• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಜಿಲ್ಲೆಯಲ್ಲಿ ಕರೋನಾ ಅವಾಂತರ: ಉನ್ನತ ಪೊಲೀಸ್ ಅಧಿಕಾರಿಗಳೇ ಕ್ವಾರಂಟೈನ್!

by
May 23, 2020
in ಕರ್ನಾಟಕ
0
ಸಿಎಂ ಜಿಲ್ಲೆಯಲ್ಲಿ ಕರೋನಾ ಅವಾಂತರ: ಉನ್ನತ ಪೊಲೀಸ್ ಅಧಿಕಾರಿಗಳೇ ಕ್ವಾರಂಟೈನ್!
Share on WhatsAppShare on FacebookShare on Telegram

ಕೇವಲ ಹತ್ತು ದಿನಗಳ ಹಿಂದಿನವರೆಗೆ ಒಂದೂ ಕರೋನಾ ಪ್ರಕರಣವಿಲ್ಲದೆ ಹಸಿರು ವಲಯದಲ್ಲಿದ್ದ ಶಿವಮೊಗ್ಗದಲ್ಲಿ ಇದೀಗ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಮಂಗಳವಾರದ ಆಘಾತಕಾರಿ ಬೆಳವಣಿಗೆಯಲ್ಲಿ ಕರೋನಾ ವಾರಿಯರ್ಸ್ ಆಗಿದ್ದ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯ ಉನ್ನತಾಧಿಕಾರಿಗಳೇ ಹಲವರು ಈಗ ಕ್ವಾರಂಟೈನ್ ಗೆ ಒಳಗಾಗಿದ್ದಾರೆ!

ADVERTISEMENT

ಪ್ರಮುಖವಾಗಿ ಅತ್ಯಾಚಾರ ಸಂತ್ರಸ್ತೆ ಅಪ್ರಾಪ್ತೆಯೊಬ್ಬರಿಗೆ ಕೋವಿಡ್-19 ಇರುವುದು ದೃಢಪಟ್ಟ ಬೆನ್ನಲ್ಲೇ ಪೊಲೀಸ್ ಪ್ರಕರಣದಲ್ಲಿ ದೂರು ದಾಖಲು, ವೈದ್ಯಕೀಯ ಪರೀಕ್ಷೆ, ಕೌನ್ಸಲಿಂಗ್ ಮತ್ತಿತರ ಕಾರ್ಯದಲ್ಲಿ ಆಕೆಯ ಸಂಪರ್ಕಕ್ಕೆ ಬಂದಿದ್ದ ಉನ್ನತ ಪೊಲೀಸ್ ಅಧಿಕಾರಿಗಳನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಅಪ್ರಾಪ್ತ ಬಾಲಕಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ಪರೀಕ್ಷೆಗೊಳಪಡಿಸಿದಾಗ ಆಕೆಗೆ ಕರೋನಾ ದೃಢಪಟ್ಟಿದೆ. ಆದರೆ, ಅದಕ್ಕೂ ಮುನ್ನ ಆಕೆ ಜಿಲ್ಲಾ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇದ್ದಳು. ಅಲ್ಲದೆ ಆಕೆಗೆ ಕಾನೂನು ನೆರವು ನೀಡುವ ಸಖಿ ಕೇಂದ್ರದ ವಕೀಲರು ಮತ್ತು ಸಿಬ್ಬಂದಿಯೊಂದಿಗೂ ಆಕೆ ಪ್ರಾಥಮಿಕ ಸಂಪರ್ಕ ಹೊಂದಿದ್ದಳು. ಹಾಗೆಯೇ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಕೆಯ ತಪಾಸಣೆ ನಡೆಸಿದ ವೈದ್ಯಕೀಯ ಸಿಬ್ಬಂದಿ ಕೂಡ ನೇರ ಸಂಪರ್ಕಕ್ಕೆ ಬಂದಿದ್ದರು.

ಈ ನಡುವೆ, ಆಕೆಯ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಡಿವೈಎಸ್ಪಿ, ಪೊಲೀಸ್ ಇನ್ಸ್ ಪೆಕ್ಟರ್ ಸೇರಿದಂತೆ ಕೆಲವು ಉನ್ನತ ಪೊಲೀಸ್ ಅಧಿಕಾರಿಗಳನ್ನು ಕೂಡ ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಹಾಗಾಗಿ ಜಿಲ್ಲೆಗೆ ಬುಧವಾರದ ಹೊತ್ತಿಗೆ ಇಬ್ಬರು ಡಿವೈಎಸ್ಪಿ, ನಾಲ್ವರು ಇನ್ಸ್ ಪೆಕ್ಟರುಗಳು ಹೊಸದಾಗಿ ಬರಲಿದ್ದು, ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಇಡೀ ಪ್ರಕರಣದಲ್ಲಿ ಅತ್ಯಾಚಾರ ಸಂತ್ರಸ್ತೆಯ ವಿಷಯದಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಜಿಲ್ಲಾಡಳಿತ ಮತ್ತು ವೈದ್ಯಕೀಯ ಸಿಬ್ಬಂದಿ ಎಡವಿರುವುದೇ ಈ ಯಡವಟ್ಟಿಗೆ ಕಾರಣ. ಈಗಲೂ ಕೂಡ ಆಕೆಯ ಸಂಪರ್ಕಕ್ಕೆ ಬಂದಿದ್ದ ಸಖಿ ಕೇಂದ್ರದ ಸಿಬ್ಬಂದಿ ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡುವಲ್ಲಿ ಕೂಡ ಜಿಲ್ಲಾಡಳಿತ ಮೀನಾಮೇಷ ಎಣಿಸುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ.

ಈ ನಡುವೆ, ಮತ್ತೊಂದು ಪ್ರಕರಣದಲ್ಲಿ ತಾಲೂಕಿನ ಬಾಳೆಕೊಪ್ಪದ ಅಂಚೆ ಇಲಾಖೆಯ ನೌಕರರೊಬ್ಬರಿಗೆ ಸೋಂಕು ದೃಢಪಟ್ಟಿದ್ದು ಅವರಿಗೆ ಸೋಂಕು ಹೇಗೆ ಹರಡಿತು ಎಂಬ ಗೊಂದಲ ಬಗೆಹರಿದಿಲ್ಲ. ಆದರೆ, ಆ ವ್ಯಕ್ತಿಯ ಪುತ್ರ ನಗರದ ಶಾಪಿಂಗ್ ಮಾಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಒಂದು ವೇಳೆ ಆತನಿಗೆ ಸೋಂಕು ಧೃಢಪಟ್ಟರೆ ಸೋಂಕು ನಗರದಲ್ಲಿ ಇನ್ನೆಷ್ಟು ಜನರಿಗೆ ಹರಡಿರಬಹುದು ಎಂಬ ಆತಂಕಕ್ಕೆ ಕಾರಣವಾಗಿದೆ.

ಸೋಂಕ ದೃಢಪಟ್ಟ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಬಾಳೆಕೊಪ್ಪವನ್ನು ಮತ್ತು ಪೋಕ್ಸೋ ಪ್ರಕರಣ ನಡೆದ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಗಿದೆ.

ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ 10 ಪ್ರಕರಣಗಳು ಧೃಡಪಟ್ಟಿದ್ದು, ಈವರೆಗೆ ಒಟ್ಟು 24 ಪ್ರಕರಣಗಳು ಶಿವಮೊಗ್ಗದಲ್ಲಿ ದಾಖಲಾಗಿವೆ. ಆ ಪೈಕಿ ತೀರ್ಥಹಳ್ಳಿ, ತರಲಘಟ್ಟ ಮತ್ತು ಬಾಳೆಕೊಪ್ಪ ಪ್ರಕರಣಗಳನ್ನು ಹೊರತುಪಡಿಸಿ ಉಳಿದೆಲ್ಲಾ ಪ್ರಕರಣಗಳು ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರುವವರಾಗಿದ್ದು, ಈ ಮೂರು ಪ್ರಕರಣಗಳು ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ದ್ವೀತೀಯ ಹಂತದ ಸಂಪರ್ಕ ಹೊಂದಿವೆ. ಈ ಮೂರು ಪ್ರಕರಣಗಳ ಸಂಪರ್ಕಗಳು ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿವೆ.

Tags: ಕರೋನಾ ಸೋಂಕುಕೋವಿಡ್-19ಕ್ವಾರಂಟೈನ್‌ಜಿಲ್ಲಾ ಪೊಲೀಸ್ತೀರ್ಥಹಳ್ಳಿಪೋಕ್ಸೋ ಪ್ರಕರಣಶಿಕಾರಿಪುರಶಿವಮೊಗ್ಗ
Previous Post

ಭಾರತ vs ನೇಪಾಳ : ಕಾಲಾಪಾನಿ ಬಿಕ್ಕಟ್ಟು ಉದ್ಭವಿಸಿದ್ದು ಹೇಗೆ.?

Next Post

ಜೂನ್ 5ರ ವರೆಗೆ ಆನಂದ್ ತೇಲ್ತುಂಬ್ಡೆ ಗೆ ನ್ಯಾಯಾಂಗ ಬಂಧನ ಮುಂದುರಿಕೆ.!

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025
Next Post
ಜೂನ್ 5ರ ವರೆಗೆ ಆನಂದ್ ತೇಲ್ತುಂಬ್ಡೆ ಗೆ ನ್ಯಾಯಾಂಗ ಬಂಧನ ಮುಂದುರಿಕೆ.!

ಜೂನ್ 5ರ ವರೆಗೆ ಆನಂದ್ ತೇಲ್ತುಂಬ್ಡೆ ಗೆ ನ್ಯಾಯಾಂಗ ಬಂಧನ ಮುಂದುರಿಕೆ.!

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada