ಸಾವಿರಾರು ಕಾರ್ಯಕರ್ತೆಯರು ಅಲ್ಲಿಂದ ಹೊರಬಾರದಂತೆ ತಡೆಯಲಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಸಿಯೂಟ ಕಾರ್ಯಕರ್ತರಿಂದ ಅಹೋರಾತ್ರಿ ಧರಣಿಗೂ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಸಿಐಟಿಯು ವರಲಕ್ಷ್ಮೀ ನೇತೃತ್ವದಲ್ಲಿ ಮುಷ್ಕರಕ್ಕೆ ಕರೆ ಕೊಟ್ಟ ಬಳಿಕ ಬೆಂಗಳೂರಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡದ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ 144 ಸೆಕ್ಷನ್‌ ಜಾರಿ ಮಾಡಿದ್ದಾರೆ. ವರಲಕ್ಷ್ಮೀಯನ್ನು ಮುಂಜಾಗ್ರತಾ ಕ್ರಮವಾಗಿ ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

7 ಕ್ರೂಸರ್ ವಾಹನಗಳಲ್ಲಿ ಬಂದ ನೂರಾರು ಬಿಸಿಯೂಟ ಕಾರ್ಯಕರ್ತೆಯರನ್ನು ಪೀಣ್ಯದ ಬಳಿಯೇ ಬಾಗಲಗುಂಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಸುಮಾರು ನಾಲ್ಕೈದು ಸಾವಿರ ಬಿಸಿಯೂಟ ಕಾರ್ಯಕರ್ತೆಯರನ್ನು ತಡೆದು ನಿಲ್ಲಿಸಲಾಗಿದೆ. ಕ್ಷಣ ಕ್ಷಣಕ್ಕೂ ಬಿಸಿಯುಟ ಕಾರ್ಯಕರ್ತೆಯರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಸರ್ಪಗಾವಲು ಹೆಚ್ಚಿಸಲಾಗ್ತಿದೆ. ಡಿಸಿಪಿ, ೩ ಜನ ಎಸಿಪಿ, ೧೨ಪಿಎಸ್ಐ, ೫೦೦ ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

ʻಬಿಸಿಯೂಟʼ ಬೇಡಿಕೆಗಳೇನು..?

ಖಾಸಗೀಕರಣ ಮಾಡುವ ಆಲೋಚನೆಯನ್ನು ಕೈ ಬಿಡಬೇಕು, ಕನಿಷ್ಟ ಕೂಲಿ ಹೆಚ್ಚಳ ಮಾಡಬೇಕು. ನಮ್ಮ ಮುಂದಿನ ಜೀವನಕ್ಕಾಗಿ ನಿವೃತ್ತಿ ವೇತನ‌ ನೀಡಬೇಕು ಎನ್ನುವುದಾಗಿದೆ. ಆದರೆ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆಗೆ ಪರ್ಮಿಶನ್ ಕೊಟ್ಟಿಲ್ಲ ಎಂದು ಡಿಸಿಪಿ ರಮೇಶ್ ಬಾನೋತ್ ಹೇಳಿದ್ದಾರೆ. ಈ ಹಿಂದೆ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ಮಾಡಿದಾಗ ನಡೆದ ಕೆಲವು ಘಟನೆಗಳನ್ನು ಆಧರಿಸಿ ಪ್ರತಿಭಟನೆಗೆ ಅವಕಾಶ ನೀಡಿಲ್ಲ ಎಂದಿದ್ದಾರೆ.

ಅವರು ಕೊಟ್ಟಿರುವ ಕಾರಣಗಳೆಂದರೆ, ಬೆಂಗಳೂರಿನಲ್ಲಿ 15 ರಿಂದ 20 ಸಾವಿರ ಜನ ಬಂದರೆ ಪ್ರತಿಭಟನೆಗೆ ಜಾಗದ ಕೊರತೆ ಇದೆ. ಕಳೆದ ಬಾರಿ ಪ್ರತಿಭಟನೆ ವೇಳೆ ಶೇಷಾದ್ರಿ ರಸ್ತೆಯಲ್ಲಿ ಸಾಕಷ್ಟು ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಆಂಬುಲೆನ್ಸ್ ಓಡಾಟಕ್ಕೂ ಸಹ ಅಡ್ಡಿಯಾಗಿತ್ತು. ಯಾವುದೇ ಕಾರಣಕ್ಕೂ ಇಂದಿನ ಬಿಸಿಯೂಟ ಕಾರ್ಯಕರ್ತೆಯ ಜಾಥಾ ಮತ್ತು ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಆದರೆ ಪ್ರತಿಭಟನೆಗೆ ಸಜ್ಜಾಗಿ ಬಂದಿರುವ ಕಾರ್ಯಕರ್ತೆಯರು ಏನೇ ಆದರೂ ಸರಿ ಪ್ರತಿಭಟನೆ ಕೈಬಿಡಲ್ಲ. ವಶಕ್ಕೆ ಪಡೆದಿರುವ ಮುಖ್ಯಸ್ಥೆ ವರಲಕ್ಷ್ಮಿ ಬಿಡುಗಡೆ ಮಾಡಬೇಕು. ಶಿಕ್ಷಣ ಸಚಿವರೇ ಖುದ್ದು ಬಂದು ಮಾತನಾಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆ ನಡೆಸಲು ಭಾರತದ ಸಂವಿಧಾನದಲ್ಲೇ ಅವಕಾಶ ಇದೆ. ಆಳುವ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದು ಮೂಲಭೂತ ಹಕ್ಕುಗಳಲ್ಲಿ ಒಂದಾಗಿದೆ. ಪ್ರತಿಭಟನೆ ವೇಳೆ ವಿದ್ವಂಸಕ ಕೃತ್ಯಗಳನ್ನು ಎಸಗಿದರೆ, ಸಾರ್ವಜಮಿಕ ಆಸ್ತಿ ಪಾಸ್ತಿಗೆ ನಷ್ಟ ಉಂಟು ಮಾಡಿದರೆ ಪ್ರತಿಭಟನೆಯನ್ನು ಪೊಲೀಸರು ತಡೆಯಬಹುದು. ಬಿಸಿಯೂಟ ಕಾರ್ಯಕರ್ತೆಯರು ಯಾವುದೇ ಬಸ್‌ಗೆ ಕಲ್ಲು ಹೊಡೆದಿಲ್ಲ. ಸರ್ಕಾರಿ ಕಚೇರಿಗೆ ನುಗ್ಗಿ ದಾಂಧಲೆಯನ್ನೂ ಮಾಡಿಲ್ಲ. ಆದರೂ ಪೊಲೀಸರು ಕುಂಟು ನೆಪ ಹೇಳಿ ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವುದು ಸಂವಿಧಾನ ಮೂಲ ಆಶಯಕ್ಕೆ ಧಕ್ಕೆ ತಂದಂತಾಗಿದೆ.

ಸಾವಿರಾರು ಜನರು ಪ್ರತಿಭಟನೆ ಮಾಡಲು ಸ್ಥಳಾವಕಾಶದ ಕೊರತೆ ಇದೆ ಎಂದರೆ, ಸರ್ಕಾರ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು, ಟ್ರಾಫಿಕ್‌ ಜಾಮ್‌ ಆಗುತ್ತೆ, ಆಂಬ್ಯುಲೆನ್ಸ್‌ ಓಡಾಟಕ್ಕೆ ಅಡ್ಡಿಯಾಗುತ್ತೆ ಎನ್ನುವುದು ಸೂಕ್ತ ಸಕಾರಣವಲ್ಲ. ಪ್ರತಿಭಟನೆ ವೇಳೆ ಗುಂಡಾವರ್ತನೆ ಮಾಡಿದ್ದರೆ, ಉದ್ದೇಶಪೂರ್ವಕವಾಗಿ ದೊಂಬಿ, ಗಲಾಟೆ ಸೃಷ್ಟಿಸಿದ ಆರೋಪವಿದ್ದರೂ ಪ್ರತಿಭಟನೆಗೆ ಅವಕಾಶ ನಿರಾಕರಿಸುವ ಅಧಿಕಾರ ಪೊಲೀಸರಿಗೆ ಇದೆ. ಅದನ್ನು ಬಿಟ್ಟು ಪೊಲೀಸರು ಮನಸೋಇಚ್ಛೆ ಅನುಮತಿ ನಿರಾಕರಿಸುವಂತಿಲ್ಲ. ಬಿಸಿಯೂಟ ಕಾರ್ಯಕರ್ತೆಯಸ ಮುಖಂಡರು ಪೊಲೀಸರ ಕ್ರಮದ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದರೆ ಖಾಕಿಪಡೆಗೆ ಛೀಮಾರಿ ಕಟ್ಟಿಟ್ಟ ಬುತ್ತಿ.

Tags: ban orderbengalurucity policeindefinite protestKSR City railway stationmidday mealworkersಕಾರ್ಯಕರ್ತರುಕೆಎಸ್ಆರ್ ನಗರ ರೈಲು ನಿಲ್ದಾಣನಗರ ಪೊಲೀಸ್ನಿಷೇಧಾಜ್ಞೆಪ್ರತಿಭಟನೆಬೆಂಗಳೂರುಮಧ್ಯಾಹ್ನದ ಊಟ
Previous Post

ಐದು ಸ್ಮಾರಕಗಳ ಸಂರಕ್ಷಣೆಗೆ ಸಂಕಲ್ಪ

Next Post

ಸಂಪುಟ ವಿಸ್ತರಣೆ ಸುಸೂತ್ರ- ಫಲಿಸಿತೇ ಸಿಎಂ ತಂತ್ರಗಾರಿಕೆ?

Related Posts

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
0

ಏಪ್ರಿಲ್ 26 ರಂದು ಬೆಳಗಾವಿಯ (Belagum) ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯರಿಂದ (Cm siddaramaiah) ಸಾರ್ವಜನಿಕವಾಗಿ ಅವಮಾನಕ್ಕೆ ಒಳಗಾಗಿದ್ದ ASP ನಾರಾಯಣ ಬರಮನಿ (Narayana bharamani) ಈ ಘಟನೆಯಿಂದ...

Read moreDetails
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025
Next Post
ಸಂಪುಟ ವಿಸ್ತರಣೆ ಸುಸೂತ್ರ- ಫಲಿಸಿತೇ ಸಿಎಂ ತಂತ್ರಗಾರಿಕೆ?

ಸಂಪುಟ ವಿಸ್ತರಣೆ ಸುಸೂತ್ರ- ಫಲಿಸಿತೇ ಸಿಎಂ ತಂತ್ರಗಾರಿಕೆ?

Please login to join discussion

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada