• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಶಾಲಾ ಶಿಕ್ಷಣಕ್ಕೆ 3,000 ಕೋಟಿ ರುಪಾಯಿ ಕಡಿತ ಮಾಡಿದ ನರೇಂದ್ರ ಮೋದಿ ಸರ್ಕಾರ

by
December 9, 2019
in ದೇಶ
0
ಶಾಲಾ ಶಿಕ್ಷಣಕ್ಕೆ 3
Share on WhatsAppShare on FacebookShare on Telegram

ಇತ್ತೀಚೆಗೆ ಕಾರ್ಪೊರೆಟ್ ವಲಯಕ್ಕೆ 1.40 ಲಕ್ಷ ಕೋಟಿ ರುಪಾಯಿ ತೆರಿಗೆ ಕಡಿತದ ‘ಉಡುಗೊರೆ’ ನೀಡಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನಸಾಮಾನ್ಯರಿಗಾಗಿ ಏನು ಮಾಡಿದೆ ಗೊತ್ತೇ? ಪ್ರಸಕ್ತ ವಿತ್ತೀಯ ವರ್ಷದಲ್ಲಿ ಶಾಲಾ ಶಿಕ್ಷಣಕ್ಕಾಗಿ ಮೀಸಲಾಗಿಟ್ಟಿದ್ದ ಮೊತ್ತದಲ್ಲಿ 3,000 ಕೋಟಿ ರುಪಾಯಿಗಳನ್ನು ಕಡಿತ ಮಾಡಿದೆ. ಸಾಮಾನ್ಯವಾಗಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಮೀಸಲಿಟ್ಟ ಹಣಕ್ಕಿಂತ ಹೆಚ್ಚಿನ ಅನುದಾನ ನೀಡುವುದು ಜನಪರ ಸರ್ಕಾರದ ಸೌಜನ್ಯದ ನಡವಳಿಕೆ. ಆದರೆ, ಮೋದಿ ಸರ್ಕಾರ ಈ ಸೌಜನ್ಯದ ನಡವಳಿಕೆಗೆ ವ್ಯತಿರಿಕ್ತವಾಗಿ ಬಜೆಟ್ ನಲ್ಲಿ ಮೀಸಲಿಟ್ಟ ಮೊತ್ತದಲ್ಲೇ 3,000 ಕೋಟಿ ರುಪಾಯಿ ಕಡಿತ ಮಾಡಿದೆ.

ADVERTISEMENT

‘ದಿ ಪ್ರಿಂಟ್’ ವರದಿ ಪ್ರಕಾರ, ಮೋದಿ ಸರ್ಕಾರವು ಹಣದ ಕೊರತೆಯ ನೆಪವೊಡ್ಡಿ ಬಜೆಟ್ ನಲ್ಲಿ ಶಿಕ್ಷಣಕ್ಕೆ ಮೀಸಲಿಟ್ಟಿದ್ದ ಮೊತ್ತದಲ್ಲಿ 3,000 ಕೋಟಿ ರುಪಾಯಿಗಳನ್ನು ಕಡಿತ ಮಾಡಿದೆ. ಪ್ರಸಕ್ತ ವಿತ್ತೀಯ ವರ್ಷದಲ್ಲಿ (2019-20) ಶಿಕ್ಷಣ ಇಲಾಖೆಯ ವಿವಿಧ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಕಡಿತ ಮಾಡಲಾಗುತ್ತಿದೆ.

ಶಿಕ್ಷಣದ ಮೇಲ್ವಿಚಾರಣೆ ಹೊಣೆ ಹೊತ್ತಿರುವ ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್‌ಆರ್‌ಡಿ) ಸಚಿವಾಲಯದ ಉನ್ನತ ಮೂಲಗಳ ಪ್ರಕಾರ- ಹಣಕಾಸು ಸಚಿವಾಲಯವು 3,000 ಕೋಟಿ ಹಣ ಕಡಿತ ಮಾಡುವುದರ ಪ್ರಸ್ತಾಪದ ಹಿಂದಿನ ಕಾರಣವು ಹಣದ ಕೊರತೆಯಾಗಿದೆ. 2019-20ರ ವಿತ್ತೀಯ ವರ್ಷದಲ್ಲಿ 56,536.63 ಕೋಟಿ ರೂ.ಗಳನ್ನು ಶಾಲಾ ಶಿಕ್ಷಣ ಇಲಾಖೆಗೆ ಮಂಜೂರು ಮಾಡಲಾಗಿದೆ. ಎರಡು ವಾರಗಳ ಹಿಂದೆ ಮಾನವ ಸಂಪನ್ಮೂಲ ಇಲಾಖೆ ಮತ್ತು ಹಣಕಾಸು ಸಚಿವಾಲಯಗಳ ಉನ್ನತ ಅಧಿಕಾರಿಗಳ ಸಭೆಯಲ್ಲಿ ಹಣ ಕಡಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ದಿ ಪ್ರಿಂಟ್’ ವರದಿ ಮಾಡಿದೆ.

‘ಹಣಕಾಸು ಸಚಿವಾಲಯದ ಅಧಿಕಾರಿಗಳು ಶಾಲಾ ಶಿಕ್ಷಣಕ್ಕಾಗಿ ಬಜೆಟ್ ಅನ್ನು 3,000 ಕೋಟಿ ರೂ.ಗಳಷ್ಟು ಕಡಿಮೆಗೊಳಿಸಬೇಕಾಗಿದೆ’ ಎಂದು ಮಾನವಸಂಪನ್ಮೂಲ ಇಲಾಖೆಗೆ ತಿಳಿಸಿದ್ದಾರೆಂದು ಸಚಿವಾಲಯದ ಮೂಲಗಳು ತಿಳಿಸಿವೆ. ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಪ್ರಸಕ್ತ ವಿತ್ತೀಯ ವರ್ಷದ ಬಜೆಟ್ ನಲ್ಲಿ ಮೀಸಲಾಗಿರುವಷ್ಟೂ ಅನುದಾನವನ್ನು ಒದಗಿಸುವಂತೆ ಹಣಕಾಸು ಸಚಿವಾಲಯಕ್ಕೆ ಕೋರಿದ್ದಾರೆ, ಮಾನವ ಸಂಪನ್ಮೂಲ ಅಧಿಕಾರಿಗಳೊಂದಿಗೆ ಪೂರ್ಣ ಅನುದಾನ ಪಡೆಯುವ ಪ್ರಯತ್ನವನ್ನು ಮುಂದುವರಿಸಿದ್ದರೆ ಎಂದು ‘ದಿ ಪ್ರಿಂಟ್’ ಹೇಳಿದೆ.

‘ಮಾನವ ಸಂಪನ್ಮೂಲ ಸಚಿವಾಲಯವು ಪೂರ್ಣ ಮೊತ್ತವನ್ನು ಬಿಡುಗಡೆ ಮಾಡಲು ಹಣಕಾಸು ಸಚಿವಾಲಯಕ್ಕೆ ಒತ್ತಾಯಿಸುತ್ತಿದೆ, ಏಕೆಂದರೆ ಶಾಲಾ ಶಿಕ್ಷಣ ಇಲಾಖೆಗೆ ಹಣವನ್ನು ಹೊಂದಿಸಿಕೊಳ್ಳಲು ಬೇರೆ ಮಾರ್ಗಗಳಿಲ್ಲ. ಉನ್ನತ ಶಿಕ್ಷಣ ಇಲಾಖೆಯು ಹೆಫಾ (ಉನ್ನತ ಶಿಕ್ಷಣ ಹಣಕಾಸು ಸಂಸ್ಥೆ) ಯಂತಹ ವಿಷಯಗಳನ್ನು ಹೊಂದಿದೆ, ಅದರ ಮೂಲಕ ಅವರು ಹಣವನ್ನು ಸಂಗ್ರಹಿಸಬಹುದು, ಆದರೆ ಶಾಲಾ ಶಿಕ್ಷಣಕ್ಕೆ (ಇಲಾಖೆ) ಅಂತಹ ಯಾವುದೇ ಮಾರ್ಗಗಳಿಲ್ಲ’ ಎಂದು ಸಚಿವಾಲಯದ ಮತ್ತೊಂದು ಮೂಲ ತಿಳಿಸಿದೆ. ಉದ್ದೇಶಿತ ನಿಧಿ ಕಡಿತದ ಬಗ್ಗೆ ಕೇಳಿದಾಗ, ಮಾನವ ಸಂಪನ್ಮೂಲ ಸಚಿವಾಲಯದ ಅಧಿಕೃತ ವಕ್ತಾರರು ‘ಇದು ನಿಜವಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆಂದೂ, ಆದರೆ ಮುಂದಿನ ವಾರ ಈ ವಿಷಯದಲ್ಲಿ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ. ಹಣಕಾಸು ಸಚಿವಾಲಯದ ಅಧಿಕೃತ ವಕ್ತಾರ ರಾಜೇಶ್ ಮಲ್ಹೋತ್ರಾ ಅವರಿಗೆ ಕಳುಹಿಸಿದ ಇಮೇಲ್ ಈ ವರದಿಯನ್ನು ಪ್ರಕಟಿಸುವ ಸಮಯದವರೆಗೆ ಉತ್ತರಿಸಿರಲಿಲ್ಲ ಎಂದೂ ‘ದಿ ಪ್ರಿಂಟ್’ ವರದಿ ಮಾಡಿದೆ.

ಮಾನವ ಸಂಪನ್ಮೂಲ ಸಚಿವಾಲಯದ ಅಧಿಕಾರಿಗಳ ಪ್ರಕಾರ, ಉದ್ದೇಶಿತ ಅನುದಾನ ಕಡಿತವು ಶಾಲಾ ಶಿಕ್ಷಣ ಇಲಾಖೆಯು ಹಮ್ಮಿಕೊಂಡಿರುವ ಅನೇಕ ಯೋಜನೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ. ‘ಶಾಲಾ ಶಿಕ್ಷಣ ಇಲಾಖೆಯು ಅದರ ವಿವಿಧ ಯೋಜನೆಗಳನ್ನು ನಡೆಸಲು ಹಣದ ಅಗತ್ಯವಿದೆ. ಕೇಂದ್ರೀಯ ವಿದ್ಯಾಲಯಗಳಿಗೆ ಹಣ ಬೇಕು, ನವೋದಯ ವಿದ್ಯಾಲಯಗಳಿಗೆ ಹಣ ಬೇಕು, ಅನೇಕ ಶಿಕ್ಷಕರಿಗೆ ಸಂಬಳ ಕೂಡ ಸಿಕ್ಕಿಲ್ಲ. ಅನುದಾನದ ಪೈಕಿ 3,000 ಕೋಟಿ ರೂ.ಗಳನ್ನು ಕಡಿತಗೊಳಿಸಿದರೆ, ಏನಾಗುತ್ತದೆ ಎಂದು ನಮಗೆ ಖಚಿತವಿಲ್ಲ, ಆದ್ದರಿಂದ, ನಮಗೆ ಪೂರ್ಣ ಬಜೆಟ್ ನೀಡುವಂತೆ ನಾವು ಹಣಕಾಸು ಸಚಿವಾಲಯವನ್ನು ಕೋರುತ್ತಿದ್ದೇವೆ’ ಎಂದು ಮೂಲಗಳು ತಿಳಿಸಿವೆ. ಶಾಲಾ ಶಿಕ್ಷಣ ಇಲಾಖೆಯ ಹೆಚ್ಚಿನ ಹಣವನ್ನು ಸಮಗ್ರ ಶಿಕ್ಷಣ ಅಭಿಯಾನದಂತಹ ಕೇಂದ್ರ ಸರ್ಕಾರದ ಯೋಜನೆಗಳನ್ನು ನಡೆಸಲು ಬಳಸಲಾಗುತ್ತದೆ, ಇದು ‘ಶಾಲಾ ಶಿಕ್ಷಣ ಮತ್ತು ಸಮಾನ ಕಲಿಕೆಯ ಫಲಿತಾಂಶಗಳಿಗೆ ಸಮಾನ ಅವಕಾಶಗಳ ದೃಷ್ಟಿಯಿಂದ ಅಳೆಯುವ ಶಾಲಾ ಪರಿಣಾಮಕಾರಿತ್ವವನ್ನು ಸುಧಾರಿಸುವ’ ಗುರಿಯನ್ನು ಹೊಂದಿದೆ.

ಕಳೆದ ಮೂರು ವರ್ಷಗಳಲ್ಲಿ ಶಾಲಾ ಶಿಕ್ಷಣ ಇಲಾಖೆಯ ಬಜೆಟ್ ಅನ್ನು 9,000 ಕೋಟಿ ರೂ.ಗಳಷ್ಟು ಹೆಚ್ಚಿಸಲಾಗಿದೆ. 2017-18ನೇ ಸಾಲಿನಲ್ಲಿ ಸುಮಾರು 46,000 ಕೋಟಿ ರುಪಾಯಿಗಳಷ್ಟು ಇದ್ದದ್ದು 2019-20ನೇ ಸಾಲಿನಲ್ಲಿ 56536 ಕೋಟಿ ರುಪಾಯಿಗಳಿಗೆ ಏರಿಸಲಾಗಿದೆ. 2016-17ರ ಬಜೆಟ್ ಅಂದಾಜು 43,554 ಕೋಟಿ ರುಪಾಯಿ. ಪರಿಷ್ಕೃತ ಅಂದಾಜು 43,896 ಕೋಟಿ ರುಪಾಯಿ. 2017-18ರಲ್ಲಿ ಬಜೆಟ್ ಅಂದಾಜು 46,356 ಕೋಟಿ ರುಪಾಯಿ ಮತ್ತು ಪರಿಷ್ಕೃತ ಅಂದಾಜು 47,008 ಕೋಟಿ ರುಪಾಯಿ. 2018-19 ರಲ್ಲಿ ಬಜೆಟ್ ಅಂದಾಜು 50,000 ಕೋಟಿ ಮತ್ತು ಪರಿಷ್ಕೃತ 50,113 ಕೋಟಿ ರುಪಾಯಿಗಳಾಗಿವೆ.

ಸಾಮಾನ್ಯವಾಗಿ ಪರಿಷ್ಕೃತ ಅಂದಾಜು ಗರಿಷ್ಠ ಪ್ರಮಾಣದಲ್ಲಿ ಹೆಚ್ಚಾಗುತ್ತದೆ. ಆದರೆ, ಕಳೆದ ನಾಲ್ಕು ವರ್ಷಗಳಲ್ಲಿ, ಪರಿಷ್ಕೃತ ಅಂದಾಜುಗಳು ಒಂದೇ ಆಗಿರುತ್ತವೆ ಅಥವಾ ಸ್ವಲ್ಪಮಟ್ಟಿಗೆ ಹೆಚ್ಚಾಗಿದೆ. ಬಜೆಟ್ ಅಂದಾಜು ಎಂಬುದು ಆಯ ವಿತ್ತೀಯ ವರ್ಷದಲ್ಲಿ ನಿಗದಿತ ಸಚಿವಾಲಯಕ್ಕೆ ಎಷ್ಟು ಅಗತ್ಯವಿರುತ್ತದೆ ಎಂಬುದರ ಆಧಾರದ ಮೇಲೆ ಅನುದಾನ ಹಂಚಿಕೆ ಮಾಡಲಾಗುತ್ತದೆ. ಆದರೆ ಪರಿಷ್ಕೃತ ಅಂದಾಜು ಎಂದರೆ ಆ ವರ್ಷದಲ್ಲಿ ಸಚಿವಾಲಯವು ಮಾಡುವ ಒಟ್ಟು ಖರ್ಚಿನ ಪ್ರಮಾಣವನ್ನು ಪ್ರತಿಬಿಂಬಿಸುತ್ತದೆ. ಬಹುತೇಕ ಸಚಿವಾಲಯಗಳಲ್ಲಿ ಬಜೆಟ್ ಅಂದಾಜಿಗಿಂತಲೂ ಪರಿಷ್ಕೃತ ಅಂದಾಜು ಶೇ.10ಕ್ಕಿಂತಲೂ ಹೆಚ್ಚಿರುತ್ತದೆ. ಹೀಗಾಗಿ ಬಜೆಟ್ ಅಂದಾಜಿನಲ್ಲಿ ಮೀಸಲಿಟ್ಟ ಅನುದಾನವನ್ನೇ ಕಡಿತ ಮಾಡಿದರೆ, ನಿಭಾಯಿಸುವುದು ಕಷ್ಟವಾಗುತ್ತದೆ. ಪ್ರಸ್ತುತ ಶಾಲಾ ಶಿಕ್ಷಣ ಇಲಾಖೆಗೆ ಅನುದಾನ ಕಡಿತ ಮಾಡಿರುವುದರಿಂದ ಹಲವು ಯೋಜನೆಗಳಿಗೆ ಹಿನ್ನಡೆಯಾಗಲಿದೆ.

Tags: #EducationbudgetEducation SystemHuman Resource Development MinistryNarendra Modi governmentreducesanctionedSchoolಕಡಿತನರೇಂದ್ರ ಮೋದಿ ಸರ್ಕಾರಬಜೆಟ್ಮಂಜೂರುಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಶಾಲಾ ಶಿಕ್ಷಣ
Previous Post

ಉಪಚುನಾವಣೆ ಫಲಿತಾಂಶದಿಂದ ಬಿಜೆಪಿಸರ್ಕಾರ ಸುಭದ್ರ, ಕಾಂಗ್ರೆಸ್-ಜೆಡಿಎಸ್ ಅಭದ್ರ

Next Post

ಸೇನೆ ಜತೆ ಮೈತ್ರಿ ಅನಿವಾರ್ಯವಾಗಿತ್ತು: ಪವಾರ್

Related Posts

Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
0

16 ಬಜೆಟ್ ಮಂಡಿಸಿದವರು ಸಿದ್ದರಾಮಯ್ಯ. ದೇವರಾಜ್ ಅರಸ್ ದಾಖಲೆ ಮುರಿದು ಸಿಎಂ ಆಗಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸ ಸಿಎಂ ಮೇಲಿರಲಿ. ನಿಮ್ಮ ಆಶೀರ್ವಾದ ಇರೋವರೆಗೂ ಸಿದ್ದರಾಮಯ್ಯ ಅವರಿಗೆ...

Read moreDetails

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025

CM Siddaramaiah: ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ..!!

July 12, 2025

Santhosh Lad: ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ..

July 12, 2025
Next Post
ಸೇನೆ ಜತೆ ಮೈತ್ರಿ ಅನಿವಾರ್ಯವಾಗಿತ್ತು: ಪವಾರ್

ಸೇನೆ ಜತೆ ಮೈತ್ರಿ ಅನಿವಾರ್ಯವಾಗಿತ್ತು: ಪವಾರ್

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada