• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸರ್ದಾರ್‌ ಪಟೇಲರು ಆರ್‌ಎಸ್‌ಎಸ್‌ ನಿಷೇಧಿಸಿ ಇಂದಿಗೆ 72 ವರ್ಷ

by
February 4, 2020
in ದೇಶ
0
ಸರ್ದಾರ್‌ ಪಟೇಲರು ಆರ್‌ಎಸ್‌ಎಸ್‌ ನಿಷೇಧಿಸಿ ಇಂದಿಗೆ 72 ವರ್ಷ
Share on WhatsAppShare on FacebookShare on Telegram

ಇಂದು ಅಧಿಕಾರಕ್ಕಾಗಿ ಹಾಗೂ ಮತಗಳಿಕೆಗಾಗಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಹೆಸರನ್ನು ಬಳಸಿಕೊಳ್ಳುತ್ತಿರುವ ಆರ್‌ಎಸ್‌ಎಸ್‌ ಬೆಂಬಲಿತ ಬಿಜೆಪಿ ಪಕ್ಷದ ನಾಯಕರಿಗೆ 72 ವರ್ಷಗಳ ಹಿಂದೆ ಅದೇ ಸರ್ದಾರ್‌ ಪಟೇಲ್‌ ಅವರು ಗಾಂಧಿ ಹತ್ಯೆಯ ಕಾರಣಕ್ಕಾಗಿ ಆರ್‌ಎಸ್‌ಎಸ್‌ ಅನ್ನು ನಿಷೇಧಿಸಿದ್ದು ಮರೆತು ಹೋಯಿತೇ? ತಮ್ಮ ಧೃಡ ನಿಲುವುಗಳಿಗೆ ಸದಾ ಹೆಸರುವಾಸಿಯಾಗಿದ್ದ ಸರ್ದಾರ್‌ ಪಟೇಲ್‌ ಅವರನ್ನು ಇಂದು ಕ್ಷುಲ್ಲಕ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿರುವ ರಾಜಕೀಯ ನಾಯಕರಿಗೆ ಅಂದು ಸರ್ದಾರ್‌ ಪಟೇಲ್‌ ಅವರು ಬರೆದಿದ್ದ ಪತ್ರ ನೆನಪಿಲ್ಲವೇನೋ.

ADVERTISEMENT

ಆರ್‌ಎಸ್‌ಎಸ್‌ ಅನ್ನು ನಿಷೇಧಿಸಿದ ಬಳಿಕ ಅಂದರೆ ಫೆಬ್ರುವರಿ 4, 1948ರಂದು ಅಂದಿನ ಆರ್‌ಎಸ್‌ಎಸ್‌ ನಾಯಕರಿಗೆ ಪತ್ರ ಬರೆದಿದ್ದ ಸರ್ದಾರ್‌ ಪಟೇಲ್‌ ಅವರು “ಆರ್‌ಎಸ್‌ಎಸ್‌ ದೇಶದ ಸ್ವಾತಂತ್ರ್ಯಕ್ಕೆ ದಕ್ಕೆ ಉಂಟು ಮಾಡುತ್ತಿದೆ ಹಾಗೂ ಭಾರತ ಮಾತೆಯ ಹೆಸರಿಗೆ ಮಸಿ ಬಳಿಯುತ್ತಿದೆ. ಇದು ದೇಶದಲ್ಲಿ ದ್ವೇಷ ಮತ್ತು ಹಿಂಸೆಯ ಮೂಲ ಬೇರು. ಹೀಗಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಕಾನೂನು ಬಾಹಿರ ಸಂಘಟನೆಯೆಂದು ಘೋಷಿಸಲು ಭಾರತ ಸರ್ಕಾರವು ನಿರ್ಧರಿಸಿದೆ” ಎಂದಿದ್ದರು. ಆಗಿನ ಉಪ ಪ್ರಧಾನಿ ಹಾಗೂ ಗೃಹ ಸಚಿವರಾಗಿದ್ದ ಸರ್ದಾರ್‌ ಪಟೇಲ್‌ ಅವರು ಬರೆದ ಪತ್ರ ಇಂದಿಗೂ ಗೃಹ ಕಚೇರಿಯ ಕಡತಗಳಲ್ಲಿ ಲಭ್ಯವಿದೆ.

ತಮ್ಮ ಧೃಢ ನಿರ್ಧಾರದಿಂದ ಪಟೇಲರು ಹಿಂದೆ ಸರಿಯಲಿಲ್ಲ. ಅಂದಿನ ಆರ್‌ಎಸ್‌ಎಸ್‌ ಮುಖ್ಯಸ್ಥರಾದ ಎಂ ಎಸ್‌ ಗೋಲ್ವಾಲ್ಕರ್‌, ಪಟೇಲರಿಗೆ ಪತ್ರ ಬರೆದು “ಆರ್‌ಎಸ್‌ಎಸ್‌ ಭಾರತದ ಜಾತ್ಯಾತೀತೆಯನ್ನು ಹಾಗೂ ಭಾರತದ ಧ್ವಜವನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತದೆ. ಹಾಗಾಗಿ, ಆರ್‌ಎಸ್‌ಎಸ್‌ ಮೇಲೆ ವಿಧಿಸಿರುವ ನಿಷೇಧವನ್ನು ಹಿಂಪಡೆಯಬೇಕು,” ಎಂದು ಹೇಳಿದ್ದರು.

ಭಾರತದ ಸಂವಿಧಾನವನ್ನು ಒಪ್ಪಿಕೊಳ್ಳುವ ಹಾಗೂ ಅದರಂತೆ ನಡೆಯುವ ಮತ್ತು ಭಾರತದ ಧ್ವಜವನ್ನು ಒಪ್ಪಿಕೊಳ್ಳುವ ಒಪ್ಪಂದದ ಮೇರೆಗೆ 1949ರ ಜುಲೈ 11ರಂದು ಸರ್ದಾರ್‌ ಪಟೇಲರು ಆರ್‌ಎಸ್‌ಎಸ್‌ ಮೇಲಿನ ನಿಷೇಧವನ್ನು ಹಿಂಪಡೆದರು. ಇಲ್ಲಿ ಆರ್‌ಎಸ್‌ಎಸ್‌ ಸಂಪೂರ್ಣವಾಗಿ ಭಾರತದ ಧ್ವಜದ ಎದುರು ಶರಣಾಗತವಾಗುವವರೆಗೂ ಪಟೇಲರು ತಮ್ಮ ಪಟ್ಟು ಸಡಿಲಿಸಲಿಲ್ಲ. ಇಂತಹ ಸಂಘಟನೆಯನ್ನು ಸರ್ದಾರ್‌ ಪಟೇಲರು ನಿಷೇಧಿಸಿ ಇಂದಿಗೆ 72 ವರ್ಷ ತುಂಬಿದೆ.

ಇದರ ನಂತರವೂ ಆರ್‌ಎಸ್‌ಎಸ್‌ ದೇಶದಲ್ಲಿ ಎರಡು ಬಾರಿ ನಿಷೇದಕ್ಕೆ ಒಳಗಾಗಿದೆ. ಇಂದಿರಾ ಗಾಂಧೀಯವರು ಪ್ರಧಾನ ಮಂತ್ರಿಯಾಗಿದ್ದಾಗ ಜಾರಿಗೊಳಿಸಿದ್ದ ತುರ್ತು ಪರಿಸ್ಥಿಯ ಸಂದರ್ಭದಲ್ಲಿ ಹಾಗೂ 1992ರ ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಘಟನೆಯ ನಂತರ ಆರ್‌ಎಸ್‌ಎಸ್‌ಅನ್ನು ಭಾರತದಲ್ಲಿ ನಿಷೇಧಿಸಲಾಗಿತ್ತು.

ಅಂದು ಅಂತಹ ದಯನೀಯ ಸ್ಥಿತಿಯಲ್ಲಿದ್ದಂತಹ ಸಂಘಟನೆಯ ಇಂದಿನ ನಾಯಕರು ಅದೇ ಸಂವಿಧಾನವನ್ನು ಬದಲಾಯಿಸುವ ಮಾತುಗಳನ್ನಾಡುತ್ತಾರೆ. ಮಾಹಾತ್ಮಾ ಗಾಂಧಿಯನ್ನು ಹತ್ಯೆಗೈದ ಆರೋಪದ ನಿಷೇಧವಾಗಿದ್ದ ಆರ್‌ಎಸ್‌ಎಸ್‌ನ ನಾಯಕರು ಇಂದಿಗೂ ಮಹಾತ್ಮಾ ಗಾಂಧಿಯ ಕುರಿತು ಸಾರ್ವಜನಿಕ ಸಭೆಗಳಲ್ಲಿ ಕೀಳು ಮಟ್ಟದ ಭಾಷೆಯನ್ನು ಪ್ರಯೋಗ ಮಾಡಿ ತಮ್ಮ ಮನಸ್ಥಿತಿ ಇಂದಿಗೂ ಬದಲಾಗಿಲ್ಲ ಎಂಬುದನ್ನು ತೋರಿಸಿಕೊಡುತ್ತಿದ್ದಾರೆ.

Tags: M S GolwolkarMahatma Gandhi Assassination‌Sardar PatelStatue of Unityಆರ್‌ಎಸ್‌ಎಸ್‌ಎಂ ಎಸ್‌ ಗೋಲ್ವೋಲ್ಕರ್ನಾಥೂರಾಮ್ ಗೋಡ್ಸೆಮಹಾತ್ಮಾ ಗಾಂಧಿ ಹತ್ಯೆಸರ್ದಾರ್‌ ಪಟೇಲ
Previous Post

ಸಂಪುಟ ಸಂಕಟ- CM BSY ಬೆಂಬಲಕ್ಕೆ ನಿಂತ ವರಿಷ್ಠರು 

Next Post

NRC ಕುರಿತು ಸಂಸತ್ತಿನಲ್ಲಿ ಸುಳ್ಳು ಹೇಳಿದರೇ ಅಮಿತ್‌ ಶಾ?

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
NRC ಕುರಿತು ಸಂಸತ್ತಿನಲ್ಲಿ ಸುಳ್ಳು ಹೇಳಿದರೇ ಅಮಿತ್‌ ಶಾ?

NRC ಕುರಿತು ಸಂಸತ್ತಿನಲ್ಲಿ ಸುಳ್ಳು ಹೇಳಿದರೇ ಅಮಿತ್‌ ಶಾ?

Please login to join discussion

Recent News

Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada