• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಂತ್ರಸ್ಥರ ಮನೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ; ಆರೋಪಕ್ಕೆ ಸಚಿವ ಸೋಮಣ್ಣ ಗರಂ

by
May 25, 2020
in ಕರ್ನಾಟಕ
0
ಸಂತ್ರಸ್ಥರ ಮನೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ; ಆರೋಪಕ್ಕೆ ಸಚಿವ ಸೋಮಣ್ಣ ಗರಂ
Share on WhatsAppShare on FacebookShare on Telegram

ಕೊಡಗಿನಲ್ಲಿ ಕಳೆದ ಎರಡು ವರ್ಷಗಳ ಮಳೆಗಾಲದಲ್ಲಿ ಸುರಿದ ಮಹಾಮಳೆ ಮತ್ತು ಭೀಕರ ಭುಕುಸಿತಕ್ಕೆ ಸಿಲುಕಿ ನೂರಾರು ಜನರು ರಾತ್ರೋರಾತ್ರಿ ಸಂತ್ರಸ್ಥರಾದರು. ರಾಜ್ಯಾದ್ಯಂತ ದಾನಿಗಳಿಂದ ಸಂಘ ಸಂಸ್ಥೆಗಳಿಂದ ನೆರವಿನ ಮಹಾಪೂರವೇ ಹರಿದು ಬಂತು. ಸಂತ್ರಸ್ಥರೂ ಚೇತರಿಸಿಕೊಂಡರು. ರಾಜ್ಯದ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರೇ ಕೊಡಗಿಗೆ ಭೇಟಿ ನೀಡಿ ಜನರ, ಸಂತ್ರಸ್ಥರ ಸಂಕಷ್ಟ ಆಲಿಸಿದರು ಜತೆಗೇ ಶೀಘ್ರ ಮನೆಗಳ ನಿರ್ಮಾಣ ಮಾಡಿಕೊಡುವ ಭರವಸೆಯನ್ನೂ ನೀಡಿ ಹೋದರು. ಅಂದಿನ ಮುಖ್ಯ ಮಂತ್ರಿಗಳ ಪ್ರಕಾರ 6 ತಿಂಗಳಿನೊಳಗೆ ಮನೆಗಳನ್ನು ಸಂತ್ರಸ್ಥರಿಗೆ ಹಂಚಿಕೆ ಮಾಡಬೇಕಿತ್ತು.

ADVERTISEMENT

ತ್ವರಿತ ಮನೆಗಳ ನಿರ್ಮಾಣಕ್ಕಾಗಿ ಸ್ವತಃ ಮುಖ್ಯ ಮಂತ್ರಿಗಳ ಅದ್ಯಕ್ಷತೆಯಲ್ಲೇ ಕೊಡಗು ಪುನರ್‌ನಿರ್ಮಾಣ ಪ್ರಾಧಿಕಾರವನ್ನೂ ರಚನೆ ಮಾಡಲಾಯಿತು. ಈ ಪ್ರಾಧಿಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕೊಡಗಿನ ಶಾಸಕರಾದ ಎಂ ಪಿ ಅಪ್ಪಚ್ಚು ರಂಜನ್ ಮತ್ತು ಕೆ ಜಿ ಬೋಪಯ್ಯ ಅವರೂ ಸದಸ್ಯರಾಗಿದ್ದರು. ಆದರೆ ಈ ಪ್ರಾಧಿಕಾರದ ರಚನೆ ಆಗಿರುವುದೇ ಕೊಡಗಿನ ಜನತೆಗೆ ಮರೆತೇ ಹೋಗಿದೆ. ಏಕೆಂದರೆ ಒಂದೆರಡು ಬಾರಿ ಪತ್ರಿಕೆಗಳಲ್ಲಿ ಬಂದದ್ದು ಬಿಟ್ಟರೆ ಈ ಪ್ರಾಧಿಕಾರ ಈವರೆಗೆ ಎಷ್ಟು ಸಭೆ ನಡೆಸಿದೆ ಎಂದು ಯಾರಿಗೂ ಗೊತ್ತಿಲ್ಲ. ಮಡಿಕೇರಿ ತಾಲ್ಲೂಕಿನ ಮದೆ, ಕರ್ಣಂಗೇರಿ, ಕೆ ನಿಡುಗಣೆ ಮತ್ತು ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ ಮನೆಗಳಿಗೆ ಸ್ಥಳ ಗುರುತಿಸಿ ಸಂತ್ರಸ್ಥರಿಗಾಗಿ ಒಟ್ಟು 840 ಮನೆಗಳ ನಿರ್ಮಾಣಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಪ್ರತೀ ಮನೆಯೂ 512 ಚದರ ಅಡಿಗಳ ವಿಸ್ತೀರ್ಣವಿದ್ದು ಈ ಮನೆಗಳನ್ನು ತಲಾ 9.85 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. 2018 ರ ಮಳೆ ಹಾನಿ ಸಂತ್ರಸ್ಥರ ಮನೆಗಳ ನಿರ್ಮಾಣಕ್ಕೆ ಮುಂಬೈ ಮೂಲದ ಕಂಪೆನಿಯೊಂದಕ್ಕೆ ಗುತ್ತಿಗೆ ನೀಡಲಾಗಿದ್ದರೆ 2019 ರಲ್ಲಿ ಹಾನಿಗೀಡಾದ ಸಂತ್ರಸ್ಥರ ಮನೆಗಳ ನಿರ್ಮಾಣ ಕಾರ್ಯವನ್ನು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ನೀಡಲಾಗಿದೆ.

ಇದೀಗ ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ ನಿರ್ಮಾಣವಾಗುತ್ತಿರುವ ಮನೆಗಳ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದೆ. ಇನ್ನು ಕೆಲವೇ ದಿನಗಳಲ್ಲಿ ಸಂತ್ರಸ್ಥರಿಗೆ ಸ್ವತಃ ಮುಖ್ಯ ಮಂತ್ರಿ ಬಿ ಯಸ್ ಯಡಿಯೂರಪ್ಪ ಅವರೇ ಆಗಮಿಸಿ ಹಂಚಿಕೆ ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಈಗಾಗಲೇ ಪೂರ್ಣಗೊಂಡಿರುವ ಮನೆಗಳ ಕಾಮಗಾರಿ ಕಳಪೆ ಆಗಿದೆ ಎಂದು ಸಂಘಟನೆಯೊಂದು ಆರೋಪಿಸಿದೆ. ಈ ಕುರಿತು ಚಿತ್ರ ಸಹಿತ ಮಾಹಿತಿಯನ್ನು ಮಾಧ್ಯಮಗಳ ಗಮನಕ್ಕೆ ತಂದಿರುವ ನಮ್ಮ ಕೊಡಗು ತಂಡದ ಮುಖಂಡ ನೌಶಾದ್ ಅವರು ಮನೆಗಳ ಗೋಡೆಗಳ ಕೆಳಭಾಗದಲ್ಲೇ ಟೊಳ್ಳಾಗಿದ್ದು ಗೋಣೀಚೀಲ, ಮರದ ಬೇರುಗಳು ಪತ್ತೆ ಆಗಿವೆ. ಕೆಲವೆಡೆಗಳಲ್ಲಿ ಹಾಕಿರುವ ಪ್ಲಾಸ್ಟರಿಂಗ್ ಈಗಾಗಲೇ ಬಿರುಕು ಬಿಟ್ಟಿದೆ ಎಂದು ಚಿತ್ರ ಸಹಿತ ತೋರಿದರು.

ಮೊನ್ನೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ, ಸಂಸದ ಪ್ರತಾಪ ಸಿಂಹ ಮತ್ತು ಶಾಸಕ ಎಂ ಪಿ ಅಪ್ಪಚ್ಚು ರಂಜನ್ ಅವರ ತಂಡ ಜಂಬೂರಿಗೆ ಭೇಟಿ ನೀಡಿ ಮನೆಗಳ ನಿರ್ಮಾಣ ಪ್ರಗತಿಯನ್ನೂ ಪರಿಶೀಲಿಸಿತು. ಈ ಸಂದರ್ಭದಲ್ಲಿ ಅಲ್ಲಿ ಹಾಜರಿದ್ದ ನೌಶಾದ್ ಅವರು ಸ್ವತಃ ಸಚಿವ ಸೋಮಣ್ಣ ಅವರಿಗೇ ಮನೆಗಳ ಕಾಮಗಾರಿ ಕಳಪೆ ಆಗಿರುವುದನ್ನು ತಿಳಿಸಿದರು. ಆದರೆ ಈ ಆರೋಪ ಸಚಿವರನ್ನೇ ಸಿಟ್ಟುಗೊಳಿಸಿತು. ಗರಂ ಆದ ಸಚಿವರು ನೋಡು ನಿನ್ನ ಕೆಲಸ ಎಷ್ಟಿದೆ ಅಷ್ಟು ನೋಡು, ಸಣ್ಣ ಪುಟ್ಟ ತಪ್ಪಾಗಿದ್ದರೆ ಅಧಿಕಾರಿಗಳು ಸರಿಪಡಿಸುತ್ತಾರೆ, ಜಾಸ್ತಿ ಮಾತಾಡಬೇಡ, ಕುಶಾಲನಗರದಿಂದ ಇಲ್ಲಿಗೆ ಬಂದು ಬಡವರಿಗೆ ಮನೆ ಮಾಡುವ ಕೆಲಸಕ್ಕೆ ಅಡ್ಡಿ ಬರಬೇಡ ಎಂದು ಹರಿ ಹಾಯ್ದಿದ್ದಾರೆ. ಜತೆಯಲ್ಲೇ ಇದ್ದ ಸಂಸದ ಪ್ರತಾಪ ಅವರು ಮನೆಗಳ ಗುಣಮಟ್ಟ ಕಳಪೆ ಆಗಿದ್ದರೆ ಅದನ್ನು ಸಂತ್ರಸ್ಥರು ಹೇಳಲಿ. ನೀನೇಕೆ ಮದ್ಯೆ ಬರುತಿದೀಯ ಎಂದು ಆಕ್ಷೇಪಿಸಿದ್ದಾರೆ.

ಇಲ್ಲಿ ಮೇಲ್ನೋಟಕ್ಕೆ ಎಲ್ಲವೂ ಅಲ್ಲದಿದ್ದರೂ ಕೆಲ ಮನೆಗಳ ನಿರ್ಮಾಣದಲ್ಲಿ ಕಳಪೆ ಆಗಿರುವುದು ಕಂಡು ಬರುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿದ ನೌಶಾದ್ ಅವರು ತಾವು ಮತ್ತು ತಮ್ಮ ತಂಡ ಸಂತ್ರಸ್ಥರ ಪರ ಮಾತಾಡಿದ್ದು ಅವರಿಗಾಗುವ ಅನ್ಯಾಯಾದ ವಿರುದ್ದ ಮಾತಾಡಿದ್ದೇವೆ ಅಷ್ಟೇ ಅಲ್ಲ ಆಗಿರುವ ಲೋಪದ ಕುರಿತು ಸಾಕ್ಷಿ ಸಮೇತ ಸಚಿವರಿಗೆ ವಿವರಿಸಿದರೂ ಕೇಳಿಸಿಕೊಳ್ಳುವ, ಸಹಿಸಿಕೊಳ್ಳುವ ವ್ಯವಧಾನ ಅವರಿಗೆ ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ನಾವು ಯಾವುದೇ ಜಾತಿ, ಪಕ್ಷ ಮತ್ತು ಪಂಗಡ ದ ಪರ ಇಲ್ಲ ಆದರೆ ಇನ್ನು ಮುಂದಕ್ಕೂ ಸಂತ್ರಸ್ಥರ ಪರ ತಮ್ಮ ಹೋರಾಟ ಮುಂದುವರಿಯುವುದಾಗಿಯೂ ಹೇಳಿದರು.

ಒಟ್ಟಿನಲ್ಲಿ ಈಗಾಗಲೇ ಮನೆ ಮಠ ಕಳೆದುಕೊಂಡು ಸಂಕಷ್ಟದಲ್ಲಿರುವ ಸಂತ್ರಸ್ಥರಿಗೆ ಪ್ರಕಾರ ಶೀಘ್ರ ಮನೆಗಳ ಹಸ್ತಾಂತರ ಮಾಡಿ ಕಣ್ಣೀರು ಒರೆಸಲಿ.

Tags: flood victimsKodaguMinister Somannaಕೊಡಗುಪ್ರವಾಹ ಪರಿಹಾರಸಚಿವ ಸೋಮಣ್ಣಸಂತ್ರಸ್ಥ
Previous Post

ಟಿ-20 ವಿಶ್ವಕಪ್;‌ ಶೀಘ್ರವೇ ತೀರ್ಮಾನ ಕೈಗೊಳ್ಳುವಂತೆ ಐಸಿಸಿಗೆ ಆಸ್ಟ್ರೇಲಿಯಾ ಮಾಜಿ ಕಪ್ತಾನ ಆಗ್ರಹ

Next Post

ದ್ವೇಷ ಹರಡುವ ಕಮೆಂಟ್ : ದುಬೈ ಜೈಲು ಸೇರಿದ ಕರ್ನಾಟಕ ಮೂಲದ ಯುವಕ.!

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025
Next Post
ದ್ವೇಷ ಹರಡುವ ಕಮೆಂಟ್ : ದುಬೈ ಜೈಲು ಸೇರಿದ ಕರ್ನಾಟಕ ಮೂಲದ ಯುವಕ.!

ದ್ವೇಷ ಹರಡುವ ಕಮೆಂಟ್ : ದುಬೈ ಜೈಲು ಸೇರಿದ ಕರ್ನಾಟಕ ಮೂಲದ ಯುವಕ.!

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada