Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಸದೃಢ ದೇಶ ಸ್ಥಾಪಿಸಬೇಕಿದ್ದ ಯುವ ಜನತೆ ಎತ್ತ ಸಾಗುತ್ತಿದೆ?

ಸದೃಢ ದೇಶ ಸ್ಥಾಪಿಸಬೇಕಿದ್ದ ಯುವ ಜನತೆ ಎತ್ತ ಸಾಗುತ್ತಿದೆ?
ಸದೃಢ ದೇಶ ಸ್ಥಾಪಿಸಬೇಕಿದ್ದ ಯುವ ಜನತೆ ಎತ್ತ ಸಾಗುತ್ತಿದೆ?

March 2, 2020
Share on FacebookShare on Twitter

ಮಾನವ ಸಂಪನ್ಮೂಲ ಯಾವುದೇ ಒಂದು ದೇಶದ ಅತಿ ದೊಡ್ಡ ಶಕ್ತಿ. ಅದನ್ನು ಸದ್ವಿನಿಯೋಗಿಸಿಕೊಂಡರೆ, ಸಕಾರಾತ್ಮಕವಾಗಿ ಬೆಳೆಸಿದರೆ, ಸರಿ ದಿಕ್ಕಿನಲ್ಲಿ ನಡೆಯುವಂತೆ ಪ್ರೇರೇಪಿಸಿದರೆ ಸಹಜವಾಗಿಯೇ ದೇಶವನ್ನು ಆಂತರಿಕವಾಗಿ ಬಲಪಡಿಸಬಹುದು. ಅದರಲ್ಲೂ ಯುವಶಕ್ತಿಯ ಮನಸ್ಥಿತಿ, ವರ್ತನೆ, ಆಲೋಚನಾ ಕ್ರಮ ದೇಶದ ಭವಿಷ್ಯಕ್ಕೆ ಮುನ್ನುಡಿ ಇದ್ದಂತೆ. ಒಂದುವೇಳೆ ಈ ಶಕ್ತಿಯೇ ಸಮಾಜದ ಸಾಮರಸ್ಯ ತತ್ವಕ್ಕೆ ವಿರುದ್ಧವಾಗಿ ಚಲಿಸಿದರೆ ಅದು ದೊಡ್ಡ ಅನಾಹುತವನ್ನೇ ಸೃಷ್ಟಿಸುತ್ತದೆ.

ಹೆಚ್ಚು ಓದಿದ ಸ್ಟೋರಿಗಳು

ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67
ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನೆ

Chindi Chitranna : YouTube ಅಲ್ಲಿ ಕನ್ನಡ ಅಂತ ಟೈಪ್‌ ಮಾಡಿದರೆ ಇದೇ ವಿಡಿಯೋ ಮೊದಲು ಬರುತ್ತೆ | Pratidhvani

DORPER Sheep ಮಾಂಸ ಇಡೀಪ್ರಪಂಚದಲ್ಲೆ 2ನೇ ಸ್ಥಾನ | Pratidhvani |

ಇಂದು ಭಾರತದಲ್ಲಾಗುತ್ತಿರುವ ಬೆಳವಣಿಗೆಗಳನ್ನು ಗಮನಿಸಿದಾಗ, ಯುವ ಸಮೂಹದ ಮನಸ್ಥಿತಿ, ವರ್ತನೆಗಳನ್ನು ನೋಡಿದಾಗ ನಮ್ಮ ದೇಶದ ಬಹುಮುಖ್ಯ ಸಂಪನ್ಮೂಲವೇ ಪೋಲಾಗುತ್ತಿರುವಂತೆ ಕಾಣುತ್ತದೆ. ಗಲಭೆ, ಹಿಂಸಾಚಾರ, ಕೋಮು ಸಂಘರ್ಷಗಳಲ್ಲಿ ಎದ್ದು ಕಾಣುವ ಯುವಕರ ಆಕ್ರೋಶ ಭರಿತ ಮುಖಗಳು ವರ್ತಮಾನದ ದುರಂತ ಕತೆಗಳನ್ನು ಹೇಳುತ್ತಿವೆ. ಪ್ರಸ್ತುತ ರಾಜಕೀಯ ವ್ಯವಸ್ಥೆ, ಸಮಾಜದ ಹಿತಕ್ಕಿಂತ ಸ್ವಹಿತವೇ ಮುಖ್ಯವೆಂದುಕೊಂಡ ರಾಜಕಾರಣಿಗಳ ದಂಡು, ಧರ್ಮದ ಅಮಲನ್ನು ನೆತ್ತಿಗೇರಿಸಿಕೊಂಡ ಸಂಘಟನೆಗಳು, ಜನಪ್ರಿಯತೆಗಾಗಿ ಹಪಹಪಿಸುವ ನಾಯಕರು.. ಹೀಗೆ ಸಮಾಜಕ್ಕೆ ಹೊರೆಯೇ ಆಗಿರುವ ಈ ಗುಂಪಿನೊಳಗೆ ಗೊತ್ತೋ, ಗೊತ್ತಿಲ್ಲದೆಯೋ ಸೇರಿಕೊಂಡಿರುವವರಲ್ಲಿ ಯುವ ಸಮೂಹದ ಪಾಲು ದೊಡ್ಡದಿದೆ. ಯುವಜನರನ್ನು ತಮ್ಮ ಕಾರ್ಯಕರ್ತರುಗಳನ್ನಾಗಿ, ಪ್ರಚಾರಕರನ್ನಾಗಿ, ಗುರಾಣಿಗಳನ್ನಾಗಿ ಬಳಸಿಕೊಳ್ಳುವ ರಾಜಕೀಯ ವ್ಯವಸ್ಥೆ, ರಾಜಕಾರಣಿಗಳು ಹೊಸಬರೇನಲ್ಲ. ಇತಿಹಾಸದುದ್ದಕ್ಕೂ ತಮ್ಮ ರಕ್ಷಣೆಗಾಗಿ ಹೀಗೆ ಸಶಕ್ತ ಪಡೆಯನ್ನು ಸುತ್ತಲೂ ಇಟ್ಟಕೊಂಡು, ಕೊನೆಗೆ ಅವರನ್ನೇ ಬಲಿಪಶುಗಳನ್ನಾಗಿಸಿದ ಹಲವು ಕತೆಗಳಿವೆ. ರಾಜಕೀಯ, ಧಾರ್ಮಿಕ, ಸೈದ್ಧಾಂತಿಕ ಕಾರಣಗಳಿಗಾಗಿ ಕಿತ್ತಾಡುವ ಅದೆಷ್ಟೋ ವಿದ್ಯಾರ್ಥಿಗಳು ಹೀಗೆ ಯಾರದೋ ಹಿತಾಸಕ್ತಿಗಾಗಿ ಬಲಿಯಾಗುತ್ತಲೇ ಇದ್ದಾರೆ.

ಕಾಲೇಜು ಮಟ್ಟದಲ್ಲಿರುವ ವಿದ್ಯಾರ್ಥಿ ಸಂಘಟನೆಗಳಿಗೂ ಜಾತಿ, ಧರ್ಮ, ಸಿದ್ಧಾಂತ, ರಾಜಕೀಯ ವಿಚಾರಗಳ ಲೇಪನ ಮಾಡಿರುವುದರಿಂದ, ಅಲ್ಲಿ ನಡೆಯುವ ಪ್ರತಿ ಚಟುವಟಿಕೆಗಳು ಹೊರ ಜಗತ್ತಿನ ಪ್ರಭಾವದಿಂದಲೇ ನಡೆಯುತ್ತಿರುತ್ತವೆ. ಇತ್ತೀಚೆಗೆ ನಡೆದ ಕೆಲವು ಘಟನೆಗಳು ಅದಕ್ಕೆ ತಾಜಾ ಉದಾಹರಣೆಯಂತಿವೆ. “ಪಾಕಿಸ್ತಾನ್ ಜಿಂದಾಬಾದ್” ಘೋಷಣೆ, “ಫ್ರೀ ಕಾಶ್ಮೀರ್” ಕೂಗು, ಪ್ರತಿಭಟನೆ ವೇಳೆಯಲ್ಲಿ ಬಂದೂಕು ಹಿಡಿದ ಯುವಕರು, ಕಲ್ಲು ತೂರಾಟ ನಡೆಸಿದವರು, ಧಾರ್ಮಿಕ ಕಟ್ಟಡಗಳ ಮೇಲೇರಿ ಸ್ವಾಸ್ಥ್ಯ ಕದಡಿದ ಹುಡುಗರ ಬೆನ್ನೆಲುಬಿನ ಮೂಲ ಹುಡುಕಿ ಹೊರಟರೆ ಮತ್ತದೇ ಸ್ವಹಿತಾಸಕ್ತರ ನೆರಳು ಕಾಣುತ್ತದೆ. ಇತ್ತೀಚೆಗೆ ಕೇರಳದ ಶಾಲಾ – ಕಾಲೇಜುಗಳ ಆಡಳಿತ ಮಂಡಳಿಗಳು “ಚಳವಳಿಗಳಿಂದ ಶಾಂತಿಯುತ ವಾತಾವರಣಕ್ಕೆ ಧಕ್ಕೆ ಉಂಟಾಗುತ್ತಿದೆ” ಎಂದು ಆರೋಪಿಸಿ ಹೈಕೋರ್ಟ್ ಮೆಟ್ಟಿಲೇರಿದ್ದವು. ಅದನ್ನು ಪುರಸ್ಕರಿಸಿದ ಹೈಕೋರ್ಟ್, ಶಾಲಾ – ಕಾಲೇಜುಗಳಲ್ಲಿ ನಡೆಸುವ ಎಲ್ಲಾ ರೀತಿಯ ಚಳವಳಿಗಳಿಗೆ ನಿಷೇಧ ಹೇರಿದೆ. ಶಿಕ್ಷಣ ಸಂಸ್ಥೆಗಳ ವಾತಾವರಣ ಕೆಡಿಸುವ, ಕಾರ್ಯಕ್ಕೆ ಅಡ್ಡಪಡಿಸುವ ಪ್ರತಿಭಟನೆಗಳಿಗೆ ಅವಕಾಶವಿಲ್ಲವೆಂದೂ, ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ವಿದ್ಯಾರ್ಥಿಗಳನ್ನು ಯಾರೂ ಪ್ರೇರೇಪಿಸುವಂತಿಲ್ಲವೆAದೂ ಆದೇಶ ಹೊರಡಿಸಿದೆ.

ಮೇಲ್ನೋಟಕ್ಕೆ ಇಂತಹ ಆದೇಶಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವೆಂಬAತೆ ಕಂಡರೂ ಪ್ರಸಕ್ತ ಸನ್ನಿವೇಶವನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ, ಯುವಸಮುದಾಯದ ಮನಸ್ಸು ಕಲುಷಿತಗೊಳ್ಳುತ್ತಿರುವುದನ್ನು ತಪ್ಪಿಸಲು ಈ ರೀತಿಯ ನಿರ್ಧಾರ ಅನಿವಾರ್ಯವೆಂದೂ ಅನ್ನಿಸುತ್ತದೆ. ವಿದ್ಯಾರ್ಥಿಗಳಲ್ಲಿ ದ್ವೇಷ ಮನೋಭಾವವನ್ನು ಬಿತ್ತುವ, ಸೈದ್ಧಾಂತಿಕ, ಧಾರ್ಮಿಕ ಭಿನ್ನಾಭಿಪ್ರಾಯಗಳನ್ನು ದಾಳವಾಗಿಸಿಕೊಂಡು ಸಂಘರ್ಷಕ್ಕೆ ಪ್ರೇರೇಪಿಸುವ ಕುತಂತ್ರಗಳು ಹೆಚ್ಚುತ್ತಿರುವಾಗ ಅವುಗಳನ್ನು ಹಾಗೆಯೇ ಬಿಟ್ಟರೆ ಒಂದಿಡೀ ಪೀಳಿಗೆಯ ಮನಸ್ಥಿತಿ ಕಲುಷಿತಗೊಳ್ಳುವುದು ನಿಶ್ಚಿತ. ಈ ದೃಷ್ಟಿಯಿಂದ ನೋಡಿದಾಗ ಇಂತಹ ಅನಾಹುತಗಳನ್ನು ತಪ್ಪಿಸಲು ಕೆಲ ಕಟು ನಿರ್ಧಾರಗಳನ್ನು ಕೈಗೊಳ್ಳಲೇಬೇಕು. ಅಂತೆಯೇ, ಬೇರೆ ಬೇರೆ ನೆಲೆಗಳಲ್ಲಿ ಆಗುತ್ತಿರುವ ಗಲಭೆ, ಹಿಂಸಾಚಾರಗಳಿಗೆ ಕಡಿವಾಣ ಹಾಕಲು, ಯುವಸಮೂಹ ದಿಕ್ಕು ತಪ್ಪದಂತೆ ಜಾಗೃತೆ ವಹಿಸಲು ಸರ್ಕಾರ ಮುಂದಾಗಲೇಬೇಕು. ಶಿಕ್ಷಣ ಸಂಸ್ಥೆಗಳಿAದ ದ್ವೇಷ ರಾಜಕಾರಣವನ್ನು ದೂರವಿಡುವುದು ಈ ಕ್ಷಣದ ತುರ್ತು. ಶಿಕ್ಷಣ ಪಡೆಯುವ ವಯಸ್ಸಿನಲ್ಲಿ ಧರ್ಮಾಧಾರಿತ, ಸಿದ್ಧಾಂತ ಆಧಾರಿತ ಗುಂಪುಗಳಾದರೆ ಮುಂದೆ ಇಡೀ ಸಮಾಜವೇ ಈ ತಪ್ಪಿಗಾಗಿ ಪರಿತಪಿಸಬೇಕಾಗುತ್ತದೆ.

ಪ್ರಜಾಪ್ರಭುತ್ವದಡಿಯಲ್ಲಿ ಪ್ರತಿಯೊಬ್ಬರಿಗೂ ಸಾಂವಿಧಾನಿಕವಾಗಿ ಪ್ರತಿಭಟಿಸುವ ಹಕ್ಕಿದೆಯೇ ವಿನಃ ಸಾರ್ವಜನಿಕ ಆಸ್ತಿಯನ್ನು ಹಾನಿಗೆಡವುವ ಹಕ್ಕಾಗಲೀ, ಕೊಲ್ಲುವ ಹಕ್ಕಾಗಲೀ ಇಲ್ಲ. ರಾಜಕಾರಣಿಗಳು ತಮ್ಮ ತೋಳ್ಬಲದ ಪ್ರದರ್ಶನಕ್ಕಾಗಿ, ಪ್ರತಿಷ್ಠೆಗಾಗಿ ಈ ಕ್ಷಣಕ್ಕೆ ಇಂತಹ ತಪ್ಪುಗಳನ್ನು ಸಮರ್ಥಿಸಿಕೊಳ್ಳುವುದಾದರೆ, ತಮ್ಮ ಸ್ವಾರ್ಥಕ್ಕಾಗಿ ಒಂದು ತಲೆಮಾರನ್ನೇ ಕೆಡಿಸಿದ ಪಾಪ ಅವರಿಗಂಟಲಿ!

RS 500
RS 1500

SCAN HERE

Pratidhvani Youtube

«
Prev
1
/
4568
Next
»
loading
play
H.Vishwanath; ಡಿ.ದೇವರಾಜ ಅರಸು ಅವರ 41ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ MLC H. ವಿಶ್ವನಾಥ್ ಭಾಗಿ|Devarajaarasu
play
Live ; ಉಚಿತ ವಿದ್ಯುತ್‌ ಗೊಂದಲಕ್ಕೆ ತೆರೆ ಎಳೆದ ಸರ್ಕಾರ..! | CM Siddaramaiah | Congress Guarantees
«
Prev
1
/
4568
Next
»
loading

don't miss it !

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ
Top Story

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ

by ಪ್ರತಿಧ್ವನಿ
May 30, 2023
ಸಾರಿಗೆ ಇಲಾಖೆಯ 4 ನಿಗಮಗಳಿಗೆ ರಾಮಲಿಂಗಾರೆಡ್ಡಿ ಅಧ್ಯಕ್ಷರಾಗಿ ನೇಮಕ
ಕರ್ನಾಟಕ

ಸಾರಿಗೆ ಇಲಾಖೆಯ 4 ನಿಗಮಗಳಿಗೆ ರಾಮಲಿಂಗಾರೆಡ್ಡಿ ಅಧ್ಯಕ್ಷರಾಗಿ ನೇಮಕ

by Prathidhvani
June 5, 2023
ರೈಲು ದುರಂತ : ಗಾಯಗೊಂಡ 1175 ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ದಾಖಲು, 793 ರೋಗಿಗಳು ಡಿಶ್ಚಾರ್ಜ್
Top Story

ರೈಲು ದುರಂತ : ಗಾಯಗೊಂಡ 1175 ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ದಾಖಲು, 793 ರೋಗಿಗಳು ಡಿಶ್ಚಾರ್ಜ್

by ಪ್ರತಿಧ್ವನಿ
June 3, 2023
Maharashtra CM to Release Water : ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಒತ್ತಾಯ..!
Top Story

Maharashtra CM to Release Water : ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಒತ್ತಾಯ..!

by ಪ್ರತಿಧ್ವನಿ
June 1, 2023
ಒಡಿಶಾ ರೈಲು ದುರಂತ : ಎದೆ ಝಲ್​ ಎನಿಸುತ್ತೆ ಅಪಘಾತ ಸ್ಥಳದ ಡ್ರೋನ್​ ದೃಶ್ಯಾವಳಿ
ದೇಶ

ಪ್ರಯಾಣಿಕರ ಗಮನಕ್ಕೆ : ಬೆಂಗಳೂರಿನಿಂದ ಹೊರಡಬೇಕಿದ್ದ ಈ ರೈಲುಗಳ ಸಂಚಾರ ರದ್ದು

by Prathidhvani
June 3, 2023
Next Post
KIADB ಅಧಿಕಾರಿಗಳ ದಿವ್ಯ ನಿರ್ಲ್ಯಕ್ಷ; ಬೆಂಗಳೂರಿನ ಕೈ ತಪ್ಪಿದ ಮಹತ್ವದ ಯೋಜನೆ

KIADB ಅಧಿಕಾರಿಗಳ ದಿವ್ಯ ನಿರ್ಲ್ಯಕ್ಷ; ಬೆಂಗಳೂರಿನ ಕೈ ತಪ್ಪಿದ ಮಹತ್ವದ ಯೋಜನೆ

ಕಲಾಪ ನುಂಗಿದ ಆಚಾರವಿಲ್ಲದ ನಾಲಿಗೆಯ ಕೀಳು ಹೇಳಿಕೆಗಳು

ಕಲಾಪ ನುಂಗಿದ ಆಚಾರವಿಲ್ಲದ ನಾಲಿಗೆಯ ಕೀಳು ಹೇಳಿಕೆಗಳು

ಭಾರತದ ಆರ್ಥಿಕತೆಗೆ ಕೋವಿಡ್-19ರ ಹೊಡೆತದ ಪರಿಣಾಮವೇನು?

ಭಾರತದ ಆರ್ಥಿಕತೆಗೆ ಕೋವಿಡ್-19ರ ಹೊಡೆತದ ಪರಿಣಾಮವೇನು?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist