Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಸತ್ತಂತಿರುವ ವಿರೋಧ ಪಕ್ಷಗಳಿಗೆ ಕನ್ನಯ್ಯಾನ ನುಡಿ ಪ್ರೇರಣೆಯಾಗಬಲ್ಲವೇ?     

ಸತ್ತಂತಿರುವ ವಿರೋಧ ಪಕ್ಷಗಳಿಗೆ ಕನ್ನಯ್ಯಾನ ನುಡಿ ಪ್ರೇರಣೆಯಾಗಬಲ್ಲವೇ? 
ಸತ್ತಂತಿರುವ ವಿರೋಧ ಪಕ್ಷಗಳಿಗೆ ಕನ್ನಯ್ಯಾನ ನುಡಿ ಪ್ರೇರಣೆಯಾಗಬಲ್ಲವೇ?      

December 28, 2019
Share on FacebookShare on Twitter

ಅಧಿಕಾರಸ್ಥರ ಗುಂಡಿಗೆ ನಡುಗುವಂಥ ಪ್ರಶ್ನೆಗಳನ್ನು ಅವರ ಮುಖಕ್ಕೆ ಎಸೆಯಬಲ್ಲ, ಅಧಿಕಾರದ ಮದ, ಜಾತೀಯತೆ, ಮತಾಂದತೆ, ಅನ್ಯಾಯ, ಅಕ್ರಮ ಸೇರಿದಂತೆ ಸಮಾಜವನ್ನು ಬಾಧಿಸುತ್ತಿರುವ ಸಾಮಾಜಿಕ ಅನಿಷ್ಟಗಳಿಂದ ನಮಗೆ ಸ್ವಾತಂತ್ರ್ಯ ಬೇಕಿದೆ ಎಂಬ ಗೀತೆಯ ಮೂಲಕ ಕೋಟ್ಯಂತರ ಭಾರತೀಯರ ಮನದಲ್ಲಿ ಕ್ರಾಂತಿಯ ಜ್ವಾಲೆ ಎಬ್ಬಿಸುವಲ್ಲಿ ಯಶಸ್ವಿಯಾಗಿರುವ, ಅದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿಯ ಬೆಂಬಲಿಗರಿಂದ ತುಕಡೇ-ತುಕಡೇ ಗ್ಯಾಂಗ್ ನಾಯಕ ಎಂದು ಕರೆಸಿಕೊಂಡಿರುವ ಪ್ರತಿಷ್ಠಿತ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಮಾಜಿ ನಾಯಕ ಕನ್ಹಯ್ಯಾ ಕುಮಾರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಗೆ ನೇರ ಸವಾಲು ಎಸೆದಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ದದ ಹೋರಾಟದಲ್ಲಿ ವಿದ್ಯಾರ್ಥಿಗಳು ಹಾಗೂ ನಾಗರಿಕ ಸಂಘಟನೆಗಳಿಗೆ ಬೆಂಬಲವಾಗಿ ನಿಂತ ಹಲವು ನಾಯಕರು ಹಾಗೂ ವಿದ್ಯಾರ್ಥಿಗಳನ್ನು ಮೋದಿ ಸರ್ಕಾರ ಹಾಗೂ ಅವರ ಪಕ್ಷದ ಸರ್ಕಾರಗಳಿರುವ ರಾಜ್ಯಗಳು ಬಂಧಿಸಿವೆ. ಅಸ್ಸಾಂ ರೈತ ನಾಯಕ ಹಾಗೂ ಮಾಹಿತಿ ಹಕ್ಕು ಹೋರಾಟಗಾರ ಅಖಿಲ್ ಗೊಗೊಯ್ ಹಾಗೂ ಉತ್ತರ ಪ್ರದೇಶದ ಯುವ ದಲಿತ ಮುಖಂಡ, ಭೀಮ್ ಆರ್ಮಿ ನಾಯಕ ಚಂದ್ರಶೇಖರ್ ಆಜಾದ್ ಬಂಧಿತರಲ್ಲಿ ಪ್ರಮುಖ ಯುವ ನಾಯಕರು. ಇವರ ಬಂಧನವನ್ನು ಅಕ್ರಮ ಎಂದಿರುವ ಕನ್ಹಯಾ ಕುಮಾರ್ “ಇದು ಹೇಡಿ ಸರ್ಕಾರ. ಮೋದಿ-ಶಾ ಅವರೇ ನೀವು ಹೋರಾಟ ಹತ್ತಿಕ್ಕಿರುವುದನ್ನು ನೋಡಿದ್ದೇವೆ ಮತ್ತು ಮುಂದೆಯೂ ನೋಡುತ್ತೇವೆ. ಹಾಗೆಯೇ ನಿಮ್ಮ ಜೈಲುಗಳಲ್ಲಿ ಅದೆಷ್ಟು ಜಾಗವಿದೆ‌‌ ಎಂಬುದನ್ನೂ ನೋಡುತ್ತೇವೆ” ಎನ್ನುವ ಮೂಲಕ ನಿರ್ಣಾಯಕ ಹೋರಾಟಕ್ಕೆ ಸಿದ್ಧರಾಗಿದ್ದೇವೆ ಎಂಬ ಸಂದೇಶವನ್ನು ಕನ್ಹಯಾ ನೀಡಿದ್ದಾರೆ.

CAA-NRC-NPR का विरोध करने के कारण इस “कायर और लायर” सरकार ने अखिल गोगोई,चन्द्रशेखर आज़ाद,सदफ ज़फ़र,दीपक कबीर व हजारों अन्य नागरिकों को झूठी धाराएँ लगाकर गिरफ़्तार किया है।

सुनिए साहेब,

दम है कितना दमन में तेरे, देख लिया है देखेंगे
जगह है कितनी जेल में तेरे, देख लिया है देखेंगे

— Kanhaiya Kumar (@kanhaiyakumar) December 26, 2019


ಹೆಚ್ಚು ಓದಿದ ಸ್ಟೋರಿಗಳು

ಮೋದಿ ಹಿರಿಯಣ್ಣ, ಅವರೊಂದಿಗೆ ಕೆಲಸ ಮಾಡಲು ಬಯಸುತ್ತೇನೆ: ಕೇಜ್ರಿವಾಲ್‌

ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಅಪಘಾತ : ಶಸ್ತ್ರಚಿಕಿತ್ಸೆ ಮುಗಿಸಿ ಆ್ಯಂಬುಲೆನ್ಸ್​ನಲ್ಲೇ ಪರೀಕ್ಷೆ ಬರೆದ ಸಾಹಸಿ

ಅಭಿವೃದ್ಧಿಯ ಮಾರ್ಗವೂ ಕಾರ್ಪೋರೇಟ್ ಬಂಡವಾಳವೂ ಸಮಾಜದ ಮೇಲ್ವರ್ಗಕ್ಕೆ ಮಾತ್ರವೇ ನಿಲುಕುವ ಅಭಿವೃದ್ಧಿ ಮಾದರಿಗಳೇ ನವಉದಾರವಾದದ ಜೀವಾಳ

ಯುವಕನೊಬ್ಬ ಭಾರತದ ಇಬ್ಬರು ಪ್ರಬಲ ನಾಯಕರಾದ ಮೋದಿ-ಶಾ ಅವರಿಗೆ ಇಷ್ಟೊಂದು ಮಹತ್ವದ ಸವಾಲು ಎಸೆಯುತ್ತಿರುವುದು ಒಂದೆಡೆಯಾದರೆ ದೇಶದ ಉದ್ದಗಲಕ್ಕೂ ಪಕ್ಷದ ನೆಲೆ ಹೊಂದಿರುವ ಕಾಂಗ್ರೆಸ್ ನಾಯಕರಾಗಲಿ, ನಿರ್ದಿಷ್ಟ ಪ್ರದೇಶಗಳಲ್ಲಿ‌ ತಮ್ಮದೇ ಪ್ರಭುತ್ವ ಹೊಂದಿರುವ ಇತರೆ ಪ್ರಾದೇಶಿಕ ಪಕ್ಷಗಳ ನೇತಾರರು ‘ಮಾಡು ಇಲ್ಲವೇ ಮಡಿ‌’ ಮಾದರಿಯಲ್ಲಿ ಹೋರಾಡುವ ಮೂಲಕ ವಿದ್ಯಾರ್ಥಿಗಳಿಗೆ ಬೆಂಬಲವಾಗಿ ನಿಂತು ಅಧಿಕಾರಸ್ಥರು ಕಂಪಿಸುವಂತೆ ಮಾಡುವಲ್ಲಿ ವಿಫಲವಾಗುವ ಮೂಲಕ ದೇಶದಲ್ಲಿ ವಿರೋಧ ಪಕ್ಷಗಳು ಸತ್ತು ಹೋಗಿವೆ ಎಂಬ ಮಾತನ್ನು ಸತ್ಯವಾಗಿಸಿದ್ದಾರೆ.

ಸಿಎಎ ವಿರುದ್ಧದ ಜನಾಕ್ರೋಶವನ್ನು ಪರಿಣಾಮಕಾರಿಯಾಗಿ ಮುನ್ನಡೆಸಬಲ್ಲ ನಾಯಕತ್ವ ಪ್ರಸ್ತುತಪಡಿಸಲು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಹೊರತುಪಡಿಸಿ ಕಾಂಗ್ರೆಸ್ ಒಳಗೊಂಡ ಬಹುತೇಕ ವಿರೋಧ ಪಕ್ಷಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂಬುದು ವಾಸ್ತವ. ಮುಖ್ಯಮಂತ್ರಿ ಪದವಿಯನ್ನೂ ಲೆಕ್ಕಿಸದೇ ರಾಜ್ಯದ ವಿವಿಧೆಡೆ ಪಾದಯಾತ್ರೆ ಮಾಡುವ ಮೂಲಕ ಮೋದಿ-ಶಾ ಗ್ಯಾಂಗ್ ಬೆಚ್ಚುವಂತೆ ಮಾಡುವಲ್ಲಿ ಮಮತಾ ತಕ್ಕಮಟ್ಟಿಗೆ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ಅಮಾಯಕ ಮುಸ್ಲಿಮರು ಹಾಗೂ ಹಿಂದೂಗಳ ಮೇಲೆ ಬಿಜೆಪಿ ಸರ್ಕಾರಗಳಿರುವ ಕಡೆ ಆಡಳಿತಗಾರರ ಪಿತೂರಿಗೆ ಒಳಗಾಗಿ ಪೊಲೀಸರು ನಡೆಸಿರುವ ಘೋರ ಹಿಂಸೆಗಳನ್ನು ಮುಂದಿಟ್ಟು ನರೇಂದ್ರ ಮೋದಿ ಹಾಗೂ ಅಮಿತ್ ಶಾ ನೇತೃತ್ವದ ಬಿಜೆಪಿಯನ್ನು ಕಟೆಕಟೆಯಲ್ಲಿ‌ ನಿಲ್ಲಿಸುವ ಅದ್ಭುತ ಅವಕಾಶವನ್ನು ಬಹುತೇಕ ವಿರೋಧ ಪಕ್ಷಗಳು ಮಣ್ಣು ಪಾಲು ಮಾಡಿವೆ.

ಬಿಜೆಪಿ ವಿರುದ್ಧದ ಹೋರಾಟವನ್ನು ಗಾಂಧಿ ಕುಟುಂಬವೇ ಮಾಡಬೇಕು ಎಂದು ಬಯಸಿದಂತಿರುವ ಇತರೆ ಕಾಂಗ್ರೆಸ್ ನಾಯಕರು ತಮ್ಮ ಅಸ್ತಿತ್ವವನ್ನೇ ಮರೆತಿರುವುದು ಹಾಗೂ ರಾಜಕೀಯ ಸ್ಥಾನಮಾನಗಳನ್ನು ಪಿತ್ರಾರ್ಜಿತ ಆಸ್ತಿ ಎಂಬಂತೆ ಭಾವಿಸುವ ಇವರು ಜನರು ಅನುಭವಿಸುತ್ತಿರುವ ಯಾತನೆಗೆ ನಿರೀಕ್ಷಿತ ಪ್ರಮಾಣದಲ್ಲಿ ಕಿವಿಯಾಗಿಲ್ಲ ಎಂಬುದೂ ಅಷ್ಟೇ ಸತ್ಯ. ಇಂಥ ದುರ್ಬಲ ಹಾಗೂ ಬದ್ಧತೆ ಇಲ್ಲದ ವಿರೋಧ ಪಕ್ಷಗಳು, ಸರ್ವಾಧಿಕಾರಿ ಮನೋಭಾವದ ಆಡಳಿತ ಪಕ್ಷಕ್ಕಿಂತಲೂ ಹೆಚ್ಚಿನ ಅಪಾಯಕಾರಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷದ ಲೋಪ-ದೋಷಗಳನ್ನು ಎತ್ತಿಹಿಡಿಯುವುದು ವಿರೋಧ ಪಕ್ಷಗಳ ಕೆಲಸ. ಇದಕ್ಕೂ ಸರ್ಕಾರ ಬಗ್ಗದಿದ್ದಾಗ ಹೋರಾಟವನ್ನು ಜನರ ಬಳಿಗೆ ಕೊಂಡೊಯ್ಯಬೇಕಾಗುತ್ತದೆ. ಆದರೆ, ಸಿಎಎ ವಿರುದ್ಧದ ಹೋರಾಟದಲ್ಲಿ ಸ್ವಯಂಪ್ರೇರಿತವಾಗಿ ಜನರೇ ಹೋರಾಟದ ಮುಂಚೂಣಿಯಲ್ಲಿದ್ದರೂ ಅದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಇಚ್ಛಾಶಕ್ತಿಯನ್ನು ವಿರೋಧ ಪಕ್ಷಗಳು ಪ್ರದರ್ಶಿಸದಿರುವುದು ಅವುಗಳ ದಿವಾಳಿತನಕ್ಕೆ‌ ಹಿಡಿದ ಕನ್ನಡಿಯಾಗಿದೆ.

ಇನ್ನು ಮಾಧ್ಯಮಗಳನ್ನು ಪ್ರಜಾಪ್ರಭುತ್ವ ವ್ಯವಸ್ಥೆಯ ಕಾವಲು ನಾಯಿ ಎನ್ನಲಾಗುತ್ತದೆ. ಆದರೆ, ಮುಖ್ಯವಾಹಿನಿಯಲ್ಲಿರುವ ಕಾವಲು ನಾಯಿಗಳು ಎಂಜಲು ನಾಯಿಗಳಾಗಿವೆ ಎಂಬರ್ಥದ ಭಿತ್ತಿಪತ್ರಗಳನ್ನು ಹಲವು ಪ್ರತಿಭಟನಾಕಾರರು ಎತ್ತಿ ಹಿಡಿಯುವ ಮೂಲಕ ಅವುಗಳಿಗೂ‌‌ ಛೀಮಾರಿ ಹಾಕಿದ್ದಾರೆ. ಪ್ರತಿಭಟನಾಕಾರರ ಪೈಕಿ ಕೆಲವರು ಬಹಿರಂಗವಾಗಿ ಮಾಧ್ಯಮ ಪ್ರತಿನಿಧಿಗಳನ್ನು ಛೇಡಿಸುವ ಮೂಲಕ ಪೌರತ್ವ ಕಾಯ್ದೆಯ ವಿರುದ್ಧದ ಚಾರಿತ್ರಿಕ ಹೋರಾಟದ ಮಹತ್ವವನ್ನು ಸಾರಿದ್ದಾರೆ. ಹೊಸ ರಾಜಕೀಯ ಸಮೀಕರಣಕ್ಕೆ ದಿಕ್ಸೂಚಿಯಾಗಬಲ್ಲ ಹೋರಾಟದಲ್ಲಿ ತಮ್ಮ ಜವಾಬ್ದಾರಿ ನಿಭಾಯಿಸಲು ನೈತಿಕವಾಗಿ ಸೋತಿರುವ ವಿರೋಧ ಪಕ್ಷಗಳು ಹಾಗೂ ಮುಖ್ಯವಾಹಿನಿಯ ಬಹುತೇಕ ಮಾಧ್ಯಮಗಳು ತಮ್ಮೊಳೆಗೆ ಊತು ಹೋಗಿರುವ ಕನ್ನಯ್ಯಾ ಕುಮಾರ್ ರಂಥವರನ್ನು ಈಗಲಾದರೂ ಹುಡುಕಬೇಕಿದೆ. ಅದು ಅರೋಗ್ಯವಂತ ಪ್ರಜಾಪ್ರಭುತ್ವಕ್ಕೆ ಅವಶ್ಯ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

Fact Check : ಪ್ರಧಾನಿ ನರೇಂದ್ರ ಮೋದಿಗೆ ನೋಬೆಲ್ ಶಾಂತಿ​ ಪ್ರಶಸ್ತಿ.. ಸುಳ್ಳಿನ ಹಿಂದಿನ ಸತ್ಯ..
Top Story

Fact Check : ಪ್ರಧಾನಿ ನರೇಂದ್ರ ಮೋದಿಗೆ ನೋಬೆಲ್ ಶಾಂತಿ​ ಪ್ರಶಸ್ತಿ.. ಸುಳ್ಳಿನ ಹಿಂದಿನ ಸತ್ಯ..

by ಪ್ರತಿಧ್ವನಿ
March 17, 2023
PRATAP SIMHA | ಪುಕ್ಸಟ್ಟೆ ಏನಾದ್ರು ಕೊಡ್ತಿವಿ ಅಂದ್ರೆ ಬಿಜೆಪಿ ಪಕ್ಷನೂ ನಂಬಬೇಡಿ ಅಂದಿದ್ಯಾಕೆ ಪ್ರತಾಪ್ ಸಿಂಹ?
ಇದೀಗ

PRATAP SIMHA | ಪುಕ್ಸಟ್ಟೆ ಏನಾದ್ರು ಕೊಡ್ತಿವಿ ಅಂದ್ರೆ ಬಿಜೆಪಿ ಪಕ್ಷನೂ ನಂಬಬೇಡಿ ಅಂದಿದ್ಯಾಕೆ ಪ್ರತಾಪ್ ಸಿಂಹ?

by ಪ್ರತಿಧ್ವನಿ
March 23, 2023
SIDDARAMAIAH | ಅಡುಗೆ ಮಾಡೋದು ನಾವು..ಅವ್ರು ಬಂದು ಬಡ್ಸೋದು..! #PRATIDHVANI
ಇದೀಗ

SIDDARAMAIAH | ಅಡುಗೆ ಮಾಡೋದು ನಾವು..ಅವ್ರು ಬಂದು ಬಡ್ಸೋದು..! #PRATIDHVANI

by ಪ್ರತಿಧ್ವನಿ
March 21, 2023
HD KUMARASWAMY | ಸಿದ್ದರಾಮಯ್ಯ ಅವರ ಶಕ್ತಿ ಕುಂದಿದೆ ಎಂಬುದಕ್ಕೆ ಅವರು ಕ್ಷೇತ್ರ ಹುಟುಕಾಟವೆ ಸಾಕ್ಷಿ..!
ಇದೀಗ

HD KUMARASWAMY | ಸಿದ್ದರಾಮಯ್ಯ ಅವರ ಶಕ್ತಿ ಕುಂದಿದೆ ಎಂಬುದಕ್ಕೆ ಅವರು ಕ್ಷೇತ್ರ ಹುಟುಕಾಟವೆ ಸಾಕ್ಷಿ..!

by ಪ್ರತಿಧ್ವನಿ
March 18, 2023
ನಾಳೆ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಲಿರುವ ಕೋಲಾರದ ಒಕ್ಕಲಿಗ ಸಮುದಾಯ..! VOkkaliga Community
ಇದೀಗ

ನಾಳೆ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಲಿರುವ ಕೋಲಾರದ ಒಕ್ಕಲಿಗ ಸಮುದಾಯ..! VOkkaliga Community

by ಪ್ರತಿಧ್ವನಿ
March 20, 2023
Next Post
ಮೂರೇ ತಿಂಗಳಿನಲ್ಲಿ ಬರುತ್ತೇನೆ ಎಂದ ಯೋಧ......ಕಣ್ಮರೆಯಾದ

ಮೂರೇ ತಿಂಗಳಿನಲ್ಲಿ ಬರುತ್ತೇನೆ ಎಂದ ಯೋಧ......ಕಣ್ಮರೆಯಾದ

ಪ್ರಸ್ತುತ ಆರ್ಥಿಕ ಬಿಕ್ಕಟ್ಟು ‘ಮಹಾ ಮಂದಗತಿ’ : ಅರವಿಂದ್  ಸುಬ್ರಮಣಿಯನ್

ಪ್ರಸ್ತುತ ಆರ್ಥಿಕ ಬಿಕ್ಕಟ್ಟು ‘ಮಹಾ ಮಂದಗತಿ’ : ಅರವಿಂದ್ ಸುಬ್ರಮಣಿಯನ್

‘NRC ಹಾಗೂ CAAಯಿಂದ ದೇಶದಲ್ಲಿ ಭಯ ಹುಟ್ಟಿಸುವ ವಾತಾವರಣ ನಿರ್ಮಾಣವಾಗಿದೆ’

‘NRC ಹಾಗೂ CAAಯಿಂದ ದೇಶದಲ್ಲಿ ಭಯ ಹುಟ್ಟಿಸುವ ವಾತಾವರಣ ನಿರ್ಮಾಣವಾಗಿದೆ’

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist