• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಶಾಹಿನ್‌ ಬಾಗ್‌ CAA ಪ್ರತಿಭಟನಾ ಸ್ಥಳದಲ್ಲಿ ಪೆಟ್ರೋಲ್‌ ಬಾಂಬ್‌ ದಾಳಿ 

by
March 23, 2020
in ದೇಶ
0
ಶಾಹಿನ್‌ ಬಾಗ್‌ CAA ಪ್ರತಿಭಟನಾ ಸ್ಥಳದಲ್ಲಿ ಪೆಟ್ರೋಲ್‌ ಬಾಂಬ್‌ ದಾಳಿ 
Share on WhatsAppShare on FacebookShare on Telegram

ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act) ವಿರೋಧಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿತ್ತು. ಆ ಬಳಿಕ ದೇಶದಲ್ಲಿ‌ ಮಹಾಮಾರಿ ಕರೋನಾ ಅಟ್ಟಹಾಸ ಶುರು ಮಾಡಿದ ಬಳಿಕ ಪೌರತ್ವ ತಿದ್ದುಪಡಿ ವಿರುದ್ದದ ಹೋರಾಟ ನಿಧಾನವಾಗಿ ಕಡಿಮೆಯಾಗಿತ್ತು. ಆದರೆ ದೆಹಲಿಯ ಶಾಹಿನ್‌ ಭಾಗ್‌ನಲ್ಲಿ ನಡೆಯುತ್ತಿದ್ದ ನಿರಂತರ ಹೋರಾಟ ಮಾತ್ರ ಅಂತ್ಯವಾಗಿರಲಿಲ್ಲ. ನರೇಂದ್ರ ಮೋದಿ ಭಾರತದಲ್ಲಿ ಜನತಾ ಕರ್ಫ್ಯೂ ಆಚರಣೆ ಮಾಡಲು ಕರೆ ಕೊಟ್ಟಿದ್ದರಿಂದ ಭಾನುವಾರ ಶಾಹಿನ್‌ಭಾಗ್‌ನ ಹೋರಾಟಗಾರರು ಮಾರ್ಚ್‌ 31ರ ತನಕ ಹೋರಾಟಕ್ಕೆ ಮಧ್ಯಂತರ ಬ್ರೇಕ್‌ ಕೊಟ್ಟು ಮತ್ತೆ ಮಾರ್ಚ್‌ 31ರ ಬಳಿಕ ಹೋರಾಟ ಮಾಡೋಣ ಎಂದು ನಿರ್ಧಾರ ಮಾಡಿದ್ದರು. ಈ ನಿರ್ಧಾರದ ಬಳಿಕ ನಡೆದ ಘಟನೆ ದೆಹಲಿಯ ಕಾನೂನು ವ್ಯವಸ್ಥೆಯನ್ನೇ ಪ್ರಶ್ನೆ ಮಾಡುವಂತಿದೆ.

ಕೆಲವು ದಿನಗಳ ಹಿಂದಷ್ಟೇ ದೆಹಲಿಯಲ್ಲಿ ಭಿಕರವಾದ ಹಿಂಸಾಚಾರ ನಡೆದಿತ್ತು. ಹೆಚ್ಚು ಕಡಿಮೆ ಒಂದು ತಿಂಗಳ ಹಿಂದೆ ನಡೆದ ಹಿಂಸಾಚಾರದಲ್ಲಿ 45ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತ ಪ್ರವಾಸ ಕೈಗೊಂಡಿದ್ದ ಮರುದಿನವೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಪೊಲೀಸರ ಮೇಲೆ ಕಲ್ಲು ತೂರಾಟ, ಗುಪ್ತಚರ ಇಲಾಖೆ ಅಧಿಕಾರಿ ಹತ್ಯೆ, ಪೆಟ್ರೋಲ್‌ ಬಾಂಬ್‌ ಎಸೆತ ಸೇರಿದಂತೆ ಸಾಕಷ್ಟು ಘಟನೆಗಳು ನಡೆದಿದ್ದವು. ಆ ಬಳಿಕ ಘರ್ಷಣೆಯನ್ನೇ ಲಾಭ ಮಾಡಿಕೊಳ್ಳಲು ಮುಂದಾಗಿದ್ದ ಕಿಡಿಗೇಡಿಗಳು ಬಂದೂಕಿನಿಂದ ಗುಂಡು ಹಾರಿಸಿದ್ದ ಘಟನೆಯೂ ನಡೆದಿತ್ತು. ಇಷ್ಟೆಲ್ಲಾ ಘಟನೆ ಬಳಿಕ ಇಡೀ ದೇಶವೇ ಆಕ್ರೋಶಕ್ಕೆ ಒಳಗಾಗಿತ್ತು. ಕಾನೂನು ಸುವ್ಯವಸ್ಥೆ ನೋಡಿಕೊಳ್ಳುವಲ್ಲಿ ದೆಹಲಿ ಸರ್ಕಾರ ವಿಫಲವಾಗಿದೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಇದೀಗ ಮತ್ತೊಮ್ಮೆ ಅದೇ ರೀತಿಯ ಘಟನೆಗಳು ನಡೆದಿವೆ.

ಕರೋನಾ ವೈರಸ್‌ ಹರಡುವ ಭೀತಿಯಲ್ಲಿ ಹೋರಾಟಗಾರರು ಮಧ್ಯಂತರವಾಗಿ ಹೋರಾಟ ಸ್ಥಗಿತ ಮಾಡಿದ್ದು, ಮಾರ್ಚ್‌ 31ರ ತನಕ ತಮ್ಮ ಮನೆಗಳಿಗೆ ವಾಪಸ್‌ ಆಗಿದ್ದರು. ಆದರೆ ಜಾಮಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಹೊರಗೆ ದುಷ್ಕರ್ಮಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿ, ಪೆಟ್ರೋಲ್‌ ಬಾಂಬ್‌ ದಾಳಿ ಮಾಡಿದ್ದಾನೆ. ಆತನ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಡೆಲಿವೆರಿ ಬಾಯ್‌ ರೂಪದಲ್ಲಿ ಬಂದಿದ್ದ ಆಗಂತುಕ ಗೇಟ್‌ ನಂಬರ್‌ 7ರ ಬಳಿ ಪೆಟ್ರೋಲ್‌ ಬಾಂಬ್‌ ಎಸೆದಿದ್ದಾನೆ. ಗಾಡಿಯಲ್ಲಿ ಮೂರು ಬ್ಯಾಗ್‌ ನೇತು ಹಾಕಿದ್ರಿಂದ ಆ ವಾಹನದ ನಂಬರ್‌ ಪ್ಲೇಟ್‌ ಬೇರೆ ಕಾಣಿಸಿಲ್ಲ. ಪೊಲೀಸರು ಗುಂಡು ಹಾಗು ಐದಾರು ಬಾಟೆಲ್‌ಗಳನ್ನು ವಶಕ್ಕೆ ಪಡೆದಿದ್ದು, ಆರೋಪಿ ಪತ್ತೆಗಾಗಿ ಜಾಡು ಹಿಡಿದಿದ್ದಾರೆ.

A few hours ago, a petrol bomb was thrown to violently disrupt our protest. Unidentified miscreants allegedly threw the bomb at the outer barricades that cordon off the site of the #ShaheenBagh gathering and ran off. (1/4)#ShaheenBaghProtests#covidindia#JantaCurfewMarch22 pic.twitter.com/qn0qVRoTVF

— Shaheen Bagh Official (@Shaheenbaghoff1) March 22, 2020


ADVERTISEMENT

ಪೊಲೀಸರು ದೆಹಲಿಯಲ್ಲಿ ಹಿಂಸಾಚಾರ ನಡೆಯುವಾಗಲೂ ಸೂಕ್ತ ಕ್ರಮಕೈಗೊಂಡಿಲ್ಲ ಎನ್ನುವ ಮಾತುಗಳು ಕೇಳಿಬಂದಿದ್ದವು. ಅದಕ್ಕೂ ಮೊದಲು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟದ ವೇಳೆ ದುಷ್ಕರ್ಮಿಯೊಬ್ಬ ಗುಂಡು ಹಾರಿಸುತ್ತಿದ್ದ. ಪಕ್ಕದಲ್ಲೇ ಮೂಕ ಪ್ರೇಕ್ಷರಂತೆ ನಿಂತಿದ್ದ ಪೊಲೀಸರು ಸಾಥ್‌ ಕೊಡ್ತಿದ್ದಾರಾ ಎನ್ನುವಂತೆ ಭಾಸವಾಗುವಂತಿತ್ತು. ದೆಹಲಿ ಗಲಭೆ ಬಳಿಕ ನೂರಾರು ಎಫ್‌ಐಆರ್‌ ಹಾಕಿದ್ದ ಪೊಲೀಸರು ಸಾವಿರಾರು ಜನರನ್ನು ಬಂಧಿಸಿದ್ದರು. ಆ ಬಳಿಕವೂ ಪೊಲೀಸರು ದುಷ್ಕರ್ಮಿಗಳನ್ನು ಮಟ್ಟಹಾಕುವಲ್ಲಿ ವಿಫಲರಾಗಿದ್ದಾರೆ ಎನ್ನಲಾಗ್ತಿದೆ. ಪೊಲೀಸ್‌ ಇಲಾಖೆ ದೆಹಲಿ ಸರ್ಕಾರದ ವ್ಯಾಪ್ತಿಯಲ್ಲಿ ಇಲ್ಲದೆ ಇರುವುದು ಇಷ್ಟೆಲ್ಲಾ ರಂಪಾಟಕ್ಕೆ ಕಾರಣ. ಕೇಂದ್ರ ಸರ್ಕಾರ ರಾಷ್ಟ್ರಮಟ್ಟದಲ್ಲಿ ಗುಪ್ತಚರ ಇಲಾಖೆ ಸೇರಿದಂತೆ ಸಾಕಷ್ಟು ಇಲಾಖೆಗಳಿದ್ದು, ದೆಹಲಿಯ ಕಾನೂನು ಸುವ್ಯವಸ್ಥೆ ನೋಡಿಕೊಳ್ಳುವಲ್ಲಿ ವಿಫಲವಾಗ್ತಿದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಆದರೆ ಪ್ರತಿಭಟನಾಕಾರರು ಜಾಗ ಖಾಲಿ ಮಾಡಿದ್ದರಿಂದ ಯಾವುದೇ ಸಮಸ್ಯೆ ಎದುರಾಗಿಲ್ಲ. ಒಂದು ವೇಳೆ ನೂರಾರು ಮಹಿಳೆಯರು ಪ್ರತಿಭಟನೆ ನಡೆಸುವ ಸಮಯದಲ್ಲಿ ಈ ಘಟನೆ ನಡೆದಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು. ಆದರೆ, ಇದೀಗ ನಡೆದಿರುವ ಘಟನೆ ಮಾರ್ಚ್‌ 31ರ ಬಳಿಕ ಮತ್ತೊಮ್ಮೆ ಪ್ರತಿಭಟನೆ ನಡೆಸಬಾರದು ಎನ್ನುವ ಕಾರಣಕ್ಕೆ ಬೆದರಿಸುವ ತಂತ್ರ ಮಾಡಿದ್ದಾರೆ ಎನ್ನಲಾಗ್ತಿದೆ. ಪೊಲೀಸರು ಈಗಲಾದ್ರೂ ಕಠಿಣ ಕ್ರಮ ಕೈಗೊಳ್ತಾರಾ ಎನ್ನುವುದನ್ನು ಕಾದು ನೋಡ್ಬೇಕು.

Tags: CAA ProtestsPetrol BombShahin Baghಪೆಟ್ರೋಲ್‌ ಬಾಂಬ್‌ ದಾಳಿಶಾಹಿನ್‌ ಬಾಗ್‌
Previous Post

ಕರೋನಾ ಭೀತಿ: ಉನ್ಮಾದತೆಯ ಮನಸ್ಥಿತಿ ಹುಟ್ಟುಹಾಕಿದ ಚಪ್ಪಾಳೆ ಕರೆ!

Next Post

ಕೆಂಪು ಉಗ್ರರ ರಕ್ತದಾಹಕ್ಕೆ ಇನ್ನೆಷ್ಟು ಯೋಧರು ಬಲಿಯಾಗಬೇಕಿದೆ..!?

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
ಕೆಂಪು ಉಗ್ರರ ರಕ್ತದಾಹಕ್ಕೆ ಇನ್ನೆಷ್ಟು ಯೋಧರು ಬಲಿಯಾಗಬೇಕಿದೆ..!?

ಕೆಂಪು ಉಗ್ರರ ರಕ್ತದಾಹಕ್ಕೆ ಇನ್ನೆಷ್ಟು ಯೋಧರು ಬಲಿಯಾಗಬೇಕಿದೆ..!?

Please login to join discussion

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada